MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ರೋಡಲ್ಲಿದ್ದ ಕಾರು ಜಖಂ!

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ರೋಡಲ್ಲಿದ್ದ ಕಾರು ಜಖಂ!

ಕೇದಾರನಾಥ ಯಾತ್ರೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ. ಯಾತ್ರಿಕರು ಸುರಕ್ಷಿತರಾಗಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ. ಡಿಜಿಸಿಎ ಘಟನೆಯ ತನಿಖೆ ಆರಂಭಿಸಿದೆ.

2 Min read
Gowthami K
Published : Jun 07 2025, 05:10 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : x

ಕೇದಾರನಾಥ ಧಾಮಕ್ಕೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ, ರುದ್ರಪ್ರಯಾಗ ಜಿಲ್ಲೆಯ ಗುಪ್ತಕಾಶಿ ಬಳಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಶನಿವಾರ ನಡೆದಿದೆ. ರಸ್ತೆ ಮೇಲೆಯೇ ಲ್ಯಾಂಡಿಂಗ್ ಆದ ಪರಿಣಾಮ ಅಲ್ಲಿಂದ ಕಾರೊಂದು ಜಖಂ ಆಗಿದೆ. ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುರಕ್ಷಿತವಾಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ. ಪೈಲಟ್‌ನ ತ್ವರಿತ ನಿರ್ಧಾರ ಮತ್ತು ಚಾಣಾಕ್ಷತೆ ಈ ಅಪಾಯದ ಸಂದರ್ಭದಲ್ಲಿಯೂ ಜೀವಗಳನ್ನು ರಕ್ಷಿಸಿತು.

27
Image Credit : x

ಉತ್ತರಾಖಂಡದ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಮಹಾನಿರ್ದೇಶಕ ಡಾ. ವಿ. ಮುರುಗೇಶನ್ ಮಾಹಿತಿ ನೀಡಿದ್ದು, ಈ ಘಟನೆ ರುದ್ರಪ್ರಯಾಗದ ಗುಪ್ತಕಾಶಿ ಪ್ರದೇಶದಲ್ಲಿ ಸಂಭವಿಸಿದೆ ಪೈಲಟ್ ಹಾರಾಟದ ವೇಳೆಯೇ ತಾಂತ್ರಿಕ ದೋಷವನ್ನು ಗಮನಿಸಿ ತಕ್ಷಣ ರಸ್ತೆಯಲ್ಲಿ ಲ್ಯಾಂಡಿಂಗ್ ಮಾಡಲು ನಿರ್ಧರಿಸಿದರು. ಆ ಸಮಯದಲ್ಲಿ ಹೆಲಿಕಾಪ್ಟರ್‌ನಲ್ಲಿ ಇದ್ದ ಎಲ್ಲರೂ ಸುರಕ್ಷಿತವಾಗಿ ಸ್ಥಳಾಂತರಗೊಂಡರು. ಕಾರಿಗೆ ಹಾನಿಯಾಗಿದರೂ, ಕಾರಿನಲ್ಲಿ ಯಾರೂ ಇರದ ಕಾರಣ ಮತ್ತೊಂದು ಅಪಾಯ ತಪ್ಪಿದೆ.

Related Articles

Related image1
ಕೇದಾರನಾಥ ಕ್ಷೇತ್ರದ ಕುರಿತು ಯಾರಿಗೂ ತಿಳಿಯದ ಅಚ್ಚರಿ ಮೂಡಿಸುವ ರಹಸ್ಯಗಳು
Related image2
ಭಾರೀ ವೆಚ್ಚದಲ್ಲಿ ಕೇದಾರನಾಥ, ಹೇಮಕುಂಡ ಸಾಹೀಬ್‌ ರೋಪ್‌ವೇ ಪ್ರಾಜೆಕ್ಟ್‌ಗೆ ಒಪ್ಪಿಗೆ ನೀಡಿದ ಕೇಂದ್ರ!
37
Image Credit : Social Media

ಈ ಕ್ರೆಸ್ಟೆಲ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ್ದ ಹೆಲಿಕಾಪ್ಟರ್ ರುದ್ರಪ್ರಯಾಗ ಜಿಲ್ಲೆಯ ಶಿರಸಿಯಿಂದ ಕೇದಾರನಾಥದತ್ತ ಯಾತ್ರಿಕರೊಂದಿಗೆ ಹೊರಟಿತ್ತು. ಹಾರಾಟದ ಸಮಯದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಪೈಲಟ್‌ ಅವರು ತಕ್ಷಣವೇ ಹೆಲಿಪ್ಯಾಡ್ ತಲುಪುವ ಪ್ರಯತ್ನವನ್ನು ಬಿಟ್ಟು, ಹತ್ತಿರದ ರಸ್ತೆಯಲ್ಲಿ ಸುರಕ್ಷಿತ ತುರ್ತು ಲ್ಯಾಂಡಿಂಗ್ ಮಾಡಲು ನಿರ್ಧರಿಸಿದರು. ಈ ಮುಂಜಾಗ್ರತಾ ಕ್ರಮದಿಂದ ಯಾವುದೇ ಅಪಾಯ ಸಂಭವಿಸದೆ ಎಲ್ಲರೂ ಸುರಕ್ಷಿತವಾಗಿ ಹೊರಬಂದರು. ಯಾವುದೇ ಗಾಯ ಅಥವಾ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಎಲ್ಲಾ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ವೃತ್ತಿಪರ ರೀತಿಯಲ್ಲಿ ನಿಭಾಯಿಸಲಾಗಿದೆ,” ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (UCADA) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

47
Image Credit : ANI

ಈ ಅಪಘಾತದ ಕುರಿತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಗೆ ತಕ್ಷಣ ಮಾಹಿತಿ ನೀಡಲಾಗಿದ್ದು, ಸಂಬಂಧಿತ ನಿಯಮಿತ ಪ್ರಕ್ರಿಯೆಗಳು ಪ್ರಾರಂಭವಾಗಿವೆ. ತಾಂತ್ರಿಕ ದೋಷದ ನಿಖರ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇತ್ತ, ಕೇದಾರನಾಥ ಶಟಲ್ ಸೇವೆಗಳು ಎಂದಿನಂತೆ ನಡೆಯುತ್ತಿದ್ದು, ಇತರ ಹೆಲಿಕಾಪ್ಟರ್ ಸೇವೆಗಳ ಮೇಲೆ ಈ ಘಟನೆಯು ಯಾವುದೇ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

57
Image Credit : Asianet News

ಡಿಜಿಸಿಎ ಅಧಿಕೃತ ಮಾಹಿತಿ

ಉತ್ತರಾಖಂಡದಲ್ಲಿ ಸಂಭವಿಸಿದ ಈ ತುರ್ತು ಲ್ಯಾಂಡಿಂಗ್ ಬಗ್ಗೆ ಡಿಜಿಸಿಎ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಕ್ರೆಸ್ಟೆಲ್ ಏವಿಯೇಷನ್‌ನ ಎಡಬ್ಲ್ಯು119 ಮಾದರಿಯ VT-RNK ನೋಂದಣಿಯ ಹೆಲಿಕಾಪ್ಟರ್ ಶನಿವಾರ ಬೆಳಿಗ್ಗೆ ಬಡಾಸು (ಶಿರಸಿ) ಹೆಲಿಪ್ಯಾಡ್‌ನಿಂದ ಮಧ್ಯಾಹ್ನ 12:52 ಕ್ಕೆ ಹೊರಟಿತು. ಕೆಲವೇ ನಿಮಿಷಗಳಲ್ಲಿ, ಪೈಲಟ್ ಕ್ಯಾಪ್ಟನ್ ಆರ್.ಪಿ.ಎಸ್. ಸೋಧಿ ಅವರು "ಕಲೆಕ್ಟಿವ್ ಕಂಟ್ರೋಲ್" ಎಂಬ ಪ್ರಮುಖ ನಿಯಂತ್ರಣ ಘಟಕದಲ್ಲಿ ತಾಂತ್ರಿಕ ದೋಷವಿದೆ ಎಂಬ ಶಂಕೆಯನ್ನು ವರದಿ ಮಾಡಿದರು.

67
Image Credit : Social Media

ಆ ದೋಷದ ಕಾರಣ, ಪೈಲಟ್ ಸಮೀಪದ ಭರಸು ಹೆಲಿಪ್ಯಾಡ್ ಬಳಿಯ ರಸ್ತೆ ಪ್ರದೇಶದಲ್ಲಿ ನಿಯಂತ್ರಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದರು. ಪ್ರಯಾಣಿಕರೆಲ್ಲರೂ ಸಂಪೂರ್ಣ ಸುರಕ್ಷಿತರಾಗಿದ್ದು, ಯಾವುದೇ ಶಾರೀರಿಕ ಗಾಯಗಳಾಗಿಲ್ಲ. ಆದರೆ, ಪೈಲಟ್‌ಗೆ ಲ್ಯಾಂಡಿಂಗ್ ಬಳಿಕ ಬೆನ್ನು ನೋವು ಕಾಣಿಸಿಕೊಂಡು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯ ಬಗ್ಗೆ ತಿಳಿದುಕೊಳ್ಳಲು ಡಿಜಿಸಿಎಯ ಉತ್ತರ ವಲಯದ ವಾಯು ಸುರಕ್ಷತಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅವರು ಘಟನೆಯ ಸ್ಥಳದಲ್ಲಿಯೇ ಪರಿಶೀಲನೆ ನಡೆಸುತ್ತಿದ್ದಾರೆ.

77
Image Credit : x

ಇದು ಇತ್ತೀಚೆಗೆ ಉತ್ತರಾಖಂಡದಲ್ಲಿ ಸಂಭವಿಸುತ್ತಿರುವ ಹೆಲಿಕಾಪ್ಟರ್ ಅಪಘಾತಗಳ ಸರಣಿಯಲ್ಲಿ ಇನ್ನೊಂದು ಘಟನೆಯಾಗಿದೆ. ಈ ಹಿಂದಿನ ಘಟನೆಗಳಲ್ಲಿ, ಮೇ 8ರಂದು ಉತ್ತರಕಾಶಿ ಜಿಲ್ಲೆಯಲ್ಲಿ ಭಾಗೀರಥಿ ನದಿಯ ಸಮೀಪ ಖಾಸಗಿ ಹೆಲಿಕಾಪ್ಟರ್ ಪತನಗೊಂಡು ಆರು ಜನರು ಸಾವಿಗೀಡಾಗಿದ್ದರು. ಆ ಅಪಘಾತವು ರಾಜ್ಯದ ವಿಮಾನಯಾನ ಭದ್ರತೆಯ ಕುರಿತಾಗಿ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿತ್ತು. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮಾಹಿತಿ ಪ್ರಕಾರ, ಆ ಸಂದರ್ಭದಲ್ಲಿ ಹೆಲಿಕಾಪ್ಟರ್ ಸುಮಾರು 200 ರಿಂದ 250 ಮೀಟರ್ ಆಳದ ಕಂದಕಕ್ಕೆ ಬಿದ್ದಿತ್ತು. ಪ್ರಯಾಣಿಕರಲ್ಲಿ ಮುಂಬೈ ಮತ್ತು ಆಂಧ್ರಪ್ರದೇಶದವರು ಸೇರಿದ್ದರು. ಆ ವಿಮಾನವನ್ನು ಕ್ಯಾಪ್ಟನ್ ರಾಬಿನ್ ಸಿಂಗ್ ಚಲಾಯಿಸುತ್ತಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಉತ್ತರಾಖಂಡ
ಭಾರತ ಸುದ್ದಿ

Latest Videos
Recommended Stories
Recommended image1
Now Playing
ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
Recommended image2
India News Live: Epstein Sex Scandal - 68 ಹೊಸ ಫೋಟೋ ರಿಲೀಸ್‌, ಮಹಿಳೆಯರ ಜೊತೆ ಬಿಲ್‌ಗೇಟ್ಸ್‌, ಸೆರ್ಗಿ ಬ್ರಿನ್‌!
Recommended image3
ಚುನಾವಣೆ ಸೋಲುತ್ತಲೇ ಬದಲಾಯ್ತು ಬುದ್ಧಿ: ನಾಸ್ತಿಕ ಸಿಪಿಎಂಗೆ ಈಗ ಅಯ್ಯಪ್ಪನೇ ಗತಿ!
Related Stories
Recommended image1
ಕೇದಾರನಾಥ ಕ್ಷೇತ್ರದ ಕುರಿತು ಯಾರಿಗೂ ತಿಳಿಯದ ಅಚ್ಚರಿ ಮೂಡಿಸುವ ರಹಸ್ಯಗಳು
Recommended image2
ಭಾರೀ ವೆಚ್ಚದಲ್ಲಿ ಕೇದಾರನಾಥ, ಹೇಮಕುಂಡ ಸಾಹೀಬ್‌ ರೋಪ್‌ವೇ ಪ್ರಾಜೆಕ್ಟ್‌ಗೆ ಒಪ್ಪಿಗೆ ನೀಡಿದ ಕೇಂದ್ರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved