MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಪಾಕ್ ರಾಜತಾಂತ್ರಿಕನಿಗೆ ಶಾಕ್ ಕೊಟ್ಟ ಭಾರತ; ಕೊಟ್ಟಿದ್ದು ಒಂದೇ ದಿನ ಅವಕಾಶ

ಪಾಕ್ ರಾಜತಾಂತ್ರಿಕನಿಗೆ ಶಾಕ್ ಕೊಟ್ಟ ಭಾರತ; ಕೊಟ್ಟಿದ್ದು ಒಂದೇ ದಿನ ಅವಕಾಶ

ಭಾರತ ಸರ್ಕಾರವು ಪಾಕಿಸ್ತಾನ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರನ್ನು ದೇಶ ಬಿಡಲು ಆದೇಶಿಸಿದೆ. ಅನಧಿಕೃತ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ, ಪಾಕಿಸ್ತಾನದ ವಿರುದ್ಧ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿಪ್ರಾಯ ರೂಪಿಸಲು ಭಾರತ ಸರ್ವಪಕ್ಷಗಳ ನಿಯೋಗಗಳನ್ನು ವಿವಿಧ ದೇಶಗಳಿಗೆ ಕಳುಹಿಸುತ್ತಿದೆ.

1 Min read
Kannadaprabha News
Published : May 22 2025, 08:40 AM IST
Share this Photo Gallery
  • FB
  • TW
  • Linkdin
  • Whatsapp
15

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಬೂದಿ ಮುಚ್ಚಿದ ಕೆಂಡದಂತಿರುವ ಹೊತ್ತಿನಲ್ಲಿ, ಭಾರತದಲ್ಲಿರುವ ಪಾಕ್‌ ದೂತಾವಾಸದ ಅಧಿಕಾರಿಯೊಬ್ಬರಿಗೆ ದೇಶ ತೊರೆಯುವಂತೆ ಸರ್ಕಾರ ಆದೇಶಿಸಿದೆ ಹಾಗೂ ಅದಕ್ಕೆ 1 ದಿನ ಕಾಲಾವಕಾಶ ನೀಡಿದೆ.

25

ತಮ್ಮ ಅಧಿಕಾರ ವ್ಯಾಪ್ತಿಗೆ ಒಳಪಡದ ಚಟುವಟಿಕೆಗಳಲ್ಲಿ ತೊಡಗಿರುವ ಕಾರಣ, ಭಾರತ ಬಿಡುವಂತೆ ಆದೇಶಿಸಲಾಗಿದ್ದು, ಭಾರತದಲ್ಲಿರುವ ಯಾವೊಬ್ಬ ಪಾಕ್‌ ರಾಜತಾಂತ್ರಿಕನೂ ತನ್ನ ಅಧಿಕಾರದ ದುರ್ಬಳಕೆ ಮಾಡದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. 8 ದಿನ ಹಿಂದಷ್ಟೇ ಪಾಕ್‌ ದೂತಾವಾಸದ ಅಧಿಕಾರಿಯೊಬ್ಬರಿಗೆ ದೇಶ ತೊರೆಯುವಂತೆ ಸೂಚಿಸಲಾಗಿತ್ತು.

Related Articles

Related image1
ಪಾಕಿಸ್ತಾನಿಯನ್ನು ಮದುವೆಯಾಗುವ ಆಸೆ ಹೊರ ಹಾಕಿದ್ಳು ಜ್ಯೋತಿ
Related image2
Now Playing
ಅಫ್ಘಾನ್‌ಗೆ ಬಂದ ಪಾಕ್ ಟ್ರಕ್ ಧ್ವಜ ಕಿತ್ತೆಸೆದ ತಾಲೀಬಾನ್..!
35

ಏಳು ನಿಯೋಗಗಳ ಪೈಕಿ 2 ತಂಡಗಳು ಪ್ರವಾಸ

ಆಪರೇಷನ್ ಸಿಂದೂರ ಕಾರ್ಯಾಚರಣೆ ಬಳಿಕ ಇದೀಗ, ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಉಗ್ರಪೋಷಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವ ರಾಜತಾಂತ್ರಿಕ ದಾಳಿಗೆ ಭಾರತ ಇದೀಗ ಅಧಿಕೃತ ಚಾಲನೆ ನೀಡಿದೆ. ವಿಶ್ವಮಟ್ಟದಲ್ಲಿ ಪಾಕಿಸ್ತಾನದ ವಿರುದ್ಧ ಅಭಿಪ್ರಾಯ ರೂಪಿಸುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ರಚಿಸಿರುವ ಸರ್ವಪಕ್ಷಗಳ ಸಂಸದರ ಏಳು ನಿಯೋಗಗಳ ಪೈಕಿ 2 ತಂಡಗಳು ಪ್ರವಾಸ ಆರಂಭಿಸಿವೆ.

45

ಜೆಡಿಯು ಮುಖಂಡ ಸಂಜಯ್‌ ಕುಮಾರ್ ಝಾ ನೇತೃತ್ವದ ಮೊದಲ ತಂಡ ಬುಧವಾರ ಜಪಾನ್‌ಗೆ ತೆರಳಿದೆ. ಜಪಾನ್‌ ಭೇಟಿ ಬಳಿಕ ಈ ನಿಯೋಗವು ಮೇ 24ರಂದು ದಕ್ಷಿಣ ಕೊರಿಯಾ, ಮೇ 27 ಸಿಂಗಾಪುರ, ಮೇ 28 ಇಂಡೋನೇಷ್ಯಾ, ಮೇ 31ರಂದು ಮಲೇಷ್ಯಾಗೆ ತೆರಳಲಿದೆ.

55

ಈ ರೀತಿ 2ನೇ ತಂಡ ಶಿವಸೇನೆ ಸಂಸದ ಶ್ರೀಕಾಂತ್‌ ಶಿಂದೆ ನೇತೃತ್ವದ ಇನ್ನೊಂದು ನಿಯೋಗವು ಸಂಜೆ ವೇಳೆಗೆ ಯುಎಇಗೆ ಪ್ರಯಾಣ ಆರಂಭಿಸಲಿದೆ. ಆ ಬಳಿಕ ಲೈಬೀರಿಯಾ, ಕಾಂಗೋ ಮತ್ತು ಸಿಯಾರಾ ಲಿಯೋನ್‌ಗೂ ಈ ತಂಡ ಭೇಟಿ ನೀಡಲಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಭಾರತ ಸುದ್ದಿ
ಭಾರತ ಸರ್ಕಾರ
ಪಾಕಿಸ್ತಾನ
ಆಪರೇಷನ್ ಸಿಂಧೂರ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved