MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • Tirupati Temple Experience: ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ? ಸತ್ಯ ಬಿಚ್ಚಿಟ್ಟ ಬೆಂಗಳೂರಿನ ವ್ಯಕ್ತಿ

Tirupati Temple Experience: ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ? ಸತ್ಯ ಬಿಚ್ಚಿಟ್ಟ ಬೆಂಗಳೂರಿನ ವ್ಯಕ್ತಿ

ಬೆಂಗಳೂರಿನ ಭಕ್ತರೊಬ್ಬರು ತಮ್ಮ ತಿರುಪತಿ ಯಾತ್ರೆಯಲ್ಲಿ ಎದುರಿಸಿದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಿರುಮಲಕ್ಕೆ ಬರುವ ಇತರ ಭಕ್ತರಿಗೆ ಜಾಗರೂಕರಾಗಿರಲು ಎಚ್ಚರಿಕೆ ನೀಡಿದ್ದಾರೆ.

2 Min read
Author : Mahmad Rafik
Published : Sep 22 2025, 10:17 PM IST
Share this Photo Gallery
  • FB
  • TW
  • Linkdin
  • Whatsapp
112
ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ
Image Credit : Perplexity AI

ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ

ತಿರುಮಲದ ಏಳು ಬೆಟ್ಟಗಳ ಮೇಲೆ ನೆಲೆಸಿರುವ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕಾಗಿ ಪ್ರತಿನಿತ್ಯ ಲಕ್ಷಾಂತರ ಜನರು ಬರುತ್ತಾರೆ. ಆಂಧ್ರ ಪ್ರದೇಶ ಮಾತ್ರವಲ್ಲ ದೇಶದ ಮೂಲೆ ಮೂಲೆಗಳಿಂದಲೂ ತಿರುಪತಿಗೆ ಭಕ್ತರು ಬರುತ್ತಾರೆ. ಭಗವಂತನ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೇ ಕಾಯುತ್ತಾರೆ. ಶ್ರೀನಿವಾಸನ ದರ್ಶನ ಸಿಗುತ್ತಿದ್ದಂತೆ ಸರತಿ ಸಾಲಿನಲ್ಲಿ ನಿಂತ ಎಲ್ಲಾ ದಣಿವು ಮಾಯವಾಗುತ್ತದೆ.

212
ಭಕ್ತರೇ ಹೋಟೆಲ್‌ಗಳ ಗ್ರಾಹಕರು
Image Credit : Gemini AI

ಭಕ್ತರೇ ಹೋಟೆಲ್‌ಗಳ ಗ್ರಾಹಕರು

ದರ್ಶನಕ್ಕಾಗಿ ಭಕ್ತರು ಕೆಲ ಸಮಯ ಸರತಿ ಸಾಲಿನಲ್ಲಿ ನಿಲ್ಲಲೇಬೇಕು. ಇದೀಗ ಕೆಲವರು ವೆಂಕಟೇಶ್ವರ ಸ್ವಾಮಿಯ ಮೇಲಿನ ಭಕ್ತರ ನಂಬಿಕೆಯನ್ನೇ ತಮ್ಮ ವ್ಯವಹಾರಕ್ಕಾಗಿ ಬಂಡವಾಳವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ತಿರುಪತಿಯಲ್ಲಿನ ಹೋಟೆಲ್‌ಗಳು ಭಕ್ತರಿಂದ ತುಂಬಿರುತ್ತವೆ. 

Related Articles

Related image1
ತಿರುಪತಿ ಹುಂಡಿಯಿಂದ ಕದ್ದ 100 ಕೋಟಿ ಹೋಗಿದ್ದೆಲ್ಲಿಗೆ? CCTV ದೃಶ್ಯ ಬಿಡುಗಡೆ
Related image2
ತಿರುಮಲ ಭಕ್ತಾದಿಗಳೇ ಮೊದಲು 9552300009 ಈ ಸಂಖ್ಯೆ ಸೇವ್ ಮಾಡ್ಕೊಳ್ಳಿ
312
ಭಕ್ತರಿಂದ ಹಣ ವಸೂಲಿ
Image Credit : others

ಭಕ್ತರಿಂದ ಹಣ ವಸೂಲಿ

ಆದ್ರೆ ಇಲ್ಲಿಯ ಕೆಲವು ಹೋಟೆಲ್‌ಗಳು ಭಕ್ತರನ್ನು ವಂಚಿಸಲು ಮುಂದಾಗುತ್ತಿದ್ದಾರೆ. ಈ ಸಂಬಂಧ ಭಕ್ತರೊಬ್ಬರು ತಿರುಮಲದಲ್ಲಿನ ತಮ್ಮ ಕಹಿ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದೆ.

412
ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ?
Image Credit : Social Media

ತಿರುಪತಿಯಲ್ಲಿ ಭಕ್ತರ ಪರಿಸ್ಥಿತಿ ಇಷ್ಟೊಂದು ಭೀಕರವಾಗಿದೆಯೇ?

ಬೆಂಗಳೂರಿನ ಭಕ್ತರೊಬ್ಬರು ಪತ್ನಿಯೊಂದಿಗೆ ತಿರುಮಲಕ್ಕೆ ಆಗಮಿಸಿದ್ದರು. ಈ ವೇಳೆ ಎದುರಿಸಿದ ತಮ್ಮ ಕಹಿ ಅನುಭವಗಳನ್ನು ಎಂದಿಗೂ ಮರೆಯಲೂ ಸಾಧ್ಯವಿಲ್ಲ ಅಂತ ಹೇಳಿದ್ದಾರೆ. ಹೋಟೆಲ್‌ಗಳು ಸ್ವಚ್ಛವಾಗಿರಲಿಲ್ಲ. ಇಲ್ಲಿಯ ಹೋಟೆಲ್ ಪರಿಸ್ಥಿತಿ ನೋಡಿ ನಾವು ಮೋಸ ಹೋಗಿದ್ದೇವೆ ಎಂದು ತಿಳಿಯಿತು. ಆದ್ದರಿಂದ ವೆಂಕಟೇಶ್ವರನ ದರ್ಶನಕ್ಕೆ ಬರುವ ಭಕ್ತರು ಯಾವಾಗಲೂ ಜಾಗರೂಕರಾಗಿರಬೇಕು ಎಂದು ಬೆಂಗಳೂರಿನ ವ್ಯಕ್ತಿ ಸಲಹೆ ನೀಡಿದ್ದಾರೆ

512
ಸಾಲು ಸಾಲು ಸಮಸ್ಯೆಗಳು ಎದುರಿಸಿ ಭಕ್ತ
Image Credit : Social Media

ಸಾಲು ಸಾಲು ಸಮಸ್ಯೆಗಳು ಎದುರಿಸಿ ಭಕ್ತ

ಕುಟುಂಬದ ಜೊತೆ ಬೆಂಗಳೂರಿನಿಂದ ರೈಲಿನ ಮೂಲಕ ತಿರುಪತಿಗೆ ಬರುತ್ತಾರೆ. ರೈಲ್ವೆ ನಿಲ್ದಾಣದಲ್ಲಿರುವ ಹೋಟೆಲ್‌ಗೆ ಊಟ ಮಾಡಲು ಹೋದಾಗ ಸಮಸ್ಯೆಗಳು ಆರಂಭವಾದವು. ಆಹಾರ ರುಚಿಕರವಾಗಿರಲಿಲ್ಲ ಮತ್ತು ಸುತ್ತಲಿನ ವಾತಾವರಣ ಶುಚಿಯಾಗಿರಲಿಲ್ಲ. ಹೋಟೆಲ್ ಸಿಬ್ಬಂದಿ ನಡವಳಿಕೆಯೂ ಚೆನ್ನಾಗಿರಲಿಲ್ಲ ಎಂದು ಭಕ್ತರು ಬೇಸರ ವ್ಯಕ್ತಪಡಿಸಿದರು.

612
ಕಳಪೆ ಆಹಾರ
Image Credit : Google

ಕಳಪೆ ಆಹಾರ

ಆ ಹೋಟೆಲ್‌ನಲ್ಲಿ ತಿಂದ ಎರಡು ಚಪಾತಿಗಳು ಉಪ್ಪಿನಿಂದ ತುಂಬಿತ್ತು. ಅಲ್ಲಿಯ ಸೆಟ್ ದೋಸೆ ಕೆಟ್ಟದಾಗಿತ್ತು. ಆಹಾರ ರುಚಿಯಾಗಿಲ್ಲ ಎಂದು ಹೇಳಿದಾಗ ಯಾವ ಸಿಬ್ಬಂದಿಯೂ ಸರಿಯಾಗಿ ಪ್ರತಿಕ್ರಿಯಿಸಿಲಿಲ್ಲ. ಕೊನೆಗೂ ಹೋಟೆಲ್‌ನಲ್ಲಿಯೂ ಪಾತ್ರೆ, ತಟ್ಟೆ ಮತ್ತು ಚಮಚಗಳು ಕ್ಲೀನ್ ಆಗಿರಲಿಲ್ಲ ಎಂದು ಅಲ್ಲಿಯ ಪರಿಸ್ಥಿತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 

712
ದುಪ್ಪಟ್ಟು ಬಿಲ್
Image Credit : Getty

ದುಪ್ಪಟ್ಟು ಬಿಲ್

ಕಳಪೆ ಆಹಾರ ನೀಡಿದ್ದಕ್ಕೆ ಫೈವ್ ಸ್ಟಾರ್ ಹೋಟೆಲ್ ರೀತಿಯಲ್ಲಿ ಬಿಲ್ ನೀಡಿದ್ದರು. ಕೇವಲ ಎರಡು ಚಪಾತಿ ಮತ್ತು ಒಂದು ಸೆಟ್ ದೋಸೆಗೆ 480 ರೂಪಾಯಿ ಬಿಲ್ ನೀಡಿದರು. ನಾನು ಬಿಲ್ ನೋಡಿ ಏನು ಮಾತನಾಡದೇ ಹಣ ಪಾವತಿಸಿ ಬಂದೆ ಎಂದು ಹೇಳಿಕೊಂಡಿದ್ದಾರೆ.

812
ಹೋಟೆಲ್ ಸಿಬ್ಬಂದಿ ನಿಂದನೆ
Image Credit : Getty

ಹೋಟೆಲ್ ಸಿಬ್ಬಂದಿ ನಿಂದನೆ

ಆ ದಿನ ಅಲ್ಲಿಯೇ ಉಳಿದುಕೊಳ್ಳಲು ಆನ್‌ಲೈನ್‌ ಮುಖಾಂತರ ಹೋಟೆಲ್ ನೋಡಿ ರೂಮ್ ಬುಕ್ ಮಾಡಿದೆ. ಆದ್ರೆ ಅಲ್ಲಿ ಹೋಗಿ ನೋಡಿದಾಗ ಶಾಕ್ ಆಯ್ತು. ರೂಮ್ ತುಂಬಾ ಕೊಳಕಾಗಿದ್ದವು. ಅಲ್ಲಿಂದ ಹೊರಡಲು ಮುಂದಾದ್ರೆ ಹೋಟೆಲ್ ಸಿಬ್ಬಂದಿ ತಮ್ಮನ್ನು ಬೆದರಿಸಿ ತೆಲುಗಿನಲ್ಲಿ ತುಂಬಾ ಅಸಹ್ಯಕರ ರೀತಿಯಲ್ಲಿ ನಿಂದಿಸಿದರು ಎಂದು ಭಕ್ತ ಹೇಳಿಕೊಂಡಿದ್ದಾರೆ.

912
ಹೆಚ್ಚಿನ ಹಣಕ್ಕೆ ಡಿಮ್ಯಾಂಡ್
Image Credit : our own

ಹೆಚ್ಚಿನ ಹಣಕ್ಕೆ ಡಿಮ್ಯಾಂಡ್

ಈ ಹೋಟೆಲ್‌ನಲ್ಲಿ ಒಂದು ರಾತ್ರಿ ತಂಗಲು 1000 ರೂ. ಶುಲ್ಕ ವಿಧಿಸುವುದಾಗಿ ಆನ್‌ಲೈನ್‌ನಲ್ಲಿ ತೋರಿಸಲಾಗಿತ್ತು. ಆದರೆ ಅಲ್ಲಿಯ ಸಿಬ್ಬಂದಿ 1500 ರೂ.ಗೆ ಬೇಡಿಕೆ ಇರಿಸಿದರು. ಕೊನೆಗೆ ಏನು ಮಾಡಲಾಗದೇ ಹಲ್ಲಿ, ಸೊಳ್ಳೆ, ಜಿರಳೆ, ಇಲಿ ಮತ್ತು ಜೇಡ ಗೂಡುಗಳಿರುವ ಆ ಅಶುದ್ಧ ಕೋಣೆಯಲ್ಲಿ ಇರಬೇಕಾಯಿತು ಎಂದಿದ್ದಾರೆ.

ಇದನ್ನೂ ಓದಿ: ಮೈಸೂರಿನ ಜನತೆಗಾಗಿ ತಿರುಪತಿಗೆ KSTDC ವಿಶೇಷ ಟೂರ್ ಪ್ಯಾಕೇಜ್; ಟಿಕೆಟ್ ಬೆಲೆ ಎಷ್ಟು?

1012
ಬೆಂಗಳೂರಿನ ಭಕ್ತ
Image Credit : Freepik

ಬೆಂಗಳೂರಿನ ಭಕ್ತ

ಆ ದಿನ ರಾತ್ರಿ ಹೋಟೆಲ್‌ನಲ್ಲಿ ಉಳಿದುಕೊಂಡು ಮರುದಿನ ಶ್ರೀನಿವಾಸನ ದರ್ಶನ ಪಡೆದುಕೊಂಡಿದ್ದಾರೆ. ಬಾಲಾಜಿ ದರ್ಶನ ಸಿಗುತ್ತಿದ್ದಂತೆ ಭಕ್ತರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಬೆಂಗಳೂರು ತಲುಪಿದ ಬಳಿಕ ತಿರುಪತಿಯಲ್ಲಿನ ತಮ್ಮ ಅನುಭವಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತಿರುಪತಿಗೆ 1 ಕೋಟಿ ರೂ ನಗದು, 25 ಲಕ್ಷ ರೂ ಚಿನ್ನಾಭರಣ ಕಾಣಿಕೆ ನೀಡಿದ ಬೆಂಗಳೂರು ಭಕ್ತ

1112
ತಿರುಮಲ ಭಕ್ತರೇ, ಜಾಗರೂಕರಾಗಿರಿ!
Image Credit : our own

ತಿರುಮಲ ಭಕ್ತರೇ, ಜಾಗರೂಕರಾಗಿರಿ!

  • ತಿರುಮಲದ ವೆಂಕಟೇಶ್ವರನ ದರ್ಶನಕ್ಕಾಗಿ ತಿರುಪತಿಯಲ್ಲಿ ತಂಗುವ ಭಕ್ತರು, ವಿಶೇಷವಾಗಿ ರೈಲು ನಿಲ್ದಾಣದ ಬಳಿಯಲ್ಲಿರುವ ಹೋಟೆಲ್‌ಗಳ ಬಗ್ಗೆ ಜಾಗರೂಕರಾಗಿರಬೇಕು. ಅಧಿಕೃತ ಆಪ್ ಮೂಲಕವೇ ಕೋಣೆಗಳನ್ನು ಬುಕ್ ಮಾಡಿಕೊಳ್ಳಿ.
  • ತಿರುಮಲಕ್ಕೆ ಹೋಗುವ ಮುನ್ನ ಎಲ್ಲಾ ವಿಷಯಗಳನ್ನು ತಿಳಿದುಕೊಳ್ಳಿ. ಹೋದ ನಂತರ ಸುಮ್ಮನೆ ಸಮಸ್ಯೆಗೆ ಸಿಲುಕಬೇಡಿ.
  • ತಿರುಪತಿಗೆ ಹೋದರೆ, ನೈರ್ಮಲ್ಯವಿಲ್ಲದ ಪರಿಸ್ಥಿತಿಗಳು ಮತ್ತು ವಂಚನೆಗಳನ್ನು ಎದುರಿಸಲು ಸಿದ್ಧರಾಗಿರಬೇಕು.
  • ದರ್ಶನಕ್ಕಾಗಿ ತಿರುಪತಿಗೆ ಪ್ರಯಾಣಿಸುವ ಇತರ ರಾಜ್ಯಗಳ ಭಕ್ತರಿಗೆ ಭಾಷಾ ಅಡೆತಡೆಗಳು ಎದುರಾಗಬಹುದು.
1212
 KSTDC ಪ್ಯಾಕೇಜ್
Image Credit : our own

KSTDC ಪ್ಯಾಕೇಜ್

ಬೆಂಗಳೂರು ಮತ್ತು  ಮೈಸೂರು  ಜನತೆಗೆ KSTDC ತಿರುಪತಿ ಭಕ್ತರಿಗಾಗಿ ವಿಶೇಷ ಪ್ಯಾಕೇಜ್‌ಗಳನ್ನು ನೀಡುತ್ತಿದೆ. ಭಕ್ತರು ಹೆಚ್ಚಿನ ಮಾಹಿತಿಗಾಗಿ KSTDCವೆಬ್‌ಸೈಟ್‌ಗೆ  ಭೇಟಿ ನೀಡಬಹುದು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ತಿರುಪತಿ
ಆಂಧ್ರ ಪ್ರದೇಶ
ವೈರಲ್ ಸುದ್ದಿ
ಸಾಮಾಜಿಕ ಮಾಧ್ಯಮ

Latest Videos
Recommended Stories
Recommended image1
ಮದುವೆಗೆ ಮೂರೇ ದಿನ ಇರುವಾಗ ಗುಟ್ಟು ರಟ್ಟು ಮಾಡಿದ ರಶ್ಮಿಕಾ-ವಿಜಯ್; ಎಲ್ಲದಕ್ಕೂ ಅದೊಂದೇ ಕಾರಣವೇ?!
Recommended image2
ಕೇರಳ ರಾಜ್ಯದ ಹೆಸರು ಬದಲಾಯಿಸಲು ಕೇಂದ್ರ ಸರ್ಕಾರ ಒಪ್ಪಿಗೆ, ರಾಜ್ಯಕ್ಕೆ ಈಗ ಮಲಯಾಳಿ ಹೆಸರು!
Recommended image3
ಸೆX ರಾಕೆಟ್‌ಗೆ ಬಳಸಿ ನಂತ್ರ ಹುಡುಗಿಯರ ಮತಾಂತರ, ಕಿಂಗ್ ಪಿನ್ ಅಮ್ರೀನ್ ಅಫ್ರೀನ್ ಸಿಸ್ಟರ್ಸ್ ಅರೆಸ್ಟ್
Related Stories
Recommended image1
ತಿರುಪತಿ ಹುಂಡಿಯಿಂದ ಕದ್ದ 100 ಕೋಟಿ ಹೋಗಿದ್ದೆಲ್ಲಿಗೆ? CCTV ದೃಶ್ಯ ಬಿಡುಗಡೆ
Recommended image2
ತಿರುಮಲ ಭಕ್ತಾದಿಗಳೇ ಮೊದಲು 9552300009 ಈ ಸಂಖ್ಯೆ ಸೇವ್ ಮಾಡ್ಕೊಳ್ಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved