MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ರೇಷನ್​ ಕಳ್ಳರಿಗೆ ಬಿಗ್​ ಶಾಕ್​: ಅನರ್ಹ ಫಲಾನುಭವಿಗಳು, ಅಕ್ರಮ ದಾಸ್ತಾನುದಾರರ ಆಟ ಇನ್ಮುಂದೆ ನಡೆಯಲ್ಲ

ರೇಷನ್​ ಕಳ್ಳರಿಗೆ ಬಿಗ್​ ಶಾಕ್​: ಅನರ್ಹ ಫಲಾನುಭವಿಗಳು, ಅಕ್ರಮ ದಾಸ್ತಾನುದಾರರ ಆಟ ಇನ್ಮುಂದೆ ನಡೆಯಲ್ಲ

ಬಡವರಿಗಾಗಿ ಇರುವ ಪಡಿತರ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಶ್ರೀಮಂತರು ಮತ್ತು ಅಕ್ರಮ ದಾಸ್ತಾನುದಾರರಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ 'ಸಾರ್ಥಕ್ ಸಾರ್ವಜನಿಕ ವಿತರಣಾ ವ್ಯವಸ್ಥೆ' ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯು ಬಯೋಮೆಟ್ರಿಕ್ ದೃಢೀಕರಣ ಮತ್ತು ಡಿಜಿಟಲೀಕರಣವನ್ನು ಒಳಗೊಂಡಿದೆ.

2 Min read
Author : Suchethana D
Published : May 30 2026, 12:39 PM IST
Share this Photo Gallery
  • FB
  • TW
  • Linkdin
  • Whatsapp
16
ಶ್ರೀಮಂತರಿಂದ ಅಕ್ರಮ
Image Credit : Asianet News

ಶ್ರೀಮಂತರಿಂದ ಅಕ್ರಮ

ಬಡವರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಡಿತರ ವ್ಯವಸ್ಥೆಯನ್ನು ಅದೆಷ್ಟೋ ಶ್ರೀಮಂತರು ಪಡೆಯುತ್ತಿದ್ದಾರೆ. ಮಹಾನಗರಗಳಲ್ಲಿಯೂ 2-3 ಮನೆ ಬಾಡಿಗೆಗೆ ಕೊಟ್ಟು ಲಕ್ಷ ಲಕ್ಷ ಹಣ ಗಳಿಸುತ್ತಿರುವವರೂ ರೇಷನ್​ ಅಂಗಡಿಗಳ ಮುಂದೆ ಕಾರು ನಿಲ್ಲಿಸಿ ಬಡವರಿಗಾಗಿ ಇರುವ ರೇಷನ್ ಸೌಲಭ್ಯ ಪಡೆಯುವುದು ಸರ್ವೇ ಸಾಮಾನ್ಯವಾಗಿದೆ. ಇಂಥವರಿಗೆ ಇನ್ನು ಮುಂದೆ ಸಿಗಲ್ಲ ರೇಷನ್. ಅರ್ಹರಿಗೆ ಮಾತ್ರ ಇರುವ ಈ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಹೆಚ್ಚಿನ ರೀತಿಯಲ್ಲಿ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಅದೇ ರೀತಿ ರೇಷನ್​ ಅನ್ನು ಅಕ್ರಮವಾಗಿ ದಾಸ್ತಾನು ಮಾಡುವವರಿಗೂ ಕೇಂದ್ರ ಶಾಕ್​ ನೀಡಿದೆ. ಅದೇ ಸಾರ್ಥಕ್​ ಸಾರ್ವಜನಿಕ ವಿತರಣಾ ವ್ಯವಸ್ಥೆ ಯೋಜನೆ (What Is Sarthak PDS Yojna)

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಏನಿದು ಯೋಜನೆ?
Image Credit : Asianet News

ಏನಿದು ಯೋಜನೆ?

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಈ ಹೊಸ ಯೋಜನೆ ಜಾರಿಗೆ ಸಮ್ಮತಿ ಸೂಚಿಸಿದೆ. ರೇಷನ್​ ವ್ಯವಸ್ಥೆ ಅರ್ಥಾತ್​ ಪಡಿತರ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆ ತರುವುದಕ್ಕಾಗಿ ಕೇಂದ್ರವು ಈ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.

Related Articles

Related image1
ಹಸು ಸಾಕಲು ಆಗ್ತಿಲ್ವಾ, ನಮಗೆ ಕೊಡಿ: ಗೋ ರಕ್ಷಣೆಗೆ ಸ್ವಾಮೀಜಿಯಿಂದ ಹೊಸ ವೇದಿಕೆ ಆರಂಭ
Related image2
Ope. Safed sagar: ಆಗಸದಿಂದ ಭಾರತದ ಬೆಂಕಿ ಮಳೆ- ಪಾಕಿಗಳ ಹುಟ್ಟಡಗಿಸಿದ್ದ ಯೋಧರು
36
ಅಕ್ರಮಕ್ಕೆ ಕಡಿವಾಣ
Image Credit : Asianet News

ಅಕ್ರಮಕ್ಕೆ ಕಡಿವಾಣ

ದಾಸ್ತಾನಿನಿಂದ ಹೊರಟ ಅಕ್ಕಿಧ್ಯಾನ್ಯಗಳು ಎಷ್ಟು, ಪಡಿತರ ಅಂಗಡಿಗೆ ತಲುಪಿದ್ದು ಎಷ್ಟು, ಅದರಲ್ಲಿ ಜನರಿಗೆ ತಲುಪಿದ್ದೆಷ್ಟು ಎನ್ನುವ ಸಂಪೂರ್ಣ ಮಾಹಿತಿ ಇದರಿಂದ ಸಿಗಲಿದೆ. ಪಡಿತರ ಧಾನ್ಯಗಳ ದಾಸ್ತಾನು ಮತ್ತು ವಿತರಣೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯುವುದು. ಬಯೋಮೆಟ್ರಿಕ್ ದೃಢೀಕರಣದ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ಪಡಿತರ ಸಿಗುವಂತೆ ಮಾಡಲು, ಆಧಾರ್ ಅಥವಾ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಲಿಂಕ್ ಮಾಡುವುದು, ಇದರಡಿಯಲ್ಲಿ ಬರಲಿದೆ.

46
ನಿಖರ ಆಹಾರ ಧಾನ್ಯದ ಮಾಹಿತಿ
Image Credit : Asianet News

ನಿಖರ ಆಹಾರ ಧಾನ್ಯದ ಮಾಹಿತಿ

ಗೋದಾಮುಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಆಗುವ ಧಾನ್ಯಗಳ ನಿಖರವಾದ ಮಾಹಿತಿಯನ್ನು ಟ್ರ್ಯಾಕ್ ಮಾಡುವುದು. ಡಿಜಿಟಲೀಕರಣ ಪಡಿತರ ಚೀಟಿ ನಿರ್ವಹಣೆ, ಹೊಸ ಕಾರ್ಡ್’ಗಳಿಗೆ ಅರ್ಜಿ ಸಲ್ಲಿಕೆ, ತಿದ್ದುಪಡಿ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವುದು ಕೂಡ ಸೇರಿವೆ. ಕೇಂದ್ರ ಸರ್ಕಾರ, ದೇಶದ ಜನರಿಗೆ ಸಾಮಾಜಿಕ ಮತ್ತು ಕಾನೂನು ಬದ್ಧತೆ ಜತೆಗೆ ಅಗತ್ಯ, ಗುಣಮಟ್ಟದ ಆಹಾರ ಧಾನ್ಯಗಳ ಲಭ್ಯತೆಯನ್ನೂ ಖಚಿತಪಡಿಸಿದೆ. ಅದರಂತೆ NFSA ಅಡಿಯಲ್ಲಿ 81.35 ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಸುವ ನಿಟ್ಟಿನಲ್ಲಿ "ಸಾರ್ಥಕ್ ಪಿಡಿಎಸ್" ಯೋಜನೆ ಪರಿಣಾಮಕಾರಿಯಾಗಲಿದೆ.

56
 25,530 ಕೋಟಿ ಅನುದಾನ
Image Credit : Asianet News

25,530 ಕೋಟಿ ಅನುದಾನ

16ನೇ ಹಣಕಾಸು ಆಯೋಗದ ಅವಧಿಯಲ್ಲಿ "ಸಾರ್ಥಕ್ ಪಿಡಿಎಸ್" ಗಾಗಿ ಕೇಂದ್ರ ಸರ್ಕಾರ ತನ್ನ ಪಾಲಿನ 25,530 ಕೋಟಿ ರೂಪಾಯಿ ಅನುದಾನ ಒದಗಿಸಿ ಅನುಮೋದನೆ ನೀಡಿದೆ. ದೇಶದ ಪಡಿತರ ವ್ಯವಸ್ಥೆಯಲ್ಲಿ ಇದೊಂದು ಸುಧಾರಿತ ತಂತ್ರಜ್ಞಾನದ ಯೋಜನೆಯಾಗಿ 31.03.2031ರವರೆಗೆ 5 ವರ್ಷಗಳ ಕಾಲ ಮುಂದುವರೆಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

66
ಸಚಿವರ ಮಾಹಿತಿ
Image Credit : ANI

ಸಚಿವರ ಮಾಹಿತಿ

ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಪಡಿತರ ಸಾಗಣೆ, ಆಹಾರ ಧಾನ್ಯಗಳ ನಿರ್ವಹಣೆ, FPS ವಿತರಕರ ಮಾರ್ಜಿನ್‌ಗಾಗಿ ಮಾಡುವ ವೆಚ್ಚವನ್ನು ಪೂರೈಸಲು 'ಸಾರ್ಥಕ್ ಪಿಡಿಎಸ್ ' ಒಂದು ಸಾರ್ಥಕ ಯೋಜನೆಯಾಗಿದ್ದು, ಇದರ ಮೂಲಕ ಕೇಂದ್ರ ನೆರವಿನ ಮಾನದಂಡಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ರೇಷನ್ ಕಾರ್ಡ್
ಭಾರತ ಸುದ್ದಿ
ನರೇಂದ್ರ ಮೋದಿ
ಪ್ರಲ್ಹಾದ್ ಜೋಶಿ

Latest Videos
Recommended Stories
Recommended image1
ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್‌ಆರ್‌ ಪುತ್ರಿ ಶರ್ಮಿಳಾ ರೆಡ್ಡಿ?
Recommended image2
ಕೂದಲಿಲ್ಲದೇ ಇದ್ರೆ ಅಟೆಂಡೆನ್ಸ್‌ ಕೂಡ ಇಲ್ಲ..ಫೇಸ್‌ ಸ್ಕ್ಯಾನ್‌ಗೆ ಮಹಾ ಉಪಾಯ ಮಾಡಿದ ನರೇಗಾ ಕಾರ್ಮಿಕ
Recommended image3
India Latest News Live: ರೇಷನ್​ ಕಳ್ಳರಿಗೆ ಬಿಗ್​ ಶಾಕ್​ - ಅನರ್ಹ ಫಲಾನುಭವಿಗಳು, ಅಕ್ರಮ ದಾಸ್ತಾನುದಾರರ ಆಟ ಇನ್ಮುಂದೆ ನಡೆಯಲ್ಲ
Related Stories
Recommended image1
ಹಸು ಸಾಕಲು ಆಗ್ತಿಲ್ವಾ, ನಮಗೆ ಕೊಡಿ: ಗೋ ರಕ್ಷಣೆಗೆ ಸ್ವಾಮೀಜಿಯಿಂದ ಹೊಸ ವೇದಿಕೆ ಆರಂಭ
Recommended image2
Ope. Safed sagar: ಆಗಸದಿಂದ ಭಾರತದ ಬೆಂಕಿ ಮಳೆ- ಪಾಕಿಗಳ ಹುಟ್ಟಡಗಿಸಿದ್ದ ಯೋಧರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved