MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಫ್ರಿಡ್ಜ್‌ನಲ್ಲಿದ್ದ ಚಿಕನ್, ಮಟನ್, ಬೋಟಿ ಬಿಸಿ ಮಾಡಿ ತಿಂದು ಓರ್ವ ಸಾವು; ಮೂವರ ಸ್ಥಿತಿ ಗಂಭೀರ

ಫ್ರಿಡ್ಜ್‌ನಲ್ಲಿದ್ದ ಚಿಕನ್, ಮಟನ್, ಬೋಟಿ ಬಿಸಿ ಮಾಡಿ ತಿಂದು ಓರ್ವ ಸಾವು; ಮೂವರ ಸ್ಥಿತಿ ಗಂಭೀರ

Consuming Refrigerated Meat: ಫ್ರಿಡ್ಜ್‌ನಲ್ಲಿಟ್ಟ ಮಾಂಸಾಹಾರ ಸೇವಿಸಿ ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಒಟ್ಟು 9 ಜನರಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯ್ಸನ್ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.

1 Min read
Mahmad Rafik
Published : Jul 24 2025, 01:32 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : AI Meta

ವಿಷ ಆಹಾರ ಸೇವನೆಯಿಂದಾಗಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ,ಫ್ರಿಡ್ಜ್‌ನಲ್ಲಿಟ್ಟಿದ್ದ ಮಾಂಸಾಹಾರವನ್ನು ಬಿಸಿ ಮಾಡಿ ತಿಂದಿದ್ದರು. ಈ ಆಹಾರ ಸೇವನೆ ಎಲ್ಲರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೃತ ವ್ಯಕ್ತಿಯನ್ನು 46 ವರ್ಷದ ಶ್ರೀನಿವಾಸ್ ಯಾದವ್ ಎಂದು ಗುರುತಿಸಲಾಗಿದೆ.

25
Image Credit : AI Meta

ಶ್ರೀನಿವಾಸ್ ಯಾದವ್ ಅವರ ವನಸ್ಥಳಿಪುರದ ಮನೆಯಲ್ಲಿ ಹಬ್ಬದ ಪ್ರಯುಕ್ತ ಚಿಕನ್, ಮಟನ್ ಮತ್ತು ಬೋಟಿ ಮಾಡಲಾಗಿತ್ತು. ಮರುದಿನ ಶ್ರೀನಿವಾಸ್ ಯಾದವ್ ಕುಟುಂಬ ಉಳಿದ ಮಾಂಸವನ್ನು ಬಿಸಿ ಮಾಡಿ ತಿಂದಿದೆ. ಸ್ವಲ್ಪ ಸಮಯದಲ್ಲೇ ಕುಟುಂಬದ 9 ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿತು. ಕೂಡಲೇ ಎಲ್ಲರನ್ನೂ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಲಾಗಿದೆ.

Related Articles

Related image1
Now Playing
ವಿಷಾಹಾರ ಸೇವನೆ ತನಿಖೆ ಮತ್ತಷ್ಟು ಚುರುಕು
Related image2
ವಿಷಾಹಾರ ಸೇವಿಸಿ 55ಕ್ಕೂ ಹೆಚ್ಚು ಕುರಿಗಳು ಸಾವು; ಮುಂದೇನು ತೋಚದೇ ಕುರಿಗಾಹಿಗಳು ಕಂಗಾಲು!
35
Image Credit : AI Meta

ಶ್ರೀನಿವಾಸ್ ಅವರ ಪತ್ನಿ ರಜಿತಾ, ಮಕ್ಕಳಾದ ಲಹರಿ, ಜಾಸ್ಮಿತಾ, ತಾಯಿ ಗೌರಮ್ಮ, ರಜಿತಾ ಅವರ ಸಹೋದರ ಸಂತೋಷ್ ಕುಮಾರ್, ಪತ್ನಿ ರಾಧಿಕಾ ಮತ್ತು ಅವರ ಹೆಣ್ಣುಮಕ್ಕಳಾದ ಪೂರ್ವಿಕಾ, ಕೃತಜ್ಞ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವಾಗಲೇ ಶ್ರೀನಿವಾಸ್ ಯಾದವ್ ಪ್ರಾಣಪಕ್ಷಿ ಹಾರಿ ಹೋಗಿದೆ.

45
Image Credit : AI Meta

ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಉಳಿದವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಫುಡ್‌ ಪಾಯಿಸನ್‌ನಿಂದ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಪೋಸ್ಟ್‌ಮಾರ್ಟಮ್ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲು ಸಾಧ್ಯ ಎಂದು ವನಸ್ಥಳಿಪುರ ಪೊಲೀಸರು ತಿಳಿಸಿದ್ದಾರೆ.

55
Image Credit : AI Meta

ಆರೋಗ್ಯಾಧಿಕಾರಿಗಳ ಸಲಹೆ

ಆಹಾರ ವಿಷವೇ ಸಾವಿಗೆ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಫ್ರಿಡ್ಜ್‌ನಲ್ಲಿಟ್ಟಿದ್ದ ಆಹಾರವನ್ನು ಮತ್ತೆ ಬಿಸಿ ಮಾಡಿ ತಿಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಫ್ರಿಡ್ಜ್‌ನಲ್ಲಿಟ್ಟ ಉಳಿದ ಮಾಂಸ ತಿನ್ನುವಾಗ ಜಾಗ್ರತೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಭಾರತ ಸುದ್ದಿ
ಭಾರತ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved