MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Education
  • Kannada Book: ಎಂಜಿನಿಯರಿಂಗ್‌, ವೈದ್ಯಕೀಯ ಪಠ್ಯ ಕನ್ನಡದಲ್ಲೇ ಸಿದ್ಧಪಡಿಸಿ: ಜ್ಞಾನೇಂದ್ರ

Kannada Book: ಎಂಜಿನಿಯರಿಂಗ್‌, ವೈದ್ಯಕೀಯ ಪಠ್ಯ ಕನ್ನಡದಲ್ಲೇ ಸಿದ್ಧಪಡಿಸಿ: ಜ್ಞಾನೇಂದ್ರ

ಬೆಂಗಳೂರು(ನ.25):  ಕನ್ನಡವು(Kannada) ಅತ್ಯಂತ ಪ್ರಾಚೀನವೂ ಮತ್ತು ಶಾಸ್ತ್ರೀಯ ಭಾಷೆಗಳಲ್ಲಿ ಪ್ರಮುಖವಾಗಿದ್ದು, ಎಂಜಿನಿಯರಿಂಗ್‌, ವೈದ್ಯಕೀಯ ವಿಷಯಗಳ ಪಠ್ಯವನ್ನು ಕನ್ನಡದಲ್ಲಿಯೇ ಸಿದ್ಧಪಡಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಪ್ರತಿಪಾದಿಸಿದರು.

1 Min read
Kannadaprabha News | Asianet News
Published : Nov 25 2021, 08:09 AM IST| Updated : Nov 25 2021, 08:47 AM IST
Share this Photo Gallery
  • FB
  • TW
  • Linkdin
  • Whatsapp
15

ರೇಸ್‌ಕೋರ್ಸ್‌ ರಸ್ತೆಯ ರೇಸ್‌ ವ್ಯೂ ಕಾಟೇಜ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾಹಿತಿ ಡಾ. ಹಂಪ ನಾಗರಾಜಯ್ಯ(Dr Hampa Nagarajaiah) ಅವರು ರಚಿಸಿದ ‘ಚಾರುಲತ-ವಸಂತ’(Charulata-Vasanta) ಕಾವ್ಯದ ಇಂಗ್ಲಿಷ್‌ ಅನುವಾದ ಕೃತಿಯನ್ನು ಬಿಡುಗಡೆಗೊಳಿಸಿದ ಸಚಿವ ಆರಗ ಜ್ಞಾನೇಂದ್ರ

25

ಕನ್ನಡಕ್ಕೆ ಐತಿಹಾಸಿಕ ಮಹತ್ವವಿದ್ದು ಎಂಜಿನಿಯರಿಂಗ್‌(Engineering), ವೈದ್ಯಕೀಯ(Medical) ವಿಷಯಗಳನ್ನು ಕನ್ನಡದಲ್ಲಿ ಸುಲಲಿತವಾಗಿ ವಿಧ್ಯಾರ್ಥಿಗಳಿಗೆ(Students) ಬೋಧಿಸಲು ನೆರವಾಗುವಂತೆ ಪಠ್ಯಕ್ರಮ ರಚನೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಾಹಿತಿಗಳು, ಚಿಂತಕರು ಸಲಹೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದ ಗೃಹ ಸಚಿವರು

35

ಕನ್ನಡದಲ್ಲಿ ರಚಿತವಾದ ಅತ್ಯುತ್ತಮ ಕೃತಿಗಳನ್ನು ಬೇರೆ ಭಾಷೆಗೆ ಅನುವಾದಗೊಳಿಸಲು(Translation) ಲೇಖಕರ ಹಕ್ಕು ಸಂಬಂಧದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಕನ್ನಡದಲ್ಲಿ ರಚಿತವಾಗುವ ಎಲ್ಲಾ ಮೌಲ್ಯಯುತ ಕೃತಿಗಳು ನಾಡಿನ ಅಸ್ತಿಯಾಗಿದ್ದು, ಕನ್ನಡ ಹಾಗೂ ಸಾರಸ್ವತ ಲೋಕಕ್ಕೆ ನೀಡುವ ಕೊಡುಗೆಗಳಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಆರಗ ಜ್ಞಾನೇಂದ್ರ

45

ಹಂಪನಾ ಅವರು ರಚಿಸಿರುವ ಚಾರುಲತಾ-ವಸಂತ ಕೃತಿ ಕನ್ನಡದಲ್ಲಿ ರಚಿತವಾದ ಸುಂದರ ಕಥನ ಕಾವ್ಯವಾಗಿದ್ದು, ಮೂಲ ಕೃತಿಗೆ ಧಕ್ಕೆ ಬಾರದಂತೆ ತರ್ಜುಮೆ ಮಾಡಲಾಗಿದೆ. ಅನುವಾದ ಕೃತಿಗಳಿಂದ ಕನ್ನಡ ಸಾರಸ್ವತ ಲೋಕ ವಿಸ್ತಾರವಾಗುತ್ತದೆ. ಪ್ರಪಚಂದ ಯಾವುದೇ ಭಾಷೆಗಳಿಗೂ ಪ್ರಬುದ್ಧತೆಯಲ್ಲಿ ಸರಿಸಾಟಿಯಾದ ಭಾಷೆ ಎಂದರೆ ಕನ್ನಡ ಎಂದು ಪ್ರಶಂಸಿಸಿದ ಸಚಿವ ಜ್ಞಾನೇಂದ್ರ

55

ಹಂಪ ನಾಗರಾಜಯ್ಯ ಮತ್ತು ಅವರ ಪತ್ನಿ ಕಮಲಾ ಹಂಪನಾ ಅವರನ್ನು ಇದೇ ಸಂದರ್ಭದಲ್ಲಿ ಸಚಿವರು ಆತ್ಮೀಯವಾಗಿ ಸನ್ಮಾನಿಸಿದರು. ವಿಮರ್ಶಕ ರಾಜೇಂದ್ರ ಚನ್ನಿ, ಸಾಹಿತಿಗಳಾದ ಮಲ್ಲೇಪುರಂ ಜಿ.ವೆಂಕಟೇಶ್‌, ಎಚ್‌.ಎಸ್‌.ವೆಂಕಟೇಶ ಮೂರ್ತಿ, ಗುರುರಾಜ ಕರ್ಜಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌.ಜೀವರಾಜ್‌ ಮತ್ತಿತರರು ಹಾಜರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved