- Home
- News
- India News
- ದೆಹಲಿಗೆ 4.5 ಲಕ್ಷ ಡೋಸ್ ಲಸಿಕೆ ಪೂರೈಕೆ; 18 ವರ್ಷ ಮೇಲ್ಪಟ್ಟವರ ವ್ಯಾಕ್ಸಿನೇಶನ್ ದಿನಾಂಕ ಘೋಷಣೆ!
ದೆಹಲಿಗೆ 4.5 ಲಕ್ಷ ಡೋಸ್ ಲಸಿಕೆ ಪೂರೈಕೆ; 18 ವರ್ಷ ಮೇಲ್ಪಟ್ಟವರ ವ್ಯಾಕ್ಸಿನೇಶನ್ ದಿನಾಂಕ ಘೋಷಣೆ!
ದೆಹಲಿಯಲ್ಲಿ ಎದುರಾದ ಕೊರೋನಾ ವೈರಸ್ ಕೊರತೆ ನೀಗಿಸಲು ಕೇಂದ್ರ ಸರ್ಕಾರ ತಕ್ಷಣವೇ 4.5 ಲಕ್ಷ ಡೋಸ್ ಲಸಿಕೆ ಪೂರೈಸಿದೆ . ಲಸಿಕೆ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶ್ ಆರಂಭ ದಿನಾಂಕ ಘೋಷಿಸಿದ್ದಾರೆ.

<p>ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ 2ನೇ ಅಲೆ ಭೀಕರವಾಗಿದೆ. ಪರಿಣಾಮ ಆಸ್ಪತ್ರೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿದೆ. ಇದರ ನಡುವೆ ಲಸಿಕೆ ಕೊರತೆ ದೆಹಲಿಯನ್ನು ಇನ್ನಿಲ್ಲದಂತೆ ಕಾಡಿದೆ. ಇದೀಗ ಕೇಂದ್ರ ಸರ್ಕಾರ ದೆಹಲಿಗೆ ತುರ್ತು ವ್ಯಾಕ್ಸಿನ್ ಪೂರೈಕೆ ಮಾಡಿದೆ.</p>
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ 2ನೇ ಅಲೆ ಭೀಕರವಾಗಿದೆ. ಪರಿಣಾಮ ಆಸ್ಪತ್ರೆ ಬೆಡ್, ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿದೆ. ಇದರ ನಡುವೆ ಲಸಿಕೆ ಕೊರತೆ ದೆಹಲಿಯನ್ನು ಇನ್ನಿಲ್ಲದಂತೆ ಕಾಡಿದೆ. ಇದೀಗ ಕೇಂದ್ರ ಸರ್ಕಾರ ದೆಹಲಿಗೆ ತುರ್ತು ವ್ಯಾಕ್ಸಿನ್ ಪೂರೈಕೆ ಮಾಡಿದೆ.
<p>4.5 ಲಕ್ಷ ಡೋಸ್ ಲಸಿಕೆಯನ್ನು ಪೂರೈಸಲಾಗಿದೆ. ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸೋಮವಾರ(ಮೇ.3)ದಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>
4.5 ಲಕ್ಷ ಡೋಸ್ ಲಸಿಕೆಯನ್ನು ಪೂರೈಸಲಾಗಿದೆ. ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸೋಮವಾರ(ಮೇ.3)ದಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
<p>ರಿಜಿಸ್ಟ್ರೇಶನ್ ಮಾಡಿಕೊಂಡು ಲಸಿಕಾ ಕೇಂದ್ರಕ್ಕೆ ಸರದಿಯಂತೆ ಆಗಮಿಸಬೇಕು. ಜನಸಂದಣಿಗೆ ಅವಕಾಶವಿಲ್ಲ. ಕೊರೋನಾ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ. </p>
ರಿಜಿಸ್ಟ್ರೇಶನ್ ಮಾಡಿಕೊಂಡು ಲಸಿಕಾ ಕೇಂದ್ರಕ್ಕೆ ಸರದಿಯಂತೆ ಆಗಮಿಸಬೇಕು. ಜನಸಂದಣಿಗೆ ಅವಕಾಶವಿಲ್ಲ. ಕೊರೋನಾ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.
<p>ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಕಂಪನಿಗಳಿಂದ ದೆಹಲಿ ಸರ್ಕಾರ 67 ಲಕ್ಷ ಡೋಸ್ ಪೂರೈಕೆ ಮಾಡಲು ಆರ್ಡರ್ ಮಾಡಿದೆ. ಆದರೆ ಲಸಿಕೆ ಕೊರತೆ ಕಾರಣ ಪೂರೈಕೆಯಲ್ಲಿ ವಿಳಂಬವಾಗತ್ತಿದೆ.</p>
ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಕಂಪನಿಗಳಿಂದ ದೆಹಲಿ ಸರ್ಕಾರ 67 ಲಕ್ಷ ಡೋಸ್ ಪೂರೈಕೆ ಮಾಡಲು ಆರ್ಡರ್ ಮಾಡಿದೆ. ಆದರೆ ಲಸಿಕೆ ಕೊರತೆ ಕಾರಣ ಪೂರೈಕೆಯಲ್ಲಿ ವಿಳಂಬವಾಗತ್ತಿದೆ.
<p>ಕೊರೋನಾ ವೈರಸ್ ನಿಯಂತ್ರಿಸಲು ದೆಹಲಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಕೊರೋನಾ ನಿಯಮ ಪಾಲಿಸಿ ಎಚ್ಚರಿಕೆಯಿಂದ ಇರಬೇಕು ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.</p>
ಕೊರೋನಾ ವೈರಸ್ ನಿಯಂತ್ರಿಸಲು ದೆಹಲಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಕೊರೋನಾ ನಿಯಮ ಪಾಲಿಸಿ ಎಚ್ಚರಿಕೆಯಿಂದ ಇರಬೇಕು ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.
<p>ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ 4 ಲಕ್ಷ ದಾಟಿದೆ. ಇದರಲ್ಲಿ ದೆಹಲಿ, ಮುಂಬೈ ಹಾಗೂ ಬೆಂಗಳೂರಿನ ಕೊಡುಗೆ ಅಪಾರವಾಗಿದೆ. </p>
ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ 4 ಲಕ್ಷ ದಾಟಿದೆ. ಇದರಲ್ಲಿ ದೆಹಲಿ, ಮುಂಬೈ ಹಾಗೂ ಬೆಂಗಳೂರಿನ ಕೊಡುಗೆ ಅಪಾರವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ