ಟ್ರಾಕ್ಟರ್ ರ್ಯಾಲಿ ಹಿಂಸಾಚಾರದ ಹಿಂದೆ ಯಾರಿದ್ದಾರೆ? ಮಾಹಿತಿ ಬಹಿರಂಗ ಪಡಿಸಿದ ಕೇಜ್ರಿವಾಲ್!
ರೈತ ಸಂಘಟನೆಗಳು ಆಯೋಜಿಸಿದ ಟ್ರಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದ ತನಿಖೆ ನಡೆಯುತ್ತಿದೆ. ಗಣರಾಜ್ಯೋತ್ಸವ ದಿನ ನಡೆದ ಈ ಹಿಂಸಾಚಾರ ವಿಶ್ವದಲ್ಲಿ ಭಾರಿ ಸದ್ದು ಮಾಡಿತ್ತು. ಐತಿಹಾಸಿಕ ಕೆಂಪು ಕೋಟೆಗೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿ ಕಳಂಕ ತಂದಿದ್ದರು. ಈ ಕೃತ್ಯದ ಹಿಂದೆ ಯಾರಿದ್ದಾರೆ ಅನ್ನೋ ಸತ್ಯವನ್ನು ಪೊಲೀಸರು ಬಯಲಿಗೆಳೆಯುವ ಯತ್ನದಲ್ಲಿದ್ದಾರೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೆಲ ಮಹತ್ವದ ಮಾಹಿತಿ ಬಹಿರಂಗ ಪಡಿಸಿದ್ದಾರೆ.

<p>ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳು ಆಯೋಜಿಸಿದ ಟ್ರಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಇನ್ನು ದೇಶ ವಿರೋಧಿ ಚಟುವಟಿಕೆಯೂ ಇದೇ ಟ್ರಾಕ್ಟರ್ ರ್ಯಾಲಿಯಲ್ಲಿ ನಡೆದಿತ್ತು</p>
ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳು ಆಯೋಜಿಸಿದ ಟ್ರಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಇನ್ನು ದೇಶ ವಿರೋಧಿ ಚಟುವಟಿಕೆಯೂ ಇದೇ ಟ್ರಾಕ್ಟರ್ ರ್ಯಾಲಿಯಲ್ಲಿ ನಡೆದಿತ್ತು
<p>ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಕೆಂಪು ಕೋಟೆಯ ಪಿಠೋಪಕರಣ ದ್ವಂಸಗೊಳಿಸಿದ್ದರು. ಕೆಂಪು ಕೋಟೆ ಹಿಂಸಾಚಾರದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.</p>
ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಕೆಂಪು ಕೋಟೆಯ ಪಿಠೋಪಕರಣ ದ್ವಂಸಗೊಳಿಸಿದ್ದರು. ಕೆಂಪು ಕೋಟೆ ಹಿಂಸಾಚಾರದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
<p>ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತರು. ವ್ಯವಸ್ಥಿತಿ ಷ್ಯಡ್ಯಂತ್ರಕ್ಕೆ ರೈತ ಪ್ರತಿಭಟನೆಯನ್ನು ಬಳಸಿಕೊಳ್ಳಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ</p>
ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತರು. ವ್ಯವಸ್ಥಿತಿ ಷ್ಯಡ್ಯಂತ್ರಕ್ಕೆ ರೈತ ಪ್ರತಿಭಟನೆಯನ್ನು ಬಳಸಿಕೊಳ್ಳಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ
<p>ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಮೋದಿ ಸರ್ಕಾರ ಪ್ರಕರಣ ದಾಖಲಿಸುತ್ತಿದೆ. ರೈತರನ್ನು ಜೈಲಿಗೆ ಕಳುಹಿಸುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>
ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಮೋದಿ ಸರ್ಕಾರ ಪ್ರಕರಣ ದಾಖಲಿಸುತ್ತಿದೆ. ರೈತರನ್ನು ಜೈಲಿಗೆ ಕಳುಹಿಸುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
<p>ಮೀರತ್ನಲ್ಲಿ ಆಯೋಜಿಸಲಾದ ಕಿಸಾನ್ ಮಹಾಪಂಚಾಯತ್ನಲ್ಲಿ ಪಾಲ್ಗೊಂಡ ಅರವಿಂದ್ ಕೇಜ್ರಿವಾಲ್, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.</p>
ಮೀರತ್ನಲ್ಲಿ ಆಯೋಜಿಸಲಾದ ಕಿಸಾನ್ ಮಹಾಪಂಚಾಯತ್ನಲ್ಲಿ ಪಾಲ್ಗೊಂಡ ಅರವಿಂದ್ ಕೇಜ್ರಿವಾಲ್, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
<p>ರೈತ ಪ್ರತಿಭಟನೆಗೆ ಆರಂಭದಿಂದಲೂ ಬೆಂಬಲ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ ಇದೀಗ ಬೃಹತ್ ಸಮಾವೇಶ ಮೂಲಕ ಪ್ರತಿಭಟನೆಯನ್ನು ಕಾವನ್ನು ಹೆಚ್ಚಿಸಲು ನಿರ್ಧರಿಸಿದೆ.</p>
ರೈತ ಪ್ರತಿಭಟನೆಗೆ ಆರಂಭದಿಂದಲೂ ಬೆಂಬಲ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ ಇದೀಗ ಬೃಹತ್ ಸಮಾವೇಶ ಮೂಲಕ ಪ್ರತಿಭಟನೆಯನ್ನು ಕಾವನ್ನು ಹೆಚ್ಚಿಸಲು ನಿರ್ಧರಿಸಿದೆ.
<p>ಕಿಸಾನ್ ಮಹಾಸಮ್ಮೇಳನ್ ಆಯೋಜಿಸಲು ಆಪ್ ನಿರ್ಧರಿಸಿದೆ. ಮಾರ್ಚ್ 21 ರಂದು ಆಮ್ ಆದ್ಮಿ ಪಕ್ಷ ಬೃಹತ್ ಸಮಾವೇಶ ಆಯೋಜಿಸಿದೆ.</p>
ಕಿಸಾನ್ ಮಹಾಸಮ್ಮೇಳನ್ ಆಯೋಜಿಸಲು ಆಪ್ ನಿರ್ಧರಿಸಿದೆ. ಮಾರ್ಚ್ 21 ರಂದು ಆಮ್ ಆದ್ಮಿ ಪಕ್ಷ ಬೃಹತ್ ಸಮಾವೇಶ ಆಯೋಜಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ