MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಕರ್ನಾಟಕದಲ್ಲಿನ ಮುಸ್ಲಿಂ ಮೀಸಲು ಇಸ್ಲಾಮೀಕರಣದ ಭಾಗ: ಉತ್ತರ ಪ್ರದೇಶ ಸಿಎಂ ಯೋಗಿ ಕಿಡಿ

ಕರ್ನಾಟಕದಲ್ಲಿನ ಮುಸ್ಲಿಂ ಮೀಸಲು ಇಸ್ಲಾಮೀಕರಣದ ಭಾಗ: ಉತ್ತರ ಪ್ರದೇಶ ಸಿಎಂ ಯೋಗಿ ಕಿಡಿ

ಒಬಿಸಿ ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಪ್ರಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಮತ್ತು ವಿಜಭನೆ ಮಾಡುವ ಅಜೆಂಡಾದ ಭಾಗವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

1 Min read
Govindaraj S
Published : Apr 26 2024, 04:49 AM IST
Share this Photo Gallery
  • FB
  • TW
  • Linkdin
  • Whatsapp
15

ಲಖನೌ (ಏ.26): ಒಬಿಸಿ ಕೋಟಾದಲ್ಲಿ ಮುಸ್ಲಿಮರಿಗೆ ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಪ್ರಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಮತ್ತು ವಿಜಭನೆ ಮಾಡುವ ಅಜೆಂಡಾದ ಭಾಗವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

25

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ, ‘ಕರ್ನಾಟಕದಲ್ಲಿ ಏನಾಗಿದೆಯೇ ಅದು ದುರದೃಷ್ಟಕರ. ಕಾಂಗ್ರೆಸ್‌ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಆದಿವಾಸಿಗಳು ಮತ್ತು ಹಿಂದುಳಿದ ಸಮುದಾಯದವರ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತದೆ. ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವ ಯತ್ನವು ದೇಶವನ್ನು ಇಸ್ಲಾಮೀಕರಣ ಮಾಡುವ ಅಜೆಂಡಾದ ಭಾಗವಾಗಿದೆ. 

35

ಈ ಬಗ್ಗೆ ಮತದಾರರು ಎಚ್ಚೆತ್ತುಕೊಳ್ಳಬೇಕು’ ಎಂದು ಕರೆ ನೀಡಿದರು.  ಜೊತೆಗೆ ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ನ್ಯಾ. ರಂಗನಾಥ್‌ ಮಿಶ್ರಾ ಆಯೋಗ, ಸಾಚಾರ್‌ ಆಯೋಗ ಕೂಡ ಹೀಗೆ ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ ನೀಡುವ ಶಿಫಾರಸು ಮಾಡಿದ್ದವು. ಆಗ ಕೂಡ ಬಿಜೆಪಿ ಇದರ ವಿರುದ್ಧ ದೊಡ್ಡ ಹೋರಾಟ ನಡೆಸಿತ್ತು ಎಂದು ಸಿಎಂ ಯೋಗಿ ಹೇಳಿದರು. 

45

ಕಾಂಗ್ರೆಸ್‌ ಬಂದಲ್ಲಿ ಷರಿಯಾ ಕಾನೂನು ಜಾರಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ಭಾರತದಾದ್ಯಂತ ಮುಸ್ಲಿಮರ ವೈಯಕ್ತಿಕ ಕಾನೂನು ಗುಚ್ಛವಾದ ಷರಿಯಾ ನೀತಿಗಳನ್ನು ಜಾರಿ ಮಾಡಲಿದೆ ಎಂದು ಆರೋಪಿಸಿದ್ದಾರೆ. ‘ಕಾಂಗ್ರೆಸ್‌ ಮತ್ತು ಅದರ ಅಂಗಪಕ್ಷಗಳು ರಾಷ್ಟ್ರಕ್ಕೆ ದ್ರೋಹ ಮಾಡಿದ್ದು, ಮತ್ತೊಮ್ಮೆ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ (ಜನರ) ಮುಂದೆ ಬಂದಿದೆ. 

55

ಅವರ ಪ್ರಣಾಳಿಕೆಯಲ್ಲಿ ವ್ಯಕ್ತಿಗತ ಕಾನೂನು ಜಾರಿ ಮಾಡುವುದಾಗಿ ಹೇಳಿದ್ದಾರೆ. ಅಂದರೆ ಮುಸ್ಲಿಮರ ಷರಿಯಾ ಕಾನೂನು ಜಾರಿ ಮಾಡುವ ಮೂಲಕ ಪ್ರಧಾನಿ ಮೋದಿ ಕಿತ್ತೊಗೆದ ತ್ರಿವಳಿ ತಲಾಖ್‌ ಮತ್ತೆ ಜಾರಿ ಮಾಡಲು ಸಂಚು ರೂಪಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಕಾಂಗ್ರೆಸ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved