MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • Entertainment
  • ನಟ ದುನಿಯಾ ವಿಜಯ್-ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಹಸಿರು ನಿಶಾನೆ: ಪತ್ನಿಗೆ ₹2 ಕೋಟಿ ಜೀವನಾಂಶ!

ನಟ ದುನಿಯಾ ವಿಜಯ್-ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಹಸಿರು ನಿಶಾನೆ: ಪತ್ನಿಗೆ ₹2 ಕೋಟಿ ಜೀವನಾಂಶ!

ನಟ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರಿಗೆ ಕರ್ನಾಟಕ ಹೈಕೋರ್ಟ್ ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿದೆ. ಈ ತೀರ್ಪಿನ ಅನ್ವಯ, ವಿಜಯ್ ಅವರು ನಾಗರತ್ನ ಅವರಿಗೆ ₹2 ಕೋಟಿ ಶಾಶ್ವತ ಜೀವನಾಂಶ ನೀಡಲಿದ್ದು, ತಮ್ಮ ಮೂವರು ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನು ಅವರೇ ವಹಿಸಿಕೊಳ್ಳಲಿದ್ದಾರೆ.

2 Min read
Author : Sathish Kumar KH
Published : Sep 03 2026, 12:31 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : stockPhoto

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ 'ದುನಿಯಾ' ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕೊನೆಗೂ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ಕೋರ್ಟ್ ಅಂಗಳದಲ್ಲಿದ್ದ ಈ ವಿಚ್ಛೇದನ ಪ್ರಕರಣವನ್ನು ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್, ದಂಪತಿಗೆ ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : stockPhoto

ವಿಚ್ಛೇದನ ಮಂಜೂರು ಮಾಡುವ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ಬರೋಬ್ಬರಿ 2 ಕೋಟಿ ರೂಪಾಯಿ ಶಾಶ್ವತ ಜೀವನಾಂಶ (Permanent Alimony) ನೀಡುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್‌ನ ವಿಭಾಗೀಯ ಪೀಠ ಮಹತ್ವದ ನಿರ್ದೇಶನ ನೀಡಿದೆ.

Related Articles

Related image1
ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕಿಡ್ನಾಪ್ ಕೇಸ್, ಸಹಪಾಠಿಯನ್ನು ಅಪಹರಿಸಿ ಕಾರಲ್ಲಿ ಹಲ್ಲೆಆರೋಪ!
Related image2
ಗ್ಲಾಮರ್ ಅಲ್ಲ, ಖಡಕ್ ಆ್ಯಕ್ಷನ್: ದುನಿಯಾ ವಿಜಯ್ ಸಿನಿಮಾದಲ್ಲಿ ನಟಿ ಟಬು ಹೊಸ ಅವತಾರ
35
Image Credit : stockPhoto

ನ್ಯಾಯಾಲಯದ ಮಹತ್ವದ ಆದೇಶದಲ್ಲೇನಿದೆ?

ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ. ವಿಚಾರಣೆ ವೇಳೆ ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯದ ಪ್ರಶ್ನೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ನಟ ದುನಿಯಾ ವಿಜಯ್ ಅವರ ಸಾಮಾಜಿಕ ಸ್ಥಾನಮಾನ, ವೃತ್ತಿಜೀವನ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ, ಪತ್ನಿಗೆ ₹2 ಕೋಟಿ ಪರಿಹಾರ ನೀಡುವಂತೆ ಸೂಚಿಸಿದೆ.

45
Image Credit : stockPhoto

ಮೂವರು ಮಕ್ಕಳ ಸಂಪೂರ್ಣ ಜವಾಬ್ದಾರಿ ವಿಜಯ್ ಹೆಗಲಿಗೆ!

ವಿಜಯ್ ಹಾಗೂ ನಾಗರತ್ನ ದಂಪತಿಗೆ ಮೂವರು ಮಕ್ಕಳಿದ್ದಾರೆ (ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ). ಹೈಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ, ಈ ಮೂವರು ಮಕ್ಕಳ ಪೋಷಣೆ, ವಿದ್ಯಾಭ್ಯಾಸ ಮತ್ತು ಸಂಪೂರ್ಣ ಜವಾಬ್ದಾರಿಯನ್ನು ನಟ ದುನಿಯಾ ವಿಜಯ್ ಅವರೇ ನೋಡಿಕೊಳ್ಳಲಿದ್ದಾರೆ.

55
Image Credit : stockPhoto

ವರ್ಷಗಳ ಕೌಟುಂಬಿಕ ಕಲಹಕ್ಕೆ ಬಿದ್ದ ತೆರೆ

ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಕೌಟುಂಬಿಕ ಭಿನ್ನಾಭಿಪ್ರಾಯಗಳು ಈ ಹಿಂದೆ ಪೊಲೀಸ್ ಠಾಣೆ, ಮಾಧ್ಯಮ ಹಾಗೂ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದವು. ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ವಿಜಯ್ ಹೈಕೋರ್ಟ್ ಮೊರೆ ಹೋಗಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗಳು ಮತ್ತೆ ಒಂದಾಗಿ ಬಾಳಲು ಸಾಧ್ಯವಿಲ್ಲ ಎಂಬ ಅಂಶವನ್ನು ಗಮನಿಸಿ, ಷರತ್ತುಬದ್ಧ ವಿಚ್ಛೇದನ ನೀಡುವ ಮೂಲಕ ಈ ಹೈಪ್ರೊಫೈಲ್ ಕೌಟುಂಬಿಕ ವ್ಯಾಜ್ಯಕ್ಕೆ ಶಾಶ್ವತ ತೆರೆ ಎಳೆದಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ದುನಿಯಾ ವಿಜಯ್
ಸ್ಯಾಂಡಲ್‌ವುಡ್
ಕರ್ನಾಟಕ ಸುದ್ದಿ
ವಿಚ್ಛೇದನ

Latest Videos
Recommended Stories
Recommended image1
ಹೊಂಬಾಳೆ ಫಿಲ್ಮ್ಸ್ ಮಹತ್ವದ ಹೆಜ್ಜೆ, ದಾಖಲೆ ಕಲೆಕ್ಷನ್ ಮಾಡಿದ ಹನುಮಾನ್ ಅಂಶ್ ಸಿನಿಮಾ ಸೆ.11ಕ್ಕೆ ಜಾಗತಿಕ ರಿಲೀಸ್
Recommended image2
ಆತ್ಮದ ಸಂಗೀತ, ಕ್ಷಣ ಕ್ಷಣಕ್ಕೂ ಢವ ಢವ; 24 ವರ್ಷದ ನಂತ್ರ ಗೆದ್ದ ನಿಗೂಢ ಮಲಯಾಳಂ ಚಿತ್ರ
Recommended image3
ಸದ್ದಿಲ್ಲದೆ ದಾಂಪತ್ಯಕ್ಕೆ ಕಾಲಿಟ್ಟ ನಟಿ ಚೈತ್ರಾ ರಾವ್; ಸಿಂಪಲ್ಲಾಗ್ ಕೌಶಿಕ್ ಮದ್ವೆಯಾದ ಜೋಡಿ ಹಕ್ಕಿಯ ಟೀಚರ್!
Related Stories
Recommended image1
ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕಿಡ್ನಾಪ್ ಕೇಸ್, ಸಹಪಾಠಿಯನ್ನು ಅಪಹರಿಸಿ ಕಾರಲ್ಲಿ ಹಲ್ಲೆಆರೋಪ!
Recommended image2
ಗ್ಲಾಮರ್ ಅಲ್ಲ, ಖಡಕ್ ಆ್ಯಕ್ಷನ್: ದುನಿಯಾ ವಿಜಯ್ ಸಿನಿಮಾದಲ್ಲಿ ನಟಿ ಟಬು ಹೊಸ ಅವತಾರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved