MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಿದರೆ ಎಚ್ಚರ, 7 ರಾಜ್ಯದಲ್ಲಿ ಸಂಪೂರ್ಣ ನಿಷೇಧ!

ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಿದರೆ ಎಚ್ಚರ, 7 ರಾಜ್ಯದಲ್ಲಿ ಸಂಪೂರ್ಣ ನಿಷೇಧ!

ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸೋ ಬಗ್ಗೆ ನಿಯಮಗಳೇನು?  ಕೆಲ ರಾಜ್ಯಗಳಲ್ಲಿ ಗ್ರೀನ್ ಪಟಾಕಿಗಳಿಗೆ ಮಾತ್ರ ಅವಕಾಶ. ಆದರೆ 7 ರಾಜ್ಯಗಳಲ್ಲಿ ಪಟಾಕಿ ಸಂಪೂರ್ಣ ನಿಷೇಧಿಸಲಾಗಿದೆ. ಆ ರಾಜ್ಯಗಳು ಯಾವುದು, ಕರ್ನಾಟಕದಲ್ಲಿನ ಪರಿಸ್ಥಿತಿ ಏನು? 

2 Min read
Author : Chethan Kumar
Published : Oct 29 2024, 04:36 PM IST
Share this Photo Gallery
  • FB
  • TW
  • Linkdin
  • Whatsapp
16

ದೀಪಾವಳಿ ಹಬ್ಬದ ಸಂಭ್ರಮ ಶುರುವಾಗಿದೆ. ದೇಶಾದ್ಯಂತ ಸಡಗರ ತುಂಬಿದೆ. ಆದರೆ ಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹಲವು ರಾಜ್ಯಗಳು ಪಟಾಕಿ ಸಿಡಿಸುವುದು ನಿಷೇಧಿಸಿದೆ. ಕರ್ನಾಟಕದಲ್ಲಿ ಗ್ರೀನ್ ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ದಿನದಲ್ಲಿ 2 ಗಂಟೆ ಸಯಮ ಮಾತ್ರ ನೀಡಲಾಗಿದೆ. ಆದರೆ  ತಮಿಳುನಾಡು, ಪಂಜಾಬ್, ಹರಿಯಾಣ ಮತ್ತು ದೆಹಲಿಯಂತಹ ಹಲವು ಕಡೆಗಳಲ್ಲಿ ಮಾಲಿನ್ಯ ಹೆಚ್ಚುತ್ತಿದೆ. ಹೀಗಾಗಿ ಈ ಸ್ಥಳಗಳಲ್ಲಿ ಪಟಾಕಿಗಳ ಬಳಕೆಗೆ ನಿಷೇಧ ಹೇರಲಾಗಿದೆ. ಏಳು ರಾಜ್ಯಗಳಲ್ಲಿ ದೀಪಾವಳಿಗೆ ಗ್ರೀನ್ ಪಟಾಕಿಗಳನ್ನು ಮಾತ್ರ ಬಳಸಲು ಅವಕಾಶವಿದೆ.

26

ದೆಹಲಿಯಲ್ಲಿ ಚಳಿಗಾಲ ಶುರುವಾಗುತ್ತಿದ್ದಂತೆ ವಾಯು ಮಾಲಿನ್ಯ ಕೂಡಾ ಹೆಚ್ಚಾಗ್ತಿದೆ. ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಪಟಾಕಿಗಳ ಆನ್‌ಲೈನ್ ಡೆಲಿವರಿ, ತಯಾರಿಕೆ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ನಿಷೇಧ ಜನವರಿ 1, 2025 ರವರೆಗೆ ಜಾರಿಯಲ್ಲಿರುತ್ತದೆ. ದೀಪಾವಳಿಗೆ ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾಗಿರುವ ಕಾರಣ ಪಟಾಕಿ ನಿಷೇಧ ನೀತಿ ಕಟ್ಟು ನಿಟ್ಟಾಗಿದೆ. ಇನ್ನು ಹೊಸ ವರ್ಷದಲ್ಲೂ ಪಟಾಕಿ ಸಿಡಿಸುವ ಕಾರಣ ಪಟಾಕಿ ನಿಷೇಧ ಹೊಸ ವರ್ಷದ ವರೆಗೆ ಜಾರಿಯಲ್ಲಿರಲಿದೆ. 

36

ತಮಿಳುನಾಡಿನಲ್ಲಿ ದೀಪಾವಳಿಗೆ ಪಟಾಕಿ ಸಿಡಿಸಲು ಬೆಳಿಗ್ಗೆ 6 ರಿಂದ 7 ಮತ್ತು ಸಂಜೆ 7 ರಿಂದ 8 ರವರೆಗೆ ಸಮಯ ನಿಗದಿಪಡಿಸಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಜನರಿಗೆ ಜಾಗೃತಿ ಮೂಡಿಸುತ್ತಿದೆ. ಇತ್ತ ತಮಿಳುನಾಡಿನಲ್ಲಿ ಅತೀ ಹೆಟ್ಟಿನ ಪಟಾಕಿ ಫ್ಯಾಕ್ಟರಿಗಳಿಗೆ ಸಮಸ್ಯೆ ಎದುರಾಗಿದೆ. ಆದರೆ ಪರಿಸರ ಮಾಲಿನ್ಯದಿಂದಾಗಿ ತಮಿಳುನಾಡಿನಲ್ಲೂ ನಿಯಮ ಜಾರಿಯಾಗಿದೆ. 

46

ಬಿಹಾರದಲ್ಲೂ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಪಾಟ್ನಾ, ಗಯಾ, ಮುಜಾಫರ್‌ಪುರ ಮತ್ತು ಹಾಜಿಪುರದಲ್ಲಿ ಗ್ರೀನ್ ಪಟಾಕಿಗಳನ್ನೂ ಸೇರಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಮಾಲಿನ್ಯ ಮಾತ್ರವಲ್ಲ ಪಟಾಕಿ ಸಿಡಿಸುವ ವೇಳೆ ಸಂಭವಿಸುವ ಅವಘಡ ಕೂಡ ಸರ್ಕಾರದ ಮೇಲೆ ಹೆಚ್ಚಿನ ಒತ್ತಡ ತರಲಿದೆ. 

56

ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲೂ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಗ್ರೀನ್ ಪಟಾಕಿಗಳು ಸಾಮಾನ್ಯ ಪಟಾಕಿಗಳಿಗಿಂತ 30% ಕಡಿಮೆ ಮಾಲಿನ್ಯ ಉಂಟುಮಾಡುತ್ತವೆ. ಕೋಲ್ಕತ್ತಾ, ಮುಂಬೈ ನಗರದಲ್ಲಿ ಧೂಳು ಮಿಶ್ರಿತ ವಾತಾವರಣ ಹೊಂದಿದೆ. ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಹೀಗಾಗಿ ಪಟಾಕಿ ನಿಷೇಧ ಅತ್ಯಗತ್ಯವಾಗಿದೆ. 

66

ಪಂಜಾಬ್‌ನಲ್ಲೂ ಕಠಿಣ ನಿಯಮಗಳಿವೆ. ದೀಪಾವಳಿ ಮತ್ತು ಇತರ ಹಬ್ಬಗಳಲ್ಲಿ ಪಟಾಕಿ ಸಿಡಿಸಲು ಕೆಲವು ಗಂಟೆಗಳ ಕಾಲ ಮಾತ್ರ ಅವಕಾಶವಿದೆ. ಆದರೆ ಗ್ರೀನ್ ಪಟಾಕಿಗಳನ್ನು ಮಾತ್ರ ಬಳಸಬೇಕು. ಗ್ರೀನ್ ಪಟಾಕಿ ಸಂಪೂರ್ಣವಾಗಿ ವಾಯುಮಾಲಿನ್ಯಕ್ಕೆ ಉತ್ತರವಲ್ಲ. ಆದರೆ ಆಯಾ ರಾಜ್ಯಗಳ ಪರಿಸ್ಥಿತಿ ಅವಲೋಕಿಸಿ, ಸರ್ಕಾರಗಳು ಗ್ರೀನ್ ಪಟಾಕಿಗೆ ಅವಕಾಶ ನೀಡಿದೆ. ಹರಿಯಾಣದಲ್ಲಿ, ವಿಶೇಷವಾಗಿ ಗುರುಗ್ರಾಮದಲ್ಲಿ, ದೆಹಲಿಯಂತೆಯೇ ನಿಯಮಗಳಿವೆ. ದೀಪಾವಳಿ ಮತ್ತು ಗುರುಪೂರ್ಣಿಮೆಯಂದು ಕೆಲವು ಗಂಟೆಗಳ ಕಾಲ ಗ್ರೀನ್ ಪಟಾಕಿ ಸಿಡಿಸಬಹುದು 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.

Latest Videos
Recommended Stories
Recommended image1
India News Live: ಇಂದು ಮುಂಬೈ ಪಾಲಿಕೆ ಚುನಾವಣೆಯ ಮತ ಎಣಿಕೆ, ಯಾರಿಗೆ ಗೆಲುವು?
Recommended image2
ಮಸ್ಕತ್ ತಲುಪಿದ ಎಂಜಿನ್‌ ಇಲ್ಲದ ಭಾರತದ ನೌಕೆ!
Recommended image3
ಮುಂಬೈ ಪಾಲಿಕೆ ಚುನಾವಣೆಯಲ್ಲಿ ಅಳಿಸದ ಇಂಕ್‌ ಅಳಿಸಿದ ವಿವಾದ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved