MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಕರೂರು ಕಾಲ್ತುಳಿತ.. ನಟ ವಿಜಯ್ ಬಂಧನ ಸಾಧ್ಯತೆ? ಸರಣಿ ಸಾವುಗಳಿಂದ ಟಿವಿಕೆಗೆ ಭಾರೀ ಸಂಕಷ್ಟ

ಕರೂರು ಕಾಲ್ತುಳಿತ.. ನಟ ವಿಜಯ್ ಬಂಧನ ಸಾಧ್ಯತೆ? ಸರಣಿ ಸಾವುಗಳಿಂದ ಟಿವಿಕೆಗೆ ಭಾರೀ ಸಂಕಷ್ಟ

ನಟ ವಿಜಯ್ ಅವರ ಕರೂರು ಜಿಲ್ಲೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಕಾರ್ಯಕ್ರಮದ ವ್ಯವಸ್ಥೆಯಲ್ಲಾದ ಅಚಾತುರ್ಯದಿಂದಾಗಿ ಟಿವಿಕೆ ಅಧ್ಯಕ್ಷ ವಿಜಯ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

1 Min read
Govindaraj S
Published : Sep 27 2025, 09:38 PM IST
Share this Photo Gallery
  • FB
  • TW
  • Linkdin
  • Whatsapp
13
ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ
Image Credit : X

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ

ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ಹಾಗೂ ನಟ ವಿಜಯ್ ಅವರ ಕರೂರು ಜಿಲ್ಲೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಇಲಾಖೆ ತಿಳಿಸಿದೆ.

23
ಸಾವಿರಾರು ಜನ ಬಿಸಿಲಲ್ಲಿ ಕಾದಿದ್ದರು
Image Credit : X

ಸಾವಿರಾರು ಜನ ಬಿಸಿಲಲ್ಲಿ ಕಾದಿದ್ದರು

ವಿಜಯ್ ಅವರ ಜನಸಂಪರ್ಕ ಕಾರ್ಯಕ್ರಮ ಇಂದು ಬೆಳಗ್ಗೆ 8.45ಕ್ಕೆ ನಾಮಕ್ಕಲ್‌ನಲ್ಲಿ ನಡೆಯಲಿದೆ ಎಂದು ಘೋಷಿಸಲಾಗಿತ್ತು. ಆದರೆ ವಿಜಯ್ ಬೆಳಗ್ಗೆ 8.45ಕ್ಕೆ ಚೆನ್ನೈನಿಂದ ಹೊರಟರು. ಬೆಳಗ್ಗೆ 6 ಗಂಟೆಯಿಂದಲೇ ಸಾವಿರಾರು ಜನ ಕಾದಿದ್ದರು. ಆದರೆ ವಿಜಯ್ ಮಧ್ಯಾಹ್ನ 2.30ಕ್ಕೆ ನಾಮಕ್ಕಲ್‌ಗೆ ತಲುಪಿದರು. ಈ ಸಭೆಯ ನಂತರ ಕರೂರಿಗೆ ಹೊರಟರು. ಬೆಳಗ್ಗಿನಿಂದ ಸಾವಿರಾರು ಜನ ಬಿಸಿಲಲ್ಲಿ ಕಾದಿದ್ದರು. ಮಧ್ಯಾಹ್ನ 12ಕ್ಕೆ ಕರೂರಿಗೆ ಬರುವುದಾಗಿ ಹೇಳಲಾಗಿತ್ತು, ಆದರೆ ಅವರು ಸಂಜೆ 7.30ಕ್ಕೆ ಬಂದರು.

Related Articles

Related image1
ತಮಿಳು ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಪರಿಸ್ಥಿತಿ, ಹಲವರು ಆಸ್ಪತ್ರೆ ದಾಖಲು
Related image2
ದಳಪತಿ ವಿಜಯ್-ಸಂಗೀತಾ ಡಿವೋರ್ಸ್ ವದಂತಿ; ಇನ್ನೊಬ್ಬ ನಟಿ ಹೆಸರು ಕೇಳಿಬರುತ್ತಿರೋದು ಯಾಕೆ?
33
ಕರೂರು ಭಾಗದಲ್ಲಿ ಆಘಾತ
Image Credit : Asianet News

ಕರೂರು ಭಾಗದಲ್ಲಿ ಆಘಾತ

ಇದರಿಂದಾಗಿ ಉಸಿರಾಡಲೂ ಜಾಗವಿಲ್ಲದಷ್ಟು ಜನಸಂದಣಿ ಹೆಚ್ಚಾಗಿತ್ತು. ಒಬ್ಬರ ಮೇಲೊಬ್ಬರು ಬಿದ್ದಿದ್ದರಿಂದ ಹಲವರು ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದರಲ್ಲಿ ಅನೇಕ ಮಕ್ಕಳು ಮತ್ತು ಮಹಿಳೆಯರು ಬಲಿಯಾಗಿದ್ದಾರೆ. ಈ ಘಟನೆ ಕರೂರು ಭಾಗದಲ್ಲಿ ಆಘಾತ ಮೂಡಿಸಿದೆ. 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಈ ಪ್ರಕರಣದಲ್ಲಿ ಟಿವಿಕೆ ಅಧ್ಯಕ್ಷ ವಿಜಯ್ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸರ ಹಲವು ಷರತ್ತುಗಳನ್ನು ಟಿವಿಕೆ ಕಡೆಗಣಿಸಿದೆ ಎಂದೂ ಹೇಳಲಾಗುತ್ತಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ದಳಪತಿ ವಿಜಯ್
ಕಾಲ್ತುಳಿತ
ಭಾರತ ಸುದ್ದಿ
ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved