MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • Andhra Pradesh Rains: ಅಣೆಕಟ್ಟು ಒಡೆದು ಕೊಚ್ಚಿ ಹೋಯ್ತು 50 ಪ್ರಯಾಣಿಕರಿದ್ದ ಬಸ್!

Andhra Pradesh Rains: ಅಣೆಕಟ್ಟು ಒಡೆದು ಕೊಚ್ಚಿ ಹೋಯ್ತು 50 ಪ್ರಯಾಣಿಕರಿದ್ದ ಬಸ್!

ಆಂಧ್ರಪ್ರದೇಶದಲ್ಲಿ (Andhra Pradesh Rains) ಮಳೆ ಅವಾಂತರ ಸೃಷ್ಟಿಸಿದೆ. ನವೆಂಬರ್ 19 ರಂದು ರಾಯಲಸೀಮಾದ ಮೂರು ಜಿಲ್ಲೆಗಳು ಮತ್ತು ದಕ್ಷಿಣ ಕರಾವಳಿ (South Coastal) ಜಿಲ್ಲೆಯ ಒಂದು ಜಿಲ್ಲೆಗಳಲ್ಲಿ 20 ಸೆಂ.ಮೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಕಡಪ ಜಿಲ್ಲೆಯಲ್ಲಿ ಗರಿಷ್ಠ ಪ್ರಮಾಣದ ಮಳೆಯಾಗಿದೆ. ಇಲ್ಲಿನ ಅಣೆಕಟ್ಟು ಒಡೆದು 50 ಮಂದಿ ಪ್ರಯಾಣಿಕರಿದ್ದ ಬಸ್ ನೀರಿನಲ್ಲಿ ಕೊಚ್ಚಿ ಹೋಗಿದೆ. ಆದರೂ, ಹೆಚ್ಚಿನದನ್ನು ಉಳಿಸಲಾಗಿದೆ. ಮತ್ತೊಂದು ಘಟನೆಯಲ್ಲಿ ಗ್ರಾಮದ 20 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ 8 ಮಂದಿ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಗಳಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಏತನ್ಮಧ್ಯೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಿರುವುದರಿಂದ ತೆಲಂಗಾಣ (Telangana) ಮತ್ತು ಆಂಧ್ರಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. 

1 Min read
Suvarna News
Published : Nov 20 2021, 11:07 AM IST| Updated : Nov 20 2021, 11:31 AM IST
Share this Photo Gallery
  • FB
  • TW
  • Linkdin
  • Whatsapp
16

ಆಂಧ್ರಪ್ರದೇಶದಲ್ಲಿ ಪ್ರವಾಹದಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಅನಂತಪುರ ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಚಿತ್ರಾವತಿ ನದಿಯ ಪ್ರವಾಹದಲ್ಲಿ 10 ಮಂದಿ ಸಿಲುಕಿಕೊಂಡಿದ್ದಾರೆ. ಸೇನಾ ಹೆಲಿಕಾಪ್ಟರ್ ಸಹಾಯದಿಂದ ಅವರನ್ನು ರಕ್ಷಿಸಲಾಯಿತು.
 

26

ಕಡಪ ಹೊರತುಪಡಿಸಿ, ಆಂಧ್ರಪ್ರದೇಶದಲ್ಲಿ ಚಿತ್ತೂರು ಮತ್ತು ನೆಲ್ಲು ಜಿಲ್ಲೆಗಳು ಗರಿಷ್ಠ ಪ್ರವಾಹಕ್ಕೆ ಸಾಕ್ಷಿಯಾಗುತ್ತಿವೆ. ಇಲ್ಲಿ ನದಿಗಳು ಮತ್ತು ಕಾಲುವೆಗಳೆಲ್ಲವೂ ಉಕ್ಕಿ ಹರಿಯುತ್ತಿವೆ. ರಸ್ತೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ರಕ್ಷಣಾ ಕಾರ್ಯ ಮುಂದುವರಿದಿದೆ.

36

ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪರಿಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಮೋದಿ ಭರವಸೆ ನೀಡಿದ್ದಾರೆ. ಪ್ರಧಾನಿ ಟ್ವೀಟ್‌ನಲ್ಲಿ ಹೇಳಿದರು; ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಗೆ ಸಂಬಂಧಿಸಿದ ಪರಿಸ್ಥಿತಿಯ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾರು ಅವರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು. ಎಲ್ಲರೂ ಸುರಕ್ಷಿತವಾಗಿ ಮತ್ತು ಸದೃಢವಾಗಿರಲು ನಾನು ಪ್ರಾರ್ಥಿಸುತ್ತೇನೆ.

46

ಆಂಧ್ರಪ್ರದೇಶದ ಕಡಪದಲ್ಲಿ ಅಣೆಕಟ್ಟು ಒಡೆದು ಪ್ರವಾಹದಲ್ಲಿ ಮುಳುಗಿದ ಬಸ್. ಬಸ್‌ನಲ್ಲಿ 50 ಪ್ರಯಾಣಿಕರಿದ್ದು, ಹೆಚ್ಚಿನವರನ್ನು ರಕ್ಷಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಅಪಘಾತಗಳಲ್ಲಿ ಸಾವಿನ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ. ಧಾರಾಕಾರ ಮಳೆಯಿಂದಾಗಿ ದೇವಾಲಯಗಳ ನಗರವಾದ ತಿರುಪತಿಯಲ್ಲಿ ರಸ್ತೆಗಳಲ್ಲಿ ನೀರು ಹರಿಯಲಾರಂಭಿಸಿತು. ಇದರಿಂದ ಭಕ್ತರು ಸಿಕ್ಕಿಬಿದ್ದರು.

56

ಮುಂದಿನ ಎರಡು ದಿನಗಳ ಕಾಲ ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿ ಸೇರಿದಂತೆ ರಾಯಲಸೀಮಾ ಸೇರಿದಂತೆ ಹೆಚ್ಚಿನ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

66

ಪ್ರವಾಹದಿಂದಾಗಿ ನೂರಾರು ಜನರು ವಿವಿಧೆಡೆ ಸಿಲುಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಮುಂದಿನ ಕೆಲ ದಿನ ಮಳೆಯಾಗುವ ಸಂಭವವಿರುವುದರಿಂದ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದೆ.

About the Author

SN
Suvarna News
ಆಂಧ್ರ ಪ್ರದೇಶ
ಪ್ರವಾಹ
ಮಳೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved