- Home
- News
- India News
- ಕೆಲ ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಇಬ್ಬರೂ ಮಕ್ಕಳನ್ನು ಕಳೆದುಕೊಂಡ ಕುಟುಂಬ: ಅಣ್ಣನ ಹಾದಿ ಹಿಡಿದ ತಂಗಿ
ಕೆಲ ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಇಬ್ಬರೂ ಮಕ್ಕಳನ್ನು ಕಳೆದುಕೊಂಡ ಕುಟುಂಬ: ಅಣ್ಣನ ಹಾದಿ ಹಿಡಿದ ತಂಗಿ
ರಾಜಸ್ಥಾನದ ನಾಗುರ್ ಜಿಲ್ಲೆಯಲ್ಲಿ, 5ನೇ ತರಗತಿ ವಿದ್ಯಾರ್ಥಿನಿ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದು, ದುರಂತವೆಂದರೆ, ಕೆಲವೇ ತಿಂಗಳ ಹಿಂದೆ ಆಕೆಯ ಅಣ್ಣ ಕೂಡ ಇದೇ ರೀತಿ ಮೃತಪಟ್ಟಿದ್ದರು.

ಹೃದಯಾಘಾತಕ್ಕೆ 5ನೇ ತರಗತಿ ಬಾಲಕಿ ಬಲಿ
ದಿನಗಳ ಹಿಂದಷ್ಟೇ ಕರ್ತವ್ಯದ ವೇಳೆ 22ರ ಹರೆಯದ ಸೇನಾ ಕ್ಯಾಪ್ಟನ್ ಒಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಈಗ ರಾಜಸ್ಥಾನದಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಶಾಲಾ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. 5ನೇ ಕ್ಲಾಸ್ನಲ್ಲಿ ಓದುತ್ತಿದ್ದ 9 ವರ್ಷದ ಹುಡುಗಿ ದಿವ್ಯ ಸಾವನ್ನಪ್ಪಿದ ವಿದ್ಯಾರ್ಥಿನಿ. ಮೈದಾನದಲ್ಲಿ ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದು ಆಕೆ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: ಕೇರಳದ ತ್ರಿಶ್ಯೂರ್ ದೇಗುಲದ ಉತ್ಸವದಲ್ಲಿ ಆನೆಯ ರೌದ್ರಾವತಾರ: ಯುವಕನ ಎತ್ತಿ ಎಸೆದ ಆನೆ
ರಾಜಸ್ಥಾನದ ನಾಗುರ್ ಜಿಲ್ಲೆಯಲ್ಲಿ ಘಟನೆ
ರಾಜಸ್ಥಾನದ ನಾಗುರ್ ಜಿಲ್ಲೆಯಲ್ಲಿ ಈ ಫೆಬ್ರವರಿ 23ರಂದು ಈ ಘಟನೆ ನಡೆದಿದೆ. ಮುಂಜಾನೆ 7.48ರ ಸುಮಾರಿಗೆ ನಾಗುರ್ ಜಿಲ್ಲೆಯ ಗೊಟನ್ ನಗರದ ಗೊಟಲ್ನ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಬಾಲಕಿ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ದಿವ್ಯ ತಲನ್ಪುರದ ರಾಜೇಂದ್ರ ಬಾಪೀಡಿಯಾ ಎಂಬುವವರ ಪುತ್ರಿ.
ಇದನ್ನೂ ಓದಿ: ಸೊಬಗರಂತೆ ಬಂದು 10,000 ಮೌಲ್ಯದ ಒಳ ಉಡುಪು ಕದ್ದೊಯ್ದ ಮೂವರು ಮಹಿಳೆಯರು: ಸಿಸಿಟಿವಿ ದೃಶ್ಯ ವೈರಲ್
ಆಟವಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು
ಎಂದಿನಂತೆ ಬೇಗನೇ ಶಾಲೆಗೆ ತಲುಪಿದ ದಿವ್ಯ ಬೆಳಗಿನ ಪ್ರಾರ್ಥನೆಗೆ ಇನ್ನೂ ಸಮಯವಿದ್ದಿದ್ದರಿಂದ ದಿವ್ಯಳು ಸೇರಿದಂತೆ ಹಲವರು ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದರು. ಇದಕ್ಕಿದ್ದಂತೆ ದಿವ್ಯ ಎಡವಿ ಕುಸಿದು ಬಿದ್ದಿದ್ದು, ಬಳಿಕ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಶಾಲಾ ಸಿಬ್ಬಂದಿ ತಕ್ಷಣ ಆಕೆಯ ಸಹಾಯಕ್ಕೆ ಧಾವಿಸಿ ಬಂದು ಆಕೆಯ ಕುಟುಂಬಕ್ಕೆ ಮಾಹಿತಿ ನೀಡಿದರು. ಕೂಡಲೇ ಆಕೆಯನ್ನು ಗೋಟನ್ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.
ಇದನ್ನೂ ಓದಿ: ಮಹಿಳೆಯರ ಕಲಾಕೃತಿಯೂ ಸುರಕ್ಷಿತ ಅಲ್ಲ: ಬಾಲಕ ಮಾಡಿದ್ದೇನು? : ವೀಡಿಯೋ ವೈರಲ್
ಹೃದಯಾಘಾತದಿಂದ ಸಾವು
ವೈದ್ಯರ ಪ್ರಕಾರ, ದಿವ್ಯ ಅವರ ದೇಹದ ಮೇಲೆ ಯಾವುದೇ ಬಾಹ್ಯ ಗಾಯದ ಗುರುತುಗಳಿಲ್ಲ. ಪ್ರಾಥಮಿಕ ಅಂದಾಜಿನಲ್ಲಿ, ಸಾವಿಗೆ ಕಾರಣ ಹೃದಯಾಘಾತ ಎಂದು ಶಂಕಿಸಲಾಗಿದೆ. ದಿವ್ಯ ಅವರ ಕುಟುಂಬವು ಮಗಳ ಮರಣೋತ್ತರ ಪರೀಕ್ಷೆಗೆ ನಿರಾಕರಿಸಿತು. ಹೀಗಾಗಿ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿಲಾಗಿದೆ.
ಇದನ್ನೂ ಓದಿ: ಮೃತ ಮಹಿಳೆಯ ಗರ್ಭದಲ್ಲಿ ಅರಳಿದ ಜೀವ: ಗರ್ಭಕೋಶದ ಕಸಿ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
ಅಣ್ಣ ಅಭಿಷೇಕ್ ಕೂಡ ಇದೇ ರೀತಿ ಹೃದಯಾಘಾತಕ್ಕೆ ಬಲಿ
ಶಾಲಾ ನಿರ್ದೇಶಕಿ ರಾಮ್ಕುನ್ವರ್ ಓಲಾ ಮಾತನಾಡಿ, ದಿವ್ಯ ಶಾಲೆಗೆ ಬಂದು ಇತರ ಮಕ್ಕಳಂತೆ ತಾನು ಮೈದಾನದಲ್ಲಿ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೇವಲ ತಿಂಗಳ ಹಿಂದೆ ನಡೆದ ಇದೇ ರೀತಿಯ ಘಟನೆಯಲ್ಲಿ ದಿವ್ಯ ತನ್ನ ಸೋದರನನ್ನು ಕಳೆದುಕೊಂಡಿದ್ದಳು. ದಿವ್ಯಳಾ ಅಣ್ಣ ಅಭಿಷೇಕ್ ಕೂಡ ಸುಮಾರು 4 ತಿಂಗಳ ಹಿಂದೆ ಇದೇ ರೀತಿ ಸಾವನ್ನಪ್ಪಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಮಾರಾಟಕ್ಕಿಟ್ಟ ಹಣ್ಣುಗಳಿಗೆ ಇಲಿ ಪಾಷಾಣ ಸ್ಪ್ರೇ ಮಾಡ್ತಿದ್ದ ಇಬ್ಬರು ವ್ಯಾಪಾರಿಗಳ ಬಂಧನ
ತಿಂಗಳ ಅಂತರದಲ್ಲಿ ಇಬ್ಬರು ಮಕ್ಕಳ ಕಳೆದುಕೊಂಡ ಕುಟುಂಬದ ಆಕ್ರಂದನ
2025 ರ ಸೆಪ್ಟೆಂಬರ್ 9ರಂದು ಮನೆಯಲ್ಲಿ ಆಟವಾಡುತ್ತಿದ್ದಾಗ ದಿವ್ಯಾಳ ಅಣ್ಣ ಪ್ರಜ್ಞೆ ತಪ್ಪಿ ಬಿದ್ದಿದ್ದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ , ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಈಗ ದಿವ್ಯ ಅವರು ಕೂಡ ಸಾವನ್ನಪ್ಪಿದ್ದು, ಕೆಲ ತಿಂಗಳ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರು ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಇದನ್ನೂ ಓದಿ: ವಿಶ್ವದಲ್ಲೇ ಅತೀಹೆಚ್ಚು ಜನರಿಂದ ಪ್ರಧಾನಿ ಮೋದಿ ಇಸ್ರೇಲ್ಗೆ ಪಯಣಿಸಿದ ಏರ್ ಇಂಡಿಯಾ ಒನ್ ವಿಮಾನದ ಟ್ರ್ಯಾಕಿಂಗ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

