MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಎಡವಟ್ಟಿನಿಂದ 1 ಕೋಟಿ ಕಳೆದುಕೊಂಡ ಭಾರತೀಯ ರೈಲ್ವೆ; ಟೋಪಿ ಬಿದ್ದಿದ್ದೇಗೆ?

ಎಡವಟ್ಟಿನಿಂದ 1 ಕೋಟಿ ಕಳೆದುಕೊಂಡ ಭಾರತೀಯ ರೈಲ್ವೆ; ಟೋಪಿ ಬಿದ್ದಿದ್ದೇಗೆ?

ಭಾರತೀಯ ರೈಲ್ವೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರಕ್ತಚಂದನ ಎಂದು ಭಾವಿಸಿ ಒಂದು ಮರಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಿತ್ತು. ಆದರೆ, ಆ ಮರ ಬಿಜಸಲ್ ಮರ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದ್ದು, ರೈಲ್ವೆ ಈಗ ಹಣ ವಾಪಸ್ ಪಡೆಯಲು ನ್ಯಾಯಾಲಯದ ಮೊರೆ ಹೋಗಿದೆ.

1 Min read
Mahmad Rafik
Published : Sep 06 2025, 10:23 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Social Media

ಭಾರತೀಯ ರೈಲ್ವೆ ಮಾಡಿಕೊಂಡ ಒಂದು ಸಣ್ಣ ತಪ್ಪಿನಿಂದಾಗಿ ಬರೋಬ್ಬರಿ 1 ಕೋಟಿ ರೂಪಾಯಿ ಕಳೆದುಕೊಂಡಿದೆ. ಇದೀಗ ಹಣಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದೆ. 10 ಸಾವಿರ ಬದಲಾಗಿ ಇಂಡಿಯನ್ ರೈಲ್ವೇಸ್ 1 ಕೋಟಿ ರೂಪಾಯಿ ಪರಿಹಾರ ನೀಡಿ ಎಡವಟ್ಟು ಮಾಡಿಕೊಂಡಿದೆ.

25
Image Credit : Social Media

ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿನ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಭಾರತೀಯ ರೈಲ್ವೆ ಹಣ ಕಳೆದುಕೊಂಡಿದೆ. ಯಾವತ್ಮಾಲ್ ಜಿಲ್ಲೆಯ ಖರ್ಶಿ ಗ್ರಾಮದ ರೈತ ಕೇಶವ್ ತುಕಾರಾಮ್ ಶಿಂಧೆ ಅವರ ಭೂಮಿಯನ್ನು 2018ರಲ್ಲಿ ಸ್ವಾಧೀನಪಡಿಸಿಕೊಂಡಿತ್ತು. ಈ ವೇಳೆ ವಾರ್ಧಾ-ಯವತ್ಮಾಲ್-ಪುಸಾದ್-ನಾಂದೇಡ್ ಮಾರ್ಗದ ಕಾಮಗಾರಿ ನಡೆಯುತ್ತಿತ್ತು.

Related Articles

Related image1
ಜರ್ಮನಿ, ಚೀನಾವನ್ನು ಹಿಂದಿಕ್ಕಿದ ಭಾರತೀಯ ರೈಲ್ವೆ: ರಣರೋಚಕ ಆಟ ಬದಲಾಗಿದ್ದೇಗೆ?
Related image2
ಇಲ್ಲಿ ಏಕಕಾಲದಲ್ಲಿ 2 ಜಿಲ್ಲೆಗಳಲ್ಲಿ ನಿಲುಗಡೆಯಾಗುತ್ತೆ ರೈಲು: ಭಾರತೀಯ ರೈಲ್ವೆಯ ವಿಶೇಷ ನಿಲ್ದಾಣ
35
Image Credit : Social Media

ಕೇಶವ್ ತುಕಾರಮ್ ಶಿಂಧೆ ಅವರ ಜಮೀನಿನಲ್ಲಿ ಪ್ರಾಚೀನ ಮರವೊಂದನ್ನು ಗುರುತಿಸಲಾಗಿತ್ತು. ಜಮೀನಿನಂತೆ ಅಲ್ಲಿರುವ ಮರಗಳನ್ನು ಆಸ್ತಿ ಎಂದು ಪರಿಗಣಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೇಶವ್ ಜಮೀನಿನಲ್ಲಿರುವ ಮರವನ್ನು ದುಬಾರಿ ಮೌಲ್ಯದ ರಕ್ತಚಂದನ ಎಂದು ಗುರುತಿಸಲಾಗಿತ್ತು. ಈ ಮರಕ್ಕೆ ಮಧ್ಯಂತರ ಪರಿಹಾರವಾಗಿ 1 ಕೋಟಿ ರೂ. ನೀಡಬೇಕೆಂದು ನ್ಯಾಯಾಲಯ ರೈಲ್ವೆ ಇಲಾಖೆಗೆ ಆದೇಶಿಸಿತ್ತು.

45
Image Credit : Social Media

ನ್ಯಾಯಾಲಯದ ಆದೇಶದ ಮೇರೆಗೆ ರೈತ ಕೇಶವ್ ತುಕಾರಮ್ ಶಿಂಧೆ ಅವರಿಗೆ ಪರಿಹಾರವನ್ನು ವಿತರಿಸಲಾಗಿತ್ತು. ಇತ್ತೀಚೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಈ ಮರದ ತುಂಡನ್ನು ಬೆಂಗಳೂರು ಮೂಲದ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಆಂಡ್ ಟೆಕ್ನಾಲಜಿಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಇದು ರಕ್ತಚಂದನ ಅಲ್ಲ, ಅದು ಬಿಜಸಲ್ ಮರ ಎಂದು ತಿಳಿದು ಬಂದಿದೆ. ಇದು ಸಾಮಾನ್ಯವಾದ ಮರವಾಗಿದ್ದು, ಇದರ ಮೌಲ್ಯ 10,981 ರೂಪಾಯಿ ಆಗಿತ್ತು.

55
Image Credit : Social Media

ಇದೀಗ ರೈಲ್ವೆ ಇಲಾಖೆ ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಮುಂದೆ ಹೋಗಿದೆ. ತಪ್ಪಾಗಿ ಪಾವತಿಸಿದ 1 ಕೋಟಿ ರೂಪಾಯಿ ಹಣ ಹಿಂದಿರಗಿಸುವಂತೆ ಅರ್ಜಿ ಸಲ್ಲಿಸಿದೆ. ಮರಗಳ ಗುರುತಿನಲ್ಲಿ ತಪ್ಪಾಗಿದ್ದರಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಭಾರತೀಯ ರೈಲ್ವೆ
ಭಾರತ ಸುದ್ದಿ
ಹಣ (Hana)

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved