MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • 6 ವರ್ಷದಿಂದ ಹಾಸಿಗೆ ಹಿಡಿದಿದ್ದ ಯುವಕನ ಜೀವ ಉಳಿಸಿದ ವೈದ್ಯರು, ಇತಿಹಾಸ ಸೃಷ್ಟಿಸಿದ ಋಷಿಕೇಶದ ಏಮ್ಸ್

6 ವರ್ಷದಿಂದ ಹಾಸಿಗೆ ಹಿಡಿದಿದ್ದ ಯುವಕನ ಜೀವ ಉಳಿಸಿದ ವೈದ್ಯರು, ಇತಿಹಾಸ ಸೃಷ್ಟಿಸಿದ ಋಷಿಕೇಶದ ಏಮ್ಸ್

ಕುಂಬಳಕಾಯಿ ಗಾತ್ರದ ಗೆಡ್ಡೆಯಿಂದಾಗಿ ಯುವಕನಿಗೆ ಕುಳಿತುಕೊಳ್ಳಲು ಅಥವಾ ಮಲವಿಸರ್ಜನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಉತ್ತರ ಪ್ರದೇಶ ಮತ್ತು ದೆಹಲಿಯಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ತೋರಿಸಿಕೊಂಡರೂ ಪ್ರಯೋಜನವಾಗಲಿಲ್ಲ. ಕೊನೆಗೆ…

1 Min read
Author : Ashwini HR
Published : Jun 25 2025, 05:31 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Freepik

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ 27 ವರ್ಷದ ರೋಗಿಯ ಕಾಲಿನಿಂದ 35 ಕೆಜಿ ತೂಕದ ಬೋನ್ ಟ್ಯೂಮರ್ ಅನ್ನು ಋಷಿಕೇಶದ ಏಮ್ಸ್ ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ದಿನಗೂಲಿ ನೌಕರ ಮೊಹಮ್ಮದ್ ಸಲ್ಮಾನ್ ಕಳೆದ ಆರು ವರ್ಷಗಳಿಂದ ಕಾರ್ಟಿಲೆಜ್‌ನಲ್ಲಿ ಹುಟ್ಟುವ ಅಪರೂಪದ ಮೂಳೆ ಕ್ಯಾನ್ಸರ್ ಕೊಂಡ್ರೊಸಾರ್ಕೊಮಾ(Chondrosarcoma)ದಿಂದ ಬಳಲುತ್ತಿದ್ದರು.

25
Image Credit : freepik

ಮೊಹಮ್ಮದ್ ಸಲ್ಮಾನ್ ತೊಡೆಯ ಬಳಿ ಮೊದಲು ಸಣ್ಣ ಊತವಾಗಿ ಇದು ಪ್ರಾರಂಭವಾಯಿತು. ಆದರೆ ಕಳೆದ ಆರು ತಿಂಗಳಲ್ಲಿ ಮಾರಣಾಂತಿಕ, ಕ್ಯಾನ್ಸರ್ ಗೆಡ್ಡೆಯಾಗಿ ಬೆಳೆದು ಓಡಾಡಲು ಬರದಂತಾಗಿ ಹಾಸಿಗೆ ಹಿಡಿದರು. ಕುಂಬಳಕಾಯಿ ಗಾತ್ರದ ಗೆಡ್ಡೆಯಿಂದಾಗಿ ಯುವಕನಿಗೆ ಕುಳಿತುಕೊಳ್ಳಲು ಅಥವಾ ಮಲವಿಸರ್ಜನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಉತ್ತರ ಪ್ರದೇಶ ಮತ್ತು ದೆಹಲಿಯಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ತೋರಿಸಿಕೊಂಡರೂ ಪ್ರಯೋಜನವಾಗಲಿಲ್ಲ. ಕೊನೆಗೆ ಸಲ್ಮಾನ್ ಋಷಿಕೇಶದ ಏಮ್ಸ್‌ಗೆ ಬಂದರು.

35
Image Credit : freepik

ಬೋನ್ ಟ್ಯೂಮರ್ ಗಾತ್ರ ದೊಡ್ಡದಿದ್ದರಿಂದ ನಡೆಯಲು ಅಥವಾ ದಿನನಿತ್ಯದ ಚಟುವಟಿಕೆಗಳನ್ನು ನಡೆಸಲು ಮೊಹಮ್ಮದ್ ಸಲ್ಮಾನ್ ಅವರಿಗೆ ಸಾಧ್ಯವಾಗುತ್ತಿರಲಿಲ್ಲ ಎಂದು ವೈದ್ಯಕೀಯ ತಂಡ ಮಂಗಳವಾರ ತಿಳಿಸಿದೆ. ಆರು ಗಂಟೆಗಳ ಕಾಲ ನಡೆದ, ಹೆಚ್ಚಿನ ಅಪಾಯದಿಂದ ಕೂಡಿದ್ದ ಸಂಕೀರ್ಣವಾದ ಈ ಶಸ್ತ್ರಚಿಕಿತ್ಸಾ ವಿಧಾನವನ್ನು ಜೂನ್ 9 ರಂದು ನಡೆಸಲಾಯಿತು.

45
Image Credit : Freepik

"ಗಡ್ಡೆಯ ಗಾತ್ರ ಮತ್ತು ತೂಕದಿಂದಾಗಿ ಶಸ್ತ್ರಚಿಕಿತ್ಸೆ ಹೆಚ್ಚು ಸವಾಲಿನದ್ದಾಗಿತ್ತು, ಇದನ್ನು ತೆಗೆದ ನಂತರ 34.7 ಕೆಜಿ (53x24x19 ಇಂಚುಗಳು) ಎಂದು ದೃಢಪಡಿಸಲಾಯಿತು. ಇದರ ಸಂಪೂರ್ಣ ಗಾತ್ರವು MRI ಸ್ಕ್ಯಾನ್‌ಗಳನ್ನು ಕಷ್ಟಕರವಾಗಿಸಿತ್ತು. ಆದ್ದರಿಂದ ರಕ್ತ ಪೂರೈಕೆಯನ್ನು ನಿರ್ಣಯಿಸಲು ಆಂಜಿಯೋಗ್ರಫಿಯನ್ನು ಮೊದಲೇ ನಡೆಸಲಾಯಿತು" ಎಂದು ಡಾ. ಧಿಂಗ್ರಾ ಹೇಳಿದರು.

55
Image Credit : social media

"ಈ ಶಸ್ತ್ರಚಿಕಿತ್ಸೆ ಆಸ್ಪತ್ರೆಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದಲ್ಲದೆ, ಅಪರೂಪದ ಮತ್ತು ಸಂಕೀರ್ಣ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಹೊಸ ಭರವಸೆಯನ್ನು ನೀಡುತ್ತದೆ" ಎಂದು ಋಷಿಕೇಶದ ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕಿ ಪ್ರೊಫೆಸರ್ ಮೀನು ಸಿಂಗ್‌ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಯ ನಂತರ, ಸಲ್ಮಾನ್ ವಾರ್ಡ್‌ನಲ್ಲಿ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಮಾರ್ಜ್ ಆಗುವ ನಿರೀಕ್ಷೆಯಿದೆ. "ನನಗೆ ಹೊಸ ಜೀವನಕ್ಕೆ, ಹೊಸ ತಿರುವು ನೀಡಿದ್ದಕ್ಕಾಗಿ ಮತ್ತು ಈ ಗೆಡ್ಡೆಯಿಂದ ಉಂಟಾದ ನೋವಿನಿಂದ ನನ್ನನ್ನು ಮುಕ್ತಗೊಳಿಸಿದ್ದಕ್ಕಾಗಿ ನಾನು ವೈದ್ಯರಿಗೆ ಕೃತಜ್ಞನಾಗಿದ್ದೇನೆ" ಎಂದು ಸಲ್ಮಾನ್ ಕೃತಜ್ಞತೆ ತಿಳಿಸಿದ್ದಾರೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

AH
Ashwini HR
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ದಿನಪತ್ರಿಕೆ 'ಕ್ರಾಂತಿದೀಪ'ದಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 14 ವರ್ಷಗಳ ಅನುಭವ. ರಾಜ್ಯಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ರಾಜಕೀಯ, ಮನರಂಜನೆ, ಶಿಕ್ಷಣ, ಆರೋಗ್ಯ, ಟ್ರೆಂಡಿಂಗ್‌, ಲೈಫ್‌ಸ್ಟೈಲ್‌ ಕುರಿತಾದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ.ಪ್ರಸ್ತುತ ಸುವರ್ಣ ಡಿಜಿಟಲ್‌ ತಂಡದ ಭಾಗವಾಗಿ ವೃತ್ತಿ ಜೀವನ ಮುಂದುವರಿಸುತ್ತಿದ್ದೇನೆ.
ಆರೋಗ್ಯ
ಆರೋಗ್ಯ ಸಮಸ್ಯೆಗಳು
ಜೀವನಶೈಲಿ

Latest Videos
Recommended Stories
Recommended image1
ಕರಿದ ಎಣ್ಣೆ ಮರಳಿ ಬಳಸದಂತೆ ಏಮ್ಸ್ ವೈದ್ಯೆ ಎಚ್ಚರಿಕೆ, ಫಾಸ್ಟ್ ಫುಡ್ ಮಳಿಗೆಗಳಲ್ಲಿನ ಪರೀಕ್ಷೆಯ ಶಾಕಿಂಗ್ ಸತ್ಯ!
Recommended image2
52 ವಯಸ್ಸಲ್ಲೂ ನಿಂತಿಲ್ಲ ಉತ್ಸಾಹ: ಪ್ರತಿ ಬೆಳಿಗ್ಗೆ ಈ ಡ್ರಿಂಕ್ಸ್​ ಕುಡಿದು ಫಿಟ್​ ಆಗಿರಿ ಎಂದ Maliaka Arora!
Recommended image3
ಪಾದಗಳ ಅತಿಯಾದ ಉರಿಯಿಂದ ಬಳಲುತ್ತಿದ್ದೀರಾ? ಇಲ್ಲಿವೆ ನೋಡಿ ಹಳ್ಳಿ ಶೈಲಿಯ ಸೂಪರ್ ಮನೆಮದ್ದುಗಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved