MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Vaishak Death- Krishi Thapanda: ವೈಶಾಕ್ ಸಾವಿನ ಹಿನ್ನೆಲೆಯಲ್ಲಿ ಸುದ್ದಿಯಾಗಿರೋ ನಟಿ ಕೃಷಿ ತಾಪಂಡ ನಟಿಸಿದ ಸಿನಿಮಾಗಳು ಇವು!

Vaishak Death- Krishi Thapanda: ವೈಶಾಕ್ ಸಾವಿನ ಹಿನ್ನೆಲೆಯಲ್ಲಿ ಸುದ್ದಿಯಾಗಿರೋ ನಟಿ ಕೃಷಿ ತಾಪಂಡ ನಟಿಸಿದ ಸಿನಿಮಾಗಳು ಇವು!

ವೈಶಾಖ್ ಸಾವಿನ ಸುದ್ದಿಯಲ್ಲಿ ನಂಟು ಹೊಂದಿರುವ ಕೃಷಿ ತಾಪಂಡ ಕನ್ನಡದ ಯಾವ ಸಿನಿಮಾದಲ್ಲಿ ನಟಿಸಿದ್ದರು ಎಂದು ಕೇಳುವವರ ಸಂಖ್ಯೆ ದೊಡ್ಡದಿದೆ. ಅವರಿಗೂ ಸೇರಿದಂತೆ ನಟಿ ಕೃಷಿ ತಾಪಂಡ ವೃತ್ತಿಜೀವನದ ಆರಂಭ, ನಟಿಸಿರುವ ಸಿನಿಮಾಗಳ ಬಗ್ಗೆ ಇಲ್ಲಿದೆ ಕೆಲವು ಮಾಹಿತಿ, ನೋಡಿ..

3 Min read
Author : Shriram Bhat
Published : Jun 25 2026, 08:06 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Insatgram

ಸದ್ಯ ಕನ್ನಡದ ಸಿನಿಮಾ ನಟಿ ಕೃಷಿ ತಾಪಂಡ ಅವರು ಸುದ್ದಿಯಲ್ಲಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದ ಉದ್ಯಮಿ ವೈಶಾಕ್ (Vaishak) ಅವರ ಆ*ತ್ಮಹತ್ಯೆ ಪ್ರಕರಣದಲ್ಲಿ ಈ ನಟಿ ಕೃಷಿ ತಾಪಂಡ (Krishi Tapanda) ಹೆಸರು ತಳುಕುಹಾಕಿಕೊಂಡಿದೆ. ನಿನ್ನೆ ರಾತ್ರಿ ಸಾಯುವ ಸಮಯದಲ್ಲಿ ಸೇರಿದಂತೆ ಇತ್ತೀಚೆಗೆ ವೈಶಾಖ್ ಅವರು ಚಿತ್ರನಟಿ ಕೃಷಿ ತಾಪಂಡರ ಅಪಾರ್ಟ್‌ಮೆಂಟ್‌ನಲ್ಲೇ ಇದ್ದರು ಎನ್ನಲಾಗಿದೆ. ವೈಶಾಖ್ ಸಾವಿನ ತನಿಖೆ ಬೇರೆಬೇರೆ ಆಯಾಮಗಳಲ್ಲಿ ನಡೆಯುತ್ತಿದೆ. ಆದರೆ, ಈ ಕೇಸ್‌ನಲ್ಲಿ ಕೇಳಿಬರುತ್ತಿರುವ ನಟಿ ಕೃಷಿ ತಾಪಂಡ ಬಗ್ಗೆ ಜನರಿಗೆ ಇನ್ನಿಲ್ಲದ ಕುತೂಹಲ ಸೃಷ್ಟಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
28
Image Credit : Insatgram

ವೈಶಾಖ್ ಸಾವಿನ ಸುದ್ದಿಯಲ್ಲಿ ನಂಟು ಹೊಂದಿರುವ ಕೃಷಿ ತಾಪಂಡ ಕನ್ನಡದ ಯಾವ ಸಿನಿಮಾದಲ್ಲಿ ನಟಿಸಿದ್ದರು ಎಂದು ಕೇಳುವವರ ಸಂಖ್ಯೆ ದೊಡ್ಡದಿದೆ. ಅವರಿಗೂ ಸೇರಿದಂತೆ ನಟಿ ಕೃಷಿ ತಾಪಂಡ ವೃತ್ತಿಜೀವನದ ಆರಂಭ, ನಟಿಸಿರುವ ಸಿನಿಮಾಗಳ ಬಗ್ಗೆ ಇಲ್ಲಿದೆ ಕೆಲವು ಮಾಹಿತಿ, ನೋಡಿ..

Related Articles

Related image1
Viashak Death: ವೈಶಾಖ್ ಪತ್ನಿ ಬಿಚ್ಚಿಟ್ಟ ಸ್ಫೋಟಕ ಸತ್ಯಗಳು- ಮಾತು ಬಿಟ್ಟಿದ್ದರು; ಮೆಸೇಜ್ ಮಾಡುತ್ತಿದ್ದರು; ನಿನ್ನೆ ಲಾಸ್ಟ್ ಮೆಸೇಜ್ ಇದು..!
Related image2
ವೈಶಾಕ್‌ಗೆ ಮದುವೆ ಆಗಿ 14 ವರ್ಷದ ಮಗನಿದ್ದ; ಆದ್ರೂ ನಟಿ ಕೃಷಿ ತಾಪಾಂಡ ಮನೆಗೆ ಬರುತ್ತಿದ್ದನೇಕೆ? ಬಿಗ್‌ ಟ್ವಿಸ್ಟ್‌ ಕೊಟ್ಟ ಆ ಒಂದು ಸುಳಿವು!
38
Image Credit : Insatgram

ಕೃಷಿ ತಾಪಂಡ ಕನ್ನಡ ಚಿತ್ರರಂಗದ ನಟಿ ಮತ್ತು ಮಾಡೆಲ್. ಕೊಡಗಿನಲ್ಲಿ ಜನಿಸಿದ ಇವರು 'ಕಹಿ' (04 Nov 2016) ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. 2016 ರಲ್ಲಿ ತೆರೆಕಂಡ `ಅಕಿರ' (06 May 2016) ಚಿತ್ರದಿಂದ ಖ್ಯಾತಿ ಪಡೆದರು. ಬಿಗ್ ಬಾಸ್ ಕನ್ನಡ ಸೀಸನ್ 5 ರಲ್ಲಿ ಭಾಗವಹಿಸಿದ್ದರು.

48
Image Credit : Insatgram

ಬಳಿಕ ನಟಿ ಕೃಷಿ ತಾಪಂಡ ಅವರು 06 Jul 2018ರಲ್ಲಿ ತೆರೆಗೆ ಬಂದ 'ಕನ್ನಡಕ್ಕಾಗಿ ಒಂದನ್ನು ಒತ್ತಿ' 22 Nov 2019ರಲ್ಲಿ ತೆರೆಕಂಡ 'ಕಾಳಿದಾಸ ಕನ್ನಡ ಮೇಷ್ಟ್ರು', 10 Sep 2021ರಲ್ಲಿ ತೆರೆಕಂಡ 'ಲಂಕೆ', 10 Feb 2023ರಲ್ಲಿ ತೆರೆಗೆ ಬಂದ 'ರೂಪಾಯಿ' ಹಾಗೂ 31 Jan 2025 ಬಿಡುಗಡೆಯಾದ 'ಗಣ' ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

58
Image Credit : Insatgram

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆದ ಉದ್ಯಮಿ ವೈಶಾಕ್ (Vaishak) ಅವರ ಆತ್ಮಹತ್ಯೆ ಪ್ರಕರಣ ಈಗ ಮತ್ತೊಂದು ಮಗ್ಗುಲಿಗೆ ತಿರುಗಿದೆ. ಈ ಘಟನೆ ಸಂಬಂಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR) ಪ್ರಕರಣ ದಾಖಲಾಗಿದ್ದು, ಮೃತ ವೈಶಾಕ್ ಅವರ ಪತ್ನಿ ಮೇಘಾ ಅವರು ನೀಡಿರುವ ದೂರು ಈಗ ಹಲವು ಸಂಚಲನಗಳನ್ನು ಸೃಷ್ಟಿಸಿದೆ. "ಗಂಡನ ಸಾವಿನ ಬಗ್ಗೆ ಯಾವುದೇ ಅನುಮಾನವಿಲ್ಲ" ಎಂದು ದೂರು ನೀಡಿದ್ದಾರೆ.

68
Image Credit : Insatgram

ಆದರೆ, ದೂರಿನಲ್ಲಿ ಮೇಘಾ ಅವರು ನಟಿ ಕೃಷಿ ತಾಪಾಂಡ (Krishi Thapanda) ಅವರ ಬಗ್ಗೆ ನೇರವಾಗಿಯೇ ಉಲ್ಲೇಖಿಸಿದ್ದಾರೆ. "ನನ್ನ ಪತಿ ವೈಶಾಕ್‌ಗೆ ನಟಿ ಕೃಷಿ ಜೊತೆ ಅನೈತಿಕ ಸಂಬಂಧ ಇದೆ ಎಂದು ನಾನು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಬಂದ ಸುದ್ದಿಯನ್ನು ನೋಡಿ ತಿಳಿದುಕೊಂಡಿದ್ದೆ. ಈ ವಿಚಾರವಾಗಿ ನಾನು ಹಲವು ಬಾರಿ ಅವರ ಜೊತೆ ಜಗಳವಾಡಿದ್ದೆ. ಈ ಸಹವಾಸ ಬಿಡುವಂತೆ ಗೋಗರೆದಿದ್ದೆ. ಬಿಡುತ್ತೇನೆ ಎಂದು ಮಾತು ಕೊಟ್ಟಿದ್ದ ಅವರು, ಆ ಮಾತನ್ನು ಉಳಿಸಿಕೊಳ್ಳಲೇ ಇಲ್ಲ" ಎಂದು ಮೇಘಾ ಅಳಲು ತೋಡಿಕೊಂಡಿದ್ದಾರೆ.

78
Image Credit : Insatgram

ಮಾತು ಬಿಟ್ಟಿದ್ದರು, ಕೇವಲ ವಾಟ್ಸಪ್ ಮೆಸೇಜ್!

ನಟಿಯ ಜೊತೆಗಿನ ಸ್ನೇಹದ ವಿಚಾರ ಮನೆಯಲ್ಲಿ ದೊಡ್ಡ ಮಟ್ಟದ ರಂಪಾಟಕ್ಕೆ ಕಾರಣವಾಗಿತ್ತು. ಪತ್ನಿ ಕೇಳಿದ ಪ್ರಶ್ನೆಗಳಿಂದ ಬೇಸತ್ತಿದ್ದ ವೈಶಾಕ್, ಇತ್ತೀಚೆಗೆ ಪತ್ನಿಯ ಜೊತೆ ಮಾತನಾಡುವುದನ್ನೇ ಬಿಟ್ಟಿದ್ದರು. ಏನೇ ಹೇಳಬೇಕಿದ್ದರೂ ಕೇವಲ ವಾಟ್ಸಾಪ್ (WhatsApp) ಮೂಲಕ ಮೆಸೇಜ್ ಮಾಡುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಅವರು ಮನೆಗೆ ಕೂಡ ಬಂದಿರಲಿಲ್ಲ ಎಂಬ ಆಘಾತಕಾರಿ ವಿಷಯವನ್ನು ಮೇಘಾ ಪೊಲೀಸರಿಗೆ ತಿಳಿಸಿದ್ದಾರೆ.

88
Image Credit : Insatgram

ಕೊನೆಯ ಸಂದೇಶ: ಮಗನ ಬಗ್ಗೆ ವಿಚಾರಿಸಿ ಉತ್ತರ ಪಡೆದಿದ್ದರು!

ನಿನ್ನೆ ರಾತ್ರಿ ಕೂಡ ವೈಶಾಕ್ ಅವರು ಪತ್ನಿ ಮೇಘಾಗೆ ವಾಟ್ಸಾಪ್ ಮಾಡಿದ್ದರು. "ಮಗ ಮನೆಗೆ ಬಂದನಾ?" ಎಂದು ಕೇಳಿದ್ದರು. ಅದಕ್ಕೆ ಮೇಘಾ "ಬಂದಿದ್ದಾನೆ" ಎಂದು ರಿಪ್ಲೈ ಕೂಡ ಮಾಡಿದ್ದರು. ಆದರೆ, ಅದೇ ಅವರ ಕೊನೆಯ ಸಂಭಾಷಣೆ ಆಗುತ್ತದೆ ಎಂದು ಮೇಘಾ ಅಂದುಕೊಂಡಿರಲಿಲ್ಲ. ರಾತ್ರಿ 11:30ರ ಸುಮಾರಿಗೆ ಪೊಲೀಸರಿಂದ ಬಂದ ಕರೆ ವೈಶಾಕ್ ಅವರ ಇಡೀ ಕುಟುಂಬವನ್ನು ಸ್ತಬ್ದಗೊಳಿಸಿತ್ತು.

ಘಟನಾ ಸ್ಥಳದಲ್ಲಿ ನಟಿ ಕೃಷಿ ಇರುವುದು ಕಂಡ ಪತ್ನಿ!

ವಿಷಯ ತಿಳಿದು ಮೇಘಾ ಮತ್ತು ಮಾವನವರು ಕೃಷಿ ತಾಪಾಂಡ ಅವರ ನಿವಾಸಕ್ಕೆ ಹೋದಾಗ, ವೈಶಾಕ್ ಅಲ್ಲಿ ಮೃತಪಟ್ಟಿದ್ದರು. ಬೆಡ್ ಮೇಲೆ ಅಂಗಾತ ಮಲಗಿದ್ದ ಸ್ಥಿತಿಯಲ್ಲಿ ಪತಿ ಇರುವುದನ್ನು ಕಂಡ ಪತ್ನಿ ಕಂಗಾಲಾಗಿದ್ದರು. ಆ ಸಮಯದಲ್ಲಿ ಘಟನಾ ಸ್ಥಳದಲ್ಲಿ ಪೊಲೀಸರ ಜೊತೆಗೆ ನಟಿ ಕೃಷಿ ಕೂಡ ಇರುವುದನ್ನು ಪತ್ನಿ ಗಮನಿಸಿದ್ದಾರೆ. 2010ರಲ್ಲಿ ಮದುವೆಯಾಗಿ 14 ವರ್ಷದ ಮಗನಿದ್ದರೂ, ವೈಶಾಖ್-ಮೇಘಾ ಸಂಸಾರದಲ್ಲಿ ನಟಿ ಕೃಷಿ ತಾಪಂಡ ಎಂಟ್ರಿ ಬಿರುಗಾಳಿ ಎಬ್ಬಿಸಿತ್ತು ಎಂಬುದು ವೈಶಾಕ್ ಪತ್ನಿ ಮೇಘಾ ಮಾತಿನಿಂದ ಸ್ಪಷ್ಟವಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SB
Shriram Bhat
ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್‌ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್‌ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್‌ಪ್ರೆಸ್‌, ಒನ್‌ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ ಮೊದಲ ಪ್ರಾಶಸ್ತ್ಯ.
ಸ್ಯಾಂಡಲ್‌ವುಡ್
ಕ್ರೈಮ್ ನ್ಯೂಸ್
ಮನರಂಜನಾ ಸುದ್ದಿ
ವೈರಲ್ ಸುದ್ದಿ

Latest Videos
Recommended Stories
Recommended image1
ನವಿಲುಗರಿ ಕಾಂಟ್ರವರ್ಸಿ ಬಳಿಕ ಮತ್ತೊಮ್ಮೆ ಮಿಂಚಿದ ನಿವೇದಿತಾ ಗೌಡ
Recommended image2
Actress Amulya: ಆರ್.ಆರ್.ನಗರ ಬೆಟ್ಟದ ಮೇಲೆ ಐಷಾರಾಮಿ ಪಬ್ ಕಟ್ಟಿದ ನಟಿ ಅಮೂಲ್ಯ; ಇದು ಸೋಮರಸದ ಸ್ವರ್ಗ!
Recommended image3
Viashak Death: ವೈಶಾಖ್ ಪತ್ನಿ ಬಿಚ್ಚಿಟ್ಟ ಸ್ಫೋಟಕ ಸತ್ಯಗಳು- ಮಾತು ಬಿಟ್ಟಿದ್ದರು; ಮೆಸೇಜ್ ಮಾಡುತ್ತಿದ್ದರು; ನಿನ್ನೆ ಲಾಸ್ಟ್ ಮೆಸೇಜ್ ಇದು..!
Related Stories
Recommended image1
Viashak Death: ವೈಶಾಖ್ ಪತ್ನಿ ಬಿಚ್ಚಿಟ್ಟ ಸ್ಫೋಟಕ ಸತ್ಯಗಳು- ಮಾತು ಬಿಟ್ಟಿದ್ದರು; ಮೆಸೇಜ್ ಮಾಡುತ್ತಿದ್ದರು; ನಿನ್ನೆ ಲಾಸ್ಟ್ ಮೆಸೇಜ್ ಇದು..!
Recommended image2
ವೈಶಾಕ್‌ಗೆ ಮದುವೆ ಆಗಿ 14 ವರ್ಷದ ಮಗನಿದ್ದ; ಆದ್ರೂ ನಟಿ ಕೃಷಿ ತಾಪಾಂಡ ಮನೆಗೆ ಬರುತ್ತಿದ್ದನೇಕೆ? ಬಿಗ್‌ ಟ್ವಿಸ್ಟ್‌ ಕೊಟ್ಟ ಆ ಒಂದು ಸುಳಿವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved