MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • ಇನ್ನೂ ಈಡೇರಿಲ್ಲ Sudharani ಬಹುದೊಡ್ಡ ಕನಸು: ಸೀರಿಯಲ್ ಮುಗಿಸಿದ ನಟಿಯ ಮುಂದಿನ ಪ್ಲ್ಯಾನ್​ ಏನು? ​

ಇನ್ನೂ ಈಡೇರಿಲ್ಲ Sudharani ಬಹುದೊಡ್ಡ ಕನಸು: ಸೀರಿಯಲ್ ಮುಗಿಸಿದ ನಟಿಯ ಮುಂದಿನ ಪ್ಲ್ಯಾನ್​ ಏನು? ​

ಶ್ರೀಮಸ್ತು ಶುಭಮಸ್ತು ಸೀರಿಯಲ್​ ಮುಗಿಸಿರೋ ನಟಿ ಸುಧಾರಾಣಿ ಅವರ ಮುಂದಿನ ನಡೆ ಏನು? ಇನ್ನೂ ಈಡೇರದ ಅವರ ಬಯಕೆ ಏನು? ಅವರೇ ಹೇಳಿದ್ದಾರೆ ಕೇಳಿ.. 

2 Min read
Suchethana D
Published : Aug 31 2025, 06:30 PM IST
Share this Photo Gallery
  • FB
  • TW
  • Linkdin
  • Whatsapp
18
ಶ್ರೀಮಸ್ತು ಶುಭಮಸ್ತು ಸೀರಿಯಲ್ ಮುಕ್ತಾಯ
Image Credit : our own

ಶ್ರೀಮಸ್ತು ಶುಭಮಸ್ತು ಸೀರಿಯಲ್ ಮುಕ್ತಾಯ

ಶ್ರೀಮಸ್ತು ಶುಭಮಸ್ತು ಸೀರಿಯಲ್​ (shrirasthu Shubhamasthu Serial) ಮೂಲಕ ತುಳಸಿ ಅಮ್ಮನಾಗಿ ಕಾಣಿಸಿಕೊಂಡು ದಿನನಿತ್ಯವೂ ನಿಮ್ಮ ಮನೆ ಬಾಗಿಲಿಗೆ ಬರ್ತಿರೋ ಎವರ್​ಗ್ರೀನ್​ ತಾರೆ ಸುಧಾರಾಣಿಯವರ ಈ ಸೀರಿಯಲ್ ಮುಗಿದಿದೆ. 1973ರಲ್ಲಿ ಹುಟ್ಟಿರೋ ಸುಧಾರಾಣಿಯವರಿಗೆ ಇದೀಗ 52ರ ಹರೆಯ. 2 ವರ್ಷದ ಪುಟಾಣಿಯಾಗಿ ಬಿಸ್ಕೆಟ್​ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಸುಧಾರಾಣಿಯವರು, ಬಣ್ಣದ ಲೋಕಕ್ಕೆ ಕಾಲಿಟ್ಟು 50 ವರ್ಷಗಳೇ ಸಂದಿವೆ. ಇದೀಗ ಕಿರುತೆರೆಯಲ್ಲಿ ತುಳಸಿ ಆಗುವ ಮೂಲಕ ಮೂರು ವರ್ಷ ಪ್ರೇಕ್ಷಕರನ್ನು ರಂಜಿಸಿದರು.

28
 ಈಡೇರಿತು ಎರಡು ಬಯಕೆ
Image Credit : FACEBOOK

ಈಡೇರಿತು ಎರಡು ಬಯಕೆ

ಸುಧಾರಾಣಿ ಅವರು ಮುಂದೇನು ಮಾಡಲಿದ್ದಾರೆ, ಅವರ ಮುಂದಿನ ಗುರಿಯೇನು ಎನ್ನುವ ಬಗ್ಗೆ ಸಹಜವಾಗಿಯೇ ಅಭಿಮಾನಿಗಳಿಗೆ ಕುತೂಹಲ ಇರುತ್ತದೆ. ಆ ಬಗ್ಗೆ ನ್ಯೂಸೋ ನ್ಯೂಸ್​​ ಯುಟ್ಯೂಬ್​ ಚಾನೆಲ್​ನಲ್ಲಿ ನಟಿ ಮಾತನಾಡಿದ್ದಾರೆ. ಈ ವರ್ಷ ನನಗೆ ಗುರಿಯ ಪೈಕಿ ಎರಡು ಗುರಿ ಈಡೇರಿದೆ. ಒಂದು ಷಾರ್ಟ್​ ಫಿಲಮ್​ ಪ್ರೊಡ್ಯೂಸ್​ ಮಾಡಿದ್ದೇನೆ, ಇನ್ನೊಂದು ಯುಟ್ಯೂಬ್​ ಚಾನೆಲ್​ ಶುರು ಮಾಡಿದ್ದು ಎಂದಿದ್ದಾರೆ.

Related Articles

Related image1
ಸ್ಕೇಟಿಂಗ್ ಶೂಸ್​ನಲ್ಲೇ ಕ್ಯಾಟ್​ವಾಕ್​ ಮಾಡಿದ Bhagyalakshmi ಭಾಗ್ಯ! ಆದಿ ಬಂದ ಖುಷಿಗಾ ಕೇಳ್ತಿರೋ ಫ್ಯಾನ್ಸ್​
Related image2
BIGG BOSSನಲ್ಲಿ 'Big' ಬದಲು 'Bigg' ಯಾಕೆ? ಎಕ್ಸ್​ಟ್ರಾ 'G' ಹಿಂದಿರೋ ಬಹುದೊಡ್ಡ ಗುಟ್ಟು ರಿವೀಲ್​!
38
ಮುಂದಿನ ಪ್ಲ್ಯಾನ್​
Image Credit : instagram

ಮುಂದಿನ ಪ್ಲ್ಯಾನ್​

ಮುಂದಿನ ಪ್ಲ್ಯಾನ್​ ಬಗ್ಗೆ ಸುಧಾರಾಣಿ ಇದೀಗ ಮಾತನಾಡಿದ್ದಾರೆ. ಇದುವರೆಗೆ ನನ್ನ ಈ ಬಯಕೆ ಈಡೇರಿಲ್ಲ ಎಂದಿದ್ದಾರೆ. ಅದು ಭರತನಾಟ್ಯ ಮುಂದುವರೆಸಬೇಕು ಎನ್ನುವುದು ನನ್ನ ದೊಡ್ಡ ಗುರಿ. ನನ್ನ ಮಗಳು ನಿಧಿ ಹೇಳಿಕೊಡ್ತೇನೆ ಎಂದಾಗಲೆಲ್ಲಾ ಏನೋ ಆಗುತ್ತೆ. ಟೈಮೇ ಸಾಕಾಗ್ತಿಲ್ಲ ಎಂದಿದ್ದಾರೆ ಸುಧಾರಾಣಿ. ಎರಡು ದಿನ ಫುಲ್ ಜೋಶ್​ನಲ್ಲಿ ಶುರುಮಾಡಿದೆ. ಮೂರನೆಯ ದಿನ ಬಿದ್ದು ಕಾಲಿಗೆ ಏಟು ಮಾಡಿಕೊಂಡೆ ಎಂದಿದ್ದಾರೆ. ಆದರೂ ಅದನ್ನು ಮುಂದುವರಿಸುವ ಗುರಿ ಇದೆ ಎಂದಿದ್ದಾರೆ.

48
ಬಾಲಕಿಯಾಗಿದ್ದಾಗಲೇ ನಟನೆ
Image Credit : Google

ಬಾಲಕಿಯಾಗಿದ್ದಾಗಲೇ ನಟನೆ

ಇನ್ನು ಸುಧಾರಾಣಿ ಕುರಿತು ಹೇಳುವುವದಾದರೆ, ಇನ್ನೂ 3 ವರ್ಷ ಆಗುವ ಮುಂಚೆಯೇ, ಬಾರಿಗೆ ಕ್ಯಾಮೆರಾ ಎದುರಿಸಿದ್ದು ಕ್ವಾಲಿಟಿ ಬಿಸ್ಕೆಟ್‌ ಜಾಹೀರಾತಿಗೆ! ಮುಂದೆ ಸೋಪ್‌, ಬ್ರೆಡ್‌, ಕುಕ್ಕಿಂಗ್‌ ಆಯಿಲ್‌ ಸೇರಿದಂತೆ ಏಳೆಂಟು ಜಾಹೀರಾತುಗಳಿಗೆ ಮಾಡೆಲ್‌ ಆಗಿದ್ದರು ಸುಧಾರಾಣಿ. ಸುಮಾರು ಹತ್ತು ಸಿನಿಮಾಗಳಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡಿದ್ದರು. 'ಕಿಲಾಡಿ ಕಿಟ್ಟು' (1978), 'ಕುಳ್ಳ ಕುಳ್ಳಿ', 'ರಂಗನಾಯಕಿ', 'ಅನುಪಮ', 'ಭಾಗ್ಯವಂತ', 'ಬಾಡದ ಹೂ' ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದರು.

58
ಆನಂದ್​ ಚಿತ್ರದ ಮೂಲಕ ನಾಯಕಿ
Image Credit : Google

ಆನಂದ್​ ಚಿತ್ರದ ಮೂಲಕ ನಾಯಕಿ

ಕೊನೆಗೆ ಪಾರ್ವತಮ್ಮ ಅವರ ಕಣ್ಣಿಗೆ ಬಿದ್ದು, ಶಿವರಾಜ್‌ಕುಮಾರ್ ಜೊತೆ ಆನಂದ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ಆಗ ಕುತೂಹಲ ಎಂದರೆ ಸುಧಾರಾಣಿಗೆ ಇನ್ನೂ 13 ವರ್ಷ ವಯಸ್ಸು. 52ನೇ ವಯಸ್ಸಿನಲ್ಲಿಯೂ ನಟಿ ಸಿನಿಮಾಗಳು ಮತ್ತು ಕಿರುತೆರೆ ಧಾರಾವಾಹಿಗಳ ಮೂಲಕ ಜನರಿಗೆ ಮನೋರಂಜನೆ ನೀಡುತ್ತಿದ್ದಾರೆ.

68
ಕ್ಯಾಮೆರಾ ಅನುಭವ ಹೇಳಿದ ಸುಧಾರಾಣಿ
Image Credit : Asianet News

ಕ್ಯಾಮೆರಾ ಅನುಭವ ಹೇಳಿದ ಸುಧಾರಾಣಿ

ಈ ಹಿಂದೆ ಸುಧಾರಾಣಿ ಅವರು ತಮ್ಮ ಕ್ಯಾಮೆರಾ ಅನುಭವವನ್ನು ತೆರೆದಿಟ್ಟಿದ್ದರು. 'ಕ್ಯಾಮೆರಾಗಳು ಸುತ್ತ ಬೆಳೆದ ಕಾರಣ ಅದನ್ನು ಎದುರಿಸಲು ನನಗೆ ಏನೋ ಹೊಸತು ಅನಿಸಲಿಲ್ಲ. ನನ್ನ ಪಕ್ಕ ಕಲ್ಲಿನಂತೆ ನಿಂತಿದು ಧೈರ್ಯ ಕೊಟ್ಟಿದ್ದು ನನ್ನ ತಾಯಿ. ಇಂದು ನಾನು ಏನೇ ಆಗಿದ್ದರು ಅದು ನನ್ನ ತಾಯಿಗೆ ಸೇರಬೇಕಿರುವ ಕ್ರೆಡಿಟ್. ಪುಟ್ಟ ಮಗುವಾಗಿದ್ದಾಗ ಕ್ಯಾಮೆರಾ ಎದುರಿಸಲು ಶುರು ಮಾಡಿದೆ ಅಲ್ಲಿಂದ ಅವಕಾಶಗಳು ಹುಡುಕಿ ಬಂದಿತ್ತು. ಅಲ್ಲಿಂದ ತಾಯಿ ಏನೇ ಹೇಳಿದ್ದರೂ ಕೇಳಬೇಕು ಅನ್ನೋ ಆಲೋಚನೆ ಶುರುವಾಗಿತ್ತು, ಇದು ಭಯದಿಂದ ಅಲ್ಲ ನಂಬಿಕೆಯಿಂದ ಎಂದಿದ್ದರು.

78
ಸುಧಾರಾಣಿ ನೋವಿನ ಕಥೆ...
Image Credit : our own

ಸುಧಾರಾಣಿ ನೋವಿನ ಕಥೆ...

ಇನ್ನು ನಟಿ ಜೀವನದಲ್ಲಿ ಸಾಕಷ್ಟು ನೋವನ್ನುಂಡವರು. 1999ರಲ್ಲಿ ಮದುವೆಯಾಗುವ ಮೂಲಕ ಬಣ್ಣದ ಬದುಕಿನಿಂದ ಸುಧಾರಾಣಿಯವರು ಮೊದಲ ಬಾರಿಗೆ ದೂರವಾದರು. ಆದರೆ, ಮದುವೆ ಅವರ ಪಾಲಿಗೆ ವರವಾಗುವ ಬದಲು ಶಾಫವಾಯಿತು. ಅಮೆರಿಕಾದಲ್ಲಿ ಅನಸ್ತೇಷಿಯಾ ಸ್ಪೆಷಲಿಸ್ಟ್ ಆಗಿದ್ದ ಗಂಡ ಡಾ ಸಂಜಯ್, ಯಾವುದೋ ರಹಸ್ಯ ಕೆಮಿಕಲ್ಸ್ ನೀಡಿ ಸುಧಾರಾಣಿಯವರನ್ನು ಮುಗಿಸಲು ಕೂಡ ಪ್ಲಾನ್ ಮಾಡಿದ್ದರಂತೆ. ಜತೆಗೆ, ಮದುವೆಯಾದ ಸ್ವಲ್ಪ ದಿನಗಳ ಬಳಿಕ ಸುಧಾರಾಣಿಯವರಿಗೆ ಇನ್ನಿಲ್ಲದ ಟಾರ್ಚರ್ ಕೊಡಲು ಶುರು ಮಾಡಿದ್ದರಂತೆ.

88
ಖಿನ್ನತೆಗೂ ಜಾರಿದ್ದ ನಟಿ
Image Credit : our own

ಖಿನ್ನತೆಗೂ ಜಾರಿದ್ದ ನಟಿ

ಒಟ್ಟಿನಲ್ಲಿ, ಡಾ ಸಂಜಯ್ ಮೂಲಕ ಅಮೇರಿಕಾದಲ್ಲಿ ಸುಧಾರಾಣಿ ವೈವಾಹಿಕ ಬದುಕು ನರಕವಾಯಿತು. ಗಂಡನಿಂದ ತಪ್ಪಿಸಿಕೊಂಡು ಬಂದು ಗೆಳತಿ ಮನೆಯಲ್ಲಿ ರಹಸ್ಯವಾಗಿ ಆಶ್ರಯ ಪಡೆದು, ಪಾರ್ವತಮ್ಮ ರಾಜ್‌ಕುಮಾರ್ ಹಾಗೂ ಅಂಬರೀಷ್ ಸಹಾಯದಿಂದ ಅಮೆರಿಕಾದಿಂದ ತಪ್ಪಿಸಿಕೊಂಡು ಬಂದು ಸುಧಾರಾಣಿಯವರು ಬೆಂಗಳೂರಿನ ತವರುಮನೆ ಸೇರಿಕೊಂಡರು ಎನ್ನಲಾಗಿದೆ. ಅಂದು ಸುಧಾರಾಣಿಯವರು ಖಿನ್ನತೆಗೆ ಕೂಡ ಜಾರಿದ್ದರಂತೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಶ್ರೀರಸ್ತು ಶುಭಮಸ್ತು ಧಾರಾವಾಹಿ
ಜೀ ಕನ್ನಡ
ಸಂಬಂಧಗಳು
ಮದುವೆ
ಕನ್ನಡ ಧಾರಾವಾಹಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved