MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Festivals
  • ಆಗಿ ಹುಣ್ಣಿಮೆ ಹಿನ್ನಲೆ: ಚುನಾವಣೆ ಮಧ್ಯೆಯೂ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದ ಭಕ್ತ ಸಾಗರ

ಆಗಿ ಹುಣ್ಣಿಮೆ ಹಿನ್ನಲೆ: ಚುನಾವಣೆ ಮಧ್ಯೆಯೂ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದ ಭಕ್ತ ಸಾಗರ

ಮೇ 13ರಂದು ಶ್ರೀಹುಲಿಗೆಮ್ಮ ದೇವಿಯ ರಥೋತ್ಸವದ ಮುನ್ನ ಹುಣ್ಣಿಮೆ ದಿನ ಹುಲಿಗಿಗೆ ಭಕ್ತಸಾಗರ ಹರಿದು ಬಂದಿದೆ. ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತು ದೇವಿ ದರ್ಶನವನ್ನು ಭಕ್ತರು ಪಡೆಯುತ್ತಿದ್ದಾರೆ. 

1 Min read
Govindaraj S
Published : May 05 2023, 10:45 AM IST
Share this Photo Gallery
  • FB
  • TW
  • Linkdin
  • Whatsapp
15

ಕೊಪ್ಪಳ (ಮೇ.05): ಕರ್ನಾಟಕ ವಿಧಾನಸಭೆ ಚುನಾವಣೆ ಮಧ್ಯೆಯೂ ಇಂದು ಆಗಿ ಹುಣ್ಣಿಮೆ ಹಿನ್ನಲೆ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತ ಸಾಗರವೇ ಆಗಮಿಸಿದೆ. ಮೇ 13ರಂದು ಶ್ರೀಹುಲಿಗೆಮ್ಮ ದೇವಿಯ ರಥೋತ್ಸವದ ಮುನ್ನ ಹುಣ್ಣಿಮೆ ದಿನ ಹುಲಿಗಿಗೆ ಭಕ್ತಸಾಗರ ಹರಿದು ಬಂದಿದೆ. 

25

ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತು ದೇವಿ ದರ್ಶನವನ್ನು ಭಕ್ತರು ಪಡೆಯುತ್ತಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದಿಂದ  ಭಕ್ತಸಾಗರ ಬಂದಿದೆ.

35

ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಹುಲಿಗೆಮ್ಮ ದೇವಿ ಜಾತ್ರೆ ಆಚರಿಸಿ: ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಶ್ರೀಹುಲಿಗೆಮ್ಮ ದೇವಿ ಜಾತ್ರೋತ್ಸವ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಸೂಚಿಸಿದರು.

45

ತಾಲೂಕಿನ ಹುಲಗಿಯ ಶ್ರೀಹುಲಿಗೆಮ್ಮ ದೇವಿ ದೇವಸ್ಥಾನದ 2023ರ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಆಡಳಿತಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್‌ ಸಭಾಂಗಣ-2ರಲ್ಲಿ ಪೂರ್ವಭಾವಿ ಸಭೆ ಜರುಗಿತು. ಈ ವೇಳೆ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ಹಾಗೇ ಜಾತ್ರೋತ್ಸವ ಏರ್ಪಾಡು ಮಾಡಬೇಕು.ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಕುಡಿವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು. 

55

ಸಂಪರ್ಕ ರಸ್ತೆ ಹಾಗೂ ಬೈಪಾಸ್‌ ರಸ್ತೆ ಸರಿಪಡಿಸಬೇಕು. ತಾತ್ಕಾಲಿಕವಾಗಿ ಸಾಮೂಹಿಕ ಸ್ನಾನದ ಗೃಹಗಳ ಮತ್ತು ಶೌಚಾಲಯಗಳ ವ್ಯವಸ್ಥೆ ಕಲ್ಪಿಸಿಕೊಡಬೇಕು. ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್‌ ಸರಬರಾಜು,ದೇವಸ್ಥಾನದ ಗುಡಿ-ಗೋಪುರಗಳಿಗೆ ವಿದ್ಯುತ್‌ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆ ಮಾಡಬೇಕು. ಸಿಸಿ ಕ್ಯಾಮೇರಾ ವ್ಯವಸ್ಥೆ ಸೇರಿದಂತೆ ಅಗತ್ಯ ಪೊಲೀಸ್‌ ಬಂದೋಬಸ್‌್ತ,ತುಂಗಭದ್ರ ಆಣೆಕಟ್ಟೆಯಿಂದ ನದಿಗೆ ನೀರು ಬಿಡುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಕೊಪ್ಪಳ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved