MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಭಾರತದ ಈ ರಾಜ್ಯದಲ್ಲಿ ಮಳೆ ಬಳಿಕ ಜಮೀನಿನಲ್ಲಿ ಸಿಗುತ್ತೆ ವಜ್ರ

ಭಾರತದ ಈ ರಾಜ್ಯದಲ್ಲಿ ಮಳೆ ಬಳಿಕ ಜಮೀನಿನಲ್ಲಿ ಸಿಗುತ್ತೆ ವಜ್ರ

ಮುಂಗಾರು ಮಳೆಯ ನಂತರ ಈ ಜಿಲ್ಲೆಯಲ್ಲಿ ವಜ್ರಗಳು ಸಿಗುತ್ತವೆ ಎಂಬ ನಂಬಿಕೆಯಿದೆ. ಜನರು ಮಳೆಯ ನಂತರ ಮಣ್ಣಿನಲ್ಲಿ ಹೊಳೆಯುವ ಕಲ್ಲುಗಳನ್ನು ಹುಡುಕುತ್ತಾರೆ ಮತ್ತು ಇವುಗಳನ್ನು ಮಾರಾಟ ಮಾಡುವ ಮೂಲಕ ಹಣ ಗಳಿಸುತ್ತಾರೆ ಎಂದು ವರದಿಯಾಗಿದೆ.

2 Min read
Author : Mahmad Rafik
Published : Jun 02 2025, 01:11 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : AI Generated Images

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ದೇಶದ ಈ ರಾಜ್ಯದಲ್ಲಿ ವಜ್ರ ಸಿಗುತ್ತವೆ. ಈ ಪ್ರದೇಶದಲ್ಲಿ ಅದೃಷ್ಟ ಪರೀಕ್ಷೆಗಾಗಿ ಸುತ್ತಲಿನ ಜನರು ಆಗಮಿಸುತ್ತಾರೆ. ಮಾನ್ಸೂನ ಮಳೆಗಾಗಿ ಈ ಗ್ರಾಮದ ಜನರು ಕಾಯುತ್ತಿರುತ್ತಾರೆ.

26
Image Credit : AI Generated Images

ಭಾರತ ಕೃಷಿ ಪ್ರದಾನ ದೇಶ. ರೈತರು ಮುಂಗಾರು ಮಳೆಗೂ ಮುನ್ನವೇ ಕೃಷಿ ಭೂಮಿಯನ್ನು ಉಳುಮೆಗಾಗಿ ಹದೆಗೊಳಿಸುತ್ತಾರೆ. ಮಳೆಯಾದ ನಂತರ ಬಿತ್ತನೆ ಕಾರ್ಯ ಆರಂಭಿಸುತ್ತಾರೆ. ಆದರೆ ಈ ಹಳ್ಳಿಯ ಜನರು ಮಾತ್ರ ಮಳೆ ಬರುವಿಕೆಗಾಗಿ ಕಾಯುತ್ತಿರುತ್ತಾರೆ. ಆದ್ರೆ ಕೃಷಿಗಾಗಿ ಅಲ್ಲ. ವಜ್ರಕ್ಕಾಗಿ ಮಳೆಯನ್ನು ಈ ಗ್ರಾಮದ ಜನರು ಕಾಯುತ್ತಿರುತ್ತಾರೆ.

36
Image Credit : AI Generated Images

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಮುಂಗಾರು ಮಳೆಯ ನಂತರ ವಜ್ರ ಸಿಗುತ್ತೆ ಎಂಬ ಮಾತಿದೆ. ಕರ್ನೂಲ್ ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಮಳೆಯ ನಂತರ ಮಣ್ಣಿನ ಪದರವನ್ನು ತೆರವುಗೊಳಿಸಿದಾಗ, ಜನರು ಅಲ್ಲಿ ಅಮೂಲ್ಯವಾದ ಕಲ್ಲುಗಳು ಕಾಣಿಸುತ್ತವೆ. ಈ ಕಲ್ಲುಗಳು ಸಂಜೆ ಹೊಳೆಯಲು ಆರಂಭಿಸುತ್ತವೆ. ಈ ಕಲ್ಲುಗಳಿಗೆ ಭಾರೀ ಬೇಡಿಕೆ ಸಹ ಇದೆ ಎಂದು ಹೇಳಲಾಗುತ್ತದೆ.

46
Image Credit : AI Generated Images

ಈ ಹಿಂದೆ ಕರ್ನೂಲ್ ಜಿಲ್ಲೆಯ ಮಹಿಳೆಯೊಬ್ಬರಿಗೆ 17 ಲಕ್ಷ ರೂ. ಮೌಲ್ಯದ ವಜ್ರ (ಹೊಳೆಯುವ ಕಲ್ಲು) ಸಿಕ್ಕಿದೆ ಎಂಬ ಸುದ್ದಿ ಬಂದಿತ್ತು. ಈ ಸುದ್ದಿಯ ನಂತರ ಕರ್ನೂಲ್ ಜಿಲ್ಲೆಯ ಹಳ್ಳಿಗಳಲ್ಲಿ ಹೊಳೆಯುವ ಕಲ್ಲಿಗಾಗಿ ಹುಡುಕಾಟ ಆರಂಭವಾಗಿದೆ. ಸುತ್ತಮುತ್ತಲಿನ ಜನರು ಸಹ ಇಲ್ಲಿಗೆ ಆಗಮಿಸಿ ಕಲ್ಲುಗಳಿಗಾಗಿ ಹುಡುಕಾಟ ನಡೆಸುತ್ತಾರೆ.

56
Image Credit : AI Generated Images

ಏನಿದರ ಸತ್ಯ?

ಕರ್ನೂಲ್ ಜಿಲ್ಲೆಯಲ್ಲಿ ಅನೇಕ ಗಣಿಗಳಿದ್ದು, ಇಲ್ಲಿ ಗಣಿಗಾರಿಕೆ ನಡೆಯುತ್ತಿರುತ್ತದೆ. ಗಣಿ ಪ್ರದೇಶದ ಸುತ್ತಲಿನ ಭಾಗದಲ್ಲಿ ಮಳೆಯ ನಂತರ ಭೂಮೇಲ್ಭಾಗದ ಮಣ್ಣು ಕೊಚ್ಚಿಕೊಂಡು ಹೋದ ಬಳಿಕ ಇಲ್ಲಿ ಅತ್ಯಮೂಲ್ಯ ಬೆಲೆಬಾಳುವ ಹೊಳೆಯುವ ಕಲ್ಲು (ವಜ್ರ) ಕಾಣಿಸುತ್ತವೆ ಎಂದು ಈ ಭಾಗದ ಜನರು ಹೇಳುತ್ತಾರೆ. ಇಲ್ಲಿಯ ಜನರು ಮಳೆಯಾದ ನಂತರ ಮಣ್ಣು ತೆಗೆದು ಹೊಳೆಯುವ ಕಲ್ಲುಗಳಿಗಾಗಿ ಶೋಧ ನಡೆಸುತ್ತಾರೆ. ಇಲ್ಲಿ ಸಿಗುವ ಕಲ್ಲುಗಳನ್ನು ಮಾರಾಟ ಮಾಡಿ ಜನರು ಹಣ ಸಂಪಾದಿಸಿದ್ದಾರೆ ಎಂದು ವರದಿಯಾಗಿದೆ.

66
Image Credit : AI Generated Images

ಆಕಾಶದಿಂದ ವಜ್ರದ ಮಳೆ ಆಗುತ್ತಾ?

ವಜ್ರಗಳು ಆಕಾಶದಿಂದ ಮಳೆಯಾಗುವುದಿಲ್ಲ. ಇಲ್ಲಿಯವರೆಗೆ ಎಲ್ಲಿಯೂ ವಜ್ರದ ಮಳೆಯಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಭಾರತದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಕರ್ನೂಲ್ ಮತ್ತು ಅನಂತಪುರ ಜಿಲ್ಲೆಗಳಲ್ಲಿ ಕಿಂಬರ್ಲೈಟ್ ಮತ್ತು ಲ್ಯಾಂಪ್ರೊಯಿಟ್ ಬಂಡೆಗಳ ಉಪಸ್ಥಿತಿ ಇದೆ, ಇದು ವಜ್ರ ನಿಕ್ಷೇಪಗಳನ್ನು ಸೂಚಿಸುತ್ತದೆ. ಅದಕ್ಕಾಗಿಯೇ ಮಳೆಯ ನಂತರ ಜನರು ಇಲ್ಲಿ ವಜ್ರಗಳು ಸಿಗುತ್ತವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಭಾರತ ಸುದ್ದಿ
ಆಂಧ್ರ ಪ್ರದೇಶ

Latest Videos
Recommended Stories
Recommended image1
ರೈಲಿನಲ್ಲಿ ಚೆಲ್ಲಿದ್ದ ಚಿಪ್ಸ್‌ನ್ನು ಪುಟ್ಟ ಮಗನ ಕೈಯಲ್ಲೇ ಹೆಕ್ಕಿಸಿ ಆತನಿಗೆ ಮೂಲಭೂತ ಕರ್ತವ್ಯದ ಪಾಠ ಮಾಡಿದ ಅಪ್ಪ
Recommended image2
ಐಷಾರಾಮಿ ಹೋಟೆಲ್‌ಗಿಂತಲೂ ಚಂದ ಈ ರೈಲ್ವೆ ಸ್ಟೇಷನ್ ವಾಸ್ತವ್ಯ! ನೀಲಗಿರಿ ತಪ್ಪಲಿನಲ್ಲಿ 'ರಾಜಮನೆತನದ' ಅನುಭವ!
Recommended image3
Shirtless Protest: ಶರ್ಟ್ ಬಿಚ್ಚಿ ಪ್ರತಿಭಟನೆ: ಇದೊಂದು ನಾಚಿಕೆಗೇಡು, ಕಾಂಗ್ರೆಸ್ ವಿರುದ್ಧ ನಿರ್ಮಲಾ ಗರಂ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved