MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ತೈಲ ಶುದ್ಧೀಕರಣ ಘಟಕದಲ್ಲಿ ಬೆಂಕಿ ಅವಘಡ, ಪ್ರಧಾನಿ ಮೋದಿ ಉದ್ಘಾಟನಾ ಸಮಾರಂಭ ಮುಂದೂಡಿಕೆ

ತೈಲ ಶುದ್ಧೀಕರಣ ಘಟಕದಲ್ಲಿ ಬೆಂಕಿ ಅವಘಡ, ಪ್ರಧಾನಿ ಮೋದಿ ಉದ್ಘಾಟನಾ ಸಮಾರಂಭ ಮುಂದೂಡಿಕೆ

ತೈಲ ಶುದ್ಧೀಕರಣ ಘಟಕದಲ್ಲಿ ಬೆಂಕಿ ಅವಘಡ, ಪ್ರಧಾನಿ ಮೋದಿ ಉದ್ಘಾಟನಾ ಸಮಾರಂಭ ಮುಂದೂಡಿಕೆ, ರಾಜಸ್ಥಾನದ ಅತೀ ದೊಡ್ಡ ರಿಫೈನರಿ ಘಟಕದಲ್ಲಿನ ಅಗ್ನಿ ಅವಘಡ ನಿಯಂತ್ರಣಕ್ಕೆ ತರಲು 20 ಅಗ್ನಿಶಾಮಕ ದಳ ಹರಹಾಸ ಪಟ್ಟಿದೆ. 

1 Min read
Author : Chethan Kumar
Published : Apr 20 2026, 07:14 PM IST
Share this Photo Gallery
  • FB
  • TW
  • Linkdin
  • Whatsapp
15
ಅಗ್ನಿ ಅವಘಡದಿಂದ ಉದ್ಘಾಟನೆ ಮುಂದೂಡಿಕೆ
Image Credit : ANI

ಅಗ್ನಿ ಅವಘಡದಿಂದ ಉದ್ಘಾಟನೆ ಮುಂದೂಡಿಕೆ

ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್ 21 ರಂದು ಉದ್ಘಾಟನೆ ಮಾಡಬೇಕಿದ್ದ ರಾಜಸ್ಥಾನದ HRRL ರಿಫೈನರಿ ಘಟಕ ಇದೀಗ ಮುಂದೂಡಲಾಗಿದೆ. ದೇಶದ ಅತ್ಯಂತ ಸುಸಜ್ಜಿತ ಘಟಕದ ಉದ್ಘಾಟನೆಗೂ ಮೊದಲೇ ಅಗ್ನಿ ಅವಘಡದಿಂದ ಘಟಕದ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಬಲೋತ್ರದಲ್ಲಿ ತಲೆ ಎತ್ತಿ ನಿಂತಿರುವ ಈ ರಿಫೈನರಿ ಘಟಕದಲ್ಲಿ ಇಂದು ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿತ್ತು. ತೈಲ ಘಟಕದ ಕಾರಣ ಬೆಂಕಿ ಕೆನ್ನಾಲಗೆ ವೇಗವಾಗಿ ವ್ಯಾಪಸಿತ್ತು. 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಹಾಸ ಪಟ್ಟಿದೆ. ಈ ದುರ್ಘಟನೆಯಿಂದ ಪ್ರಧಾನಿ ಮೋದಿ ನಾಳೆ (ಏ.21) ಉದ್ಘಾಟಿಸಬೇಕಿದ್ದ ಈ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

25
ಮೋದಿ ಕಾರ್ಯಕ್ರಮ ಮುಂದೂಡಿಕೆ ಖಚಿತಪಡಿಸಿದ ಸಚಿವಾಲಯ
Image Credit : Devesh , वनवासी x

ಮೋದಿ ಕಾರ್ಯಕ್ರಮ ಮುಂದೂಡಿಕೆ ಖಚಿತಪಡಿಸಿದ ಸಚಿವಾಲಯ

ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆಯನ್ನು ಪೆಟ್ರೋಲಿಯಂ ಹಾಗೂ ಗ್ಯಾಸ್ ಸಚಿವಾಲಯ ಖಚಿತಪಡಿಸಿದೆ. HRRL ತೈಲ ಶುದ್ಧೀಕರಣ ಘಟಕದಲ್ಲಿ ನಡೆದ ಅಗ್ನಿ ಅವಘಡದಿಂದ ಎಪ್ರಿಲ್ 21ರ ಪ್ರಧಾನಿ ಮೋದಿ ಉದ್ಘಟನಾ ಕಾರ್ಯಕ್ರವನ್ನು ಮುಂದೂಡಲಾಗಿದೆ. ಕಾರ್ಯಕ್ರಮ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದಿದೆ.

Related Articles

Related image1
ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ
Related image2
ನಾಳೆ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿಯಲ್ಲಿ ಬೆಂಕಿ ಅವಘಡ, 20 ಅಗ್ನಿಶಾಮಕ ವಾಹನ ದೌಡು
35
ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಿಲ್ಲ
Image Credit : ANI

ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಿಲ್ಲ

ರಿಫೈನರಿ ಘಟಕದಲ್ಲಿನ ದಿಢೀರ್ ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಲವು ಕಾರ್ಮಿಕರು ನಾಳೆಯ ಉದ್ಘಾಟನಾ ಕಾರ್ಯಕ್ರಮದ ತಯಾರಿಯಲ್ಲಿದ್ದಾಗ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲರ್ಟ್ ನೀಡಲಾಗಿದೆ. ಹೀಗಾಗಿ ಕಾರ್ಮಿಕರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಇತ್ತ ಅಗ್ನಿಶಾಮಕ ದಳದ ಸಿಬ್ಬಂದಿಗಳು ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

45
ರಾಜಸ್ಥಾನಕ್ಕೆ ತೆರಳಬೇಕಿದ್ದ ಮೋದಿ
Image Credit : ANI

ರಾಜಸ್ಥಾನಕ್ಕೆ ತೆರಳಬೇಕಿದ್ದ ಮೋದಿ

ನಾಳೆ HRRL ಘಟಕ ಉದ್ಘಾಟನೆಗೆ ರಾಜಸ್ಥಾನಕ್ಕೆ ತೆರಳಬೇಕಿತ್ತು. ಆದರೆ ಕಾರ್ಯಕ್ರಮ ಮುಂದೂಡಿಕೆಯಾಗಿರುವ ಕಾರಣ ಮೋದಿ ರಾಜಸ್ಥಾನ ಪ್ರವಾಸ ರದ್ದಾಗಿದೆ. ಸದ್ಯ ಘಟಕದಲ್ಲಿ ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ತರಲಾಗಿದೆ. ತ್ವರಿತಗತಿಯಲ್ಲಿ ಲೋದೋಷ ಸರಿಪಡಿಸಲು ಅಧಿಕಾರಿಗಳು ಸೂಚಿಸಿದ್ದಾರೆ.

55
79,000 ಕೋಟಿ ವೆಚ್ಚದ ಘಟಕ
Image Credit : ANI

79,000 ಕೋಟಿ ವೆಚ್ಚದ ಘಟಕ

ಬರೋಬ್ಬರಿ 79 ಸಾವಿರ ಕೋಟಿ ರೂಪಾಯಿ ವೆಚ್ಚದ ಘಟಕ ಇದಾಗಿದೆ. ಈ ಘಟಕದಿಂದ ರಾಜಸ್ಥಾನ ಸರ್ಕಾರಕ್ಕೆ ಬರೋಬ್ಬರಿ 5000 ಕೋಟಿ ರೂಪಾಯಿ ವಾರ್ಷಿಕ ಆದಾಯ ಸಿಗಲಿದೆ. ಇನ್ನು ತೈಲ ಆಮದಿನಲ್ಲಿ ಭಾರತಕ್ಕೆ ಹೆಚ್ಚಿನ ಉಪಯೋಗಗಳಿವೆ. ಈ ಘಟಕದಿಂದ ಮುದ್ರಾ ಬಂದರಿಗೂ ನೇರ ಸಂಪರ್ಕ ಕಲ್ಪಿಸಲಾಗಿದೆ.

79,000 ಕೋಟಿ ವೆಚ್ಚದ ಘಟಕ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ರಾಜಸ್ಥಾನ
ಅಗ್ನಿ ಅವಘಡ
ಭಾರತ ಸುದ್ದಿ

Latest Videos
Recommended Stories
Recommended image1
ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೋಗಳ ಬೆಂಡೆತ್ತಿದ ಪೊಲೀಸರು
Recommended image2
Breaking News ನಾರಾಯಣಪುರ ಅರಣ್ಯದಲ್ಲಿ ವಿಮಾನ ಪತನ, ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು
Recommended image3
ನವವಿವಾಹಿತೆಯ ಸೀರೆ ಎಳೆದ ಕಿರಾತಕರು: ನಾಸಿಕ್ TCSನಲ್ಲಿ ಮತಾಂಧರ ಮತ್ತೊಂದು ಕಾಮಕಾಂಡ ತೆರೆದಿಟ್ಟ ಮಹಿಳಾ ಉದ್ಯೋಗಿ
Related Stories
Recommended image1
ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ
Recommended image2
ನಾಳೆ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿಯಲ್ಲಿ ಬೆಂಕಿ ಅವಘಡ, 20 ಅಗ್ನಿಶಾಮಕ ವಾಹನ ದೌಡು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved