ಚಿತ್ರಗಳಲ್ಲಿ: ಕರ್ನಾಟಕದಿಂದ ಲೋಕಸಭೆ ಪ್ರವೇಶಿಸಿದ 10 ಹೊಸ ಮುಖಗಳು
ಪ್ರಧಾನಿ ಗದ್ದುಗೆ ಏರುವವರಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಮತ್ತೊಮ್ಮೆ ಮೋದಿ ಎಂಬುದು ಸಾಬೀತಾಯ್ತು. ಬಿಜೆಪಿ ಗೆಲುವಿನ ನಗೆ ಬೀರಿದರೆ ಕಾಂಗ್ರೆಸ್ ಸೋಲಿನ ಕಾರಣಗಳನ್ನು ಲೆಕ್ಕಾಚಾರ ಹಾಕಲು ಶುರು ಮಾಡಿದೆ. ಮೊದಲ ಬಾರಿಗೆ ರಾಜ್ಯದಿಂದ ಸಂಸತ್ ಪ್ರವೇಶಿಸುವವರ್ಯಾರು ಎಂಬ ಪಟ್ಟಿ ಇಲ್ಲಿದೆ ನೋಡಿ.
7 ಸಲ ಸಂಸದರಾಗಿ ಆಯ್ಕೆಯಾಗಿದ್ದ ಕೆ ಎಚ್ ಮುನಿಯಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಗೆಲುವು ಸಾಧಿಸಿದ್ದಾರೆ.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ 1ಲಕ್ಷಕ್ಕೂ ಅಧಿಕ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚಿತ್ರದುರ್ಗ ಹಾಲಿ ಸಂಸದ ಕಾಂಗ್ರೆಸ್ ನ ಬಿ ಎನ್ ಚಂದ್ರಪ್ಪ ರನ್ನು ಮಣಿಸಿ ಬಿಜೆಪಿ ಅಭ್ಯರ್ಥಿ ನಾರಾಯಣ ಸ್ವಾಮಿ ವಿಜಯಮಾಲೆ ತನ್ನದಾಗಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ನ ವೀರಪ್ಪ ಮೋಯ್ಲಿ ಹ್ಯಾಟ್ರಿಕ್ ಮಿಸ್ ಮಾಡಿಕೊಂಡಿದ್ದಾರೆ. ಬಿಜೆಪಿಯ ಬಚ್ಚೇಗೌಡ ಗೆಲುವು ಸಾಧಿಸಿದ್ದಾರೆ.
ಕಲಬುರ್ಗಿಯಲ್ಲಿ ಸೋಲಿಲ್ಲದ ಸರದಾರ ಖರ್ಗೆಗೆ ಸೋಲುಣಿಸಿದ ಬಿಜೆಪಿಯ ಉಮೇಶ್ ಜಾಧವ್
ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಎ ಮಂಜು ವಿರುದ್ಧ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕಾಂಗ್ರೆಸ್ ನ ಹರಿಪ್ರಸಾದ್ರನ್ನು ಸೋಲಿಸಿದ್ದಾರೆ.
ಬಳ್ಳಾರಿಯಲ್ಲಿ ಹಾಲಿ ಸಂಸದ ಉಗ್ರಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಗೆಲುವು ಸಾಧಿಸಿದ್ದಾರೆ.
ಭಾರೀ ಕುತೂಹಲ ಮೂಡಿಸಿದ್ದ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿ ಸುಮಲತಾ ನಿಖಿಲ್ ರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದಾರೆ.
ರಾಯಚೂರಿನಲ್ಲಿ ಮೈತ್ರಿ ಅಭ್ಯರ್ಥಿ ಮತ್ತು ಹಾಲಿ ಸಂಸದ ಬಿವಿ ನಾಯಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಗೆಲುವಿನ ನಗೆ ಬೀರಿದ್ದಾರೆ.