MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ದೆಹಲಿ ಸಿಜೆಪಿ ಪ್ರತಿಭಟನೆ: ರಾತ್ರಿ ಕೆನಾಟ್ ಪ್ಲೇಸ್ ಬಳಿ ನಡೆದಿದ್ದೇನು? ಪಿಎಸ್‌ಐಗೆ ಗಾಯ

ದೆಹಲಿ ಸಿಜೆಪಿ ಪ್ರತಿಭಟನೆ: ರಾತ್ರಿ ಕೆನಾಟ್ ಪ್ಲೇಸ್ ಬಳಿ ನಡೆದಿದ್ದೇನು? ಪಿಎಸ್‌ಐಗೆ ಗಾಯ

ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು,  ಕೆನಾಟ್ ಪ್ಲೇಸ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಪಿಎಸ್‌ಐ ಒಬ್ಬರು ಗಾಯಗೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದ್ದು, ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.

1 Min read
Author : Mahmad Rafik
Published : Jul 23 2026, 08:48 AM IST
Share this Photo Gallery
  • FB
  • TW
  • Linkdin
  • Whatsapp
15
ಟಾಲ್‌ಸ್ಟಾಯ್ ಮಾರ್ಗದ ಕನ್ನಾಟ ಪ್ಯಾಲೇಸ್ ಬಳಿ ಕಲ್ಲು ತೂರಾಟ
Image Credit : X

ಟಾಲ್‌ಸ್ಟಾಯ್ ಮಾರ್ಗದ ಕನ್ನಾಟ ಪ್ಯಾಲೇಸ್ ಬಳಿ ಕಲ್ಲು ತೂರಾಟ

ನವದೆಹಲಿ: ಜಂತರ್‌ ಮಂತರ್ ಮೈದಾನದಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆ ಮುಂದುವರಿದಿದೆ. ಬುಧವಾರ ರಾತ್ರಿ ಸುಮಾರು 8.30ರ ವೇಳೆಗೆ ಟಾಲ್‌ಸ್ಟಾಯ್ ಮಾರ್ಗದ ಕೆನಾಟ್ ಪ್ಲೇಸ್ ಬಳಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಪಿಎಸ್‌ಐ ವಿವೇಕ್ ಭಗತ್ ಗಾಯ
Image Credit : X

ಪಿಎಸ್‌ಐ ವಿವೇಕ್ ಭಗತ್ ಗಾಯ

ಈ ಘಟನೆಯಲ್ಲಿ ಕನ್ನಾಟ್ ಪಿಎಸ್‌ಐ ವಿವೇಕ್ ಭಗತ್ ಗಾಯಗೊಂಡಿದ್ದಾರೆ. ಕೂಡಲೇ ಪೊಲೀಸರು ವಿವೇಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಮಯದಲ್ಲಿ ಪರಿಸ್ಥಿತಿ ಉದ್ವಿಘ್ನವಾಗಿದ್ದು, ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಘಟನೆಯಲ್ಲಿ ಕಲ್ಲು, ಬಾಟಲಿಗಳನ್ನು ತೂರಾಟ ನಡೆಸಲಾಗಿದೆ

Related Articles

Related image1
Now Playing
ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Related image2
CJP ಪ್ರತಿಭಟನೆ ಕುರಿತು ನೀಟ್​ ಟಾಪರ್​ ಅಚ್ಚರಿಯ​ ಹೇಳಿಕೆ: ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ
35
ಇಂಟರ್‌ನೆಟ್ ಸ್ಥಗಿತ
Image Credit : X

ಇಂಟರ್‌ನೆಟ್ ಸ್ಥಗಿತ

ಉತ್ತ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ನಮ್ಮ ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಅಹಿಂಸಾತ್ಮಕ ರೂಪದಲ್ಲಿಯೇ ಮುಂದುವರಿಯಲಿದೆ ಎಂದಿದ್ದಾರೆ. ಹಾಗೆಯೇ ಪ್ರತಿಭಟನಾ ಸ್ಥಳದ ವ್ಯಾಪ್ತಿಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ದೀಪ್ಕೆ ಆರೋಪಿಸಿದ್ದಾರೆ. ಸರ್ಕಾರ ನಮ್ಮ ಚಳುವಳಿ ಮೇಲೆ ಮತ್ತೊಂದು ದಮನಕಾರಿ ಕ್ರಮ ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ ಎಂದು ಅಭಿಜಿತ್ ದೀಪ್ಕೆ ಗಂಭೀರ ಆರೋಪವನ್ನು ಮಾಡಿದ್ದಾರೆ.

45
ದೆಹಲಿಯ 16 ಮೆಟ್ರೋ ನಿಲ್ದಾಣ ಬಂದ್
Image Credit : x.com/CJP_for_India

ದೆಹಲಿಯ 16 ಮೆಟ್ರೋ ನಿಲ್ದಾಣ ಬಂದ್

ಮತ್ತೊಂದೆಡೆ ದೆಹಲಿಯ ಜಂತರ್‌ ಮಂತರ್‌ ಅನಾಮಧೇಯರು ಬುಕ್ ಮಾಡಿರುವ ಆಹಾರ ನಿರಂತರವಾಗಿ ಬರುತ್ತಿದೆ. ಮುಂಬೈ, ಕೋಲ್ಕತ್ತಾ ಸೇರಿದಂತೆ ದೂರದ ಜನರು ಪ್ರತಿಭಟನೆಯ ಬೆಂಬಲವಾಗಿ ಜಂತರ್‌ ಮಂತರ್ ನಲ್ಲಿರುವ ವಿದ್ಯಾರ್ಥಿಗಳಿಗೆ ಆಹಾರ ಬುಕ್ ಮಾಡಿ ಕಳುಹಿಸುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿವೆ. ಇತ್ತ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿಯ 16 ಮೆಟ್ರೋ ನಿಲ್ದಾಣಗಳನ್ನು ಇಂದೂ ಸಹ ಬಂದ್ ಮಾಡಲಾಗಿದೆ.

55
ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್
Image Credit : X

ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್

ಉಪವಾಸ ಸತ್ಯಾಗ್ರಹದಲ್ಲಿರುವ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡುವುದಿಲ್ಲ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಬೇಕು. ಸರ್ಕಾರದಿಂದ ಈ ಭರವಸೆ ಸಿಕ್ಕರ ಉಪವಾಸ ಅಂತ್ಯಗೊಳಿಸೋದಾಗಿ ಸೋನಂ ವಾಂಗ್ಚುಕ್ ಹೇಳಿದ್ದಾರೆ. ಇತ್ತ ಬಾಲಿವುಡ್ ನಟ ಸಲ್ಮಾನ್ ಖಾನ್ ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಜಿರಳೆ ಜನತಾ ಪಾರ್ಟಿ
ಅಭಿಜಿತ್ ದಿಪಕೆ
ದೆಹಲಿ
ಧರ್ಮೇಂದ್ರ ಪ್ರಧಾನ್
ಸೋನಮ್ ವಾಂಗ್ಚುಕ್
Latest Videos
Recommended Stories
Recommended image1
ನೀಟ್ ವಿವಾದ: ಪ್ರತಿಭಟನಾಕಾರರ ಜತೆ ಮಾತನಾಡಲು ಇಷ್ಟು ವಿಳಂಬವೇಕೆ? ಕೇಂದ್ರದ ವಿರುದ್ಧ ಸಿಡಿದೆದ್ದ ಕೆ.ಅಣ್ಣಾಮಲೈ
Recommended image2
ನೀಟ್ ಹಗರಣ: ಕೊನೆಗೂ ಮೌನ ಮುರಿದ ಮೋದಿ, ತಪ್ಪಿತಸ್ಥರಿಗೆ ಕಾದಿದೆ ಶಾಕ್..!
Recommended image3
ರಾಷ್ಟ್ರೀಯ ಹೆದ್ದಾರಿಗಳ ಮೃತ್ಯುಪಾಶ: 3 ವರ್ಷಗಳಲ್ಲಿ 37 ಸಾವಿರಕ್ಕೂ ಹೆಚ್ಚು ಜನರ ಬಲಿ; ಕರ್ನಾಟಕಕ್ಕೆ 3ನೇ ಸ್ಥಾನ!
Related Stories
Recommended image1
Now Playing
ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Recommended image2
CJP ಪ್ರತಿಭಟನೆ ಕುರಿತು ನೀಟ್​ ಟಾಪರ್​ ಅಚ್ಚರಿಯ​ ಹೇಳಿಕೆ: ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved