MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಕಸ ಗುಡಿಸುವಾಗ 'ರಸ್ತೆಯಲ್ಲಿ ಸಿಕ್ಕ ಬಂಗಾರದ ಗಂಟ'ನ್ನು ಮಾಲೀಕನಿಗೆ ವಾಪಸ್ ಕೊಟ್ಟ ಪೌರ ಕಾರ್ಮಿಕ ಮಹಿಳೆ!

ಕಸ ಗುಡಿಸುವಾಗ 'ರಸ್ತೆಯಲ್ಲಿ ಸಿಕ್ಕ ಬಂಗಾರದ ಗಂಟ'ನ್ನು ಮಾಲೀಕನಿಗೆ ವಾಪಸ್ ಕೊಟ್ಟ ಪೌರ ಕಾರ್ಮಿಕ ಮಹಿಳೆ!

ಕಸ ಸ್ವಚ್ಛಗೊಳಿಸುವಾಗ ರಸ್ತೆ ಬದಿಯಲ್ಲಿ ಬಿದ್ದಿದ್ದ ಬರೋಬ್ಬರಿ 45 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಪೌರಕಾರ್ಮಿಕ ಮಹಿಳೆಯೊಬ್ಬರು ಪೊಲೀಸರಿಗೆ ಒಪ್ಪಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪೊಲೀಸರು ಬಂಗಾರದ ಗಂಟನ್ನು ಮಾಲೀಕರಿಗೆ ಒಪ್ಪಿಸಿದ್ದಾರೆ.

1 Min read
Author : Sathish Kumar KH
Published : Jan 13 2026, 11:22 AM IST
Share this Photo Gallery
  • FB
  • TW
  • Linkdin
  • Whatsapp
14
ಘಟನೆಯ ವಿವರ
Image Credit : Asianet News

ಘಟನೆಯ ವಿವರ

ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಪದ್ಮಾ ಎಂಬುವವರು ಭಾನುವಾರ ಬೆಳಿಗ್ಗೆ ಟಿ. ನಗರದ ಮುಪ್ಪತ್ತಮ್ಮನ್ ಕೋವಿಲ್ ರಸ್ತೆಯಲ್ಲಿ ಎಂದಿನಂತೆ ಕಸ ಗುಡಿಸುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಒಂದು ಪ್ಲಾಸ್ಟಿಕ್ ಕವರ್ ಅವರ ಗಮನ ಸೆಳೆಯಿತು. ಕುತೂಹಲದಿಂದ ಅದನ್ನು ತೆರೆದು ನೋಡಿದಾಗ ಪದ್ಮಾ ಅವರಿಗೆ ಶಾಕ್ ಕಾದಿತ್ತು. ಅದರಲ್ಲಿ ಬೃಹತ್ ಪ್ರಮಾಣದ ಚಿನ್ನದ ಆಭರಣಗಳಿದ್ದವು.

24
ಬಂಗಾರದ ಗಂಟನ್ನು ಮರಳಿಕೊಟ್ಟ ಮಹಿಳೆ
Image Credit : Twitter

ಬಂಗಾರದ ಗಂಟನ್ನು ಮರಳಿಕೊಟ್ಟ ಮಹಿಳೆ

ಸಾಮಾನ್ಯವಾಗಿ ಅಷ್ಟು ದೊಡ್ಡ ಮೊತ್ತದ ಚಿನ್ನ ಕಂಡಾಗ ಯಾರೇ ಆದರೂ ಆಸೆ ಪಡುವುದು ಸಹಜ. ಆದರೆ ಪದ್ಮಾ ಅವರು ಒಂದು ಕ್ಷಣವೂ ಯೋಚಿಸದೆ ನೇರವಾಗಿ ಪಾಂಡಿ ಬಜಾರ್ ಪೊಲೀಸ್ ಠಾಣೆಗೆ ತೆರಳಿ ಆ ಚೀಲವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆ ಚೀಲವನ್ನು ಪರಿಶೀಲಿಸಿದಾಗ ಅದರಲ್ಲಿ 45 ಸವರನ್ (ಸುಮಾರು 360 ಗ್ರಾಂ) ಚಿನ್ನದ ಆಭರಣಗಳಿರುವುದು ಪತ್ತೆಯಾಗಿದೆ. ಇದರ ಮಾರುಕಟ್ಟೆ ಮೌಲ್ಯ ಅಂದಾಜು 45 ಲಕ್ಷ ರೂಪಾಯಿಗಳಿಗೂ ಅಧಿಕ ಎನ್ನಲಾಗಿದೆ.

Related Articles

Related image1
ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನ ನಿಧಿಯಲ್ಲ ಎಂದ ಪುರಾತತ್ವ ಇಲಾಖೆ, ಕುಟುಂಬಕ್ಕೆ ಸಂಕಷ್ಟ! ಬಂಗಾರ ಮರಳಿಸುವಂತೆ ಊರವರ ಆಗ್ರಹ
Related image2
ಲಕ್ಕುಂಡಿ: ನಿಧಿ ಸಿಕ್ಕ ಜಾಗದಲ್ಲಿ ದೊಡ್ಡ ಸರ್ಪ ಎದ್ದಿದೆ, ಒಂದಲ್ಲ ಒಂದು ದಿನ ಕಚ್ಚುತ್ತೆ, ನಮಗೆ ಆ ಜಾಗ ಬೇಡವೆಂದ ಕುಟುಂಬ!
34
ಮಾಲೀಕನ ಪತ್ತೆ
Image Credit : Twitter

ಮಾಲೀಕನ ಪತ್ತೆ

ಇದೇ ವೇಳೆ ನಂಗನಲ್ಲೂರು ನಿವಾಸಿ ರಮೇಶ್ ಎಂಬುವವರು ತಮ್ಮ 45 ಸವರನ್ ಚಿನ್ನ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದರು. ಹಳೆ ಚಿನ್ನದ ವ್ಯಾಪಾರಿಯಾದ ರಮೇಶ್, ಶನಿವಾರ ಸಂಜೆ ಟಿ. ನಗರಕ್ಕೆ ಸ್ನೇಹಿತನನ್ನು ಭೇಟಿಯಾಗಲು ಬಂದಿದ್ದರು. ಈ ವೇಳೆ ರಸ್ತೆ ಬದಿಯ ತಳ್ಳುಗಾಡಿಯ ಬಳಿ ಚಿನ್ನದ ಚೀಲವನ್ನಿಟ್ಟು ಮರೆತು ಹೋಗಿದ್ದರು. ಪೊಲೀಸರು ದಾಖಲೆಗಳನ್ನು ಪರಿಶೀಲಿಸಿ, ರಮೇಶ್ ಅವರೇ ಅಸಲಿ ಮಾಲೀಕರೆಂದು ಖಚಿತಪಡಿಸಿಕೊಂಡು ಚಿನ್ನವನ್ನು ಹಸ್ತಾಂತರಿಸಿದರು.

44
ಸನ್ಮಾನ ಮತ್ತು ಮೆಚ್ಚುಗೆ
Image Credit : instagram

ಸನ್ಮಾನ ಮತ್ತು ಮೆಚ್ಚುಗೆ

ಪೌರಕಾರ್ಮಿಕ ಮಹಿಳೆ ಪದ್ಮಾ ಅವರ ಈ ಅಸಾಧಾರಣ ಪ್ರಾಮಾಣಿಕತೆಯನ್ನು ಕಂಡ ಪೊಲೀಸರು ಮತ್ತು ಸಾರ್ವಜನಿಕರು ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. 'ಪ್ರಾಮಾಣಿಕತೆ ಎನ್ನುವುದು ಕೇವಲ ಮಾತಲ್ಲ, ಅದು ಜೀವನದ ಮೌಲ್ಯ' ಎಂದು ಪೊಲೀಸರು ಪದ್ಮಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಅವರಿಗೆ ಸನ್ಮಾನ ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಭಾರತ ಸುದ್ದಿ
ಭಾರತ
ಬಂಗಾರದ ನಿಧಿ
ಚಿನ್ನ

Latest Videos
Recommended Stories
Recommended image1
ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ
Recommended image2
ಉಠಾವೋ ಲುಂಗಿ, ಬಜಾವೋ ಪುಂಗಿ : ಠಾಕ್ರೆ ಕೀಳು ಭಾಷೆ ಟೀಕೆ
Recommended image3
India Latest News Live: ನಮ್ಮಿಬ್ಬರ ಪ್ರೀತಿ ರಿಯಾಲಿಟಿ ಶೋಗೆ ಸೀಮಿತವಾಗಿತ್ತು; ಸತ್ಯ ಒಪ್ಪಿಕೊಂಡ ಕಾಮಿಡಿಯನ್
Related Stories
Recommended image1
ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನ ನಿಧಿಯಲ್ಲ ಎಂದ ಪುರಾತತ್ವ ಇಲಾಖೆ, ಕುಟುಂಬಕ್ಕೆ ಸಂಕಷ್ಟ! ಬಂಗಾರ ಮರಳಿಸುವಂತೆ ಊರವರ ಆಗ್ರಹ
Recommended image2
ಲಕ್ಕುಂಡಿ: ನಿಧಿ ಸಿಕ್ಕ ಜಾಗದಲ್ಲಿ ದೊಡ್ಡ ಸರ್ಪ ಎದ್ದಿದೆ, ಒಂದಲ್ಲ ಒಂದು ದಿನ ಕಚ್ಚುತ್ತೆ, ನಮಗೆ ಆ ಜಾಗ ಬೇಡವೆಂದ ಕುಟುಂಬ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved