- Home
- News
- India News
- ಕೇರಳದಲ್ಲಿ ಬೋಟ್ ಮಗುಚಿ 22 ಮಂದಿ ದುರ್ಮರಣ: ಭಾರತೀಯ ನೌಕಾಪಡೆಯಿಂದ ರಕ್ಷಣಾ ಕಾರ್ಯ; ಅಪ್ಡೇಟ್ಸ್ ಇಲ್ಲಿದೆ..
ಕೇರಳದಲ್ಲಿ ಬೋಟ್ ಮಗುಚಿ 22 ಮಂದಿ ದುರ್ಮರಣ: ಭಾರತೀಯ ನೌಕಾಪಡೆಯಿಂದ ರಕ್ಷಣಾ ಕಾರ್ಯ; ಅಪ್ಡೇಟ್ಸ್ ಇಲ್ಲಿದೆ..
ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರ್ ಬಳಿಯ ಒಟ್ಟುಂಬರಂನಲ್ಲಿ ಭಾನುವಾರ ರಾತ್ರಿ 40 ಪ್ರವಾಸಿಗರೊಂದಿಗೆ ಪ್ರವಾಸಿ ದೋಣಿ ಮುಳುಗಿದ ಘಟನೆ ವರದಿಯಾಗಿದೆ. ಈ ಅವಘಡದಲ್ಲಿ ಹೌಸ್ಬೋಟ್ನಲ್ಲಿದ್ದ ಮಕ್ಕಳು ಸೇರಿ 22 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಅಲ್ಲದೆ, ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು ಹಲವರನ್ನು ಮೇಲೆತ್ತಲಾಗುತ್ತಿದೆ. ಈ ಹಿನ್ನೆಲೆ ಭಾರತೀಯ ನೌಕಾ ಪಡೆ ಸಹ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ .

ಘಟನೆ ನಡೆದ ಸ್ಥಳದಲ್ಲಿ ಪ್ರಾಥಮಿಕ ವೈಮಾನಿಕ ಸಮೀಕ್ಷೆ ನಡೆಸಲಾಯಿತು. ಎನ್ಡಿಆರ್ಎಫ್ ಮತ್ತು ಸ್ಥಳೀಯ ಡೈವಿಂಗ್ ತಂಡದೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ನಾಗರಿಕ ಆಡಳಿತಕ್ಕೆ ಸಹಾಯ ಮಾಡಲು ನೌಕಾಪಡೆಯ ಹೆಲಿಕಾಪ್ಟರ್ಗಳ ಬಹು ವಿಧಗಳನ್ನು ಪ್ಲ್ಯಾನ್ ಮಾಡಲಾಗಿದೆ.
ಸಂಜೆ 5 ಗಂಟೆ ಬಳಿಕ ಇಂಥ ಪ್ರವಾಸಿ ಬೋಟ್ಗಳ ಸಂಚಾರಕ್ಕೆ ನಿಷೇಧವಿದ್ದರೂ 2 ಅಂತಸ್ತು ಹೊಂದಿರುವ, ಕೇವಲ 2 ಬಾಗಿಲು ಹೊಂದಿರುವ ಹೌಸ್ಬೋಟ್ ಕಾರ್ಯಾಚರಣೆ ನಡೆಸುತ್ತಿತ್ತು. ಬೋಟ್ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿದ್ದ ಕಾರಣ ಸಂಜೆ 6.30ರ ವೇಳೆಗೆ ಏಕಾಏಕಿ ಬೋಟ್ ಮಗುಚಿಕೊಂಡು ದುರ್ಘಟನೆ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ