MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Education
  • ಭಾರತೀಯ ಭಾಷೆಗಳಲ್ಲಿ ಶಿಕ್ಷಣ ಕೊಡಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಭಾರತೀಯ ಭಾಷೆಗಳಲ್ಲಿ ಶಿಕ್ಷಣ ಕೊಡಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬೆಂಗಳೂರು(ನ.16): ಇಂದು ಜಗತ್ತು ಜ್ಞಾನಾಧಾರಿತ ಆರ್ಥಿಕತೆಯ ಮೇಲೆ ಸಾಗುತ್ತಿದ್ದು, ಶಿಕ್ಷಣ ಸಂಸ್ಥೆಗಳು ಇದಕ್ಕೆ ಪೂರಕವಾದ ಶಿಕ್ಷಣ ನೀಡಬೇಕು. ಕೃಷಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದ ಸವಾಲು, ಸಮಸ್ಯೆಗಳನ್ನು ಎದುರಿಸಲು ಹೊಸ ಆಲೋಚನೆ, ಸಂಶೋಧನೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ತೊಡಗಬೇಕು ಎಂದು ಉಪರಾಷ್ಟ್ರಪತಿ(Vice President) ವೆಂಕಯ್ಯ ನಾಯ್ಡು(M Venkaiah Naidu) ಹೇಳಿದ್ದಾರೆ. 

2 Min read
Author : Kannadaprabha News | Asianet News
Published : Nov 16 2021, 06:58 AM IST
Share this Photo Gallery
  • FB
  • TW
  • Linkdin
  • Whatsapp
17

ಬೆಂಗಳೂರಿನ (Bengaluru) ಪ್ರತಿಷ್ಠಿತ ಪಿಇಎಸ್‌ ವಿಶ್ವವಿದ್ಯಾಲಯದ(PES University) 6ನೇ ಘಟಿಕೋತ್ಸವ(Convocation) ಸಮಾರಂಭದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ದೇಶದ ಅವಶ್ಯಕತೆ ಹಾಗೂ ಅಂತಾರಾಷ್ಟ್ರೀಯ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು(Universities), ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು(Students) ತಯಾರು ಮಾಡಬೇಕು. ಇದಕ್ಕೆ ಕೇಂದ್ರ ಸರ್ಕಾರ(Central Government) ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ(National Education Policy) ಪೂರಕವಾಗಿದೆ. ಶಿಕ್ಷಣ ಸಂಸ್ಥೆಗಳು ಭಾರತೀಯ ಭಾಷೆಗಳಲ್ಲಿ(Indian languages) ಶಿಕ್ಷಣ(Education) ನೀಡಲು ಒತ್ತು ನೀಡಬೇಕು. ಮಾತೃಭಾಷೆಯಲ್ಲಿ(Mother Tongue) ಶಿಕ್ಷಣ ದೊರೆತರೆ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುತ್ತದೆ ಎಂದು ಪ್ರತಿಪಾದಿಸಿದ ಉಪರಾಷ್ಟ್ರಪತಿಗಳು

27

ಕೃಷಿ, ಕೈಗಾರಿಕೆ, ಬಾಹ್ಯಾಕಾಶ(Space) ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ(Technology) ಬಳಕೆ ಪ್ರಮುಖವಾಗಿದೆ. ಹಾಗಾಗಿ ಪ್ರತಿಯೊಂದು ಕ್ಷೇತ್ರದ ಅವಶ್ಯಕತೆಗಳ ಪೂರೈಕೆಗೆ ಬಹಳ ಸರಳವಾಗಿ ಅಳವಡಿಸಿಕೊಳ್ಳಬಹುದಾದ ತಾಂತ್ರಿಕವಾದ ಹೊಸ ಆಲೋಚನೆಗಳು, ಸಂಶೋಧನೆಗಳಿಗೆ(Research) ವಿದ್ಯಾರ್ಥಿಗಳು ಹೆಚ್ಚು ಒತ್ತು ನೀಡಬೇಕು. ದೇಶವನ್ನು ಜ್ಞಾನ ಶಕ್ತಿಯಾಗಿ ಪರಿವರ್ತಿಸುವಲ್ಲಿ ತಾಂತ್ರಿಕ ವಿವಿಗಳು ವಿಶೇಷ ಪಾತ್ರ ವಹಿಸುತ್ತದೆ. ನಮ್ಮ ದೇಶದಲ್ಲಿ ಶೇ.65ರಷ್ಟು ಜನಸಂಖ್ಯೆ ಯುವ ಜನರಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳು ಈ ಯುವ ಸಮುದಾಯವನ್ನು ಕೌಶಲಾಧಾರಿತ ಶಿಕ್ಷಣದೊಂದಿಗೆ ಸಜ್ಜುಗೊಳಿಸಬೇಕು ಎಂದು ತಿಳಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು 

37

5ಜಿ ಟೆಕ್ನಾಲಜಿ(5G Technology), ಮಿಷಿನ್‌ ಲರ್ನಿಂಗ್‌, ರೋಬ್ಯಾಟಿಕ್‌, ಬಯೋಟೆಕ್ನಾಲಜಿ, ಡ್ರೋನ್‌ ಟೆಕ್ನಾಲಜಿಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ವಿಶ್ವದೆಲ್ಲೆಡೆ ಈ ಕ್ಷೇತ್ರಗಳಲ್ಲಿ ಮುಂದಿನ ಕೆಲ ವರ್ಷಗಳಲ್ಲಿ ಭಾರೀ ಸಂಖ್ಯೆಯ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಹೆಚ್ಚಿನ ಉದ್ಯೋಗಾವಕಾಶಗಳನ್ನು ನಮ್ಮ ವಿದ್ಯಾರ್ಥಿಗಳು ಪಡೆದುಕೊಳ್ಳಲು ಸಜ್ಜಗೊಳಿಸಬೇಕು ಎಂದು ವೆಂಕಯ್ಯನಾಯ್ಡು ಅವರು ಕರೆ ನೀಡಿದರು.

47

ಡಿಆರ್‌ಡಿಒ(DRDO) ಮತ್ತು ಇಸ್ರೋ(ISRO)ಸಹಯೋಗದಲ್ಲಿ ಪಿಇಎಸ್‌ ವಿವಿ ಎರಡು ಉಪಗ್ರಹಗಳನ್ನು(Satellite) ನಿರ್ಮಿಸಿ ಉಡಾವಣೆ ಮಾಡಿರುವುದು ಶ್ಲಾಘನೀಯ. ಸಂಶೋಧನಾ ಕ್ಷೇತ್ರದಲ್ಲಿ ದೇಶದಲ್ಲೇ(India) ಎರಡನೇ ಸ್ಥಾನದಲ್ಲಿದೆ. ಇದಕ್ಕೆ ಪಿಇಎಸ್‌ ವಿವಿಯ ಕುಲಾಧಿಪತಿ ಪ್ರೊ.ಎಂ.ಆರ್‌.ದೊರೆಸ್ವಾಮಿ ಮತ್ತು ಇತರೆ ಎಲ್ಲಾ ಬೋಧಕ ವರ್ಗ ಹಾಗೂ ಇತರೆ ಸಿಬ್ಬಂದಿ ಶ್ರಮ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಕ್ಕೆ ದೊರೆಸ್ವಾಮಿ ಅವರ ಬದ್ಧತೆ ದೊಡ್ಡದು ಎಂದು ಉಪರಾಷ್ಟ್ರಪತಿಗಳು ಶ್ಲಾಘಿಸಿದ್ದಾರೆ. 

57

ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು, ಪಿಇಎಸ್‌ ಸಮಕುಲಾಧಿಪತಿ ಪ್ರೊ.ಡಿ.ಜವಾಹರ್‌, ಕುಲಪತಿ ಡಾ.ಜೆ.ಸೂರ್ಯಪ್ರಸಾದ್‌, ಕುಲಸಚಿವ ಡಾ.ಕೆ.ಎಸ್‌.ಶ್ರೀಧರ್‌ ಮತ್ತಿತರರು ಇದ್ದರು.

67

ದಶಕಗಳ ಹಿಂದೆ ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಪಿಇಎಸ್‌ ಶಿಕ್ಷಣ ಸಂಸ್ಥೆ ಇಂದು ಹತ್ತಾರು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಎಲ್ಲ ಅನುಕೂಲಗಳೊಂದಿಗೆ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ಬೆಳೆದಿದೆ. ಪ್ರತಿ ಕೋರ್ಸಿನ ಪ್ರತಿ ಸೆಮಿಸ್ಟರ್‌ನಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಒಟ್ಟಾರೆ ಪ್ರತಿ ವರ್ಷ 35 ಕೋಟಿ ರು. ವರೆಗೆ ಸ್ಕಾಲರ್‌ ಶಿಪ್‌(Scholarship) ನೀಡುತ್ತಿದ್ದೇವೆ ಎಂದು ವಿವರಿಸಿದ ಪಿಇಎಸ್‌ ವಿವಿ ಕುಲಾಧಿಪತಿ ಪ್ರೊ.ಎಂ.ಆರ್‌.ದೊರೆಸ್ವಾಮಿ

77

ಸಮಾರಂಭದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 22 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಮತ್ತು 59 ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಯಿತು. ವಿವಿಧ ಪದವಿ, ಪಿಎಚ್‌.ಡಿ, ಎಂ.ಟೆಕ್‌ ಸೇರಿದಂತೆ ಒಟ್ಟಾರೆ 2,249 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು
ಶಿಕ್ಷಣ

Latest Videos
Recommended Stories
Recommended image1
ವಿದ್ಯಾರ್ಥಿಗಳ ಬೇಸಿಗೆ ರಜಾ ಮಜಾ ಕಟ್‌ ಮಾಡದಂತೆ ಕರ್ನಾಟಕದ ಶಾಲೆಗಳಿಗೆ CBSE ಖಡಕ್‌ ಸೂಚನೆ!
Recommended image2
ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿವಿಯಲ್ಲಿ ದೇಶವಿರೋಧಿ ಚಟುವಟಿಕೆ ಆರೋಪ, ಪ್ರತಿಭಟಿಸಿದ ಎಬಿವಿಪಿ ವಿದ್ಯಾರ್ಥಿಗಳು ಅರೆಸ್ಟ್
Recommended image3
ಗುಲ್ಬರ್ಗ ವಿವಿ ಘಟಿಕೋತ್ಸವ: ರೈತನ ಮಗಳು ಚೆನ್ನಮ್ಮಗೆ 11, ಕೂಲಿಕಾರನ ಮಗ ರಾಹುಲ್‌ಗೆ 9 ಗೋಲ್ಡ್ ಮೆಡಲ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved