MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಅಧಿಕಾರ ಸ್ವೀಕಾರಕ್ಕೂ ಮುನ್ನವೇ ನಟ ವಿಜಯ್‌ಗೆ ಬಿಗ್ ಶಾಕ್! ಕೋರ್ಟ್ ಮೆಟ್ಟಿಲೇರಿದ ನಾಯಕ!

ಅಧಿಕಾರ ಸ್ವೀಕಾರಕ್ಕೂ ಮುನ್ನವೇ ನಟ ವಿಜಯ್‌ಗೆ ಬಿಗ್ ಶಾಕ್! ಕೋರ್ಟ್ ಮೆಟ್ಟಿಲೇರಿದ ನಾಯಕ!

ತಮಿಳುನಾಡು ರಾಜಕೀಯದಲ್ಲಿ ಹೈಡ್ರಾಮಾ! ತಿರುಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಿಂದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿ ಗೆದ್ದಿರುವುದನ್ನು ಪ್ರಶ್ನಿಸಿ ಡಿಎಂಕೆ ಮಾಜಿ ಸಚಿವ ಪೆರಿಯಕರುಪ್ಪನ್ ಚೆನ್ನೈ ಹೈಕೋರ್ಟ್‌ನಲ್ಲಿ ಧಾವೆ ಹೂಡಿದ್ದಾರೆ. 

1 Min read
Author : Mahmad Rafik
Published : May 10 2026, 10:06 AM IST
Share this Photo Gallery
  • FB
  • TW
  • Linkdin
  • Whatsapp
15
ತಿರುಪತ್ತೂರು ವಿಧಾನಸಭಾ ಕ್ಷೇತ್ರ
Image Credit : Asianet News

ತಿರುಪತ್ತೂರು ವಿಧಾನಸಭಾ ಕ್ಷೇತ್ರ

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಶಿವಗಂಗಾ ಜಿಲ್ಲೆಯ ತಿರುಪತ್ತೂರು ಕ್ಷೇತ್ರದಲ್ಲಿ ಡಿಎಂಕೆ ಮಾಜಿ ಸಚಿವ ಪೆರಿಯಕರುಪ್ಪನ್, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪರವಾಗಿ ಶ್ರೀನಿವಾಸ ಸೇತುಪತಿ, ಎಐಎಡಿಎಂಕೆ ಮೈತ್ರಿಕೂಟದ ಬಿಜೆಪಿ ಬೆಂಬಲಿತ ಅಭ್ಯರ್ಥಿ ತಿರುಮಾರನ್ ಮತ್ತು ನಾಮ್ ತಮಿಳರ್ ಕಚ್ಚಿ ಪಕ್ಷದಿಂದ ರಮ್ಯಾ ಮೋಹನ್ ಕಣಕ್ಕಿಳಿದಿದ್ದರು. ಏಪ್ರಿಲ್ 23 ರಂದು ಮತದಾನ ನಡೆದು, ಮೇ 4 ರಂದು ಮತ ಎಣಿಕೆ ನಡೆಯಿತು. ಆರಂಭದಿಂದಲೂ ಡಿಎಂಕೆ ಮತ್ತು ಟಿವಿಕೆ ನಡುವೆ ತೀವ್ರ ಪೈಪೋಟಿ ಇತ್ತು.

Add Asianetnews Kannada as a Preferred SourcegooglePreferred
25
ಮಾಜಿ ಸಚಿವ ಪೆರಿಯಕರುಪ್ಪನ್
Image Credit : Asianet News

ಮಾಜಿ ಸಚಿವ ಪೆರಿಯಕರುಪ್ಪನ್

ಮತ ಎಣಿಕೆಯ ಪ್ರತಿ ಸುತ್ತಿನಲ್ಲೂ ಇಬ್ಬರೂ ಅಭ್ಯರ್ಥಿಗಳು ಅಲ್ಪ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸುತ್ತಿದ್ದರು. ಇದರಿಂದಾಗಿ ತೀವ್ರ ಕುತೂಹಲ ಕೆರಳಿತ್ತು. ಕೊನೆಯ ಸುತ್ತಿನ ಎಣಿಕೆ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ (EVM) ಹಠಾತ್ ದೋಷ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಇದರಿಂದಾಗಿ ಮತ ಎಣಿಕೆಯನ್ನು ಸ್ವಲ್ಪ ಸಮಯ ನಿಲ್ಲಿಸಿ ಮತ್ತೆ ಆರಂಭಿಸಲಾಯಿತು.

Related Articles

Related image1
ವಿಜಯ್‌ ಗೆಲುವಿನ ಬಳಿಕ ತ್ರಿಷಾ ರಾಜಕೀಯಕ್ಕೆ ಎಂಟ್ರಿ? ತಲೈವಾ ಪಾಲಿಟಿಕ್ಸ್‌ನಲ್ಲಿ ಹೊಸ ಟ್ವಿಸ್ಟ್!
Related image2
ರಾಜಕೀಯದ ಹುಚ್ಚು ಹಿಡಿಸಿದ್ದ ಅಪ್ಪನ ವಿರುದ್ಧವೇ ತಿರುಗಿ ನಿಂತ ವಿಜಯ್, ತಂದೆ ಪಕ್ಷ ವಿರೋಧಿಸಿ, ಟಿವಿಕೆ ಕಟ್ಟಿದ ಕಥೆ!
35
ಚೆನ್ನೈ ಹೈಕೋರ್ಟ್‌ನಲ್ಲಿ ಪ್ರಕರಣ
Image Credit : chennai high court

ಚೆನ್ನೈ ಹೈಕೋರ್ಟ್‌ನಲ್ಲಿ ಪ್ರಕರಣ

ಅಂತಿಮವಾಗಿ, ಡಿಎಂಕೆ ಮಾಜಿ ಸಚಿವ ಪೆರಿಯಕರುಪ್ಪನ್ 83,374 ಮತಗಳನ್ನು ಮತ್ತು ಶ್ರೀನಿವಾಸ ಸೇತುಪತಿ 83,375 ಮತಗಳನ್ನು ಪಡೆದರು. ಹೀಗಾಗಿ ಟಿವಿಕೆ ಅಭ್ಯರ್ಥಿ ಕೇವಲ ಒಂದು ಮತದ ಅಂತರದಿಂದ ಗೆದ್ದಿದ್ದಾರೆ ಎಂದು ಘೋಷಿಸಲಾಯಿತು. ಇದರಲ್ಲಿ ಅಕ್ರಮ ನಡೆದಿದೆ ಎಂದು ಪೆರಿಯಕರುಪ್ಪನ್ ಆರೋಪಿಸಿ, ಚೆನ್ನೈ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
45
ವಿಶ್ವಾಸಮತ
Image Credit : Asianet News

ವಿಶ್ವಾಸಮತ

ಅಂಚೆ ಮತಗಳನ್ನು ಸರಿಯಾಗಿ ಪರಿಗಣಿಸಿಲ್ಲ ಮತ್ತು ಮರು ಎಣಿಕೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಪೆರಿಯಕರುಪ್ಪನ್ ತಮ್ಮ ಅರ್ಜಿಯಲ್ಲಿ ದೂರಿದ್ದಾರೆ. ಮತ ಎಣಿಕೆಯ ವಿಡಿಯೋ ದಾಖಲೆಗಳನ್ನು ಸಂರಕ್ಷಿಸಬೇಕೆಂದು ಅವರು ಕೋರಿದ್ದಾರೆ. ಅಷ್ಟೇ ಅಲ್ಲದೆ, ಮೇ 13 ರಂದು ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಶ್ರೀನಿವಾಸ ಸೇತುಪತಿ ಭಾಗವಹಿಸದಂತೆ ತಾತ್ಕಾಲಿಕ ತಡೆ ನೀಡಬೇಕೆಂದೂ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
55
ಇಂದು ತುರ್ತು ವಿಚಾರಣೆ
Image Credit : Asianet News

ಇಂದು ತುರ್ತು ವಿಚಾರಣೆ

ಈ ಪ್ರಕರಣದ ತುರ್ತು ವಿಚಾರಣೆಯನ್ನು ಇಂದು ಚೆನ್ನೈ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಎಲ್. ವಿಕ್ಟೋರಿಯಾ ಗೌರಿ ಮತ್ತು ಎನ್. ಸೆಂಥಿಲ್‌ಕುಮಾರ್ ಅವರಿದ್ದ ರಜಾಕಾಲದ ವಿಶೇಷ ಪೀಠ ನಡೆಸಲಿದೆ. ತಮಿಳುನಾಡಿನಲ್ಲಿ ವಿಜಯ್ ಅವರ ಹೊಸ ಸರ್ಕಾರ ರಚನೆಯಾಗುತ್ತಿರುವ ಹೊತ್ತಿನಲ್ಲೇ ಈ ಪ್ರಕರಣ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ತಮಿಳಗ ವೆಟ್ರಿ ಕಳಗಂ
ದಳಪತಿ ವಿಜಯ್
ತಮಿಳುನಾಡು

Latest Videos
Recommended Stories
Recommended image1
India Latest News Live: ಅಧಿಕಾರ ಸ್ವೀಕಾರಕ್ಕೂ ಮುನ್ನವೇ ನಟ ವಿಜಯ್‌ಗೆ ಬಿಗ್ ಶಾಕ್! ಕೋರ್ಟ್ ಮೆಟ್ಟಿಲೇರಿದ ನಾಯಕ!
Recommended image2
Makhanlal Sarkar: 98 ವರ್ಷದ ಮುಖರ್ಜಿ ಆಪ್ತನ ಪಾದ ಮುಟ್ಟಿ ಮೋದಿ ಗೌರವ!
Recommended image3
ಉಡುಪಿ ಗ್ರಾಪಂ ದೇಶಕ್ಕೇ ನಂಬರ್ ಒನ್, ಬಡತನರಹಿತ ವಿಭಾಗದಲ್ಲಿ ಮುದ್ರಾಡಿ ಗ್ರಾಪಂಗೆ ₹1 ಕೋಟಿಯ ಪ್ರಥಮ ಪ್ರಶಸ್ತಿ
Related Stories
Recommended image1
ವಿಜಯ್‌ ಗೆಲುವಿನ ಬಳಿಕ ತ್ರಿಷಾ ರಾಜಕೀಯಕ್ಕೆ ಎಂಟ್ರಿ? ತಲೈವಾ ಪಾಲಿಟಿಕ್ಸ್‌ನಲ್ಲಿ ಹೊಸ ಟ್ವಿಸ್ಟ್!
Recommended image2
ರಾಜಕೀಯದ ಹುಚ್ಚು ಹಿಡಿಸಿದ್ದ ಅಪ್ಪನ ವಿರುದ್ಧವೇ ತಿರುಗಿ ನಿಂತ ವಿಜಯ್, ತಂದೆ ಪಕ್ಷ ವಿರೋಧಿಸಿ, ಟಿವಿಕೆ ಕಟ್ಟಿದ ಕಥೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved