MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ

ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ

ಮದುವೆ ನಡೆಯಬೇಕಾದ್ರೆ ಕನಿಷ್ಠ ಅಂದ್ರೂ 7 ರಿಂದ 8 ಲಕ್ಷ ರೂಪಾಯಿ ಬೇಕಾಗುತ್ತದೆ. ಆದ್ರೆ ಸರ್ಕಾರದ ಯೋಜನೆ ಬಗ್ಗೆ ಸುಮಾರು ಜನರಿಗೆ ಗೊತ್ತಿಲ್ಲ. ಈ ಯೋಜನೆಯನ್ನು 2013 ರಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿದ್ದು, ಇಂದಿಗೂ ಚಾಲ್ತಿಯಲ್ಲಿದೆ.

1 Min read
Mahmad Rafik
Published : Dec 08 2025, 02:26 PM IST
Share this Photo Gallery
  • FB
  • TW
  • Linkdin
  • Whatsapp
15
ಮದುವೆಯಾದ್ರೆ ಸಿಗುತ್ತೆ ಹಣ
Image Credit : Getty

ಮದುವೆಯಾದ್ರೆ ಸಿಗುತ್ತೆ ಹಣ

ದೇಶದಲ್ಲಿ ಪ್ರತಿದಿನ ಲಕ್ಷಾಂತರ ಮದುವೆಗಳು ನಡೆಯುತ್ತಿರುತ್ತವೆ. ದಿನಾಂಕ ನಿಗದಿಯಾಗುತ್ತಿದ್ದಂತೆ ಕಲ್ಯಾಣಮಂಟಪ ಬುಕ್ಕಿಂಗ್ ಸೇರಿದಂತೆ ಹಲವು ಕೆಲಸಗಳು ಆರಂಭವಾಗುತ್ತವೆ. ಇಂದು ಮದುವೆ ನಡೆಯಬೇಕಾದ್ರೆ ಕನಿಷ್ಠ ಅಂದ್ರೂ 7 ರಿಂದ 8 ಲಕ್ಷ ರೂಪಾಯಿ ಬೇಕಾಗುತ್ತದೆ. ಆದ್ರೆ ಮದುವೆಯಾಗುವ ಜೋಡಿಗೆ 2.5 ಲಕ್ಷ ರೂಪಾಯಿ ನೀಡುತ್ತದೆ. ಯೋಜನೆ ಬಗ್ಗೆ ಸುಮಾರು ಜನರಿಗೆ ಗೊತ್ತಿಲ್ಲ. ಈ ಯೋಜನೆಯನ್ನು 2013 ರಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿದ್ದು, ಇಂದಿಗೂ ಚಾಲ್ತಿಯಲ್ಲಿದೆ.

25
ಏನಿದು 2.5 ಲಕ್ಷ ರೂಪಾಯಿ ಯೋಜನೆ?
Image Credit : Asianet News

ಏನಿದು 2.5 ಲಕ್ಷ ರೂಪಾಯಿ ಯೋಜನೆ?

ಈ ಯೋಜನೆಯನ್ನು Dr. Ambedkar Scheme for Social Integration through Inter-Caste Marriages ಎಂದು ಕರೆಯಲಾಗುತ್ತದೆ. ಡಾ. ಅಂಬೇಡ್ಕರ್ ಫೌಂಡೇಶನ್ ಯೋಜನೆ ನಡೆಸುತ್ತಿದ್ದು, ದಲಿತ ಸಮುದಾಯಕ್ಕೆ ಸೇರದ ಯುವಕ ಅಥವಾ ಮಹಿಳೆ ದಲಿತ ಸಮುದಾಯದಿಂದ ಯಾರನ್ನಾದರೂ ಮದುವೆಯಾದರೆ, ಆ ದಂಪತಿಗೆ ₹ 2.5 ಲಕ್ಷ ಆರ್ಥಿಕ ನೆರವು ಸಿಗುತ್ತದೆ.

Related Articles

Related image1
ಮದುವೆ ಬಳಿಕ ಹನಿಮೂನ್ ಕ್ಯಾನ್ಸಲ್ ಮಾಡಿದ ಸಮಂತಾ? ಈ ಹೊಸ ನಿರ್ಧಾರ ತಗೊಂಡು ಶಾಕ್ ಕೊಟ್ಟಿದ್ಯಾಕೆ?
Related image2
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
35
ಅರ್ಹತೆ
Image Credit : Getty

ಅರ್ಹತೆ

ಈ ಯೋಜನೆಯ ಲಾಭ ಪಡೆದುಕೊಳ್ಳಬೇಕಾದ್ರೆ ಒಬ್ಬ ಸಂಗಾತಿ ದಲಿತ ಸಮುದಾಯಕ್ಕೆ ಸೇರಿರಬೇಕು. ಜೋಡಿ ತಮ್ಮ ಮದುವೆಯನ್ನು ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ನೋಂದಾಯಿಸಬೇಕು. ಇಬ್ಬರಿಗೂ ಇದು ಮೊದಲ ಮದುವೆಯಾಗಿರಬೇಕು. ಮದುವೆಯಾದ ಒಂದು ವರ್ಷದೊಳಗೆ ಡಾ. ಅಂಬೇಡ್ಕರ್ ಪ್ರತಿಷ್ಠಾನಕ್ಕೆ ಅರ್ಜಿಯನ್ನು ಸಲ್ಲಿಸಬೇಕು.

45
ಹಣ ಸಿಗೋದು ಹೇಗೆ?
Image Credit : unsplash

ಹಣ ಸಿಗೋದು ಹೇಗೆ?

ಮದುವೆಯಾಗಿರುವ ಜೋಡಿ ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಈಗಾಗಲೇ ಆರ್ಥಿಕ ನೆರವು ಪಡೆದಿದ್ದರೆ ಮೊತ್ತವನ್ನು 2.5 ಲಕ್ಷದಿಂದ 1.5 ಲಕ್ಷಕ್ಕೆ ಕಡಿತಗೊಳಿಸಲಾಗುತ್ತದೆ. ದಂಪತಿಯ ಜಂಟಿ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತದಲ್ಲಿ 1 ಲಕ್ಷ ರೂ. ಹಣವನ್ನು ಎಫ್‌ಡಿ ಮಾಡಲಾಗುತ್ತದೆ. 3 ವರ್ಷದ ನಂತರ ಈ ಹಣವನ್ನು ಬಡ್ಡಿ ಸಮೇತ ಪಡೆದುಕೊಳ್ಳುತ್ತಾರೆ.

55
ಅರ್ಜಿ ಸಲ್ಲಿಕೆ
Image Credit : unsplash

ಅರ್ಜಿ ಸಲ್ಲಿಕೆ

ನೀವು ಅಂತರ್ಜಾತಿ ವಿವಾಹವಾಗಿದ್ದರೆ , ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು . ಅರ್ಜಿದಾರರು ತಮ್ಮ ಅರ್ಜಿಯನ್ನು ತಮ್ಮ ಸಂಸದ ಅಥವಾ ಶಾಸಕರ ಶಿಫಾರಸಿನೊಂದಿಗೆ ಡಾ. ಅಂಬೇಡ್ಕರ್ ಪ್ರತಿಷ್ಠಾನಕ್ಕೆ ಸಲ್ಲಿಸಬೇಕು. ಆಸಕ್ತ ಅರ್ಜಿದಾರರು ಜಿಲ್ಲಾಡಳಿತ ಅಥವಾ ರಾಜ್ಯ ಸರ್ಕಾರದ ಮೂಲಕವೂ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆಯ ಬಗ್ಗೆ ಎಲ್ಲಾ ವಿವರಗಳನ್ನು ambedkarfoundation.nic.in ನಲ್ಲಿಯೂ ಕಾಣಬಹುದು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮದುವೆ
ಸಂಬಂಧಗಳು
ಹಣ (Hana)

Latest Videos
Recommended Stories
Recommended image1
ಮಾಡೆಲ್ ಮಗಳ ಯಶಸ್ಸು: ಮಾಲ್‌ನಲ್ಲಿ ಬಿಲ್‌ಬೋರ್ಡ್ ಮೇಲೆ ಮಗಳ ಫೋಟೋ ನೋಡಿ ಭಾವುಕರಾದ ಪೋಷಕರು
Recommended image2
ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
Recommended image3
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ
Related Stories
Recommended image1
ಮದುವೆ ಬಳಿಕ ಹನಿಮೂನ್ ಕ್ಯಾನ್ಸಲ್ ಮಾಡಿದ ಸಮಂತಾ? ಈ ಹೊಸ ನಿರ್ಧಾರ ತಗೊಂಡು ಶಾಕ್ ಕೊಟ್ಟಿದ್ಯಾಕೆ?
Recommended image2
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved