ದಳಪತಿ ವಿಜಯ್ಗೆ ಚಿರಂಜೀವಿ ಬೆಂಬಲ; ಸಿನಿಮಾ ಲೀಕ್ ಬಗ್ಗೆ ಮೆಗಾಸ್ಟಾರ್ ಹೇಳಿದ್ದೇನು?
'ಜನ ನಾಯಗನ್' ಸಿನಿಮಾ ಲೀಕ್ ವಿವಾದದಲ್ಲಿ ದಳಪತಿ ವಿಜಯ್ಗೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಬೆಂಬಲ ಸೂಚಿಸಿದ್ದಾರೆ. ಸಿನಿಮಾದ ಪ್ರಮುಖ ದೃಶ್ಯಗಳು ಲೀಕ್ ಆಗಿರುವ ಬಗ್ಗೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಸಿನಿಮಾಗೆ ಗುಡ್ಬೈ, ರಾಜಕೀಯಕ್ಕೆ ವಿಜಯ್ ಎಂಟ್ರಿ!
ಬಾಲಕೃಷ್ಣ ಸಿನಿಮಾಕ್ಕೆ ರೀಮೇಕ್..
ಈ ಚಿತ್ರವನ್ನು ಎಚ್. ವಿನೋದ್ ನಿರ್ದೇಶಿಸಿದ್ದಾರೆ. ಇದು ತೆಲುಗಿನಲ್ಲಿ ಹಿಟ್ ಆದ ಬಾಲಕೃಷ್ಣ ಅಭಿನಯದ 'ಭಗವಂತ್ ಕೇಸರಿ' ಚಿತ್ರದ ರಿಮೇಕ್ ಆಗಿದೆ. ಕೆವಿಎನ್ ಪ್ರೊಡಕ್ಷನ್ಸ್ ಭಾರೀ ಬಜೆಟ್ನಲ್ಲಿ ನಿರ್ಮಿಸಿದೆ. ವಿಜಯ್ ಜೊತೆಗೆ ಪೂಜಾ ಹೆಗ್ಡೆ, ಪ್ರಕಾಶ್ ರಾಜ್, ಪ್ರಿಯಾಮಣಿ, ಗೌತಮ್ ಮೆನನ್, ಮಮಿತಾ ಬೈಜು, ನಿರಳ್ಗಲ್ ರವಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ವಿಜಯ್ ಅವರ ನೆಚ್ಚಿನ ಅನಿರುಧ್ ಸಂಗೀತ ನೀಡಿದ್ದು, ಬಾಲಿವುಡ್ ನಟ ಬಾಬಿ ಡಿಯೋಲ್ ವಿಲನ್ ಆಗಿ ನಟಿಸಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಬೆಂಬಲ
ಸೋಶಿಯಲ್ ಮೀಡಿಯಾದಲ್ಲಿ ಮೆಗಾಸ್ಟಾರ್ ಪೋಸ್ಟ್
The unfortunate leak of #Jananayagan is something that deeply concerns me.
Cinema is built on trust, effort, and the collective dreams of many.
Such incidents affect all of us in the industry and remind us how crucial it is to protect our creative work.
We stand one with KVN…— Chiranjeevi Konidela (@KChiruTweets) April 10, 2026
ಇಂಡಸ್ಟ್ರಿ ಸೀರಿಯಸ್ ಆಗಿ ತೆಗೆದುಕೊಳ್ಳಬೇಕು
''ಈ ಘಟನೆಯನ್ನು ಇಡೀ ಚಿತ್ರರಂಗ ಗಂಭೀರವಾಗಿ ಪರಿಗಣಿಸಬೇಕು. ಈ ನಷ್ಟವನ್ನು ಕಡಿಮೆ ಮಾಡಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಕೆವಿಎನ್ ಪ್ರೊಡಕ್ಷನ್ಸ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಚಿತ್ರರಂಗದಲ್ಲಿರುವ ಪ್ರತಿಯೊಬ್ಬರೂ ಸಿನಿಮಾವನ್ನು ಗೌರವಿಸಿ, ರಕ್ಷಿಸಲು ಮುಂದೆ ಬರಬೇಕು'' ಎಂದು ಅವರು ಮನವಿ ಮಾಡಿದ್ದಾರೆ. ಕೊನೆಯಲ್ಲಿ, ''ಪೈರಸಿಯನ್ನು ಕೊಲ್ಲೋಣ, ಸಿನಿಮಾವನ್ನು ಬದುಕಿಸೋಣ'' ಎಂಬ ಸಂದೇಶದೊಂದಿಗೆ ತಮ್ಮ ಮಾತನ್ನು ಮುಗಿಸಿದ್ದಾರೆ.
ದೀಪಾವಳಿಯಲ್ಲಿ ಬಿಡುಗಡೆಯಾಗಬೇಕಿತ್ತು ಜನ ನಾಯಗನ್
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

