MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Varamahalakshmi Wishes
Darshan Renukaswamy Case
Farm Chemicals Under Scanner
Kanteerava Stadium Renovation
Karnataka Electoral Roll
Bengaluru 2nd International Airport
Bengaluru Land Scam
Mahatma Gandhi Manuscript Auction
Divorce Laws India
ISI Backed Terror Network
Mohan Bhagavat Canada Visit
  • Home
  • News
  • India News
  • ಮೋಂಥಾ ಚಂಡಮಾರುತ: ಕರಾವಳಿ ಭಾಗದಲ್ಲಿ ಕರಾಳ ರಾತ್ರಿ, 90 ರಿಂದ 100 ಕಿ.ಮೀ. ವೇಗದಲ್ಲಿ ಗಾಳಿ

ಮೋಂಥಾ ಚಂಡಮಾರುತ: ಕರಾವಳಿ ಭಾಗದಲ್ಲಿ ಕರಾಳ ರಾತ್ರಿ, 90 ರಿಂದ 100 ಕಿ.ಮೀ. ವೇಗದಲ್ಲಿ ಗಾಳಿ

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಮೋಂಥಾ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ್ದು, ಭಾರೀ ಮಳೆ ಮತ್ತು ಹಾನಿಯನ್ನುಂಟುಮಾಡಿದೆ. ಆಂಧ್ರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

1 Min read
Author : Kannadaprabha News
Published : Oct 29 2025, 08:16 AM IST
Share this Photo Gallery
  • FB
  • TW
  • Linkdin
  • Whatsapp
16
 ಮೋಂಥಾ ಚಂಡಮಾರುತ
Image Credit : X

ಮೋಂಥಾ ಚಂಡಮಾರುತ

ಅಮರಾವತಿ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ಮೋಂಥಾ ಚಂಡಮಾರುತವು ಮಂಗಳವಾರ ರಾತ್ರಿ ವೇಳೆ ಆಂಧ್ರಪ್ರದೇಶದ ಕರಾವಳಿ ಮೇಲೆ ಅಪ್ಪಳಿಸಿದೆ. ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಗಂಟೆಗೆ 90 ರಿಂದ 100 ಕಿ.ಮೀ. ವೇಗದಲ್ಲಿ ಅಪ್ಪಳಿಸಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಗೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಭಾರೀ ಮಳೆಯಾರ್ಭಟ
Image Credit : ANI

ಭಾರೀ ಮಳೆಯಾರ್ಭಟ

ಮೋಂಥಾದಿಂದಾಗಿ ಆಂಧ್ರದ 3800ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಭಾರೀ ಮಳೆಯಾರ್ಭಟ ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ 22 ಜಿಲ್ಲೆಗಳಲ್ಲಿ 3174 ಪುನರ್‌ವಸತಿ ಕೇಂದ್ರ ನಿರ್ಮಿಸಲಾಗಿದೆ. ಜತೆಗೆ 291 ವೈದ್ಯಕೀಯ ಕ್ಯಾಂಪ್‌ ಸ್ಥಾಪಿಸಲಾಗಿದೆ. ಈಗಾಗಲೇ ಸಂತ್ರಸ್ತ ಪ್ರದೇಶದಲ್ಲಿ ವಾಸವಿದ್ದ 76000 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

Related Articles

Related image1
ಮೋಂಥಾ ಚಂಡಮಾರುತ ದಾಳಿ : ಕರಾವಳಿಯಲ್ಲಿ ಭಾರೀ ಕಟ್ಟೆಚ್ಚರ
Related image2
ರಾಜ್ಯಕ್ಕೆ ಮೋಂಥಾ ಚಂಡಮಾರುತ ಭೀತಿ: ಬೆಂಗಳೂರು ಸೇರಿ 30 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ!
36
ಭಾರೀ ಬೆಳೆ ಹಾನಿ
Image Credit : ANI

ಭಾರೀ ಬೆಳೆ ಹಾನಿ

ಅತ್ತ ಮಳೆ, ಗಾಳಿಯಿಂದಾಗಿ ವಿಮಾನಸಂಚಾರದಲ್ಲೂ ವ್ಯತ್ಯಯವಾಗಿದ್ದು, ವಿಶಾಖಪಟ್ಟಣದಿಂದ ಸಂಚಾರ ನಡೆಸಬೇಕಿದ್ದ 32 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಭಾರೀ ಮಳೆಯಿಂದಾಗಿ ಆಂಧ್ರದಲ್ಲಿ 1.76 ಲಕ್ಷ ಹೆಕ್ಟೇರ್‌ ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಪೈರುಗಳಿಗೆ ಹಾನಿಯಾಗಿ ಬೆಳೆ ನಷ್ಟವಾಗಿದೆ

46
ಬಂಗಾಳದಲ್ಲಿ ಮುನ್ನೆಚ್ಚರಿಕೆ
Image Credit : X/AndhraPradeshCM

ಬಂಗಾಳದಲ್ಲಿ ಮುನ್ನೆಚ್ಚರಿಕೆ

ಪಶ್ಚಿಮ ಬಂಗಾಳದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಕೆಲ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇದ್ದು, ಮುನ್ನೆಚ್ಚರಿಕೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; 50 ಲಕ್ಷ ನೌಕರರು ಮತ್ತು 69 ಲಕ್ಷ ಪಿಂಚಣಿದಾರರಿಗೆ ಶುಭ ಸುದ್ದಿ

56
ಒಡಿಶಾದಲ್ಲೂ ಮಳೆಯಬ್ಬರ
Image Credit : X and Getty

ಒಡಿಶಾದಲ್ಲೂ ಮಳೆಯಬ್ಬರ

ಚಂಡಮಾರುತದ ಪರಿಣಾಮ ಕರಾವಳಿ ಮತ್ತು ದಕ್ಷಿಣ ಒಡಿಶಾದ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಅಂತೆಯೇ, ಹಲವು ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಜತೆಗೆ ಬೃಹತ್‌ ಮರಗಳು ಬುಡಮೇಲಾಗಿ, ವಿದ್ಯುತ್‌ ಕಂಬಗಳು ಧರೆಗುರುಳಿ ಸಂಚಾರವನ್ನು ದುಸ್ತರಗೊಳಿಸಿವೆ. ಅನೇಕ ಮನೆಗಳಿಗೂ ಹಾನಿಯಾಗಿದೆ.

66
 2000 ಶಿಬಿರ
Image Credit : ANI

2000 ಶಿಬಿರ

ಸಂತ್ರಸ್ತರಿಗಾಗಿ 2000 ಶಿಬಿರಗಳನ್ನು ನಿರ್ಮಿಸಲಾಗಿದ್ದು, ಜನರ ನೆರವಿಗೆ 153 ತಂಡಗಳನ್ನು ರಚಿಸಲಾಗಿದೆ. ಈಗಾಗಲೇ 1871 ಗರ್ಭಿಣಿಯರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರವಾಗಿದ್ದು, ಈ ಪೈಕಿ 452 ಜನರಿಗೆ ಸುರಕ್ಷಿತ ಹೆರಿಗೆಯಾಗಿದೆ.

ಇದನ್ನೂ ಓದಿ: ಪುಷ್ಕರ್ ಜಾನುವಾರು ಮೇಳದಲ್ಲಿ 23 ಕೋಟಿಯ ಎಮ್ಮೆ, 15 ಕೋಟಿ ಮೌಲ್ಯದ ಕುದುರೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮಳೆ
ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳು
ಭಾರತ ಸುದ್ದಿ

Latest Videos
Recommended Stories
Recommended image1
ದಕ್ಷಿಣ ಭಾರತದಲ್ಲೇ ಒಂದೇ ವರ್ಷಕ್ಕೆ 806 ಕೋಟಿ ರೂ. ಆದಾಯ!: ನಷ್ಟದಲ್ಲಿದ್ದ ಭಾರತೀಯ ರೈಲ್ವೆಗೆ ಬಂಪರ್ 'ಖಜಾನೆ'ಯಾದ ವಂದೇ ಭಾರತ್!
Recommended image2
ಶ್ರಾವಣ ಮಾಸದಲ್ಲಿ ನಿತಿನ್ ನಬಿನ್ ಮಾಂಸಾಹಾರ ತಿಂದ್ರಾ? 'ಇದು ಸುಳ್ಳು ಸುದ್ದಿ' ಕಾಂಗ್ರೆಸ್ ಪೋಸ್ಟ್‌ಗೆ ಬಿಜೆಪಿ ಕೆಂಡಾಮಂಡಲ!
Recommended image3
Prjna Mishra: ಖ್ಯಾತ ಯೂಟ್ಯೂಬರ ಬಾಳಲ್ಲಿ ದುರಂತ; ಅನೈತಿಕ ಸಂಬಂಧದಿಂದ ಬಾವನಿಂದಲೇ ಹತಳಾದ ಅಕ್ಕ!
Related Stories
Recommended image1
ಮೋಂಥಾ ಚಂಡಮಾರುತ ದಾಳಿ : ಕರಾವಳಿಯಲ್ಲಿ ಭಾರೀ ಕಟ್ಟೆಚ್ಚರ
Recommended image2
ರಾಜ್ಯಕ್ಕೆ ಮೋಂಥಾ ಚಂಡಮಾರುತ ಭೀತಿ: ಬೆಂಗಳೂರು ಸೇರಿ 30 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved