MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಗೆಳೆಯರೊಂದಿಗೆ ವಾಕ್ ಮಾಡ್ತಿದ್ದ CRPF ಯೋಧನ ಹತ್ಯೆ: ಕನ್ವರ್ ಯಾತ್ರೆಯಲ್ಲಿ ನಡೆದಿತ್ತು ಜಗಳ

ಗೆಳೆಯರೊಂದಿಗೆ ವಾಕ್ ಮಾಡ್ತಿದ್ದ CRPF ಯೋಧನ ಹತ್ಯೆ: ಕನ್ವರ್ ಯಾತ್ರೆಯಲ್ಲಿ ನಡೆದಿತ್ತು ಜಗಳ

ಹರಿಯಾಣದ ಸೋನಿಪತ್‌ನಲ್ಲಿ ೨೯ ವರ್ಷದ ಸಿಆರ್‌ಪಿಎಫ್ ಯೋಧ ಕೃಷ್ಣ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕನ್ವರ್ ಯಾತ್ರೆಯ ವೇಳೆ ಇಬ್ಬರು ಯುವಕರೊಂದಿಗೆ ಜಗಳವಾದ ಬಳಿಕ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

1 Min read
Mahmad Rafik
Published : Jul 28 2025, 03:15 PM IST| Updated : Jul 28 2025, 05:11 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : X

ಸೋನಿಪತ್: ಹರಿಯಾಣದ ಸೋನಿಪತ್‌ ನಗರದಲ್ಲಿ 29 ವರ್ಷದ ಸಿಆರ್‌ಪಿಎಸ್ ಯೋಧನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಖೇಡಿ ದಮ್ಕನ್ ಗ್ರಾಮದ ನಿವಾಸಿಯಾಗಿರುವ ಯೋಧ ಕೃಷ್ಣ ಅವರನ್ನು ಹತ್ಯೆ ಮಾಡಲಾಗಿದೆ. ಮೃತ ಯೋಧನ ತಂದೆ ಬಲವಂತ್ ದೂರು ನೀಡಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸಿಪಿ ರಿಷಿಕಾಂತ್ ಮಾಹಿತಿ ನೀಡಿದ್ದಾರೆ.

25
Image Credit : Asianet News

ಕನ್ವರ್ ಯಾತ್ರೆ ವೇಳೆ ಇಬ್ಬರು ಯುವಕರೊಂದಿಗೆ ಸಿಆರ್‌ಪಿಎಫ್‌ ಯೋಧ ಕೃಷ್ಣ ಜಗಳ ಮಾಡಿಕೊಂಡಿದ್ದರು. ನಮ್ಮ ನಾಲ್ಕು ತಂಡ ಆರೋಪಿಗಳ ಪತ್ತೆಗಾಗಿ ಕಾರ್ಯಚರಣೆ ನಡೆಸುತ್ತಿದೆ. ಸಿಆರ್‌ಪಿಎಫ್‌ ಯೋಧನಾಗಿದ್ದ ಕೃಷ್ಣ, ಚಂಡೀಗಢನಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಎಸಿಪಿ ರಿಷಿಕೇಷ್ ಹೇಳಿದ್ದಾರೆ.

Related Articles

Related image1
22 ದಿನಗಳ ಬಳಿಕ ಪಾಕಿಸ್ತಾನದ ವಶದಲ್ಲಿದ್ದ BSF ಯೋಧ ಬಿಡುಗಡೆ
Related image2
ನಿದ್ದೆ, ವಿರಾಮ ನೀಡದೆ ಯೋಧ ಪೂರ್ಣಂ ಶಾಗೆ ಪಾಕ್‌ನಲ್ಲಿ ಚಿತ್ರಹಿಂಸೆ, ಪಾಪಿಸ್ತಾನಿಗಳ ಕೃತ್ಯ ಬಯಲು
35
Image Credit : ChatGPT

ಸಿಆರ್‌ಪಿಎಫ್ ಯೋಧ ಕೃಷ್ಣ ಜುಲೈ 16 ಮತ್ತು 17ರಂದು ರಜೆ ಪಡೆದು ಗ್ರಾಮಕ್ಕೆ ಆಗಮಿಸಿದ್ದರು. ಸ್ನೇಹಿತರೊಂದಿಗೆ ಕನ್ವರ್ ಯಾತ್ರೆಯಲ್ಲಿ ಭಾಗಿಯಾಗಿದ್ದರು. ಜುಲೈ 22ರಂದು ಕನ್ವರ್ ಯಾತ್ರೆಯಿಂದ ಹಿಂದುರುಗಿ ಬರುತ್ತಿರುವ ಸಂದರ್ಭದಲ್ಲಿ ತಮ್ಮದೇ ಗ್ರಾಮದ ಮತ್ತೊಂದು ಯುವಕರ ಗುಂಪಿನೊಂದಿಗೆ ಜಗಳ ಮಾಡಿಕೊಂಡಿದ್ದರು.

45
Image Credit : Asianet News

ಈ ಘಟನೆ ನಡೆದ ಮರುದಿನ ರಾತ್ರಿ ಗೆಳೆಯರೊಂದಿಗೆ ರಸ್ತೆ ಬದಿಯಲ್ಲಿ ಕೃಷ್ಣ ವಾಕ್ ಮಾಡುತ್ತಿದ್ದರು. ಈ ವೇಳೆ ಗಾಡಿಯಲ್ಲಿ ಬಂದ ಇಬ್ಬರು ಯುವಕರು, ಪಿಸ್ತೂಲ್‌ನಿಂದ ಕೃಷ್ಣನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಎದೆಗೆ ಗುಂಡು ತಗುಲಿದ್ದು, ಕೃಷ್ಣ ಸ್ಥಳದಲ್ಲಿಯೇ ಮೃತರಾಗಿದ್ದಾರೆ.

55
Image Credit : Getty

ಕೂಡಲೇ ಕೃಷ್ಣನ ಗೆಳೆಯರು ಕುಟುಂಬಸ್ಥರು ಮತ್ತು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ಸಂಬಂಧ ಅಜಯ್, ನಿಶಾಂತ್ ಮತ್ತು ಆನಂದ್ ಎಂಬ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ
ಕ್ರೈಮ್ ನ್ಯೂಸ್
ಭಾರತ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved