MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ವಾಯುಯಾನ ದುರಂತದಲ್ಲಿ ಭಾರತ ಕಳೆದುಕೊಂಡ ಪ್ರಸಿದ್ಧ 11 ರಾಜಕಾರಣಿಗಳಿವರು

ವಾಯುಯಾನ ದುರಂತದಲ್ಲಿ ಭಾರತ ಕಳೆದುಕೊಂಡ ಪ್ರಸಿದ್ಧ 11 ರಾಜಕಾರಣಿಗಳಿವರು

ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಈ ದುರಂತದಲ್ಲಿ ಒಟ್ಟು 297 ಜನರು ಸಾವನ್ನಪ್ಪಿದ್ದಾರೆ. ಹಲವಾರು ಉನ್ನತ ಭಾರತೀಯ ರಾಜಕಾರಣಿಗಳು ವಿಮಾನ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

2 Min read
Author : Gowthami K
Published : Jun 13 2025, 12:06 PM IST
Share this Photo Gallery
  • FB
  • TW
  • Linkdin
  • Whatsapp
110
Image Credit : Social media

ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ವಿಜಯ್ ರೂಪಾನಿ ಅಹಮದಾಬಾದ್‌ನಲ್ಲಿ ಜೂ 12ರಂದು ನಡೆದ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಈ ಮೂಲಕ ರೂಪಾನಿ ಅಕಾಲಿಕ ಮರಣ ವಿಮಾನ ಅಪಘಾತಗಳಲ್ಲಿ ಸಾವನ್ನಪ್ಪಿದ ಹಲವಾರು ಉನ್ನತ ಭಾರತೀಯ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳ ಪಟ್ಟಿಗೆ ಸೇರ್ಪಡೆಯಾಗಿದೆ. ವಿಮಾನದಲ್ಲಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. ಓರ್ವ ಬದುಕುಳಿದಿದ್ದು 241 ಮಂದಿ ಮೃತಪಟ್ಟಿದ್ದಾರೆ. ಇದರ ಜೊತೆಗೆ ಹಾಸ್ಟೆಲ್‌ ಗೆ ವಿಮಾನ ಅಪ್ಪಳಿಸಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಮೃತಪಟ್ಟು ಈ ದುರ್ಘಟನೆಯಲ್ಲಿ ಮೃತರ ಸಂಖ್ಯೆರ ಈಗ 297ಕ್ಕೆ ಏರಿಕೆಯಾಗಿದೆ.

210
Image Credit : our own

ಬಲವಂತರಾಯ್ ಮೆಹ್ತಾ

1965 ಸೆಪ್ಟೆಂಬರ್ 19- ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಬಲವಂತರಾಯ್ ಮೆಹ್ತಾ ಅವರು 1965 ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ವಾಯು ದುರಂತದಲ್ಲಿ ನಿಧನರಾದರು. ಅವರ ವಿಮಾನವನ್ನು ಗಡಿಯ ಬಳಿ ಪಾಕಿಸ್ತಾನವು ಯುದ್ಧ ವಿಮಾನವೆಂದು ತಪ್ಪಾಗಿ ಗುರುತಿಸಿ ಹೊಡೆದುರುಳಿಸಿತು. ಮೆಹ್ತಾ ಅವರ ಪತ್ನಿ, ಅವರ ಮೂವರು ಸಿಬ್ಬಂದಿ, ಒಬ್ಬ ಪತ್ರಕರ್ತ ಮತ್ತು ಇಬ್ಬರು ಸಿಬ್ಬಂದಿಯೊಂದಿಗೆ ಅಪಘಾತದಲ್ಲಿ ಸಾವನ್ನಪ್ಪಿದರು.

310
Image Credit : x

ಮೋಹನ ಕುಮಾರಮಂಗಲಂ

1973 ಮೇ 13- ಕಾಂಗ್ರೆಸ್ ನಾಯಕ, ಕೇಂದ್ರ ಉಕ್ಕು ಮತ್ತು ಗಣಿ ಸಚಿವರಾಗಿದ್ದ ಸುರೇಂದ್ರ ಮೋಹನ ಕುಮಾರಮಂಗಲಂ ಅವರು 1973 ರಲ್ಲಿ ದೆಹಲಿ ಬಳಿ ಇಂಡಿಯನ್ ಏರ್ಲೈನ್ಸ್ ವಿಮಾನ 440 ಅಪಘಾತದಲ್ಲಿ ಸಾವನ್ನಪ್ಪಿದರು. ಅವರ ದೇಹವನ್ನು ಪಾರ್ಕರ್ ಪೆನ್ನು ಮತ್ತು ಅವರ ಶ್ರವಣ ಸಾಧನದಿಂದ ಮಾತ್ರ ಗುರುತಿಸಲು ಸಾಧ್ಯವಾಯಿತು.

410
Image Credit : Google

ಸಂಜಯ್ ಗಾಂಧಿ

1980ರ ಜೂನ್ 23 – ನವದೆಹಲಿ ಬಳಿ ಸಂಭವಿಸಿದ ಲಘು ವಿಮಾನ ಅಪಘಾತದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪುತ್ರ, ಯುವ ಕಾಂಗ್ರೆಸ್ ನಾಯಕರಾದ ಸಂಜಯ್ ಗಾಂಧಿ (33 ವರ್ಷ) ದುರ್ಮರಣ ಹೊಂದಿದರು. ದೆಹಲಿಯ ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ ಸಂಜಯ್ ತಮ್ಮ ವಿಮಾನವನ್ನು ಚಲಾಯಿಸುತ್ತಿದ್ದಾಗ ಈ ದುರಂತ ಘಟನೆ ಸಂಭವಿಸಿತ್ತು.

510
Image Credit : x

ಸುರೇಂದ್ರ ನಾಥ್

1994ರ ಜುಲೈ 9ರಂದು, ಹಿಮಾಚಲ ಪ್ರದೇಶದಲ್ಲಿ ಕೆಟ್ಟ ಹವಾಮಾನದ ನಡುವೆಯಲ್ಲಿ ಸರ್ಕಾರದ ಸೂಪರ್ ಕಿಂಗ್ ವಿಮಾನವು ಎತ್ತರದ ಪರ್ವತಗಳಿಗೆ ಢಿಕ್ಕಿಯಾಯಿತು. ಈ ದುರಂತದಲ್ಲಿ ಆಗಿನ ಪಂಜಾಬ್ ರಾಜ್ಯಪಾಲರಾದ ಸುರೇಂದ್ರ ನಾಥ್ ಅವರು, ಅವರ ಕುಟುಂಬದ ಒಟ್ಟು ಒಂಬತ್ತು ಸದಸ್ಯರುಗಳು ದುರ್ಮರಣವನ್ನಪ್ಪಿದರು.

610
Image Credit : @tina661014

ಮಾಧವ್ ರಾವ್ ಸಿಂದಿಯಾ

2001ರ ಸೆಪ್ಟೆಂಬರ್ 30 – ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಕಾಂಗ್ರೆಸ್ ನಾಯಕ, ಭಾರತದ ಮಾಜಿ ನಾಗರಿಕ ವಿಮಾನಯಾನ ಸಚಿವ ಮಾಧವ್ ರಾವ್ ಸಿಂದಿಯಾ ಮೃತರಾದರು. ಕಾನ್ಪುರಕ್ಕೆ ಹೋಗುವ ಮಾರ್ಗಮಧ್ಯೆ ತಮ್ಮ ಸೆಸ್ನಾ ವಿಮಾನ ಅಪಘಾತಕ್ಕೀಡಾಗಿ ದುರಂತವಾಗಿ ನಿಧನರಾದರು. ಹಾರಾಟದ ಸಮಯದಲ್ಲಿ, ಪೈಲಟ್ ದೆಹಲಿಯಲ್ಲಿ ವಾಯು ಸಂಚಾರ ನಿಯಂತ್ರಣ (ಎಟಿಸಿ) ಯೊಂದಿಗೆ ಸಂಪರ್ಕವನ್ನು ಕಳೆದುಕೊಂಡರು.

710
Image Credit : our own

ಜಿಎಂಸಿ ಬಾಲಯೋಗಿ

2002ರ ಮಾರ್ಚ್ 3 – ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಟಿಡಿಪಿ ನಾಯಕ, ಲೋಕಸಭಾ ಸ್ಪೀಕರ್ ಜಿಎಂಸಿ ಬಾಲಯೋಗಿ ತಮ್ಮ ಪ್ರಾಣ ಕಳೆದುಕೊಂಡರು. ಕೃಷ್ಣ ಜಿಲ್ಲೆಯ ಕೊಲ್ಲೇರು ಪ್ರದೇಶದಲ್ಲಿರುವ ಕೊವ್ವಾಡಲಂಕಾ ಗ್ರಾಮದಲ್ಲಿ ತುರ್ತು ಭೂಸ್ಪರ್ಶಕ್ಕೆ ಯತ್ನಿಸಿದಾಗ ಈ ಘಟನೆ ಸಂಭವಿಸಿತ್ತು.

810
Image Credit : google

ಓಂ ಪ್ರಕಾಶ್ ಜಿಂದಾಲ್

2005 ಮಾರ್ಚ್ 31 – ಕೈಗಾರಿಕೋದ್ಯಮಿ, ಹರಿಯಾಣದ ಇಂಧನ ಸಚಿವರಾಗಿದ್ದ ಓಂ ಪ್ರಕಾಶ್ ಜಿಂದಾಲ್, ತಮ್ಮ ಸಹಯಾತ್ರಿಗಳೊಂದಿಗೆ ಹೆಲಿಕಾಪ್ಟರ್ ಅಪಘಾತದಲ್ಲಿ ದುರ್ಮರಣವನ್ನಪ್ಪಿದರು. ಹರಿಯಾಣ ವಿಕಾಸ್ ಪಕ್ಷದ ನಾಯಕ, ರಾಜ್ಯ ಸಭಾ ಸದಸ್ಯರಾಗಿದ್ದ ಸುರೇಂದ್ರ ಸಿಂಗ್ ಕೂಡ ಇದೇ ಘಟನೆಯಲ್ಲಿ ಮೃತಪಟ್ಟರು.

910
Image Credit : our own

ವೈಎಸ್ ರಾಜಶೇಖರ ರೆಡ್ಡಿ

2009ರ ಸೆಪ್ಟೆಂಬರ್ 2 – ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ವೈಎಸ್ ರಾಜಶೇಖರ ರೆಡ್ಡಿ, ನಲ್ಲಮಲಾ ಅರಣ್ಯ ಪ್ರದೇಶದ ಪರ್ವತಮಯ ಭಾಗದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾದರು. ಈ ಘಟನೆ ದೇಶಾದ್ಯಾಂತ ಆಘಾತ ಉಂಟುಮಾಡಿತ್ತು. ಚಿತ್ತೂರು ಜಿಲ್ಲೆಯ ಹಳ್ಳಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿತ್ತು.

1010
Image Credit : dorji khandu facebook

ದೋರ್ಜಿ ಖಂಡು

2011 ಎಪ್ರಿಲ್ 30 – ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ದೋರ್ಜಿ ಖಂಡು, ಅವಳ ರಾಜ್ಯದ ದೂರದ ನಡು ಪ್ರದೇಶದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಜೀವಹಾನಿಗೊಳಗಾದರು. ಹೆಲಿಕಾಪ್ಟರ್ ತವಾಂಗ್‌ನಿಂದ ಹೊರಟು ಇಟಾನಗರಕ್ಕೆ ಹೋಗುವ ಮಾರ್ಗದಲ್ಲಿ, ಸಮುದ್ರ ಮಟ್ಟದಿಂದ ಸುಮಾರು 13,000 ಅಡಿ ಎತ್ತರದಲ್ಲಿರುವ ಸೆಲಾ ಪಾಸ್ ಬಳಿ ಹಾರಾಟ ನಡೆಸಿದ ಸುಮಾರು 20 ನಿಮಿಷಗಳಲ್ಲೇ ಸಂಪರ್ಕ ಕಳೆದುಕೊಂಡಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಅಹಮದಾಬಾದ್
ಗುಜರಾತ್
ಏರ್ ಇಂಡಿಯಾ
ವಿಮಾನ ಅಪಘಾತ

Latest Videos
Recommended Stories
Recommended image1
Shirtless Protest: ಶರ್ಟ್ ಬಿಚ್ಚಿ ಪ್ರತಿಭಟನೆ: ಇದೊಂದು ನಾಚಿಕೆಗೇಡು, ಕಾಂಗ್ರೆಸ್ ವಿರುದ್ಧ ನಿರ್ಮಲಾ ಗರಂ
Recommended image2
IDFC ಬ್ಯಾಂಕ್‌ 590 ಕೋಟಿ ಹಗರಣ: ಹೆಂಡ್ತಿ ಮಾಯಾಜಾಲಕ್ಕೆ ಸಿಲುಕಿದ ಮ್ಯಾನೇಜರ್‌, ಸರ್ಕಾರದ ಹಣವನ್ನ ಭಾವನ ಕಂಪನಿಗೆ ಹಾಕಿದ!
Recommended image3
ಇನ್ನೂರು ಜನರ ಮುಂದೆ ಮೊದಲ ಕಿಸ್ ಮಾಡಿದ್ದ ರಶ್ಮಿಕಾ.. ಆ 'Kiss' ವೈರಲ್ ಆಗಿತ್ತು; ಈಗ ವಿಜಯ್ ಜೊತೆ ಮದುವೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved