MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Festivals
  • ರಕ್ತ ಚಂದ್ರಗ್ರಹಣ: ಗಮನಿಸಿ ಕರ್ನಾಟಕದ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಪೂಜಾ ವೇಳಾಪಟ್ಟಿ ಬದಲಾವಣೆ

ರಕ್ತ ಚಂದ್ರಗ್ರಹಣ: ಗಮನಿಸಿ ಕರ್ನಾಟಕದ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಪೂಜಾ ವೇಳಾಪಟ್ಟಿ ಬದಲಾವಣೆ

ಕರ್ನಾಟಕದಾದ್ಯಂತ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಹಲವು ದೇವಾಲಯಗಳಲ್ಲಿ ಪೂಜಾ ವೇಳಾಪಟ್ಟಿ ಬದಲಾವಣೆ ಮತ್ತು ದೇವಾಲಯ ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಕ್ಷೇತ್ರವು ತನ್ನದೇ ಆದ ಪರಂಪರೆ ಮತ್ತು ಆಚರಣೆಗಳನ್ನು ಪಾಲಿಸುತ್ತಿದೆ.

3 Min read
Gowthami K
Published : Sep 06 2025, 06:19 PM IST
Share this Photo Gallery
  • FB
  • TW
  • Linkdin
  • Whatsapp
19
Image Credit : Getty

ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ರಕ್ತ ಚಂದ್ರಗ್ರಹಣ ಗೋಚರಿಸುವ ಹಿನ್ನೆಲೆಯಲ್ಲಿ ಹಲವು ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಹಾಗೂ ದೇವಾಲಯ ಬಂದ್ ಮಾಡುವ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಕ್ಷೇತ್ರವು ತನ್ನದೇ ಆದ ಪರಂಪರೆ ಹಾಗೂ ಆಚರಣೆಗಳನ್ನು ಅನುಸರಿಸುತ್ತಿದೆ.

29
Image Credit : ANI

ಬೆಂಗಳೂರು

  • ಗವಿಗಂಗಾಧರೇಶ್ವರ ದೇವಸ್ಥಾನ
  • ನಗರದ ಐತಿಹಾಸಿಕ ಗವಿಗಂಗಾಧರೇಶ್ವರ ದೇವಸ್ಥಾನವು ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದ್ ಆಗಲಿದೆ.
  • ಬೆಳಗ್ಗೆ 7 ಗಂಟೆಗೆ ಮಹಾಭಿಷೇಕ ಹಾಗೂ ಪೂಜೆ ನೆರವೇರಿಸಲಾಗುತ್ತದೆ.
  • ಗಂಗಾಧರನಿಗೆ ಕ್ಷೀರ ನೈವೇದ್ಯ ಸಲ್ಲಿಸಲಾಗುವುದು.
  • ಬೆಳಗ್ಗೆ 11 ಗಂಟೆಯೊಳಗೆ ತೈಲಾಭಿಷೇಕ ಮತ್ತು ದರ್ಬೆಬಂಧನ ನೆರವೇರಿಸಿ ದೇವಾಲಯ ಸಂಪೂರ್ಣ ಬಂದ್ ಮಾಡಲಾಗುವುದು.
  • ಸೋಮವಾರ ಸೂರ್ಯೋದಯದ ನಂತರ ದೇವಸ್ಥಾನವನ್ನು ಶುದ್ಧಿಗೊಳಿಸಿ ಪುಣ್ಯಾಹ ನೆರವೇರಿಸಿ, ಬೆಳಗ್ಗೆ 8:30ಕ್ಕೆ ಮಹಾಭಿಷೇಕ ನಡೆಸಿದ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅರ್ಚಕರಾದ ಶ್ರೀಕಂಠ ದೀಕ್ಷಿತ್ ತಿಳಿಸಿದ್ದಾರೆ.

Related Articles

Related image1
ರವಿವಾರ ವರ್ಷದ ಕೊನೆಯ ಚಂದ್ರ ಗ್ರಹಣ, ಸೆಪ್ಟೆಂಬರ್ 7 ಈ ರಾಶಿಗೆ ಕಂಟಕ ಫಿಕ್ಸ್..!
Related image2
Now Playing
ನಾಳೆ ಖಗ್ರಾಸ ರಾಹುಗ್ರಸ್ತ ಚಂದ್ರಗ್ರಹಣ, ಬಾನಂಗಳದಲ್ಲಿ ಕೌತುಕ, ಯಾರಿಗೆಲ್ಲಾ ಅಪಾಯ?
39
Image Credit : X

ರಾಜರಾಜೇಶ್ವರಿ ನಿಮಿಷಾಂಬ ದೇವಸ್ಥಾನ

  • ರಾತ್ರಿ 9:50ಕ್ಕೆ ಚಂದ್ರಗ್ರಹಣ ಗೋಚರಿಸುವುದರಿಂದ, ಮುಂಚಿತವಾಗಿಯೇ ವಿಶೇಷ ಪೂಜೆ ನಡೆಸಲಾಗುತ್ತದೆ.
  • ದೇವಾಲಯದ ಅರ್ಚಕ ಜಗನ್ನಾಥ ಭಟ್ರು ಅವರ ಮಾಹಿತಿ ಪ್ರಕಾರ, ಗ್ರಹಣಕ್ಕೂ ಮುನ್ನ ಪೂಜೆ ನೆರವೇರಿಸಿ ಸಂಜೆ ದೇವಾಲಯ ಬಾಗಿಲು ಮುಚ್ಚಲಾಗುತ್ತದೆ.
  • ಸೋಮವಾರ ಬೆಳಿಗ್ಗೆ ದೇವಸ್ಥಾನ ಶುದ್ಧಿಗೊಳಿಸಿ ಪುನಃ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಗಾಳಿ ಆಂಜನೇಯಸ್ವಾಮಿ ದೇವಸ್ಥಾನ

  • ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ದೇವಾಲಯ ಮುಚ್ಚಲಾಗುವುದು.
  • ಬೆಳಗ್ಗೆ ಸತ್ಯನಾರಾಯಣ ಪೂಜೆ ಹಾಗೂ ಪ್ರಸಾದ ವಿತರಣೆ ನಡೆದ ನಂತರ ಭಕ್ತರ ದರ್ಶನ ನಿಲ್ಲಿಸಲಾಗುತ್ತದೆ.
  • ಸೋಮವಾರ ಸೂರ್ಯೋದಯದ ನಂತರ ದೇವಾಲಯ ಶುದ್ಧಿಗೊಳಿಸಿ ಅಭಿಷೇಕ ಹಾಗೂ ಮಹಾಮಂಗಳಾರತಿ ನಡೆಸಲಾಗುವುದು.
49
Image Credit : our own

ಉಡುಪಿ

ಶ್ರೀಕೃಷ್ಣ ಮಠ

  • ಸಾಮಾನ್ಯವಾಗಿ ಮಧ್ಯಾಹ್ನ 12:30 ರಿಂದ 3:30ರೊಳಗೆ ನಡೆಯುವ ಅನ್ನಪ್ರಸಾದ ಸೇವೆಯನ್ನು, ಭಾನುವಾರ ಬೆಳಗ್ಗೆ 10:30ರಿಂದ 12 ಗಂಟೆಯೊಳಗೆ ಮುಗಿಸಲಾಗುತ್ತದೆ.
  • ಚಂದ್ರಗ್ರಹಣ ಸಂದರ್ಭದಲ್ಲಿ ಗ್ರಹಣ ಶಾಂತಿ ಹೋಮ, ಹವನ, ಜಪ-ತಪ ನಡೆಯಲಿದೆ.
  • ಗ್ರಹಣಕ್ಕೂ ಮುನ್ನ ದೇವರಿಗೆ ಮಾಡಿದ್ದ ಅಲಂಕಾರಗಳನ್ನು ತೆಗೆದುಹಾಕಲಾಗುವುದು.
  • ಸ್ಪರ್ಶಕಾಲದಲ್ಲಿ ಭಕ್ತರು ಮಧ್ವ ಸರೋವರದಲ್ಲಿ ಸ್ನಾನ ಮಾಡಿ ಜಪತಪದಲ್ಲಿ ಭಾಗವಹಿಸಲಿದ್ದಾರೆ.
  • ಮೋಕ್ಷಕಾಲದಲ್ಲಿ ಪುನಃ ಪುಣ್ಯಸ್ನಾನ ಹಾಗೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ

  • ಚಂದ್ರಗ್ರಹಣದ ಮುನ್ನವೇ ಬಲಿ ಮತ್ತು ಉತ್ಸವಗಳನ್ನು ನೆರವೇರಿಸಲಾಗುತ್ತದೆ.
  • ಗ್ರಹಣಕಾಲದಲ್ಲಿ ನಿರಂತರ ಅಭಿಷೇಕ ಹಾಗೂ ಮಂತ್ರಪಠಣ ನಡೆಯುತ್ತಿದ್ದು, ಮೋಕ್ಷಕಾಲದ ನಂತರ ಮಂಗಳಾರತಿ ಸಲ್ಲಿಸಲಾಗುತ್ತದೆ.
59
Image Credit : our own

ಬಳ್ಳಾರಿ – ವಿಜಯನಗರ

  • ಕೋಟೆ ಮಲ್ಲೇಶ್ವರ, ಕುಮಾರಸ್ವಾಮಿ, ಹಂಪಿಯ ವಿರೂಪಾಕ್ಷೇಶ್ವರ, ಹೊಸಪೇಟೆಯ ವಡಕರಾಯ ದೇವಸ್ಥಾನ ಸೇರಿದಂತೆ ಪ್ರಮುಖ ಕ್ಷೇತ್ರಗಳು ಮಧ್ಯಾಹ್ನ 2 ಗಂಟೆಯಿಂದ ಬಂದ್ ಆಗಲಿವೆ.
  • ದುರ್ಗಮ್ಮ ಮತ್ತು ಮೈಲಾರ ದೇವಸ್ಥಾನ ಮಾತ್ರ ಎಂದಿನಂತೆ ತೆರೆದಿರುತ್ತದೆ.
  • ಗ್ರಹಣ ಮೋಕ್ಷದ ನಂತರ ದೇವಸ್ಥಾನ ಶುದ್ಧಿಗೊಳಿಸಿ ಪೂಜೆ ನೆರವೇರಿಸಲಾಗುವುದು.

ಮಂಡ್ಯ

  • ಮೇಲುಕೋಟೆಯ ಶ್ರೀ ಚಲುವನಾರಾಯಣಸ್ವಾಮಿ ದೇವಸ್ಥಾನ ಮಧ್ಯಾಹ್ನ 1 ಗಂಟೆಗೆ ಬಂದ್ ಆಗಿ, ಸೋಮವಾರ ಬೆಳಗ್ಗೆ 8 ಗಂಟೆಯಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಿದೆ.
  • ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನ ಮಧ್ಯಾಹ್ನ 12 ಗಂಟೆಯಿಂದಲೇ ಬಂದ್ ಆಗಲಿದೆ.
  • ಶ್ರೀರಂಗನಾಥ ದೇವಾಲಯ ಸಂಜೆ 5ಕ್ಕೆ ಬಂದ್ ಆಗಿ, ಸೋಮವಾರ ಬೆಳಗ್ಗೆ 7ರಿಂದ ದರ್ಶನಕ್ಕೆ ಅವಕಾಶ ನೀಡಲಿದೆ.
69
Image Credit : our own

ಕೊಪ್ಪಳ

  • ಹುಲಿಗೇಮ್ಮ ದೇವಸ್ಥಾನ ಸಂಜೆ 5 ಗಂಟೆಗೆ ಬಂದ್ ಆಗಲಿದೆ. ರಾತ್ರಿ 2 ಗಂಟೆಗೆ ವಿಶೇಷ ಪೂಜೆ ನಡೆಯಲಿದೆ.
  • ಗವಿಸಿದ್ದೇಶ್ವರ ಮಠ ಎಂದಿನಂತೆ ಬಂದ್ ಆಗಲಿದ್ದು, ಬೆಳಗ್ಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
  • ಅಂಜನಾದ್ರಿ ಪರ್ವತದ ಆಂಜನೇಯ ದೇವಸ್ಥಾನವೂ ಸಂಜೆ 5 ಗಂಟೆಯ ನಂತರ ಬಂದ್ ಆಗಲಿದೆ.

ಗದಗ

  • ತ್ರಿಕುಟೇಶ್ವರ ದೇವಸ್ಥಾನ ರಾತ್ರಿ 10 ಗಂಟೆಗೆ ಬಂದ್ ಆಗಿ, ಮೋಕ್ಷಕಾಲದ ನಂತರ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
  • ಮರುದಿನ ಬೆಳಗ್ಗೆ ಎಂದಿನಂತೆ ದರ್ಶನಕ್ಕೆ ಅವಕಾಶ.

ಶಿವಮೊಗ್ಗ

  • ಸಿಗಂದೂರು ಚೌಡೇಶ್ವರಿ ದೇವಸ್ಥಾನ ಎಂದಿನಂತೆ ತೆರೆದಿರುತ್ತದೆ.
  • ಚಂದ್ರಗ್ರಹಣ ಹಿನ್ನೆಲೆಯಲ್ಲಿ ಯಾವುದೇ ವಿಶೇಷ ಪೂಜೆ ಇರುವುದಿಲ್ಲ.
79
Image Credit : our own

ಚಾಮರಾಜನಗರ

  • ಮಲೆ ಮಹದೇಶ್ವರ ದೇವಸ್ಥಾನ ಎಂದಿನಂತೆ ತೆರೆದಿರುತ್ತದೆ.
  • ಗ್ರಹಣದ ವೇಳೆ ಯಾವುದೇ ವಿಶೇಷ ಪೂಜೆ ಇಲ್ಲ.
  • ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ನಿರ್ಬಂಧವಿಲ್ಲ.

ಮೈಸೂರು

  • ಚಾಮುಂಡೇಶ್ವರಿ ದೇವಸ್ಥಾನ ರಾತ್ರಿ 9ಕ್ಕೆ ಬಂದ್ ಆಗಿ, ಸ್ಪರ್ಶಕಾಲ ಹಾಗೂ ಮೋಕ್ಷಕಾಲದಲ್ಲಿ ವಿಶೇಷ ಪೂಜೆ ನಡೆಯಲಿದೆ. ಸೋಮವಾರ ಬೆಳಗ್ಗೆ 8ರಿಂದ ದರ್ಶನಕ್ಕೆ ಅವಕಾಶ.
  • ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ ರಾತ್ರಿ 8ಕ್ಕೆ ಬಂದ್ ಆಗಲಿದೆ. ಗ್ರಹಣ ಸಂದರ್ಭದಲ್ಲಿ ವಿಶೇಷ ಪೂಜೆ ನಡೆಯಲಿದೆ.
  • ಒಂಟಿಕೊಪ್ಪಲು ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಮಧ್ಯಾಹ್ನ 12ಕ್ಕೆ ಬಂದ್ ಆಗಲಿದೆ. ಸೋಮವಾರ ಬೆಳಗ್ಗೆ ಪುನಃ ತೆರೆದುಕೊಳ್ಳಲಿದೆ.
89
Image Credit : our own

ಬಾಗಲಕೋಟೆ

  • ಬಾದಾಮಿ ಬನಶಂಕರಿ ದೇವಸ್ಥಾನ ಬಂದ್ ಆಗದೇ, ಗ್ರಹಣ ಕಾಲದಲ್ಲಿ ನಿರಂತರ ಜಲಾಭಿಷೇಕ ನಡೆಯಲಿದೆ.
  • ಸ್ಪರ್ಶಕಾಲದಿಂದ (9:57) ಮೋಕ್ಷಕಾಲದವರೆಗೆ (1:27) ಅಭಿಷೇಕ ಮುಂದುವರಿಯಲಿದೆ.

ಉತ್ತರ ಕನ್ನಡ

  • ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಬೆಳಗ್ಗೆ 10:45ರವರೆಗೆ ದರ್ಶನಕ್ಕೆ ಅವಕಾಶ ನೀಡಲಿದ್ದು, ಬಳಿಕ ಮಧ್ಯಾಹ್ನ 12:30ಕ್ಕೆ ಮಹಾಪೂಜೆ ನಡೆಯಲಿದೆ. ರಾತ್ರಿ 9:45ರಿಂದ ಮಧ್ಯರಾತ್ರಿ 1:26ರವರೆಗೆ ಮಾತ್ರ ದರ್ಶನ ಅವಕಾಶ.
  • ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ರಾತ್ರಿ 10ರಿಂದಲೂ ದರ್ಶನ ಸಿಗಲಿದೆ.
  • ಮುರುಡೇಶ್ವರದಲ್ಲಿ ಮಧ್ಯಾಹ್ನ 11:30ರಿಂದ 12:30ರವರೆಗೆ ಊಟ, ಸಂಜೆ 6:30ಕ್ಕೆ ವಿಶೇಷ ಪೂಜೆ ನಡೆಯಲಿದೆ.

ಚಿಕ್ಕಮಗಳೂರು

  • ಶೃಂಗೇರಿ ಶಾರದಾಂಬೆ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ರಾತ್ರಿ ಪ್ರಸಾದ ಸೇವೆ ಇರುವುದಿಲ್ಲ.
  • ರಾತ್ರಿ 8:30ಕ್ಕೆ ದೇವಸ್ಥಾನ ಬಂದ್ ಆಗಿ, ಸೋಮವಾರ ಬೆಳಗ್ಗೆ 6ಕ್ಕೆ ಪುನಃ ದರ್ಶನಕ್ಕೆ ಅವಕಾಶ.
99
Image Credit : unsplash

ಕೊಡಗು

  • ಮಡಿಕೇರಿ ಓಂಕಾರೇಶ್ವರ, ಭಾಗಮಂಡಲ ಭಗಂಡೇಶ್ವರ ಹಾಗೂ ತಲಕಾವೇರಿ ದೇವಸ್ಥಾನಗಳಲ್ಲಿ ಸಂಜೆ 5 ಗಂಟೆಯ ನಂತರ ದರ್ಶನ ಅವಕಾಶವಿಲ್ಲ.
  • ಸೋಮವಾರ ಬೆಳಗ್ಗೆ ಪುನಃ ದೇವಸ್ಥಾನ ತೆರೆದಿಡಲಾಗುವುದು.

ಚಿಕ್ಕಬಳ್ಳಾಪುರ – ಬೆಂಗಳೂರು ಗ್ರಾಮಾಂತರ

  • ಐತಿಹಾಸಿಕ ಭೋಗನಂದೀಶ್ವರ ದೇವಸ್ಥಾನ ಹಾಗೂ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಾನುವಾರ ಸಂಜೆ 4 ಗಂಟೆಯ ನಂತರ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಚಂದ್ರ ಗ್ರಹಣ
ಗ್ರಹಣ
ಚಂದ್ರ
ಜ್ಯೋತಿಷ್ಯ
ದೇವಸ್ಥಾನ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved