MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • IAF Chopper Crash: ಲ್ಯಾಂಡ್‌ ಆಗಲು ಐದೇ ನಿಮಿಷ, ನೀಲಗಿರಿಯ ದಟ್ಟ ಅರಣ್ಯದಲ್ಲಿ ಹೊತ್ತಿ ಉರಿದ MI-17V5 ಸೇನಾ ಹೆಲಿಕಾಪ್ಟರ್

IAF Chopper Crash: ಲ್ಯಾಂಡ್‌ ಆಗಲು ಐದೇ ನಿಮಿಷ, ನೀಲಗಿರಿಯ ದಟ್ಟ ಅರಣ್ಯದಲ್ಲಿ ಹೊತ್ತಿ ಉರಿದ MI-17V5 ಸೇನಾ ಹೆಲಿಕಾಪ್ಟರ್

ಇಂದು ಬುಧವಾರ ಮಧ್ಯಾಹ್ನ ತಮಿಳುನಾಡಿನ ಕೂನೂರಿನ ನೀಲಗಿರಿಯ ದಟ್ಟ ಅರಣ್ಯದಲ್ಲಿ ಸೇನಾ ಹೆಲಿಕಾಪ್ಟರ್ ಎಂಐ-17 ವಿ-5 ಪತನಗೊಂಡಿದ್ದು, ಶಾಕಿಂಗ್ ಫೋಟೋಗಳು ಲಭ್ಯವಾಗಿವೆ. ಅಪಘಾತದ ತೀವ್ರತೆಗೆ ಹೆಲಿಕಾಪ್ಟರ್ ಹೊತ್ತಿ ಉರಿದ ದೃಶ್ಯಗಳು ಈ ಫೋಟೋಗಳಲ್ಲಿ ಕಂಡು ಬಂದಿದೆ. ಹೆಲಿಕಾಪ್ಟರ್‌ನಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಇಬ್ಬರು ಪೈಲಟ್‌ಗಳು, ಬ್ರಿಗೇಡಿಯರ್ ಶ್ರೇಣಿಯ ಸಿಬ್ಬಂದಿ ಇದ್ದರು. ಅಪಘಾತದ ನಂತರ, ಸ್ಥಳೀಯ ಜನರು ಮೊದಲು ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಸಾರೆ. ಅಪಘಾತ ಸಂಭವಿಸಿದ ಸ್ಥಳವು ದಟ್ಟವಾದ ಕಾಡಿನಿಂದ ಕೂಡಿದ್ದು, ಸುಲಭವಾಗಿ ತಲುಪಲು ಸಾಧ್ಯವಾಗದ ಕಾರಣ, ರಕ್ಷಣಾ ತಂಡಕ್ಕೆ ತಲುಪಲು ಕೊಂಚ ಕಷ್ಟವಾಯಿತು. ಬೆಟ್ಟದ ಮೇಲೆ ಅಪಘಾತ ಸಂಭವಿಸಿದೆ. ಈ ಸ್ಥಳವು 2667 ಮೀಟರ್ ಎತ್ತರವಾಗಿದೆ. ಅಪಘಾತದ ಬಳಿಕ ಹೆಲಿಕಾಪ್ಟರ್ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಬೂದಿಯಾಗಿದೆ.

2 Min read
Author : Suvarna News
| Updated : Dec 08 2021, 03:25 PM IST
Share this Photo Gallery
  • FB
  • TW
  • Linkdin
  • Whatsapp
18

ಮಧ್ಯಾಹ್ನ 12:20ಕ್ಕೆ ಹೆಲಿಕಾಪ್ಟರ್ ಪತನಗೊಂಡಿದೆ. ಲ್ಯಾಂಡಿಂಗ್ ಸ್ಥಳದಿಂದ ಕೇವಲ 10 ಕಿ.ಮೀ ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ವೈದ್ಯರು, ಸೇನಾ ಅಧಿಕಾರಿಗಳು ಮತ್ತು ಕೋಬ್ರಾ ಕಮಾಂಡೋಗಳ ತಂಡವು ಸ್ಥಳಕ್ಕೆ ತಲುಪಿವೆ.

28

ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ವಾಯುಪಡೆ ಹೇಳಿದೆ. ಪ್ರಾಥಮಿಕ ವರದಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಂಜಿನ್ ನಿಷ್ಕ್ರಿಯಗೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಮಾಹಿತಿ ಬಂದ ತಕ್ಷಣ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಊಟಿಯತ್ತ ಪ್ರಯಾಣ ಬೆಳೆಸಿದ್ದಾರೆ.

38

ಸಿಡಿಎಸ್ ವಿಪಿನ್ ರಾವತ್ ಮತ್ತು ಇತರರು ಹೆಲಿಕಾಪ್ಟರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ಸೇನಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಕೆಲವು ದೇಹಗಳು ಶೇ 80 ರಷ್ಟು ಸುಟ್ಟುಹೋಗಿವೆ ಎಂದು ಅವರು ಹೇಳಿದರು.

48

ಅಪಘಾತದ ನಂತರ ಕೆಲವು ವೀಡಿಯೊಗಳು ಸಹ ಹೊರಬಂದಿವೆ. ಅವುಗಳಲ್ಲಿ ಹೆಲಿಕಾಪ್ಟರ್ ಉರಿಯುತ್ತಿರುವುದು ಕಂಡುಬರುತ್ತದೆ. ಅಪಘಾತಕ್ಕೆ ಕಾರಣವೇನು ಎಂಬುವುದು ಇದು ತನಿಖೆಯ ವಿಷಯವಾಗಿದೆ. ತಮಿಳುನಾಡಿನ ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ ಕಾರ್ಯಕ್ರಮವೊಂದಕ್ಕೆ ಈ ಹೆಲಿಕಾಪ್ಟರ್ ತೆರಳುತ್ತಿತ್ತು ಎನ್ನಲಾಗಿದೆ.

58

ಮಂಜು ಮುಸುಕಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಖಚಿತ ಮಾಹಿತಿ ಹೊರಬಿದ್ದಿಲ್ಲ. ಅಪಘಾತದ ಬಗ್ಗೆ ತಿಳಿದುಕೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಿಒಡಿಎಸ್ ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ದುರಂತ ಅಪಘಾತದ ಬಗ್ಗೆ ಕೇಳಿ ಆಘಾತವಾಗಿದೆ ಎಂದು ಹೇಳಿದ್ದಾರೆ.

68


ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಟ್ವೀಟ್ ಮೂಲಕ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. 'ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಹೆಲಿಕಾಪ್ಟರ್‌ನಲ್ಲಿರುವ ಇತರರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತೇವೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

78

ಸೇನಾ ಅಧಿಕಾರಿಗಳು ಹೋಗುವ ಹೆಲಿಕಾಪ್ಟರ್ ಟ್ವಿನ್ ಇಂಜಿನ್ ಹೊಂದಿದೆ. ಅಪಘಾತ ನಡೆದ ಎಂಐ 17ರಲ್ಲಿ ಪ್ರಧಾನಿ, ರಕ್ಷಣಾ ಸಚಿವರಂತಹ ವಿವಿಐಪಿಗಳೂ ಸವಾರಿ ಮಾಡುತ್ತಾರೆ. ಸೇನೆ ಮತ್ತು ವಾಯುಪಡೆ ಈ ಹೆಲಿಕಾಪ್ಟರ್ ಅನ್ನು ವಿವಿಐಪಿಗಾಗಿ ಬಳಸುತ್ತವೆ. ಇದರಲ್ಲಿ ಎರಡು ಎಂಜಿನ್ ಗಳಿದ್ದು, ಯಾವುದೇ ಸಂದರ್ಭದಲ್ಲೂ ಮತ್ತೊಂದು ಎಂಜಿನ್ ಬಳಸಿ ಸರಿಯಾದ ಜಾಗಕ್ಕೆ ತರಬಹುದು ಎನ್ನಲಾಗಿದೆ.

88

ಈ ಜನರು ಹೆಲಿಕಾಪ್ಟರ್‌ನಲ್ಲಿ ಇದ್ದವರು: ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್. ಎ. ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್. ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ. ಸಾಯಿ ತೇಜ, ಹವಾಲ್ದಾರ್ ಸತ್ಪಾಲ್.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ಹೆಲಿಕಾಪ್ಟರ್ ಅಪಘಾತ
ಭಾರತೀಯ ವಾಯು ಸೇನೆ
ಭಾರತೀಯ ಸೇನೆ

Latest Videos
Recommended Stories
Recommended image1
ಮದ್ಯದ ವಾಸನೆ: ವ್ಯಾಂಕೋವರ್‌ನಿಂದ ದೆಹಲಿಗೆ ವಿಮಾನ ಹಾರಿಸುವ ಮೊದಲು ಏರ್ ಇಂಡಿಯಾ ಪೈಲಟ್‌ನ ಬಂಧನ
Recommended image2
ಬಡವನಿರಬಹುದು ಆದರೆ ಬಿಕಾರಿ ಅಲ್ಲ: ಸ್ವಾಭಿಮಾನಿ ವೃದ್ಧನ ವೀಡಿಯೋ ಭಾರಿ ವೈರಲ್
Recommended image3
ಅಸಲಿ ಚಿನ್ನದ ತಲೆಗೆ ಹೊಡೆದಂತೆ ಮಾರಾಟವಾಗ್ತಿದೆ ಬಾಂಗ್ಲಾದ ಫೇಕ್​ ಗೋಲ್ಡ್​! ನೀವು ಕೊಳ್ತಿರೋದು ಅಸಲಿನಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved