ಮೋದಿ ಸಭೆ ಬೆನ್ನಲ್ಲೇ ಏರಿಕೆಯಾದ ಕೊರೋನಾ; ಎದುರಾಗಿದೆ ಲಾಕ್ಡೌನ್ ಆತಂಕ!
ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದು ಮುಂದಿನ ಕ್ರಮಗಳ ಕುರಿತ ಚರ್ಚಿಸಿದ್ದಾರೆ. ಸಭೆಯಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಈ ಸಭೆ ಮರುದಿನವೇ ಕೊರೋನಾ ನಿಯಂತ್ರಣಕ್ಕೆ ಸಿಗದೆ ಮೇಲೇರುತ್ತಿದೆ. ಇದೀಗ ಹೊಸ ನಿರ್ಧಾರಗಳು ಜಾರಿಯಾಗುವ ಸಾಧ್ಯತೆ ಹೆಚ್ಚಾಗುತ್ತಿದೆ.

<p>ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಕೊರೋನಾ ನಿಯಂತ್ರಣ ಕುರಿತು ಮಹತ್ವದ ಸಭೆ ನಡೆಸಿದ್ದಾರೆ. ಕೊರೋನಾ ಹೆಚ್ಚಿರುವ ಹಾಗೂ ಇತರ ರಾಜ್ಯಗಳಿಗೆ ಮಹತ್ವದ ಸಲಹೆ ನೀಡಿದ್ದಾರೆ.</p>
ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಕೊರೋನಾ ನಿಯಂತ್ರಣ ಕುರಿತು ಮಹತ್ವದ ಸಭೆ ನಡೆಸಿದ್ದಾರೆ. ಕೊರೋನಾ ಹೆಚ್ಚಿರುವ ಹಾಗೂ ಇತರ ರಾಜ್ಯಗಳಿಗೆ ಮಹತ್ವದ ಸಲಹೆ ನೀಡಿದ್ದಾರೆ.
<p>ಸಭೆ ಮರುದಿನದ ಕೊರೋನಾ ಅಂಕಿ ಅಂಶ ಇದೀಗ ಮತ್ತೆ ನಿರ್ಣಯಗಳನ್ನು ಬದಲಾಯಿಸಬೇಕಾದ ಅನಿವಾರ್ಯತೆಗೆ ತಳ್ಳಿದೆ. ಕಾರಣ ಭಾರತದಲ್ಲಿ 2021ರ ಗರಿಷ್ಠ ಪ್ರಕರಣಗಳು ದಾಖಲಾಗಿದೆ. ಹೀಗಾಗಿ ಲಾಕ್ಡೌನ್ ಅನಿವಾರ್ಯ ಅನ್ನೋ ಮಾತುಗಳು ಕೇಳಿಬರುತ್ತಿದೆ.</p>
ಸಭೆ ಮರುದಿನದ ಕೊರೋನಾ ಅಂಕಿ ಅಂಶ ಇದೀಗ ಮತ್ತೆ ನಿರ್ಣಯಗಳನ್ನು ಬದಲಾಯಿಸಬೇಕಾದ ಅನಿವಾರ್ಯತೆಗೆ ತಳ್ಳಿದೆ. ಕಾರಣ ಭಾರತದಲ್ಲಿ 2021ರ ಗರಿಷ್ಠ ಪ್ರಕರಣಗಳು ದಾಖಲಾಗಿದೆ. ಹೀಗಾಗಿ ಲಾಕ್ಡೌನ್ ಅನಿವಾರ್ಯ ಅನ್ನೋ ಮಾತುಗಳು ಕೇಳಿಬರುತ್ತಿದೆ.
<p>ಮಹಾರಾಷ್ಟ್ರದಲ್ಲಿ ಮಾರ್ಚ್ 17 ರಂದು 23,179 ಹೊಸ ಕೊವಿಡ್ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಒಂದೇ ದಿನ ಮಹಾರಾಷ್ಟ್ರದಲ್ಲಿ 24,886 ಹೊಸ ಪ್ರಕರಣ ದಾಖಲಾಗಿತ್ತು. ಇದು ಒಂದು ದಿನ ದಾಖಲಾದ ಗರಿಷ್ಠ ಪ್ರಕರಣವಾಗಿದೆ. ಆದರೆ ಇದೀಗ ಈ ಸಂಖ್ಯೆಯ ಸನಿಹಕ್ಕೆ ತಲುಪಿದೆ.</p>
ಮಹಾರಾಷ್ಟ್ರದಲ್ಲಿ ಮಾರ್ಚ್ 17 ರಂದು 23,179 ಹೊಸ ಕೊವಿಡ್ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಒಂದೇ ದಿನ ಮಹಾರಾಷ್ಟ್ರದಲ್ಲಿ 24,886 ಹೊಸ ಪ್ರಕರಣ ದಾಖಲಾಗಿತ್ತು. ಇದು ಒಂದು ದಿನ ದಾಖಲಾದ ಗರಿಷ್ಠ ಪ್ರಕರಣವಾಗಿದೆ. ಆದರೆ ಇದೀಗ ಈ ಸಂಖ್ಯೆಯ ಸನಿಹಕ್ಕೆ ತಲುಪಿದೆ.
<p>ಕೊರೋನಾಗೆ ಬಲಿಯಾಗುತ್ತಿರುವರ ಪೈಕಿ ಪಂಜಾಬ್ 2ನೇ ಸ್ಥಾನ ಪಡೆದುಕೊಂಡಿದೆ. ಕಳೆದೆರಡು ದಿನದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಪಂಜಾಬ್ ನಂತರದಲ್ಲಿದೆ</p>
ಕೊರೋನಾಗೆ ಬಲಿಯಾಗುತ್ತಿರುವರ ಪೈಕಿ ಪಂಜಾಬ್ 2ನೇ ಸ್ಥಾನ ಪಡೆದುಕೊಂಡಿದೆ. ಕಳೆದೆರಡು ದಿನದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಪಂಜಾಬ್ ನಂತರದಲ್ಲಿದೆ
<p>ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 35,871 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಮಹಾರಾಷ್ಟ್ರ, ಪಂಜಾಬ್, ಕೇರಳ, ತಮಿಳುನಾಡು, ಕರ್ನಾಟಕ, ಗುಜರಾತ್, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ.</p>
ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 35,871 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಮಹಾರಾಷ್ಟ್ರ, ಪಂಜಾಬ್, ಕೇರಳ, ತಮಿಳುನಾಡು, ಕರ್ನಾಟಕ, ಗುಜರಾತ್, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ.
<p>ಲಾಕ್ಡೌನ್, ಕರ್ಫ್ಯೂ ಹೇರಿಕೆ ನೀರ್ಧಾರಗಳು ಕೇಂದ್ರದ ಮುಂದಿಲ್ಲ ಅನ್ನೋದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಇದೇ ಮಾತನ್ನು ಉಚ್ಚರಿಸಿದ್ದಾರೆ.</p>
ಲಾಕ್ಡೌನ್, ಕರ್ಫ್ಯೂ ಹೇರಿಕೆ ನೀರ್ಧಾರಗಳು ಕೇಂದ್ರದ ಮುಂದಿಲ್ಲ ಅನ್ನೋದನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಇದೇ ಮಾತನ್ನು ಉಚ್ಚರಿಸಿದ್ದಾರೆ.
<p>ಆದರೆ ಸದ್ಯ ಕೊರೋನಾ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದೆ. ಹೀಗಾಗಿ ಮೋದಿ ಸಭೆಯ ನಿರ್ಧಾರಗಳು ಬದಲಾಗುವು ಸಾಧ್ಯತೆಗಳನ್ನು ಅಲ್ಲಗೆಳೆಯುುವಂತಿಲ್ಲ. ಇದೇ ಕಾರಣಕ್ಕೆ ಇದೀಗ ಲಾಕ್ಡೌನ್ ಆತಂಕಗಳು ಆರಂಭಗೊಂಡಿದೆ.</p>
ಆದರೆ ಸದ್ಯ ಕೊರೋನಾ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದೆ. ಹೀಗಾಗಿ ಮೋದಿ ಸಭೆಯ ನಿರ್ಧಾರಗಳು ಬದಲಾಗುವು ಸಾಧ್ಯತೆಗಳನ್ನು ಅಲ್ಲಗೆಳೆಯುುವಂತಿಲ್ಲ. ಇದೇ ಕಾರಣಕ್ಕೆ ಇದೀಗ ಲಾಕ್ಡೌನ್ ಆತಂಕಗಳು ಆರಂಭಗೊಂಡಿದೆ.