MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಭಾರತ ಪಾಕಿಸ್ತಾನ ಎಲ್ಒಸಿ ಬಳಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪಿಸಿದ ಭಾರತೀಯ ಸೇನೆ

ಭಾರತ ಪಾಕಿಸ್ತಾನ ಎಲ್ಒಸಿ ಬಳಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪಿಸಿದ ಭಾರತೀಯ ಸೇನೆ

ಭಾರತ-ಪಾಕ್ ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಸೇನೆಯು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಸ್ಥಾಪಿಸಿದೆ. ಪೂಂಚ್ ಸೆಕ್ಟರ್‌ನಲ್ಲಿ ಸ್ಥಾಪಿಸಲಾದ ಈ ಪ್ರತಿಮೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

2 Min read
Author : Anusha Kb
Published : Mar 20 2026, 02:28 PM IST
Share this Photo Gallery
  • FB
  • TW
  • Linkdin
  • Whatsapp
14
Image Credit : insta

ಭಾರತ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭಾರತೀಯ ಸೇನಾ ಸಿಬ್ಬಂದಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದ್ದು, ಇದರ ವಿಡಿಯೋ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರತಿಮೆಯನ್ನು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ, ಎಲ್‌ಒಸಿಗೆ ಹತ್ತಿರದಲ್ಲಿಯೇ ಸ್ಥಾಪಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕುದುರೆಮುಖ ಉದ್ಯಾನವನದ 25ಕ್ಕೂ ಹೆಚ್ಚು ಕಡೆ ಬೆಂಕಿ: ಹೊತ್ತಿ ಉರಿಯುತ್ತಿರುವ ಅಪರೂಪದ ಶೋಲಾ ಹುಲ್ಲುಗಾವಲು

24
Image Credit : Insta

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋಗಳಲ್ಲಿ ಸೈನಿಕರು ದಟ್ಟವಾದ ಕಾಡುಗಳು ಮತ್ತು ಹಿಮದಿಂದ ಆವೃತವಾದ ಪರ್ವತಗಳ ನಡುವೆ ಶಿವಾಜಿ ಪ್ರತಿಮೆಯನ್ನು ಇರಿಸುತ್ತಿರುವುದು ಕಂಡು ಬಂದಿದೆ. ಸೇನಾ ಸಿಬ್ಬಂದಿ ಪ್ರತಿಮೆಯ ಮುಂದೆ ನಮಸ್ಕರಿಸಿ, ಮಿಲಿಟರಿ ತಂತ್ರ ಮತ್ತು ನಾಯಕತ್ವಕ್ಕೆ ಹೆಸರುವಾಸಿಯಾದ ಮರಾಠಾ ರಾಜನಿಗೆ ಗೌರವ ಸಲ್ಲಿಸುವುದನ್ನು ಫೋಟೋ ವೀಡಿಯೋಗಳಲ್ಲಿ ಕಾಣಬಹುದು.

ಇದನ್ನೂ ಓದಿ: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Related Articles

Related image1
ಛತ್ರಪತಿ ಶಿವಾಜಿಯಿಂದ Gen Zಗಳು ಕಲಿಯಬೇಕಾದ 6 ಜೀವನ ಪಾಠಗಳು
Related image2
ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ‘ಛತ್ರಪತಿ ಶಿವಾಜಿ ಮಹಾರಾಜ ನಿಲ್ದಾಣ’ ಎಂದು ನಾಮಕರಣಕ್ಕೆ ಆಗ್ರಹ
34
Image Credit : Insta

ಇಲ್ಲಿ ಸ್ಥಾಪಿಸಲಾದ ಶಿವಾಜಿ ಪ್ರತಿಮೆಯೂ ಕಠಿಣ ಮತ್ತು ಹೆಚ್ಚಿನ ಅಪಾಯದ ಗಡಿ ಪ್ರದೇಶಗಳಲ್ಲಿ ನೆಲೆಸಿರುವ ಸೈನಿಕರನ್ನು ಪ್ರೇರೇಪಿಸುವ ಸಾಂಕೇತಿಕ ಸೂಚಕವಾಗಿದೆ ಎಂದು ಸೋಶಿಯಲ್ ಮೀಡಿಯಾ ಪೋಸ್ಟ್‌ಗಳು ವರದಿ ಮಾಡಿದ್ದು, ಈ ವಿಚಾರ ಈಗ ಆನ್‌ಲೈನ್‌ನಲ್ಲಿ ವ್ಯಾಪಕ ಗಮನ ಸೆಳೆದಿದೆ, ಅನೇಕ ಬಳಕೆದಾರರು ಇದನ್ನು ಪ್ರಬಲವಾದ ಗೌರವ ಎಂದು ಕರೆದಿದ್ದಾರೆ. ಹಾಗೂ ಶಿವಾಜಿ ಮಹಾರಾಜರ ಚೈತನ್ಯ ಮತ್ತು ಗೆರಿಲ್ಲಾ ಯುದ್ಧದ ಪರಂಪರೆಯನ್ನು ಭಾರತದ ಗಡಿಗಳನ್ನು ಕಾಯುವ ಸೈನಿಕರ ಮನೋಭಾವಕ್ಕೆ ಹೋಲಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮೊದಲೇ ಇಂದು ನಾಮಪತ್ರ ಸಲ್ಲಿಸಲ್ಲಿರುವ ಸಮರ್ಥ ಶಾಮನೂರು

44
Image Credit : Insta

ಲಡಾಖ್‌ನಂತಹ ಎತ್ತರದ ಪ್ರದೇಶಗಳಲ್ಲಿ ಇದೇ ರೀತಿ ಶಿವಾಜಿ ಮಹಾರಾಜರ ಪ್ರತಿಮೆಗಳ ಸ್ಥಾಪನೆಗಳು ಈ ಹಿಂದೆಯೂ ನಡೆದಿತ್ತು. ಆದರೂ ಈ ನಿರ್ದಿಷ್ಟವಾದ ವೀಡಿಯೋ ನೈತಿಕತೆ ಮತ್ತು ಮಿಲಿಟರಿ ಸಂಪ್ರದಾಯದ ಕುರಿತು ಚರ್ಚೆಗೆ ಕಾಣವಾಗಿದೆ. ಆದರೆ ವೈರಲ್ ವೀಡಿಯೊದ ಕುರಿತು ಭಾರತೀಯ ಸೇನೆಯು ಇಲ್ಲಿಯವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆದರೂ ಈ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ.

ಇದನ್ನೂ ಓದಿ: ಸೈಲೆಂಟ್ ಕಟ್ಟರ್ ಬಳಸಿ 10,000ಕ್ಕೂ ಅಧಿಕ ಮರಗಳ ಕಡಿತ: ದೂರು ನೀಡಿದ ಫಾರೆಸ್ಟ್ ಗಾರ್ಡ್‌ಗೆ ಅಮಾನತಿನ ಶಿಕ್ಷೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

AK
Anusha Kb
Anusha KB ಸುದ್ದಿಲೋಕದಲ್ಲಿ 13 ವರ್ಷಗಳ ಅನುಭವ, ರಾಜಕೀಯ, ಸಿನಿಮಾ, ದೇಶ, ವಿದೇಶ ಸುದ್ದಿಗಳಲ್ಲಿ ಆಸಕ್ತಿ. ಸುವರ್ಣ ಡಿಜಿಟಲ್‌ನಲ್ಲೀಗ ಸೀನಿಯರ್ ಸಬ್ ಎಡಿಟರ್.
ಭಾರತ ಸುದ್ದಿ
ಭಾರತೀಯ ಸೇನೆ
Latest Videos
Recommended Stories
Recommended image1
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕನ್ನಡದ ಅಬ್ಬರ; ಕಾಸರಗೋಡು ಬಿಜೆಪಿ ಅಭ್ಯರ್ಥಿಯಿಂದ ಕನ್ನಡದಲ್ಲೇ ಪ್ರಚಾರ!
Recommended image2
ಅಘೋರಿಯ ಭಂಗಿ ಮತ್ತೇ ಗಮ್ಮತ್ತು, ಎದುರಿಗಿದ್ದ ವಿದೇಶಿ ಭಕ್ತೆಯ ತುಟಿಗೆ ಕೊಟ್ಟೇಬಿಟ್ಟ ಸಿಹಿ ಮುತ್ತು
Recommended image3
ಆಪ್ತರಕ್ಷಕ ಇವನೇ ನೋಡಿ; ಪೈಪ್‌ಲೈನ್ ಕಾಮಗಾರಿ ವೇಳೆ ಕುಸಿಯುವ ಗೋಡೆಯಿಂದ ಮೇಸ್ತ್ರಿ ರಕ್ಷಿಸಿದ ಜೆಸಿಬಿ ಆಪರೇಟರ್!
Related Stories
Recommended image1
ಛತ್ರಪತಿ ಶಿವಾಜಿಯಿಂದ Gen Zಗಳು ಕಲಿಯಬೇಕಾದ 6 ಜೀವನ ಪಾಠಗಳು
Recommended image2
ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ‘ಛತ್ರಪತಿ ಶಿವಾಜಿ ಮಹಾರಾಜ ನಿಲ್ದಾಣ’ ಎಂದು ನಾಮಕರಣಕ್ಕೆ ಆಗ್ರಹ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved