MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಭಾರಿ ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು

ಭಾರಿ ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು

ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕೆಲೆವೆಡೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇತ್ತ ಕೇದಾರನಾಥ ಯಾತ್ರೆ ತಾತ್ಕಾಲಿಕ ರದ್ದು ಮಾಡಲಾಗಿದೆ.

1 Min read
Author : Chethan Kumar
Published : May 31 2026, 05:00 PM IST
Share this Photo Gallery
  • FB
  • TW
  • Linkdin
  • Whatsapp
16
ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ
Image Credit : stockPhoto

ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟ ದೆಹಲಿಯಲ್ಲಿ ನಿನ್ನೆ ಮಳೆಯಾಗಿದೆ. ಕೇರಳಕ್ಕೆ ಮುಂಗಾರು ಪ್ರವೇಶ ನಿಗದಿಗಿಂತ ವಿಳಂಬವಾಗಿದೆ. ಇತ್ತ ಎಲ್ ನಿನೋ ಭೀತಿ ಸೇರಿದಂತೆ ಹಲವು ಅಡ್ಡಿ ಆತಂಕದ ನಡುವೆ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಕೇದಾರನಾಥ ಯಾತ್ರೆ ತಾತ್ಕಾಲಿಕ ರದ್ದು
Image Credit : google

ಕೇದಾರನಾಥ ಯಾತ್ರೆ ತಾತ್ಕಾಲಿಕ ರದ್ದು

ಉತ್ತರಖಂಡದಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಈಗಾಗಲೇ ಉತ್ತರ ಖಂಡದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಿಮಾಲಯನ ತಪ್ಪಲು, ಹಿಮಾಲಯನ ಪರ್ವತ ಶಿಖರಗಳ ವಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಉತ್ತರಖಂಡದಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಮುನ್ನಚ್ಚೆರಿಕಾ ಕ್ರಮವಾಗಿ ಸರ್ಕಾರ ಕೇದಾರನಾಥ ಯಾತ್ರೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

Related Articles

Related image1
ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭಕ್ಕೆ ಕ್ಷಣಗಣನೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
Related image2
ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಮುನ್ನೆಚ್ಚರಿಕೆ!
36
ಭಕ್ತರಿಗೆ ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚನೆ
Image Credit : google

ಭಕ್ತರಿಗೆ ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚನೆ

ಉತ್ತರಖಂಡದಲ್ಲಿ ಕಳೆದ ಕೆಲ ವರ್ಷಗಳಲ್ಲಿ ಮೆಘಸ್ಫೋಟ ಸೇರಿದಂತೆ ಪ್ರವಾಹ ಪರಿಸ್ಥಿತಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡುತ್ತಿದ್ದಂತೆ ಇದೀಗ ಸರ್ಕಾರ ಕೇದಾರನಾಥ ಭಕ್ತರಿಗೆ ಸೂಚನೆ ನೀಡಿದೆ. ದರ್ಶನಕ್ಕೆ ಬೆಟ್ಟದ ಮೂಲಕ ತೆರಳುತ್ತಿರುವ ಭಕ್ತರು ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ರಕ್ಷಣೆ ಪಡೆಯುವಂತೆ ಸೂಚನೆ ನೀಡಲಾಗಿದೆ.

46
ದೆಹಲಿಯಲ್ಲಿ ಭಾರಿ ಮಳೆ ಸೂಚನೆ
Image Credit : Getty

ದೆಹಲಿಯಲ್ಲಿ ಭಾರಿ ಮಳೆ ಸೂಚನೆ

ಮೇ.30ರ ಸಂಜೆ ದೆಹಲಿಯಲ್ಲಿ ಭಾರಿ ಮಳೆ ಸುರಿದಿದೆ. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ ಜನತೆ ನಿರಾಳರಾಗಿದ್ದಾರೆ. ಇತ್ತ ಇನ್ನು ಕೆಲ ದಿನಗಳ ಕಾಲ ದೆಹಲಿಯಲ್ಲಿ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ. ನಿನ್ನೆ ಸುರಿದು ಮಳೆ ಹಾಗೂ ಭಾರಿ ಗಾಳಿಗೆ ದೆಹಲಿಯಲ್ಲಿ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿದ್ದಾರೆ.

56
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ
Image Credit : AFP

ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ

ಬೆಂಗೆಳೂರಿನಲ್ಲಿ ಕಳೆದ ಎರಡು ದಿನ ಸತತ ಮಳೆಯಾಗಿದೆ. ಭಾರಿ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ನೀರಿನಿಂದ ಜಲಾವೃತಗೊಂಡಿತ್ತು. ಬೆಂಗಳೂರಿನಲ್ಲಿ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

66
ಮುಂಗಾರು ಕ್ಷೀಣ, ರೈತರು ಕಂಗಾಲು
Image Credit : X

ಮುಂಗಾರು ಕ್ಷೀಣ, ರೈತರು ಕಂಗಾಲು

ಈ ಬಾರಿ ಮುಂಗಾರು ಕ್ಷೀಣಗೊಂಡಿದೆ. ಜೊತೆಗೆ ಎಲ್ ನಿನೋ ರೂಪುಗೊಂಡಿರುವ ಕಾರಣ ತೀವ್ರ ಮಳೆ ಕೊರತೆ ಕಾಣಲಿದೆ. ದಕ್ಷಿಣದಲ್ಲಿ ಭಾರಿ ಮಳೆ ಹಾಗೂ ಉತ್ತರದತ್ತ ಬರಗಾಲ ಪರಿಸ್ಥಿತಿಗೆ ಕಾರಣಾಗುವ ಸಾಧ್ಯತೆ ಹೆಚ್ಚಿದೆ. ಮುಂಗಾರು ಕ್ಷೀಣಗೊಂಡಿರುವ ಕಾರಣ ರೈತರು ಕಂಗಾಲಾಗಿದ್ದಾರೆ. ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಭಾರತೀಯ ಹವಾಮಾನ ಇಲಾಖೆ
ಹವಾಮಾನ ಮುನ್ಸೂಚನೆ
ಮಳೆ
ಭಾರತ ಸುದ್ದಿ

Latest Videos
Recommended Stories
Recommended image1
ಸ್ಯಾಲರಿ ₹90,000 ಇದ್ರೂ ಖರ್ಚು ಮಾತ್ರ ₹25,000! ಈ ಸರ್ಕಾರಿ ಅಧಿಕಾರಿ ಮಾಡೋ ಸೇವಿಂಗ್ಸ್ ಪ್ಲಾನ್ ಇಲ್ಲಿದೆ
Recommended image2
Bachelors Village: ಭಾರತದ ಈ ಹಳ್ಳಿಯಲ್ಲಿ ಮದುವೆಯೇ ಇಲ್ಲದೆ ಮುದುಕರಾದ 120 ಯುವಕರು! ಇದು ಸರ್ಕಾರದ ಶಾಪವಂತೆ!
Recommended image3
ಮರ ಏರಿದ್ದಾಗಲೇ ವ್ಯಕ್ತಿ ಮೈಮೇಲೆ ಹತ್ತಿದ ಹಾವು; ಕೆಳಗಡೆ ಬಿದ್ರೂ ಸಾವು, ಹಾವು ಕಚ್ಚಿದ್ರೂ ಸಾವು! ಆಮೇಲೆ ಆಗಿದ್ದೇನು?
Related Stories
Recommended image1
ಕರ್ನಾಟಕದಲ್ಲಿ ಮುಂಗಾರು ಮಳೆ ಆರಂಭಕ್ಕೆ ಕ್ಷಣಗಣನೆ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
Recommended image2
ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆ ಮುನ್ನೆಚ್ಚರಿಕೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved