MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • ಸನಾತನ ಧರ್ಮ ಕಾಪಾಡೋದು ನಮ್ಮೆಲ್ಲರ ಜವಾಬ್ದಾರಿ, ವೈರಲ್‌ ಆದ ರಾಮ್‌ ಚರಣ್‌ ಟ್ವೀಟ್‌

ಸನಾತನ ಧರ್ಮ ಕಾಪಾಡೋದು ನಮ್ಮೆಲ್ಲರ ಜವಾಬ್ದಾರಿ, ವೈರಲ್‌ ಆದ ರಾಮ್‌ ಚರಣ್‌ ಟ್ವೀಟ್‌

ಸನಾತನ ಧರ್ಮದ ಕುರಿತಾಗಿ ತಮಿಳುನಾಡು ಸಚಿವ, ನಟ ಹಾಗೂ ಸಿಎಂ ಸ್ಟ್ಯಾಲಿನ್‌ ಅವರ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಆಡಿರುವ ಮಾತುಗಳು ವಿವಾದಕ್ಕೆ ಕಾರಣವಾಗಿದೆ. ಇದರ ನಡುವೆ ರಾಮ್‌ಚರಣ್ ಅವರ ಹಳೆಯ ಟ್ವೀಟ್‌ ವೈರಲ್‌ ಆಗಿದೆ. 

2 Min read
Author : Santosh Naik
Published : Sep 06 2023, 11:37 AM IST
Share this Photo Gallery
  • FB
  • TW
  • Linkdin
  • Whatsapp
111
Ram Charan

Ram Charan

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್‌ ಅವರ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಸನಾತನ ಧರ್ಮದ ಕುರಿತಾಗಿ ಆಡಿರುವ ಮಾತುಗಳು ವಿವಾದಕ್ಕೆ ಕಾರಣವಾಗಿದೆ.

211

ಈಗಾಗಲೇ ದೇಶದ ಎಲ್ಲಡೆ ಅವರ ವಿರುದ್ಧ ಪ್ರತಿಭಟನೆಗಳು ಆರಂಭವಾಗಿರುವುದರೊಂದಿಗೆ ಸಾಕಷ್ಟು ಕೇಸ್‌ಗಳು ಕೂಡ ದಾಖಲಾಗಿವೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರಿಗೆ ಇದರ ಬಗ್ಗೆ ದೇಶದ ಗಣ್ಯರು ದೂರು ಕೂಡ ಸಲ್ಲಿಸಿದ್ದಾರೆ.

311

ಸನಾತನ ಧರ್ಮ ಅನ್ನೋದು ಡೆಂಘೆ, ಮಲೇರಿಯಾ ಇದ್ದಂತೆ. ಇದನ್ನು ವಿರೋಧಿಸುವುದಲ್ಲ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳುವ ಮೂಲಕ ದೇಶದ ಶೇ.80ರಷ್ಟು ಜನಸಂಖ್ಯೆಯ ನರಮೇಧ ಮಾಡಬೇಕು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು.

411

ಇದರ ಬೆನ್ನಲ್ಲಿಯೇ ಆರ್‌ಆರ್‌ಆರ್‌ ಸಿನಿಮಾದ ನಟ ಹಾಗೂ ಮೆಗಾಸ್ಟಾರ್‌ ಚಿರಂಜೀವಿ ಪುತ್ರ ರಾಮ್‌ ಚರಣ್‌ ತೇಜ ಅವರ ಹಳೆಯ ಟ್ವೀಟ್‌ ವೈರಲ್‌ ಆಗಿದೆ.

511

2020ರ ಸೆಪ್ಟೆಂಬರ್‌ 11 ರಂದು ರಾಮ್‌ ಚರಣ್‌ ಮಾಡಿರುವ ಟ್ವೀಟ್‌ಅನ್ನು ಸ್ಟ್ಯಾಲಿನ್‌ ಅವರ ಹೇಳಿಕೆಗೆ ತಿರುಗೇಟು ಎನ್ನುವಂತೆ ಬಿಂಬಿಸಿ ವೈರಲ್‌ ಮಾಡಲಾಗುತ್ತಿದೆ.

611

ರಾಮ್‌ ಚರಣ್‌ ತೇಜ ತಮ್ಮ ತಾಯಿ ಸುರೇಖಾ ಕೊನಿಡೇಲಾ, ತಮ್ಮ ಮನೆಯ ಮುಂದಿರುವ ತುಳಸಿ ಗಿಡವನ್ನು ಪೂಜೆ ಮಾಡುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದರು.

711

ಚಿತ್ರವನ್ನು ಹಂಚಿಕೊಂಡಿದ್ದಲ್ಲದೆ, ಸನಾತನ ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎನ್ನುವ ಸಾಲನ್ನೂ ಕೂಡ ರಾಮ್‌ ಚರಣ್‌ ಬರೆದಿದ್ದರು.

811
Image: Instagram

Image: Instagram

ಇದು ಉದಯನಿಧಿ ಸ್ಟ್ಯಾಲಿನ್‌ ಅವರ ಕಾಮೆಂಟ್‌ಅನ್ನು ವಿರೋಧ ಮಾಡುತ್ತಿರುವವರ ಗಮನ ಸೆಳೆದಿದ್ದು, ಈ ಟ್ವೀಟ್‌ಅನ್ನೇ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

911

ಉದಯನಿಧಿ ಸ್ಟಾಲಿನ್ ಅವರು ತಮಿಳುನಾಡು ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘ ಆಯೋಜಿಸಿದ್ದ ಸಮಾವೇಶದಲ್ಲಿ ಸನಾತನ ಧರ್ಮದ ವಿರುದ್ಧ ಟೀಕೆಗಳನ್ನು ಮಾಡಿದರು, ಅಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

1011
Ram Charan

Ram Charan

ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದರು. ಸೊಳ್ಳೆಗಳು, ಡೆಂಗ್ಯೂ ಮತ್ತು ಜ್ವರದಂತಹ ರೋಗಗಳನ್ನು ಹೇಗೆ ಎದುರಿಸುತ್ತವೇಯೋ ಅದೇ ರೀತಿಯಲ್ಲಿ ಸನಾತನ ಧರ್ಮವನ್ನೂ ನಿರ್ಮೂಲನೆ ಮಾಡಬೇಕು ಎಂದಿದ್ದರು.

ಬೆಡ್‌ರೂಮ್‌ ಸೀನ್‌ಗಾಗಿಯೇ 1 ಕೋಟಿ ಜಾಸ್ತಿ ಸಂಭಾವನೆ ಕೇಳಿದ್ರಾ ತಮನ್ನಾ?

1111

ಉದಯನಿಧಿ ಅವರ ಕಾಮೆಂಟ್‌ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ದೇಶದ ಕ್ಷಮೆ ಕೇಳುವಂತೆ ಒತ್ತಾಯ ಮಾಡಿದೆ. ಇದರ ನಡುವೆ ದೇಶದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಅವರ ವಿರುದ್ಧ ದೂರು ಕೂಡ ದಾಖಲಾಗಿದೆ.

ಕೇರಳ ಕುಟ್ಟಿ ಲುಕ್ಕಲ್ಲಿ ಸನ್ನಿ ಲಿಯೋನ್, ಸ್ವಲ್ಪ ಸೆರಗು ಸರಿ ಹಾಕೊಳ್ಳಿ ಅಂದ್ರು ನೆಟ್ಟಿಗರು!

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ರಾಮ್ ಚರಣ್

Latest Videos
Recommended Stories
Recommended image1
ಗಿಲ್ಲಿ ನಟನನ್ನು ಕೈಬಿಟ್ಟು ಗೋಲ್ಡ್ ಬೆನ್ನುಬಿದ್ದ ಬಿಗ್ ಬಾಸ್ ಡಾಗ್ ಸತೀಶ್!
Recommended image2
ಗಡದ್ದಾಗಿ ನಲ್ಲಿಮೂಳೆ ತಿಂದು ಬಿಗ್‌ಬಾಸ್‌ ಮನೆಯಲ್ಲೇ ನಿದ್ರೆಗೆ ಜಾರಿ ಗಿಲ್ಲಿ ನಟ!
Recommended image3
2026ರಲ್ಲಿ ಹಾಟ್ ಆಗಿರಬೇಕಾ, ಪ್ರೆಗ್ನೆಂಟ್ ಆಗಿಬಿಡಲೇ? ಸಲಹೆ ಕೇಳಿದ ನಟಿಗೆ ಭರ್ಜರಿ ಕಮೆಂಟ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved