MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಗುರುವಾರದಿಂದ ಅಮರನಾಥ ಯಾತ್ರೆ ಶುರು: ಭದ್ರತೆ ಹೇಗಿದೆ?

ಗುರುವಾರದಿಂದ ಅಮರನಾಥ ಯಾತ್ರೆ ಶುರು: ಭದ್ರತೆ ಹೇಗಿದೆ?

ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥ ಯಾತ್ರೆ ಗುರುವಾರದಿಂದ ಆರಂಭವಾಗಲಿದ್ದು, ಕಾಶ್ಮೀರ ಉಪರಾಜ್ಯಪಾಲರು ಚಾಲನೆ ನೀಡಲಿದ್ದಾರೆ. ಭಕ್ತರ ನೋಂದಣಿ ಆರಂಭವಾಗಿದ್ದು, ಭದ್ರತೆ ಮತ್ತು ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ.

1 Min read
Kannadaprabha News
Published : Jul 02 2025, 09:10 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : ANI

ದಕ್ಷಿಣ ಕಾಶ್ಮೀರದ ಹಿಮಾಯಲದಲ್ಲಿರುವ ಅಮರನಾಥದ ಯಾತ್ರೆ ಗುರುವಾರದಿಂದ ಶುರುವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬುಧವಾರ ಕಾಶ್ಮೀರ ಉಪರಾಜ್ಯಪಾಲ ಮನೋಜ್‌ ಸಿನ್ಹಾ, ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ 38 ದಿನದ ಯಾತ್ರೆಯ ನೋಂದಣಿಗಾಗಿ ದೇಶದ ವಿವಿಧ ಭಾಗಗಳಿಂದ ಭಕ್ತರ ಹರಿದುದಂಡು ಬರಲು ಶುರುವಾಗಿದೆ.

25
Image Credit : Getty

ಅನಂತ್‌ನಾಗ್‌ ಜಿಲ್ಲೆಯ 48 ಕಿ.ಮೀ. ಉದ್ದದ ನುನ್ವಾನ್‌-ಪಹಲ್ಗಾಂ ಮಾರ್ಗ ಹಾಗೂ ಗಂದೇರ್‌ಬಾಲ್‌ ಜಿಲ್ಲೆಯ 14 ಕಿ.ಮೀ. ಉದ್ದದ ಬಲ್ತಾಲ್‌ ಮಾರ್ಗದಲ್ಲಿ ಯಾತ್ರೆ ಸಾಗಲಿದೆ. ಇತ್ತೀಚೆಗೆ 26 ಪ್ರವಾಸಿಗರ ನರಮೇಧ ನಡೆದ ಪಹಲ್ಗಾಂ ಮಾರ್ಗದಲ್ಲೇ ಯಾತ್ರೆ ಸಾಗುವ ಕಾರಣ ಈ ಪ್ರದೇಶದಲ್ಲಿ ಈಗಾಗಲೇ ಭದ್ರತೆ ಮತ್ತು ಅಗತ್ಯ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

Related Articles

Related image1
Amarnath Yatra 2023: ಹಿಮದ ಶಿವಲಿಂಗದ ಮೊದಲ ಫೋಟೋ ವೈರಲ್, ಈ ಸ್ಥಳದ ಬಗ್ಗೆ ನಿಮಗೆಷ್ಟು ಗೊತ್ತು?
Related image2
ಅಮರನಾಥ ಯಾತ್ರೆ 2025: ದಿನಾಂಕ, ನೋಂದಣಿ, ಮಾರ್ಗಗಳ ಮಾಹಿತಿ ಇಲ್ಲಿದೆ ನೋಡಿ..
35
Image Credit : social media

ಏನೇನು ವ್ಯವಸ್ಥೆಗಳು?

ಅಮರನಾಥ ಯಾತ್ರೆಗೆ ತೆರಳುವ ಭಕ್ತಾದಿಗಳು ನೋಂದಣಿ ಮಾಡಿಸಿಕೊಳ್ಳಬೇಕು. ಶಾಲಿಮಾರ್‌ ಪ್ರದೇಶದ ವೈಷ್ಣವಿ ಧಾಮ, ಪಂಚಾಯತ್‌ ಭವನ ಮತ್ತು ಮಹಾಜನ ಸಭಾದಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಸರಸ್ವತಿ ಧಾಮದಲ್ಲಿ ಮಾತ್ರವೇ ಟೋಕನ್‌ ವಿತರಿಸಲಾಗುತ್ತಿದೆ.

45
Image Credit : iSTOCK

1600ಕ್ಕೂ ಅಧಿಕ ಭಕ್ತರು ಭಗವತಿ ನಗರ ಬೇಸ್‌ ಕ್ಯಾಂಪ್‌ನಲ್ಲಿ ತಂಗಿದ್ದಾರೆ. ಅತ್ತ ಸಾಧುಗಳಿಗಾಗಿ ಪುರಾನಿ ಮಂಡಿಯಲ್ಲಿರುವ ರಾಮ ದೇಗುಲದ ಸಂಕೀರ್ಣದಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ. ಅವರಿಗೆ ಅಲ್ಲೇ ಉಳಿದುಕೊಳ್ಳಲು ವ್ಯವಸ್ಥೆಗಳನ್ನೂ ಮಾಡಲಾಗಿದ್ದು, ಈಗಾಗಲೇ 300ಕ್ಕೂ ಅಧಿಕ ಸಾಧುಗಳು ಆಗಮಿಸಿದ್ದಾರೆ.

55
Image Credit : social media

ಈ ಬಗ್ಗೆ ಮಾತನಾಡಿದ ವಿಭಾಗೀಯ ಕಮೀಷನರ್‌ ರಮೇಶ್‌ ಕುಮಾರ್‌ ಮಾತನಾಡಿ, ‘ಜಮ್ಮು ಆದ್ಯಂತ 50,000 ಜನರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು, ಬಿಗಿ ಭದ್ರತೆಯಲ್ಲಿ ಜು.2ರಂದು ಯಾತ್ರೆಗೆ ಚಾಲನೆ ನೀಡಲಿದ್ದಾರೆ’ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಅಮರನಾಥ ಯಾತ್ರೆ
ಭಾರತ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved