MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿ ವಿವರ ಸಾರ್ವಜನಿಕರಿಗೆ ಲಭ್ಯ!

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿ ವಿವರ ಸಾರ್ವಜನಿಕರಿಗೆ ಲಭ್ಯ!

ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಿಸಲು ನಿರ್ಧರಿಸಿದ್ದಾರೆ. ಈ ಮಾಹಿತಿಯನ್ನು ಸುಪ್ರೀಂಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಲಾಗುವುದು.

1 Min read
Kannadaprabha News
Published : Apr 04 2025, 10:19 AM IST| Updated : Apr 04 2025, 10:28 AM IST
Share this Photo Gallery
  • FB
  • TW
  • Linkdin
  • Whatsapp
16

ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ವಹಿಸಿಕೊಂಡ ಬಳಿಕ ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕವಾಗಿ ಘೋಷಣೆ ಮಾಡಲು ಸಿಜೆಐ ಸೇರಿದಂತೆ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರು ನಿರ್ಧರಿಸಿದ್ದಾರೆ.

26

ಗುರುವಾರ ಇಲ್ಲಿ ಸಭೆ ಸೇರಿದ್ದ ಸುಪ್ರೀಂಕೋರ್ಟ್‌ನ ಎಲ್ಲಾ ನ್ಯಾಯಾಧೀಶರನ್ನು ಒಳಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಿದೆ. , ಆಸ್ತಿ ವಿವರಗಳ ಬಹಿರಂಗದ ಜೊತೆಗೆ ಅದರ ಅಂಕಿ ಅಂಶಗಳನ್ನು ಸುಪ್ರಿಂಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಲಾಗುವುದು.

36

‘ನ್ಯಾಯಾಧೀಶರು ಅಧಿಕಾರ ವಹಿಸಿಕೊಳ್ಳುವಾಗ ಮತ್ತು ಯಾವುದೇ ಸ್ವರೂಪದ ಆಸ್ತಿಯನ್ನು ಖರೀದಿಸಿದರೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ತಮ್ಮ ಆಸ್ತಿ ವಿವರವನ್ನು ನೀಡಬೇಕು. ಇನ್ನು ವೆಬ್‌ಸೈಟ್‌ನಲ್ಲಿ ಆಸ್ತಿಗಳ ಘೋಷಣೆ ಮಾಡುವುದು ಸ್ವಯಂಪ್ರೇರಿತ ಆಧಾರದ ಮೇಲೆ ಇರುತ್ತದೆ’ ಎಂದು ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ ತಿಳಿಸಿದೆ

46

ಇತ್ತೀಚೆಗೆ ದೆಹಲಿ ಹೈಕೋರ್ಟ್‌ ನ್ಯಾಯಾಧೀಶ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಅರೆಸುಟ್ಟ ನೋಟುಗಳು ಪತ್ತೆಯಾಗಿದ್ದವು. ಸುಟ್ಟ ನೋಟುಗಳು ಪತ್ತೆಯಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.. ಈ ಕುರಿತು ಲೋಕಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್‌ ಸದಸ್ಯ ಹಿಬಿ ಇಡೆನ್‌ ಆಗ್ರಹಿಸಿದ್ದರು.

56

ಇತ್ತೀಚೆಗೆ ದೆಹಲಿ ಹೈಕೋರ್ಟ್‌ ನ್ಯಾಯಾಧೀಶ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಅರೆಸುಟ್ಟ ನೋಟುಗಳು ಪತ್ತೆಯಾಗಿದ್ದವು. ಸುಟ್ಟ ನೋಟುಗಳು ಪತ್ತೆಯಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.. ಈ ಕುರಿತು ಲೋಕಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್‌ ಸದಸ್ಯ ಹಿಬಿ ಇಡೆನ್‌ ಆಗ್ರಹಿಸಿದ್ದರು.

66

ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಈ ಘಟನೆಯಿಂದ ಇಡೀ ದೇಶ ಆಘಾತಕ್ಕೊಳಗಾಗಿದೆ. ಸುಪ್ರೀಂಕೋರ್ಟ್‌ ಈ ಕುರಿತು ತನಿಖೆಗೆ ಆದೇಶಿಸಿದೆ. ನ್ಯಾಯಾಂಗವು ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭಗಳಲ್ಲೊಂದು. ಇದು ಭ್ರಷ್ಟಾಚಾರದಿಂದ ಮುಕ್ತವಾಗಿರಬೇಕಿದೆ. ಹೀಗಾಗಿ ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಉತ್ತರದಾಯಿತ್ವ, ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಚರ್ಚೆಯ ಅಗತ್ಯವಿದೆ ಎಂದು ಹೇಳಿದರು. ಈ ಬೇಡಿಕೆಗೆ ಹಲವು ಕಾಂಗ್ರೆಸ್‌ ನಾಯಕರು ದನಿಗೂಡಿಸಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಸುಪ್ರೀಂ ಕೋರ್ಟ್
ಭಾರತ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved