MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • 'ಹಿಂದೂ ಸಿದ್ಧಾಂತವನ್ನೇ ಸಂಘಿ ಎನ್ನುವುದಾದರೆ, ನಾನು ಸಂಘಿ' ಎಂದ ಖ್ಯಾತ ನಿರೂಪಕಿ ರಶ್ಮಿ ಗೌತಮ್‌!

'ಹಿಂದೂ ಸಿದ್ಧಾಂತವನ್ನೇ ಸಂಘಿ ಎನ್ನುವುದಾದರೆ, ನಾನು ಸಂಘಿ' ಎಂದ ಖ್ಯಾತ ನಿರೂಪಕಿ ರಶ್ಮಿ ಗೌತಮ್‌!

ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ತಮಿಳುನಾಡು ಸಚಿವ ಹಾಗೂ ನಟ ಉದಯನಿಧಿ ಸ್ಟ್ಯಾಲಿನ್‌ ವಿರುದ್ಧ ಆಕ್ರೋಶ ತಣ್ಣಗಾಗುತ್ತಿಲ್ಲ. ತೆಲುಗು ಚಿತ್ರರಂಗದ ಖ್ಯಾತ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್‌ ಕೂಡ ಸ್ಟ್ಯಾಲಿನ್‌ ಮಾತಿಗೆ ಕಿಡಿಕಿಡಿಯಾಗಿದ್ದಾರೆ.

3 Min read
Author : Santosh Naik
| Updated : Sep 13 2023, 02:02 PM IST
Share this Photo Gallery
  • FB
  • TW
  • Linkdin
  • Whatsapp
118
Rashmi Gautam

Rashmi Gautam

ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಅವರು ಸೆಪ್ಟೆಂಬರ್ 2 ರಂದು ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದಲ್ಲಿ ಸನಾತನ ಧರ್ಮದ ಕುರಿತು ಆಡಿದ ಮಾತುಗಳು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

218

ಇದು ಸನಾತನ ಹಾಗೂ ಹಿಂದೂ ಧರ್ಮದ ನಂಬಿಕೆ ಇಟ್ಟವರು ಹಾಗೂ ಅವರ ವಿರೋಧಿಗಳ ನಡುವೆ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಇದೀಗ, ತೆಲುಗು ಟಿವಿ ನಿರೂಪಕಿ-ನಟಿ ರಶ್ಮಿ ಗೌತಮ್ ಕೂಡ ಉದಯನಿಧಿ ಸ್ಟಾಲಿನ್ ಮಾಡಿದ ಹೇಳಿಕೆಗಳ ವಿರುದ್ಧ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

318

ನಟಿ ರಶ್ಮಿ ಗೌತಮ್‌, ನಟ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್‌ನ ಹಳೆಯ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ, ಅದರಲ್ಲಿ ಅವರು ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದ ವ್ಯಕ್ತಿಗಳಿಂದ ಸನಾತನ ಧರ್ಮವನ್ನು ನಾವೆಲ್ಲರೂ ರಕ್ಷಣೆ ಮಾಡಬೇಕಾಗಿದೆ ಎಂದು ಹೇಳಿದ್ದರು.
 

418

ರಶ್ಮಿ ಗೌತಮ್ ಅವರು ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದಾಗಿನಿಂದ ನೆಟಿಜನ್‌ಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಟ್ವಿಟರ್‌ನಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ.

518

ಆ ಬಳಿಕ ಮತ್ತೊಂದು ಪೋಸ್ಟ್‌ ಹಂಚಿಕೊಂಡಿರುವ ರಶ್ಮಿ ಗೌತಮ್, ಸನಾತನ ಧರ್ಮದಲ್ಲಿ ನಂಬಿಕೆಯಿಟ್ಟಿದ್ದಕ್ಕಾಗಿ ತನ್ನನ್ನು ಟೀಕಿಸುತ್ತಿರುವ ಎಲ್ಲ ಜನರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

618

ವಾಕ್‌ ಸ್ವಾತಂತ್ರ್ಯದ ಹೆಸರಿನಲ್ಲಿ ಭಾರತದಲ್ಲಿ ಆಗುತ್ತಿರುವ ಬೂಟಾಟಿಕೆಯ ಬಗ್ಗೆ ಆಕೆ ಮಾತನಾಡಿದ್ದಾರೆ. ಅದಲ್ಲದೆ, ಯಾರೂ ಕೂಡ ನನ್ನ ದೇವರು ಹಾಗೂ ನನ್ನ ನಂಬಿಕೆಯನ್ನು ನಿಂದಿಸುವ ಅಗತ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

718

ನೀವು ನಾಸ್ತಿಕರಾಗಿರುವುದಕ್ಕೆ ನಾನು ನಿಮ್ಮನ್ನು ಎಂದೂ ಪ್ರಶ್ನೆ ಮಾಡಿಲ್ಲ. ಆಸ್ತಿಕರಾಗಿರುವ ಕಾರಣಕ್ಕೆ ನೀವು ಯಾಕೆ ನನ್ನನ್ನು ಪ್ರಶ್ನೆ ಮಾಡಬೇಕು ಎನ್ನುವ ಅರ್ಥದಲ್ಲಿ ರಶ್ಮಿ ಗೌತಮ್‌ ಪೋಸ್ಟ್‌ ಮಾಡಿದ್ದಾರೆ.

818
Rashmi Gautam

Rashmi Gautam

ಇದೇ ವೇಳೆ , ಪರಿಪೂರ್ಣ ಧರ್ಮದ ಅಸ್ತಿತ್ವದ ಬಗ್ಗೆ ಅವರು ಪ್ರಶ್ನೆ ಮಾಡಿದ್ದಾರೆ.  ಪ್ರತಿಯೊಂದು ಧರ್ಮದಲ್ಲೂ ಉಗ್ರಗಾಮಿಗಳು ಮತ್ತು ಮೂಲಭೂತವಾದಿಗಳು ಇದ್ದಾರೆ. ಆದ ಮಾತ್ರಕ್ಕೆ ನಾವು ನಮ್ಮ ಧರ್ಮವನ್ನು ಬದಲಾಯಿಸಬೇಕು ಎಂದು ಅರ್ಥವಲ್ಲ ಎಂದು ರಶ್ಮಿ ಗೌತಮ್ ಹೇಳಿದ್ದಾರೆ.

918

ಪ್ರತಿ ಧರ್ಮದ ತತ್ವವು ಬದುಕುವುದು ಮತ್ತು ಬದುಕಲು ಬಿಡುವುದು ಎಂದು ರಶ್ಮಿ ಗೌತಮ್ ಬರೆದಿದ್ದಾರೆ. "ನನ್ನ ದೇವರು ಮತ್ತು ನನ್ನ ನಂಬಿಕೆಯನ್ನು ಎಂದಿಗೂ ನಿಂದಿಸಬೇಡಿ" ಎಂದು ರಶ್ಮಿ ಗೌತಮ್ ಎಚ್ಚರಿಸಿದ್ದಾರೆ.

1018
Rashmi Gautam

Rashmi Gautam

ಈ ಟ್ವೀಟ್ ಅನ್ನು ಪೋಸ್ಟ್‌ ಮಾಡಿದ ಬಳಿಕ ರಶ್ಮಿ ಗೌತಮ್ ಅವರ ಅಭಿಮಾನಿಗಳು ಅವರನ್ನು ಬೆಂಬಲಿಸಲು ಪ್ರಾರಂಭಿಸಿದರು ಮತ್ತು ಸನಾತನ ಧರ್ಮದ ಕುರಿತಾಗಿ ಟೀಕೆ ಮಾಡಿದ್ದ ವ್ಯಕ್ತಿಗಳ ವಿರುದ್ಧ ನಿಂತಿದ್ದಕ್ಕೆ ನಿಮ್ಮ ಕುರಿತು ಹೆಮ್ಮೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

1118

ಟ್ವಿಟರ್‌ನಲ್ಲಿ ಒಬ್ಬರು ರಶ್ಮಿ ಗೌತಮ್‌ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ್ದು, “ಇತರ ದೊಡ್ಡವರು ಮಾಡಲು ಸಾಧ್ಯವಾಗದ ವಿಷಯಕ್ಕಾಗಿ ನೀವು ನಿಂತಿದ್ದೀರಿ. ನಿಮ್ಮ ಬೆಂಬಲಕ್ಕೆ ನಾವು ಹೆಮ್ಮೆ ಪಡಬೇಕು. ನಿಮಗೆ ಹೆಚ್ಚಿನ ಶಕ್ತಿ ಸಿಗಲಿ' ಎಂದು ಬರೆದಿದ್ದಾರೆ.

1218

ಹಿಂದುತ್ವವಾದಿಯಾಗಿದ್ದರೆ ಮತ್ತು ಹಿಂದೂ ಧರ್ಮದ ನಿಜವಾದ ಸಿದ್ಧಾಂತವನ್ನು ಬೆಂಬಲಿಸುವುದನ್ನೇ ನೀವು ಸಂಘಿ ಎಂದು ಕರೆದರೆ, ನಾನು ಹೆಮ್ಮೆಯಿಂದ ಸಂಘಿ ಎಂದುಕೊಳ್ಳುತ್ತೇನೆ ಎಂದು ರಶ್ಮಿ ಗೌತಮ್‌ ಮತ್ತೊಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

1318

ಹಿಂದು ಅನ್ನೋದು ವಿದೇಶಿ ಪದ ಎಂದು ಅಂಬೇಡ್ಕರ್‌ ಅವರೇ ಹೇಳಿದ್ದಾರೆ ಎಂದು ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರಶ್ಮಿ, 'ನೀವು ಅದಕ್ಕೆ ಬದ್ಧರಾಗಿರಿ. ನನ್ನ ನಂಬಿಕೆಯನ್ನು ಪ್ರಶ್ನೆ ಮಾಡುವ ಸಾಹಸಕ್ಕೆ ಬರಬೇಡಿ. ನಿಮ್ಮ ನಂಬಿಕೆಯನ್ನೂ ನಾನು ಪ್ರಶ್ನೆ ಮಾಡೋದಿಲ್ಲ' ಎಂದು ಉತ್ತರಿಸಿದ್ದಾರೆ.

1418

ರಶ್ಮಿ ಗೌತಮ್ ಅವರು ಹಿಂದೂ ಧರ್ಮ ಮತ್ತು ಸನಾತನ ಧರ್ಮಕ್ಕೆ ತಮ್ಮ ಬೆಂಬಲದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶಗಳನ್ನು ನಿರಂತರವಾಗಿ ಪೋಸ್ಟ್‌ ಮಾಡುತ್ತಿದ್ದಾರೆ.

1518
Rashmi Gautam

Rashmi Gautam

ಆಕೆಯ ಇತ್ತೀಚಿನ ಹಿಂದೂ ಪರ ಪೋಸ್ಟ್‌ಗಳಿಂದಾಗಿ ಜನರು ಆಕೆಯನ್ನು ಸಂಘಿ ಎಂದು ಕರೆದಿದ್ದಾರೆ. ಇನ್ನೊಂದೆಡೆ ಸ್ವತಃ ರಶ್ಮಿ ಗೌತಮ್‌ ಅವರು ಸಂಘಿ ಎಂದು ಕರೆಸಿಕೊಳ್ಳಲು ನನಗೆ ಯಾವುದೇ ಮುಜುಗರವಿಲ್ಲ ಎಂದು ಬರೆದಿದ್ದಾರೆ.

1618

ಅದಲ್ಲದೆ, ತಾವು ಹಿಂದು ಬ್ರಾಹ್ಮಣ ಕುಟುಂಬದಿಂದ ಬಂದ ಮಹಿಳೆ ಎನ್ನುವ ರಶ್ಮೀ ಗೌತಮ್‌, ನಾನು ಎಲ್ಲಾ ಜಾತಿ ಧರ್ಮವನ್ನೂ ಗೌರವಿಸುತ್ತೇನೆ ಎಂದು ಬರೆದಿದ್ದಾರೆ.

1718

ಮುಟ್ಟಿನ ಸಮಯದಲ್ಲಿ ಮಹಿಳೆಯರು ಕೆಲಸ ಮಾಡುವುದನ್ನು ಅಥವಾ ಅಡುಗೆ ಮಾಡುವುದನ್ನು ನಿಷೇಧಿಸುವ ಸನಾತನ ಧರ್ಮದ ಉಪದೇಶವನ್ನು ನೀವು ಒಪ್ಪುತ್ತೀರಾ ಎಂದು ಪ್ರಶ್ನೆ ಬಂದಾಗ. "ಹೌದು ಋತುಚಕ್ರದ ಸಮಯದಲ್ಲಿ ಮಹಿಳೆಯರು ಸಂಪೂರ್ಣ ವಿಶ್ರಾಂತಿ ಪಡೆಯಬೇಕು" ಎಂದು ಆಕೆ ಹೇಳಿದ್ದಾರೆ.

10 ವರ್ಷಗಳ ನಂತ್ರ 'ನಾನ್‌ ರೆಡಿ' ಅಂತಾ ಟ್ವೀಟ್‌ ಮಾಡಿದ ತ್ರಿಶಾ, 'ಪುರಾತತ್ವ ಇಲಾಖೆಯಲ್ಲಿ ಇರ್ಬೇಕಿತ್ತು' ಎಂದ ಫ್ಯಾನ್ಸ್‌!

1818

ನೀವು ಧರಿಸುವಂಥ ಇಂಥ ಬಟ್ಟೆಗಳನ್ನು ಧರಿಸುವುದನ್ನು ಸನಾತನ ಧರ್ಮ ಒಪ್ಪುವುದಿಲ್ಲವಲ್ಲ ಎನ್ನುವ ಪ್ರಶ್ನೆಗೆ, ಇದೆಲ್ಲವೂ ಸುಳ್ಳು ಎಂದಿರುವ ರಶ್ಮೀ ಗೌತಮ್‌, ಕಾಮಸೂತ್ರ ಕೂಡ ನಮ್ಮ ಸಂಸ್ಕೃತಿಯಿಂದಲೇ ಬಂದಿದ್ದು ಎಂದಿದ್ದಾರೆ.

ಫ್ಲ್ಯಾಟ್‌ ಕೊಡಿಸುವ ನೆಪದಲ್ಲಿ ಹಿರಿ ಜೀವಗಳಿಗೆ ಮೋಸ, ಇಡಿ ವಿಚಾರಣೆಗೆ ಹಾಜರಾದ ನಟಿ, ಟಿಎಂಸಿ ಸಂಸದೆ ನುಸ್ರತ್‌ ಜಹಾನ್‌

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ

Latest Videos
Recommended Stories
Recommended image1
ಬರ್ತ್‌ಡೇ ಮುಗಿದ ಬೆನ್ನಲ್ಲೇ ದರ್ಶನ್‌ಗೆ ಶುರುವಾಯ್ತಾ ಒಳ್ಳೆ ದಿನ? ಕೋರ್ಟ್‌ನಿಂದ ಗುಡ್‌ ನ್ಯೂಸ್‌ ಪಡೆದ ಕಿಲ್ಲಿಂಗ್‌ ಸ್ಟಾರ್‌!
Recommended image2
47 ವರ್ಷಗಳ ಬಳಿಕ ಒಂದಾದ ದಿಗ್ಗಜರು! ಕಮಲ್-ರಜನಿ ಜೋಡಿಯಿಂದ ಹೊಸ ಅಧ್ಯಾಯದ ಆರಂಭ?
Recommended image3
ಯಶ್ Toxic ಟೀಸರ್​ನಲ್ಲಿ ಕಾರೊಳಗಿನ ಆ ದೃಶ್ಯ ಯಾಕೆ ಬಂತು? ನಿರ್ದೇಶಕ ತರುಣ್​ ಸುಧೀರ್​ ಹೇಳಿದ್ದೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved