MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • 'ಜಿಯಾಗ್ರಫಿಯಲ್ಲಿ ಇರ್ಬೇಕೋ, ಹಿಸ್ಟರಿಯಲ್ಲಿ ಇರ್ಬೇಕೋ? ನೀವೇ ನಿರ್ಧಾರ ಮಾಡಿ..' ಪಾಕ್‌ಗೆ ಸೇನಾ ಮುಖ್ಯಸ್ಥರ ಖಡಕ್‌ ವಾರ್ನಿಂಗ್‌

'ಜಿಯಾಗ್ರಫಿಯಲ್ಲಿ ಇರ್ಬೇಕೋ, ಹಿಸ್ಟರಿಯಲ್ಲಿ ಇರ್ಬೇಕೋ? ನೀವೇ ನಿರ್ಧಾರ ಮಾಡಿ..' ಪಾಕ್‌ಗೆ ಸೇನಾ ಮುಖ್ಯಸ್ಥರ ಖಡಕ್‌ ವಾರ್ನಿಂಗ್‌

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ಮುಂದುವರಿಸಿದರೆ, ಪಾಕಿಸ್ತಾನವು ಭೂಪಟದಲ್ಲಿ ಉಳಿಯಬೇಕೇ ಅಥವಾ ಇತಿಹಾಸ ಸೇರಬೇಕೇ ಎಂದು ನಿರ್ಧರಿಸಬೇಕಾಗುತ್ತದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

2 Min read
Author : Santosh Naik
Published : May 16 2026, 04:16 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Getty

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ಮುಂದುವರಿಸಿದರೆ ಮತ್ತು ಭಾರತದ ವಿರುದ್ಧ ವಿಧ್ವಂಸಕ ಕೃತ್ಯಗಳನ್ನು ನಡೆಸಿದರೆ, ಪಾಕಿಸ್ತಾನವು "ಜಗತ್ತಿನ ಭೂಪಟದಲ್ಲಿ (ಭೂಗೋಳ) ಇರಬೇಕೋ ಅಥವಾ ಕೇವಲ ಇತಿಹಾಸದ ಪುಟ ಸೇರಬೇಕೋ ಎಂಬುದನ್ನು ಅವರೇ ನಿರ್ಧರಿಸಬೇಕಾಗುತ್ತದೆ" ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಇಸ್ಲಾಮಾಬಾದ್‌ಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ.

Add Asianetnews Kannada as a Preferred SourcegooglePreferred
26
Image Credit : Asianet News

ದೆಹಲಿಯ ಮಾಣೆಕ್‌ಶಾ ಸೆಂಟರ್‌ನಲ್ಲಿ 'ಯುನಿಫಾರ್ಮ್ ಅನ್‌ವೈಲ್ಡ್' ಆಯೋಜಿಸಿದ್ದ 'ಸೇನಾ ಸಂವಾದ' ಎಂಬ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. "ಕಳೆದ ವರ್ಷ ನಡೆದ 'ಆಪರೇಷನ್ ಸಿಂಧೂರ್'ಗೆ ಕಾರಣವಾದ ಪರಿಸ್ಥಿತಿಗಳು ಮತ್ತೊಮ್ಮೆ ಎದುರಾದರೆ ಭಾರತೀಯ ಸೇನೆ ಹೇಗೆ ಪ್ರತಿಕ್ರಿಯಿಸಲಿದೆ?" ಎಂದು ಕೇಳಲಾದ ಪ್ರಶ್ನೆಗೆ ಸೇನಾ ಮುಖ್ಯಸ್ಥರು ಈ ರೀತಿ ಅತ್ಯಂತ ಸ್ಪಷ್ಟ ಹಾಗೂ ತೀಕ್ಷ್ಣವಾಗಿ ಉತ್ತರಿಸಿದ್ದಾರೆ.

Related Articles

Related image1
Upendra Dwivedi: ಅಮೆರಿಕದ ಹಾಲ್ ಆಫ್ ಫೇಮ್‌ಗೆ ಭಾರತೀಯ ಸೇನಾ ಮುಖ್ಯಸ್ಥ! ಮೂರನೇ ಭಾರತೀಯ ಎಂಬ ಹೆಗ್ಗಳಿಕೆ
Related image2
ಪಾಕ್‌ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ ನಂಬಲೇಬೇಡಿ: ಟ್ರಂಪ್‌ಗೆ ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ
36
Image Credit : Asianet News

ಸೇನಾ ಮುಖ್ಯಸ್ಥರು ತಮ್ಮ ಮಾತನ್ನು ಮುಂದುವರಿಸಿ, "ನಾನು ಈ ಹಿಂದೆಯೂ ಹೇಳಿರುವುದನ್ನು ನೀವು ಕೇಳಿರಬಹುದು... ಪಾಕಿಸ್ತಾನವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ತಾನು ಭೂಗೋಳದ ಭಾಗವಾಗಿ ಉಳಿಯಬೇಕೋ ಅಥವಾ ಇತಿಹಾಸದ ಪುಟ ಸೇರಬೇಕೋ ಎಂಬುದನ್ನು ಅವರೇ ನಿರ್ಧರಿಸಬೇಕಾಗುತ್ತದೆ," ಎಂದು ಎಚ್ಚರಿಸಿದರು.

46
Image Credit : X

ಜನರಲ್ ದ್ವಿವೇದಿ ಅವರ ಈ ಮಾತುಗಳು ಸಂಕ್ಷಿಪ್ತವಾಗಿದ್ದರೂ, ಪಾಕಿಸ್ತಾನದ ಬೆನ್ನುಮೂಳೆ ನಡುಗಿಸುವಂತಿದ್ದವು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ದೃಢವಾದ ನಿಲುವನ್ನು ಅವರು ಮತ್ತೊಮ್ಮೆ ಜಗತ್ತಿನ ಮುಂದೆ ಪುನರುಚ್ಚರಿಸಿದ್ದಾರೆ. ಭಾರತೀಯ ರಕ್ಷಣಾ ಪಡೆಗಳು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದ ಕೆಲವೇ ದಿನಗಳಲ್ಲಿ ಉಪೇಂದ್ರ ದ್ವಿವೇದಿ ಈ ಮಾತು ಹೇಳಿದ್ದಾರೆ.

56
Image Credit : X

ಕಳೆದ ವರ್ಷ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಕಳೆದ ವರ್ಷ ಮೇ 7 ರಂದು ಮುಂಜಾನೆ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ಕಾರ್ಯಾಚರಣೆಯಡಿಯಲ್ಲಿ, ಭಾರತೀಯ ವಾಯುಪಡೆ ಮತ್ತು ರಕ್ಷಣಾ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ (PoK) ಹಲವು ಭಯೋತ್ಪಾದಕ ತಾಣಗಳ ಮೇಲೆ ಅತ್ಯಂತ ನಿಖರವಾದ ದಾಳಿಗಳನ್ನು (Precision Strikes) ನಡೆಸಿದ್ದವು.

66
Image Credit : Anish Singh

ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವೂ ಭಾರತದ ಮೇಲೆ ದಾಳಿ ಮಾಡಲು ಮುಂದಾದಾಗ, ಭಾರತೀಯ ಪಡೆಗಳು ಅದೇ ಕಾರ್ಯಾಚರಣೆಯಡಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಿದ್ದವು. ಅಣ್ವಸ್ತ್ರ ಸಜ್ಜಿತ ಉಭಯ ದೇಶಗಳ ನಡುವಿನ ಈ ಭೀಕರ ಸೇನಾ ಸಂಘರ್ಷವು ಸತತ 88 ಗಂಟೆಗಳ ಕಾಲ ನಡೆದಿತ್ತು. ಅಂತಿಮವಾಗಿ ಮೇ 10 ರ ಸಂಜೆ ಎರಡೂ ದೇಶಗಳು ರಾಜತಾಂತ್ರಿಕ ಒಪ್ಪಂದಕ್ಕೆ ಬಂದ ನಂತರ ಈ ಸಂಘರ್ಷಕ್ಕೆ ಪೂರ್ಣವಿರಾಮ ಬಿದ್ದಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಭಾರತೀಯ ಸೇನೆ
ಆಪರೇಷನ್ ಸಿಂಧೂರ
ಪಾಕಿಸ್ತಾನ
ಸುದ್ದಿ
ಭಾರತ ಸುದ್ದಿ

Latest Videos
Recommended Stories
Recommended image1
ಇಲ್ಲಿಗೂ ಬಂತಾ ಜಲ್ಮುರಿ? ನೆದರ್ಲೆಂಡ್‌ನ ಭಾರತೀಯ ಸಮುದಾಯದ ಮುಂದೆ ಮೋದಿ ಹಾಸ್ಯ ಚಟಾಕಿ
Recommended image2
Shagufta Rafique: ಒಮ್ಮೆ ಕಾಲ್ ಗರ್ಲ್, ಬಳಿಕ ಬಾರ್‌ ಡಾನ್ಸರ್; ಈಗ ಸೂಪರ್‌ ಹಿಟ್ ಸಿನಿಮಾ ಫೇಮಸ್‌ ರೈಟರ್‌!
Recommended image3
Now Playing
ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Related Stories
Recommended image1
Upendra Dwivedi: ಅಮೆರಿಕದ ಹಾಲ್ ಆಫ್ ಫೇಮ್‌ಗೆ ಭಾರತೀಯ ಸೇನಾ ಮುಖ್ಯಸ್ಥ! ಮೂರನೇ ಭಾರತೀಯ ಎಂಬ ಹೆಗ್ಗಳಿಕೆ
Recommended image2
ಪಾಕ್‌ ಸೇನಾ ಮುಖ್ಯಸ್ಥ ಅಸೀಂ ಮುನೀರ್‌ ನಂಬಲೇಬೇಡಿ: ಟ್ರಂಪ್‌ಗೆ ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved