MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ವಿಮಾನ ಪ್ರಯಾಣಿಕರಿಗೆ ಹೊಸ ಸುರಕ್ಷತಾ ಮಾರ್ಗಸೂಚಿ ಪ್ರಕಟ, ಇನ್ಮೇಲೆ ಈ ವಸ್ತುಗಳನ್ನು ಒಯ್ಯುವಂತಿಲ್ಲ

ವಿಮಾನ ಪ್ರಯಾಣಿಕರಿಗೆ ಹೊಸ ಸುರಕ್ಷತಾ ಮಾರ್ಗಸೂಚಿ ಪ್ರಕಟ, ಇನ್ಮೇಲೆ ಈ ವಸ್ತುಗಳನ್ನು ಒಯ್ಯುವಂತಿಲ್ಲ

ವಿಮಾನ ಪ್ರಯಾಣಿಕರಿಗೆ ಹೊಸ ಸುರಕ್ಷತಾ ಮಾರ್ಗಸೂಚಿ ಪ್ರಕಟ, ಇದುವರೆಗೆ ಇದ್ದ ನಿರ್ಬಂಧಕ್ಕಿಂತ ಹೊಸ ಮಾರ್ಗಸೂಚಿಯಲ್ಲಿ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಪ್ರಯಾಣಿಕರು ವಿಮಾನ ಪ್ರಯಾಣದ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ.

1 Min read
Author : Chethan Kumar
Published : Jan 04 2026, 03:51 PM IST
Share this Photo Gallery
  • FB
  • TW
  • Linkdin
  • Whatsapp
16
ಹೊಸ ಸುರಕ್ಷತಾ ನೀತಿ ಪ್ರಕಟ
Image Credit : stockPhoto

ಹೊಸ ಸುರಕ್ಷತಾ ನೀತಿ ಪ್ರಕಟ

ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಎವಿಯೇಶನ್ (DGCA) ಇದೀಗ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿಮಾನ ಪ್ರಯಾಣದ ಸುರಕ್ಷತೆ ಹೆಚ್ಚಿಸಲು, ಪ್ರಯಾಣಕರ ಸುರಕ್ಷತೆಗಾಗಿ ಕೆಲ ತಿದ್ದುಪಡಿಗಳನ್ನು ಮಾಡಿ ಹೊಸ ಸುರಕ್ಷತಾ ನೀತಿ ಪ್ರಕಟಿಸಿದ್ದಾರೆ. ಹೊಸ ನಿಯಮದ ಪ್ರಕಾರ ಕೆಲ ವಸ್ತುಗಳು ವಿಮಾನ ಪ್ರಯಾಣದ ವೇಳೆ ನಿರ್ಬಂಧಿಸಲಾಗಿದೆ.

26
ಪವರ್ ಬ್ಯಾಂಕ್‌ಗೆ ನಿರ್ಬಂಧ
Image Credit : X

ಪವರ್ ಬ್ಯಾಂಕ್‌ಗೆ ನಿರ್ಬಂಧ

ಇಷ್ಟು ದಿನ ವಿಮಾನ ಪ್ರಯಾಣದಲ್ಲಿ ಮೊಬೈಲ್ ಚಾರ್ಜಿಂಗ್ ಮಾಡಲು ಪವರ್ ಬ್ಯಾಂಕ್ ಕೊಂಡೊಯ್ಯಲು ಅವಕಾಶವಿತ್ತು. ಆದರೆ ಹೊಸ ನೀತಿ ಪ್ರಕಾರ ಪವರ್ ಬ್ಯಾಂಕ್ ಕೊಂಡೊಯ್ಯಲು ಅವಕಾಶವಿಲ್ಲ. ವಿಮಾನ ಪ್ರಯಾಣದ ವೇಳೆ ಪವರ್ ಬ್ಯಾಂಕ್ ಇರಲೇಬಾರದು. ಪವರ್ ಬ್ಯಾಂಕ್‌ನಿಂದ ಅಪಾಯದ ಸಾಧ್ಯತೆ ಇರುವ ಕಾರಣ ಸುರಕ್ಷತಾ ನೀತಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಾಗಿದೆ.

Related Articles

Related image1
ಇಂಡಿಗೋ ಪ್ರಯಾಣಿಕರಿಗೆ 10 ಸಾವಿರ ರೂ ವೋಚರ್ ಆಫರ್, ಕ್ಲೈಮ್ ಮಾಡುವುದು ಹೇಗೆ?
Related image2
ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳನ್ನು ವಿಮಾನ ಹತ್ತಿಸಿದ್ದ ಗುರುವಿನ ವರ್ಗಾವಣೆ, ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು!
36
ಪವರ್ ಬ್ಯಾಂಕ್‌ನಿಂದ ಸಮಸ್ಯೆ ಏನು
Image Credit : Getty

ಪವರ್ ಬ್ಯಾಂಕ್‌ನಿಂದ ಸಮಸ್ಯೆ ಏನು

ವಿಮಾನ ಪ್ರಯಾಣದ ವೇಳೆ ಪ್ರಯಾಣಿಕರ ಮೊಬೈಲ್ ಚಾರ್ಜ್ ಮಾಡಿಕೊಳ್ಳಲು ಬಳಕೆ ಮಾಡುವ ಪವರ್ ಬ್ಯಾಂಕ್‌ ಸ್ಫೋಟಗೊಂಡ, ಹೊತ್ತಿ ಉರಿದ ಘಟನೆಗಳು ನಡೆದಿದೆ. ಹೀಗಾಗಿ ಪವರ್ ಬ್ಯಾಂಕ್ ವಿಮಾನ ಪ್ರಯಾಣದ ಸುರಕ್ಷತೆಗೆ ಸವಾಲಾಗಿದೆ. 2025ರ ಸೆಪ್ಟೆಂಬರ್ ತಿಂಗಳಲ್ಲಿ ಈಕುರಿತು ಡಿಜಿಸಿಎ ನಿರ್ಧಾರ ಕೈಗೊಂಡಿತ್ತು. ಇದೀಗ ಹೊಸ ಮಾರ್ಗಸೂಚಿಯಲ್ಲಿ ಪ್ರಕಟಗೊಂಡಿದೆ.

46
ಪ್ರಯಾಣಿಕರ ತಪಾಸಣೆ ಮತ್ತಷ್ಟು ಬಿಗಿ
Image Credit : Getty

ಪ್ರಯಾಣಿಕರ ತಪಾಸಣೆ ಮತ್ತಷ್ಟು ಬಿಗಿ

ಪ್ರಯಾಣಿಕರ ತಪಾಸಣೆ ಮತ್ತಷ್ಟು ಬಿಗಿಗೊಳ್ಳುತ್ತಿದೆ. ಇದು ಸುರಕ್ಷತಾ ನೀತಿಯ ಭಾಗವಾಗಿದೆ. ಹೀಗಾಗಿ ಪ್ರಯಾಣಿಕರು ಸಹಕರಿಸಬೇಕು ಎಂದು ಡಿಜಿಸಿಎ ಸೂಚಿಸಿದೆ. ಇದೇ ವೇಳೆ ಭದ್ರತಾ ಪಡೆಗಳಿಗೂ ಹೊಸ ವಿಧಾನಗಳ ಸುರಕ್ಷತಾ ತಪಾಸಣೆ ಕುರಿತು ತರಬೇತಿಗೆ ಸೂಚನೆ ನೀಡಲಾಗಿದೆ.

56
ಎಲ್ಲಾ ವಿಮಾನ ನಿಲ್ದಾಣದಲ್ಲಿ ಹೊಸ ಮಾರ್ಗಸೂಚಿ ಪ್ರಕಟ
Image Credit : Getty

ಎಲ್ಲಾ ವಿಮಾನ ನಿಲ್ದಾಣದಲ್ಲಿ ಹೊಸ ಮಾರ್ಗಸೂಚಿ ಪ್ರಕಟ

ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತಾ ಮಾರ್ಗಸೂಚಿ ಪ್ರಕಟಿಸಲು ಡಿಜಿಸಿಎ ಸೂಚಿಸಿದೆ. ಇದೇ ವೇಳೆ ಪ್ರಯಾಣಿಕರಿಗೆ ಈ ಕುರಿತು ಜಾಗೃತಿ ಮೂಡಿಸಲು ಸೂಚಿಸಲಾಗಿದೆ. ವಿಮಾನ ಪ್ರಯಾಣದ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ನಿಯಮಗಳ ಕುರಿತು ತಿಳಿ ಹೇಳಲು ಸೂಚಿಸಲಾಗಿದೆ.

66
ಸುರಕ್ಷತೆಯಲ್ಲಿ ರಾಜಿ ಇಲ್ಲ
Image Credit : ANI

ಸುರಕ್ಷತೆಯಲ್ಲಿ ರಾಜಿ ಇಲ್ಲ

ಡಿಜಿಸಿಎ ಸುರಕ್ಷತಾ ಮಾರ್ಗಸೂಚಿ ಕುರಿತು ಸ್ಪಷ್ಟ ನೀತಿ ಪ್ರಕಟಿಸಿದೆ. ಪ್ರತಿಯೊಬ್ಬ ವಿಮಾನ ಪ್ರಯಾಣಿಕ ಈ ನೀತಿ ಅನುಸರಿಸಬೇಕು ಎಂದಿದೆ. ಇದೇ ವೇಳೆ ವಿಮಾನ ಸಿಬ್ಬಂದಿಗಳು, ಪೈಲೆಟ್, ಕೋ ಪೈಲೆಟ್ ಸರಿದಂತೆ ಇತರರಿಗೆ ಸುರಕ್ಷತಾ ನೀತಿಗಳ ಕುರಿತು ತರಬೇತಿ ನೀಡಲು ಸೂಚಿಸಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಭಾರತ ಸುದ್ದಿ
ದೆಹಲಿ
ಬೆಂಗಳೂರು

Latest Videos
Recommended Stories
Recommended image1
ರೈಲು ನಿಲ್ದಾಣದ ಪಾರ್ಕಿಂಗ್ ಏರಿಯಾದಲ್ಲಿ ಬೆಂಕಿ: 500 ಬೈಕ್‌ಗಳು ಬೆಂಕಿಗಾಹುತಿ
Recommended image2
ತಾಜ್ ಮಹಲ್ ಮುಂದೆ ಫೋಟೋ ತೆಗೆಯುವಂತೆ ಕೇಳಿದ ವೃದ್ಧ ದಂಪತಿ: ವೀಡಿಯೋಗೆ ಭಾವುಕರಾದ ನೆಟ್ಟಿಗರು
Recommended image3
ಆರೋಪಿಯ ಒಳಚಡ್ಡಿಯ ಬದಲಾವಣೆ: ಕೇರಳ ಶಾಸಕನಿಗೆ 3 ವರ್ಷ ಜೈಲು ಶಿಕ್ಷೆ
Related Stories
Recommended image1
ಇಂಡಿಗೋ ಪ್ರಯಾಣಿಕರಿಗೆ 10 ಸಾವಿರ ರೂ ವೋಚರ್ ಆಫರ್, ಕ್ಲೈಮ್ ಮಾಡುವುದು ಹೇಗೆ?
Recommended image2
ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳನ್ನು ವಿಮಾನ ಹತ್ತಿಸಿದ್ದ ಗುರುವಿನ ವರ್ಗಾವಣೆ, ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ವಿದ್ಯಾರ್ಥಿಗಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved