MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ದೆಹಲಿಯಲ್ಲಿ ಐಐಟಿಎಫ್ ಮೇಳ: ಖುದ್ದು‌ ಮಳಿಗೆಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿರುವ ಎಂ.ಬಿ.ಪಾಟೀಲ್ ಪತ್ನಿ!

ದೆಹಲಿಯಲ್ಲಿ ಐಐಟಿಎಫ್ ಮೇಳ: ಖುದ್ದು‌ ಮಳಿಗೆಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿರುವ ಎಂ.ಬಿ.ಪಾಟೀಲ್ ಪತ್ನಿ!

ಆದಿವಾಸಿ ಅಥವಾ ಬುಡಕಟ್ಟು ಸಮುದಾಯಗಳಲ್ಲಿ ಇರುವ ಪ್ರತಿಭೆಯನ್ನು ನಶಿಸಿ ಹೋಗಲು ಬಿಡಬಾರದು. ಇದನ್ನು ಸಮಕಾಲೀನ ಜಗತ್ತಿನ ನಿರೀಕ್ಷೆಗೆ ತಕ್ಕಂತೆ ಸಾಣೆ ಹಿಡಿದು, ಮುಂದುವರಿಸಿಕೊಂಡು ಹೋಗಬೇಕು. ಈಗಿನ ಕಾರ್ಪೊರೇಟ್ ಜಗತ್ತಿನಲ್ಲಿ ಕಸೂತಿ ಮತ್ತು ಕೈಮಗ್ಗದ ಸೀರೆ, ಕುಪ್ಪಸ, ಚೂಡಿದಾರ್ ಮುಂತಾದ ಉತ್ಪನ್ನಗಳಿಗೆ ಭಾರೀ ಬೇಡಿಕೆ ಇದೆ ಎಂದು ಆಶಾ ಅವರು ಹೇಳಿದ್ದಾರೆ. 

2 Min read
Author : Govindaraj S
Published : Nov 18 2024, 06:33 PM IST
Share this Photo Gallery
  • FB
  • TW
  • Linkdin
  • Whatsapp
15

ನವದೆಹಲಿ (ನ.18): ಇಲ್ಲಿನ ಪ್ರಗತಿ ಮೈದಾನದಲ್ಲಿರುವ 'ಭಾರತ ಮಂಟಪಂ'ನಲ್ಲಿ ನಡೆಯುತ್ತಿರುವ 'ಇಂಡಿಯನ್ ಇಂಟರ್ನ್ಯಾಷನಲ್ ಟ್ರೇಡ್ ಫೇರ್' (ಐಐಟಿಎಫ್)ನ ಕರ್ನಾಟಕ ಪೆವಿಲಿಯನ್ ನಲ್ಲಿ ಉಪಸ್ಥಿತವಿರುವ ವಿಜಯಪುರ ಜಿಲ್ಲೆಯ 'ಬಂಜಾರ ಕಸೂತಿ ಆರ್ಗನೈಸೇಷನ್' ಮಳಿಗೆಯು ವೀಕ್ಷಕರ ಭಾರೀ ಗಮನ ಸೆಳೆಯುತ್ತಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರ ಪತ್ನಿ ಆಶಾ ಪಾಟೀಲ ಇದರ ನೇತೃತ್ವ ವಹಿಸಿದ್ದಾರೆ.

25

ಇದೇ 14ರಂದು ಆರಂಭವಾಗಿರುವ ಐಐಟಿಎಫ್ ಮೇಳವು ನ.27ರವರೆಗೆ ನಡೆಯಲಿದ್ದು, ಬಂಜಾರ ಕಸೂತಿ ಮಳಿಗೆಯು ಈಗಾಗಲೇ 2 ಲಕ್ಷ ರೂ.ಗಳಷ್ಟು ವಹಿವಾಟು ನಡೆಸಿದೆ. ಉಳಿದ ಒಂಬತ್ತು ದಿನಗಳಲ್ಲಿ ರಾಷ್ಟ್ರ ರಾಜಧಾನಿಯ ಇನ್ನೂ ಹೆಚ್ಚಿನ ಜನರನ್ನು ಮಳಿಗೆಯು ಆಕರ್ಷಿಸಲಿದೆ. ಲಂಬಾಣಿ ಕರಕುಶಲ ಮತ್ತು ಕೈಮಗ್ಗದ ವಸ್ತುಗಳೆಂದರೆ ಕೇವಲ ರಾಜಾಸ್ಥಾನ ಮತ್ತು ಉತ್ತರ ಭಾರತದ್ದು ಎನ್ನುವ ನಂಬಿಕೆಯನ್ನು ಮೀರಿ, ಈ ಮಳಿಗೆ ಗ್ರಾಹಕರನ್ನು ಸೆಳೆದಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಆಶಾ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.
 

35

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕಗಳಲ್ಲಿ ಲಂಬಾಣಿಗಳು ಯಥೇಚ್ಛ ಸಂಖ್ಯೆಯಲ್ಲಿದ್ದಾರೆ. ವಿಜಯಪುರ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲೂ ಈ ಸಮುದಾಯದವರು ಹೆಚ್ಚಾಗಿದ್ದು, ಇವರ ಸಾಂಪ್ರದಾಯಿಕ ಕಸೂತಿ ಮತ್ತು ಕರಕುಶಲ ಪ್ರತಿಭೆಯನ್ನು ಪ್ರೋತ್ಸಾಹಿಸಿ, ಸಬಲೀಕರಣಗೊಳಿಸಬೇಕಾಗಿದೆ. ಈ ಉದ್ದೇಶದಿಂದ ಬಂಜಾರ ಕಸೂತಿ ಆರ್ಗನೈಸೇಷನ್ ಅನ್ನು ಸ್ಥಾಪಿಸಿ, ಉತ್ತೇಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

45

ಹಿಂದಿನ ವರ್ಷಗಳಲ್ಲಿ ವಿಜಯಪುರ, ಮಂಗಳೂರು, ಶಿವಮೊಗ್ಗ ಮುಂತಾದ ಕಡೆಗಳಲ್ಲಿ ನಾವು ಮಳಿಗೆ ಹಾಕುತ್ತಿದ್ದೆವು. ಈ ಬಾರಿ ನಮ್ಮ ಗುಣಮಟ್ಟದ ಉತ್ಪನ್ನಗಳನ್ನು ಉತ್ತರ ಭಾರತದವರಿಗೆ ಪರಿಚಯಿಸಲೆಂದೇ ನವದೆಹಲಿಗೆ ಬಂದಿದ್ದೇವೆ. ಸಾಂಪ್ರದಾಯಿಕ ಕಸೂತಿಯ ಮೂಲಸ್ವರೂಪವನ್ನು ಹಾಗೆಯೇ ಉಳಿಸಿಕೊಂಡು, ಆಧುನಿಕತೆಯ ಸ್ಪರ್ಶವನ್ನು ಕೊಡಲಾಗಿದೆ. ಈ ಉಪಕ್ರಮದಡಿ ವಿಜಯಪುರ ಜಿಲ್ಲೆಯಲ್ಲಿ 120 ಬಂಜಾರ ಮಹಿಳೆಯರಿಗೆ ತರಬೇತಿ ನೀಡಲಾಗಿದ್ದು, ಇದು ಒಳ್ಳೆಯ ಫಲ ನೀಡುತ್ತಿದೆ ಎಂದು ಅವರು ನುಡಿದಿದ್ದಾರೆ.

55

ಆದಿವಾಸಿ ಅಥವಾ ಬುಡಕಟ್ಟು ಸಮುದಾಯಗಳಲ್ಲಿ ಇರುವ ಪ್ರತಿಭೆಯನ್ನು ನಶಿಸಿ ಹೋಗಲು ಬಿಡಬಾರದು. ಇದನ್ನು ಸಮಕಾಲೀನ ಜಗತ್ತಿನ ನಿರೀಕ್ಷೆಗೆ ತಕ್ಕಂತೆ ಸಾಣೆ ಹಿಡಿದು, ಮುಂದುವರಿಸಿಕೊಂಡು ಹೋಗಬೇಕು. ಈಗಿನ ಕಾರ್ಪೊರೇಟ್ ಜಗತ್ತಿನಲ್ಲಿ ಕಸೂತಿ ಮತ್ತು ಕೈಮಗ್ಗದ ಸೀರೆ, ಕುಪ್ಪಸ, ಚೂಡಿದಾರ್ ಮುಂತಾದ ಉತ್ಪನ್ನಗಳಿಗೆ ಭಾರೀ ಬೇಡಿಕೆ ಇದೆ ಎಂದು ಆಶಾ ಅವರು ಹೇಳಿದ್ದಾರೆ. ಅನೇಕ ಸಂಸ್ಥೆಗಳು ನಮ್ಮ ಉತ್ಪನ್ನಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ವಾಣಿಜ್ಯ ವಹಿವಾಟು ನಡೆಸುವ ಬಗ್ಗೆ ಆಸಕ್ತಿ ತೋರಿದ್ದಾರೆ. ಕೆಲವು ವಿನ್ಯಾಸಕರರು ಕೂಡ ಬೇಡಿಕೆ ಸಲ್ಲಿಸಲು ಮುಂದೆ ಬಂದಿರುವುದು ಆಶಾದಾಯಕ ಬೆಳವಣಿಗೆ ಎಂದೂ ಅವರು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ವ್ಯವಹಾರ
ದೆಹಲಿ

Latest Videos
Recommended Stories
Recommended image1
ದೇಶದಲ್ಲೇ ಮೊದಲು, ಕೇರಳ ನಾಗರಿಕರಿಗೆ ನೇಟಿವಿಟಿ ಕಾರ್ಡ್! ವಿವಿಧ ಸೌಲಭ್ಯ ಪಡೆಯಲು ಚಾನ್ಸ್‌
Recommended image2
India Latest News Live: ಸದ್ಯಕ್ಕೆ ಸಂಜು ಸ್ಯಾಮ್ಸನ್ ಬೇಡ; ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಇರ್ಫಾನ್ ಪಠಾಣ್ ಆರಿಸಿದ ಭಾರತದ ಪ್ಲೇಯಿಂಗ್ XI ಹೀಗಿದೆ
Recommended image3
ಗರ್ಭಕಂಠ ಕ್ಯಾನ್ಸರ್‌ ತಡೆಗೆ ಉಚಿತ ಲಸಿಕೆ ಅಭಿಯಾನ - ಹೆಣ್ಣು ಮಕ್ಕಳಿಗೆ ಕೇಂದ್ರದ ಕೊಡುಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved