MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಅಣ್ಣಾಮಲೈ 'ಕಿಂಗ್‌ ಮೇಕರ್' ಗೇಮ್‌ಪ್ಲ್ಯಾನ್; AIDMK ಪಾಳಯದಲ್ಲಿ ನಡುಕ! BJP ಹೇಳಿದ್ದೇನು?

ಅಣ್ಣಾಮಲೈ 'ಕಿಂಗ್‌ ಮೇಕರ್' ಗೇಮ್‌ಪ್ಲ್ಯಾನ್; AIDMK ಪಾಳಯದಲ್ಲಿ ನಡುಕ! BJP ಹೇಳಿದ್ದೇನು?

ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ಅವರ 'ಕಿಂಗ್ ಮೇಕರ್' ಅವತಾರ ತಮಿಳುನಾಡು ರಾಜಕೀಯದಲ್ಲಿ ಯಾವ ರೀತಿಯ ಬದಲಾವಣೆಗಳನ್ನು ತರಲಿದೆ? ಎಐಎಡಿಎಂಕೆ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವುದೇ ಅಥವಾ ಬಿಜೆಪಿ ತನ್ನ ನೆಲೆಯನ್ನು ಇನ್ನಷ್ಟು ಗಟ್ಟಿಮಾಡಿಕೊಳ್ಳುವುದೇ ಎಂಬ ಕುತೂಹಲ ಹೆಚ್ಚಾಗಿದೆ.

2 Min read
Author : Mahmad Rafik
Published : Mar 07 2026, 01:43 PM IST
Share this Photo Gallery
  • FB
  • TW
  • Linkdin
  • Whatsapp
15
ಅಣ್ಣಾಮಲೈ
Image Credit : Annamalai FB

ಅಣ್ಣಾಮಲೈ

2026ರ ತಮಿಳುನಾಡು ವಿಧಾನಸಭಾ ಚುನಾವಣಾ ಕಣ ಈಗಲೇ ಬಿಸಿಯಾಗಿದೆ. ಅದರಲ್ಲೂ, ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಅಣ್ಣಾಮಲೈ ಅವರ ರಾಜಕೀಯ ನಡೆಗಳು ಬಿರುಗಾಳಿ ಎಬ್ಬಿಸಿವೆ. ಮುಂಬರುವ ಚುನಾವಣೆಯಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಬೇಕೆಂದು ಹೈಕಮಾಂಡ್ ಅಣ್ಣಾಮಲೈಗೆ ಸೂಚಿಸಿತ್ತು. ಇದಕ್ಕಾಗಿ ಮೊಡಕುರಿಚಿ ಅಥವಾ ಗೌಂಡಂಪಾಳಯಂ ಕ್ಷೇತ್ರಗಳನ್ನು ಗುರುತಿಸಲಾಗಿತ್ತು. ಆದರೆ ಅಣ್ಣಾಮಲೈ ಬೇರೆಯದ್ದೇ ಪ್ಲ್ಯಾನ್ ಮಾಡಿದ್ದಾರೆ.

25
அண்ணாமலையின் மாஸ்டர் பிளான்
Image Credit : facebook/ nainar nagendarn and eps

அண்ணாமலையின் மாஸ்டர் பிளான்

ದೆಹಲಿ ನಾಯಕರ ಮುಂದೆ ಅಣ್ಣಾಮಲೈ ತಾರ್ಕಿಕ ವಾದವೊಂದನ್ನು ಮಂಡಿಸಿದ್ದಾರೆ. "ಈ ಬಾರಿ ನಾನು ಸ್ಪರ್ಧಿಸಿದರೆ ಗೆಲ್ಲುವುದು ಖಚಿತ. ಆದರೆ, ಎಐಎಡಿಎಂಕೆ ಮೈತ್ರಿಯಲ್ಲಿ ನಾನೊಬ್ಬ ಶಾಸಕನಾಗಿ ವಿಧಾನಸಭೆ ಪ್ರವೇಶಿಸಿದರೆ, ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಮೈತ್ರಿ ಧರ್ಮದ ಹೆಸರಲ್ಲಿ ಎಐಎಡಿಎಂಕೆ ಕಾರ್ಯಗಳಿಗೆ ಅಡ್ಡಿಪಡಿಸಲು ಅಥವಾ ಅವರನ್ನು ವಿಮರ್ಶಿಸಲು ಆಗುವುದಿಲ್ಲ. ಇದು ನನಗೆ ಧರ್ಮಸಂಕಟ ತರುತ್ತದೆ" ಎಂದು ಅವರು ನೇರವಾಗಿ ಹೇಳಿದ್ದಾರೆ ಎಂದು  ವರದಿಯಾಗಿದೆ.

ಬದಲಿಗೆ, ಕೊಂಗು ವಲಯದ ಸುಮಾರು 60ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವನ್ನು ಖಚಿತಪಡಿಸುವ ಪ್ರಚಾರದ ಜವಾಬ್ದಾರಿಯನ್ನು ತಮಗೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.

Related Articles

Related image1
ಬಿಹಾರದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯಿಂದ ನಾಲ್ವರ ಹೆಸರು? ಯಾರಿಗೆ ಪಟ್ಟ?
Related image2
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ಗ್ರೀನ್ ಸಿಗ್ನಲ್ ನೀಡಿದ ಅಮೆರಿಕ; 30 ದಿನ ಮಾತ್ರ!
35
ಬಿಜೆಪಿ ಹೈಕಮಾಂಡ್
Image Credit : X/Annamalai

ಬಿಜೆಪಿ ಹೈಕಮಾಂಡ್

ಅಣ್ಣಾಮಲೈ ಅವರ ಈ ಮನವಿಯನ್ನು ಬಿಜೆಪಿ ಹೈಕಮಾಂಡ್ ಒಪ್ಪಿಕೊಂಡಿದ್ದು, ಕೊಂಗು ವಲಯದ ಅಭ್ಯರ್ಥಿಗಳ ಆಯ್ಕೆಯಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಇದೇ ವಿಚಾರ ಈಗ ಎಐಎಡಿಎಂಕೆ ವಲಯದಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಣ್ಣಾಮಲೈ ಟಾರ್ಗೆಟ್ ಮಾಡುತ್ತಿರುವ ಕ್ಷೇತ್ರಗಳೆಲ್ಲವೂ ಕಳೆದ ಚುನಾವಣೆಗಳಲ್ಲಿ ಎಐಎಡಿಎಂಕೆ ಭದ್ರಕೋಟೆಗಳಾಗಿದ್ದವು. 

ಕೊಂಗು ವಲಯದಲ್ಲಿ ಪ್ರಭಾವಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ, ಭವಿಷ್ಯದಲ್ಲಿ ಆ ಭಾಗದಲ್ಲಿ ಬಿಜೆಪಿಯನ್ನು ಒಂದು ಪರ್ಯಾಯ ಶಕ್ತಿಯಾಗಿ ಬೆಳೆಸಲು ಅಣ್ಣಾಮಲೈ ಪ್ಲ್ಯಾನ್ ಮಾಡಿದ್ದಾರೆ. ಮೈತ್ರಿಯಲ್ಲಿದ್ದುಕೊಂಡೇ ಎಐಎಡಿಎಂಕೆ ಕೋಟೆಗೆ ಲಗ್ಗೆ ಹಾಕುವ ಅಣ್ಣಾಮಲೈ ಪ್ರಯತ್ನ, ಎಡಪ್ಪಾಡಿ ಪಳನಿಸ್ವಾಮಿ ಬಣಕ್ಕೆ ತೀವ್ರ ಆಘಾತ ನೀಡಿದೆ.

45
பாஜகவின் எதிர்கால அரசியல்
Image Credit : Asianet News

பாஜகவின் எதிர்கால அரசியல்

"ಗೆಲ್ಲುವ ಕುದುರೆಗಳನ್ನು ನಾನು ಗುರುತಿಸುತ್ತೇನೆ" ಎಂದು ಅಣ್ಣಾಮಲೈ ಅಖಾಡಕ್ಕಿಳಿದಿರುವುದು ಕೇವಲ ಚುನಾವಣಾ ತಂತ್ರವಲ್ಲ. ಇದು 2026ರ ನಂತರದ ತಮಿಳುನಾಡು ರಾಜಕೀಯದಲ್ಲಿ ಬಿಜೆಪಿಯನ್ನು ಪ್ರಮುಖ ವಿರೋಧ ಪಕ್ಷವಾಗಿ ಮಾಡುವ ಪ್ರಯತ್ನ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. 

ಇದನ್ನೂ ಓದಿ: ಭಾರತದ ಪೋಸ್ಟ್‌ ಆಫೀಸ್‌ನ 38 ಕೋಟಿ ಖಾತೆಯಲ್ಲಿದೆ ಕರ್ನಾಟಕ ಬಜೆಟ್‌ನ ಐದು ಪಟ್ಟು ಹಣ!

55
ಕಿಂಗ್ ಮೇಕರ್ ನಡೆ
Image Credit : x

ಕಿಂಗ್ ಮೇಕರ್ ನಡೆ

ಅಣ್ಣಾಮಲೈ ಅವರ ಈ 'ಕಿಂಗ್ ಮೇಕರ್' ನಡೆ ಕೊಂಗು ವಲಯದಲ್ಲಿ ಯಾವ ರೀತಿಯ ಬದಲಾವಣೆ ತರಲಿದೆ? ಎಐಎಡಿಎಂಕೆ ತನ್ನ ಕೋಟೆ ಉಳಿಸಿಕೊಳ್ಳುವುದೇ ಅಥವಾ ಬಿಜೆಪಿ ತನ್ನ ಹೆಜ್ಜೆಗುರುತನ್ನು ಇನ್ನಷ್ಟು ಬಲಪಡಿಸಿಕೊಳ್ಳುವುದೇ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಮೊದಲು ಹಿಂದೇಟು, ನಂತ್ರ ಒಪ್ಪಿಗೆ: ಕಾಂಗ್ರೆಸ್‌ಗೆ ಗುಡ್‌ನ್ಯೂಸ್ ನೀಡಿದ ಮಮತಾ ಬ್ಯಾನರ್ಜಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಣ್ಣಾಮಲೈ
ತಮಿಳುನಾಡು
ಬಿಜೆಪಿ
ರಾಜಕೀಯ ಸುದ್ದಿ

Latest Videos
Recommended Stories
Recommended image1
ಮೊದಲು ಹಿಂದೇಟು, ನಂತ್ರ ಒಪ್ಪಿಗೆ: ಕಾಂಗ್ರೆಸ್‌ಗೆ ಗುಡ್‌ನ್ಯೂಸ್ ನೀಡಿದ ಮಮತಾ ಬ್ಯಾನರ್ಜಿ
Recommended image2
'ಗೋ ಟು ಪೀಪಲ್' ಎಂದಿದ್ಯಾಕೆ ತ್ರಿಷಾ ಕೃಷ್ಣನ್? ಮಾತಿಗಿಂತ ಕೃತಿ ಮೇಲು ಅನ್ನೋ ಎಚ್ಚರಿಕೆ ಗಂಟೆ ಯಾರಿಗೆ?
Recommended image3
ನಾಯಿ ಮೇಲಿನ ಇಂತಹ ಕ್ರೌರ್ಯ ನೀವು ಜೀವಮಾನದಲ್ಲಿ ನೋಡಿರಲು ಸಾಧ್ಯವಿಲ್ಲ! ನಾಯಿಪಾಡು ಅಂದ್ರೆ ಇದೇನಾ? ವಿಡಿಯೋ ವೈರಲ್
Related Stories
Recommended image1
ಬಿಹಾರದ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯಿಂದ ನಾಲ್ವರ ಹೆಸರು? ಯಾರಿಗೆ ಪಟ್ಟ?
Recommended image2
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ಗ್ರೀನ್ ಸಿಗ್ನಲ್ ನೀಡಿದ ಅಮೆರಿಕ; 30 ದಿನ ಮಾತ್ರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved