MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ಈ 6 ವಸ್ತುಗಳನ್ನು ರಾತ್ರಿ ನೀರಲ್ಲಿ ಹಾಕಿ ಬೆಳಿಗ್ಗೆ ಕುಡಿದ್ರೆ ರೋಗ ದೂರ

ಈ 6 ವಸ್ತುಗಳನ್ನು ರಾತ್ರಿ ನೀರಲ್ಲಿ ಹಾಕಿ ಬೆಳಿಗ್ಗೆ ಕುಡಿದ್ರೆ ರೋಗ ದೂರ

ಜನ ರಾತ್ರಿಯಲ್ಲಿ ಬಾದಾಮಿ (almond) ನೆನೆಸಿ ಬೆಳಿಗ್ಗೆ ಮಕ್ಕಳಿಗೆ ನೀಡುತ್ತಾರೆ, ಇದರಿಂದ ಅವರ ಮೆದುಳು ತೀಕ್ಷ್ಣವಾಗಿರುತ್ತದೆ. ಆದರೆ ಬಾದಾಮಿ ಮಾತ್ರವಲ್ಲ, ಕೆಲವು ಆಹಾರಗಳನ್ನು ಸೇವಿಸೋದ್ರಿಂದ ಆರೋಗ್ಯ ಉತ್ತಮವಾಗುತ್ತೆ ಅನ್ನೋದು ನಿಮಗೆ ಗೊತ್ತಾ? ನೀವು ಅವುಗಳನ್ನು ರಾತ್ರಿಯಲ್ಲಿ ನೆನೆಸಿ ಬೆಳಿಗ್ಗೆ ಸೇವಿಸಿದ್ರೆ, ಅನೇಕ ರೋಗಗಳು ದೂರಾಗುತ್ತೆ. 

2 Min read
Author : Suvarna News
Published : Jul 05 2022, 06:34 PM IST
Share this Photo Gallery
  • FB
  • TW
  • Linkdin
  • Whatsapp
17

ಹೌದು, ನಮ್ಮ ಅಡುಗೆಮನೆಯಲ್ಲಿ ಕೆಲವು ಆಹಾರಗಳಿವೆ, ಅವುಗಳನ್ನು ನೀರಿನಲ್ಲಿ ನೆನೆಸಿದ ನಂತರ ಹೆಚ್ಚು ಪ್ರಯೋಜನ ಸಿಗುತ್ತೆ ಮತ್ತು ಅವುಗಳನ್ನು ಸೇವಿಸೋದ್ರಿಂದ ಅನೇಕ ರೋಗಗಳನ್ನು ಸಹ ದೂರ ಮಾಡಬಹುದು. ಇಂದು ನಾವು ನಿಮಗೆ ಕೆಲವು ಆಹಾರಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಇವುಗಳನ್ನು ನೀರಿನಲ್ಲಿ ನೆನೆಸಿ ಸೇವನೆ ಮಡೊದ್ರಿಂದ ಉತ್ತಮ ಆರೋಗ್ಯ (health) ನಿಮ್ಮದಾಗಲು ಸಹಾಯ ಮಾಡುತ್ತೆ. 
 

27

ಮಲಬದ್ಧತೆ
ನೀವು ಹೊಟ್ಟೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಮತ್ತು ನಿಮಗೆ ಜೀರ್ಣಕಾರಿ ಸಮಸ್ಯೆಗಳು ಇದ್ದರೆ ಅಥವಾ ಮಲಬದ್ಧತೆ (constipation) ಸಮಸ್ಯೆ ಇದ್ದರೆ, ನೀವು ರಾತ್ರಿಯಲ್ಲಿ ಎರಡು ಅಂಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಸೇವಿಸಬೇಕು. ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಬಹುದು.

37

ಇರೆಗ್ಯುಲರ್ ಪಿರಿಯಡ್ಸ್ 
ನೀವು ಇರೆಗ್ಯುಲರ್ ಪಿರಿಯಡ್ಸ್ (irregular periods) ಸಮಸ್ಯೆಯಿಂದ ಬಳಲುತ್ತಿದ್ದರೆ, ಋತುಚಕ್ರದ ಸಮಯದಲ್ಲಿ ನಿಮಗೆ ಸಾಕಷ್ಟು ನೋವು ಇದ್ದರೆ, ಅಲ್ಲದೇ ಪಿಸಿಒಎಸ್ ಸಮಸ್ಯೆ ಇದ್ದರೆ ಅಥವಾ ಈ ಪಿರಿಯಡ್ಸ್ ಸಮಯದಲ್ಲಿ  ಹೆಚ್ಚು ರಕ್ತಸ್ರಾವವಾಗುತ್ತಿದ್ದರೆ ನೀವು ರಾತ್ರಿ 8 ರಿಂದ 10 ಒಣದ್ರಾಕ್ಷಿಗಳನ್ನು ನೀರಿನಲ್ಲಿ ಹಾಕಿ, ಬೆಳಿಗ್ಗೆ ಅದರ ನೀರಿನೊಂದಿಗೆ ನೆನೆಸಿದ ಒಣದ್ರಾಕ್ಷಿಗಳನ್ನು ಸೇವಿಸಬೇಕು. ಇದು ಋತುಚಕ್ರಕ್ಕೆ ಸಂಬಂಧಿಸಿದ ಪ್ರತಿಯೊಂದು ಸಮಸ್ಯೆಯನ್ನು ನಿವಾರಿಸುತ್ತದೆ.

47

ಮಧುಮೇಹ 
ನೀವು ಮಧುಮೇಹಿ (diabetes) ರೋಗಿಯಾಗಿದ್ದರೆ ಮತ್ತು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಬಯಸಿದರೆ, ಮೆಂತ್ಯ ಬೀಜಗಳನ್ನು ರಾತ್ರಿಯಲ್ಲಿ ನೀರಿನಲ್ಲಿ ನೆನೆಸಿ ಮತ್ತು ಬೆಳಿಗ್ಗೆ ಈ ನೀರು ಮತ್ತು ಮೆಂತ್ಯೆ ಬೀಜಗಳನ್ನು ಸೇವಿಸಿ. ಇದು ನಿಮ್ಮ ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಸರಿಯಾಗಿರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಯ್ದುಕೊಳ್ಳುತ್ತದೆ.

57

ಕೂದಲು ಉದುರುವಿಕೆ 
ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಜನರು ಕೂದಲು ಉದುರುವಿಕೆಯ (hair fall) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ 8 ರಿಂದ 10 ಕರಿಬೇವಿನ ಎಲೆಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಈ ನೀರನ್ನು ಸೇವಿಸಬೇಕು. ಇದು ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ಇದು ಕೂದಲನ್ನು ಬಲಪಡಿಸುತ್ತದೆ.

67

ಜೀರ್ಣಕ್ರಿಯೆ ಸಮಸ್ಯೆಗಳು 
ನೀವು ಜೀರ್ಣಕಾರಿ ಸಮಸ್ಯೆಗಳನ್ನು ಹೊಂದಿದ್ದರೆ ಮತ್ತು ಆಹಾರವು ಸರಿಯಾಗಿ ಜೀರ್ಣವಾಗದಿದ್ದರೆ, ಅಸಿಡಿಟಿ (acidity), ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆ ಇದ್ದರೆ, ನೀವು ರಾತ್ರಿಯಲ್ಲಿ ಅಜ್ವೈನ್, ಜೀರಿಗೆ ಮತ್ತು ಸೋಂಪು ಸಮಪ್ರಮಾಣದಲ್ಲಿ ಮಿಕ್ಸ್ ಮಾಡಿ ಮತ್ತು ಅವುಗಳನ್ನು ಒಂದು ಲೋಟ ನೀರಿನಲ್ಲಿ ಕರಗಿಸಿ ಮತ್ತು ಬೆಳಿಗ್ಗೆ ಈ ನೀರನ್ನು ಸೇವಿಸಿ. ಇದು ಎಲ್ಲಾ ಜೀರ್ಣಕಾರಿ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಇದು ತೂಕ ಇಳಿಸಿಕೊಳ್ಳಲು ಸಹ ಸಹಾಯ ಮಾಡುತ್ತದೆ.

77

ಚರ್ಮ ಮತ್ತು ಕೂದಲು 
ಕೂದಲು ಸುಂದರವಾಗಿರಬೇಕೆಂದು ಮತ್ತು ಚರ್ಮವು ಕಳಂಕರಹಿತವಾಗಿರಬೇಕೆಂದು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿ, ನೀವು ಸ್ವಲ್ಪ ಕಪ್ಪು ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಡಿ ಮತ್ತು ಬೆಳಿಗ್ಗೆ, ಈ ನೀರು ಮತ್ತು ಒಣದ್ರಾಕ್ಷಿಗಳನ್ನು ಸ್ವಲ್ಪ ಉಗುರುಬೆಚ್ಚಗಿನ ನೀರು ಸೇರಿಸಿ ಸೇವಿಸಿ.  ಇದು ನಿಮ್ಮ ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿಯಾಗಿದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
ಆರೋಗ್ಯ
ಜೀವನಶೈಲಿ
ಮಲಬದ್ಧತೆ

Latest Videos
Recommended Stories
Recommended image1
ನೀರಿನ ಬಾಟಲಿ ಹೀಗೆ ತೊಳೆದರೆ ಮಾತ್ರ ಕ್ಲೀನ್‌ ಆಗೋದು! ಆ ತಪ್ಪು ಮಾಡ್ಬೇಡಿ!
Recommended image2
ಮತ್ತೆ ಮತ್ತೆ ಕಾಣಿಸುವ ಹೊಟ್ಟೆನೋವು ಗ್ಯಾಸ್ಟಿಕ್ ಅಂತ ನಿರ್ಲಕ್ಷಿಸಿಬೇಡಿ: ಈ ಕಿರುತೆರೆ ನಟಿಗೆ ಏನಾಯ್ತು ನೋಡಿ
Recommended image3
ಆರೋಗ್ಯಕ್ಕೆ ಬೇಕು ತಂಗಳನ್ನ: ನಟರಾದ ಸಪ್ತಮಿ ಗೌಡ- ನೀನಾಸಂ ಸತೀಶ್​ ಹೇಳಿದ ಮಾತು ಕೇಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved