MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Festivals
  • ಚಾಮುಂಡೇಶ್ವರಿ ದೇವಿಗೆ 3 ಲಕ್ಷ ರೂ. ನೋಟುಗಳ ಅಲಂಕಾರ!

ಚಾಮುಂಡೇಶ್ವರಿ ದೇವಿಗೆ 3 ಲಕ್ಷ ರೂ. ನೋಟುಗಳ ಅಲಂಕಾರ!

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ 3 ಲಕ್ಷ ರೂ. ಮೌಲ್ಯದ ನೋಟುಗಳಿಂದ ಧನಲಕ್ಷ್ಮಿ ರೂಪದಲ್ಲಿ ಅಲಂಕಾರ ಮಾಡಲಾಗಿದೆ. ಈ ವಿಶೇಷ ಅಲಂಕಾರವನ್ನು ನೋಡಲು ಭಕ್ತರು ಮುಗಿಬಿದ್ದಿದ್ದಾರೆ.

1 Min read
Sathish Kumar KH
Published : Aug 16 2024, 01:42 PM IST
Share this Photo Gallery
  • FB
  • TW
  • Linkdin
  • Whatsapp
17

ರಾಜ್ಯದಾದ್ಯಂತ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ  ವಿಜೃಂಭಣೆಯಿಂದ ಹೆಣ್ಣು ದೇವರಿಗೆ ವಿಶೇಷ ಅಲಂಕಾರದ ಮಾಡಿ ಪೂಜೆಗಳನ್ನು ಮಾಡಲಾಗುತ್ತಿದೆ. ಆದರೆ, ಚಾಮುಂಡೇಶ್ವರಿ ದೇವಿಗೆ ನೋಟುಗಳಿಂದ ಅಳಂಕಾರ ಮಾಡಲಾಗಿದೆ.

27

ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮಿ ಅಲಂಕಾರ ಮಾಡಲಾಗಿದೆ. ಬರೋಬ್ಬರಿ 3 ಲಕ್ಷ ರೂ. ಮೌಲ್ಯದ ನೋಟುಗಳಿಂದ ಈ ಅಲಂಕಾರ ಮಾಡಲಾಗಿದೆ. ಈ ವಿಶೇಷ ಅಲಂಕಾರವನ್ನು ನೋಡಲು ಭಕ್ತರು ಮುಗಿಬಿದ್ದಿದ್ದಾರೆ.

37

ಪೂಜಾ ಕೈಂಕರ್ಯಗಳನ್ನು ನಡೆಸುವ ಕಾರ್ಯಕ್ರಮಗಳ ಬ್ಯಾಕ್‌ಗ್ರೌಂಡ್ ಡಿಸೈನ್ ಮಾಡುವುದಕ್ಕೆ ಪ್ರಸಿದ್ಧಿಯನ್ನು ಪಡೆದ ಅರ್ಚಕ ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಿಗೆ ಅಲಂಕಾರ ಮಾಡಿ ವಿಶೇಷ ಪೂಜಾ ಕೈಂಕರ್ಯ ಕೈಗೊಳ್ಳಲಾಗಿದೆ.

47

ಚಾಮುಂಡೇಶ್ವರಿ ದೇವಿಯ ಗರ್ಭಗುಡಿ ದ್ವಾರ ಬಾಗಿಲಿಗೆ ನೋಟಿನ ಹೊದಿಕೆಯನ್ನು ನಿರ್ಮಿಸಲಾಗಿದೆ. ಜೊತೆಗೆ, ದೇವಿಯ ವಿಗ್ರಹದಿಂದ ಗರ್ಭಗುಡಿಯ ಹೊಸ್ತಿಲಿನವರೆಗೂ ನೋಟಿನ ಹಾಸಿಗೆಯನ್ನು ನಿರ್ಮಾಣ ಮಾಡಲಾಗಿದೆ.

57

ಚಾಮುಂಡೇಶ್ವರಿ ದೇವಿಯ ಹಿಂಭಾಗದಲ್ಲಿ ವೃತ್ತಾಕಾರವಾಗಿ 10 ರೂ., 20 ರೂ., 50 ರೂ., 100 ರೂ., 200 ರೂ. ಹಾಗೂ 500 ರೂ. ನೋಟುಗಳನ್ನು ಬಳಕೆ ಮಾಡಿ ಅಲಂಕಾರ ಮಾಡಲಾಗಿದೆ. ಈ ದೃಶ್ಯವನ್ನು ನೋಡಲು ಎರಡು ಕಣ್ಣುಗಳು ಕೂಡ ಸಾಲುವುದಿಲ್ಲ.

67

ಇನ್ನು ದೇವರಿಗೆ ಅಲಂಕಾರ ಮಾಡುವುದಕ್ಕೆ ಅಗತ್ಯವಿದ್ದ 3 ಲಕ್ಷ ರೂ. ಹಣವನ್ನು ಪೂರ್ಣವಾಗಿ ಭಕ್ತರಿಂದಲೇ ಸಂಗ್ರಹಣೆ ಮಾಡಲಾಗಿದೆ. 10 ರೂ. ನೋಟುಗಳಿಂದ 500 ರೂ. ಮುಖಬೆಲೆಯ ನೋಟುಗಳವೆರೆಗ ವಿವಿಧ ಬಣ್ಣಗಳನ್ನು ಹೊಂದಿದ ನೋಟುಗಳು ಇರುವುದರಿಂದ ದೇವಿ ಅಲಂಕಾರವೂ ಕೂಡ ವಿಭಿನ್ನ ಬಣ್ಣಗಳಿಂದ ಮಿಂಚುತ್ತಿದೆ.

77

ಪ್ರತಿನಿತ್ಯ ಚಾಮುಂಡೇಶ್ವರಿ ದೇವಿಯಾಗಿ ಪೂಜಿಸಲ್ಪಡುತ್ತಿದ್ದ ದೇವಿಗೆ ಇಂದು ಧನಲಕ್ಷ್ಮಿ ರೂಪದಲ್ಲಿ ಅಲಂಕಾರ ಮಾಡಲಾಗಿದ್ದು, ಭಕ್ತರು ದೇವರ ಅಲಂಕಾರವನ್ನು ನೋಡಿ ಕಣ್ತುಂಬಿಕೊಂಡಿದ್ದಾರೆ. ಇನ್ನು ಈ ತರಹದ ಅಲಂಕಾರ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved