MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ದಿಲ್ಲಿಗೆ ಹೋಗುವೆ ಎಂದು ಪಾಕಿಸ್ತಾನಕ್ಕೆ ಹೋಗ್ತಿದ್ದ ಜ್ಯೋತಿ; ಪಾಕ್‌ ಗೂಢಚಾರಿಣಿಯ ಮತ್ತಷ್ಟು ರಹಸ್ಯ ಬಯಲು

ದಿಲ್ಲಿಗೆ ಹೋಗುವೆ ಎಂದು ಪಾಕಿಸ್ತಾನಕ್ಕೆ ಹೋಗ್ತಿದ್ದ ಜ್ಯೋತಿ; ಪಾಕ್‌ ಗೂಢಚಾರಿಣಿಯ ಮತ್ತಷ್ಟು ರಹಸ್ಯ ಬಯಲು

ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪದ ಮೇಲೆ ಬಂಧಿತಳಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ದೆಹಲಿಗೆ ಹೋಗುವುದಾಗಿ ಸುಳ್ಳು ಹೇಳಿ ಪಾಕಿಸ್ತಾನಕ್ಕೆ ತೆರಳಿದ್ದಳು ಎಂದು ತಿಳಿದುಬಂದಿದೆ. ಆಕೆಯ ಹಣಕಾಸು ವಹಿವಾಟುಗಳು ಮತ್ತು ಪ್ರಯಾಣದ ವಿವರಗಳ ಬಗ್ಗೆ ತನಿಖೆ ನಡೆಯುತ್ತಿದೆ.

1 Min read
Kannadaprabha News
Published : May 21 2025, 07:18 AM IST
Share this Photo Gallery
  • FB
  • TW
  • Linkdin
  • Whatsapp
14

ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸುಳ್ಳಿನ ಮತ್ತೊಂದು ಕಥೆ ಬಿಚ್ಚಿಕೊಂಡಿದೆ. ಆಕೆಯ ಹೆತ್ತವರಿಗೆ ದೆಹಲಿಗೆ ಹೋಗುತ್ತೇನೆ ಎಂದು ಸುಳ್ಳು ಹೇಳಿ ಪಾಕಿಸ್ತಾನಕ್ಕೆ ತೆರಳಿದ್ದಾಳೆ ಎನ್ನುವುದು ಬಯಲಾಗಿದೆ.

24

ಈ ಬಗ್ಗೆ ಆಕೆಯ ತಂದೆ ಹರೀಶ್ ಮಲ್ಹೋತ್ರಾ ಮಾಧ್ಯಮಗಳಲ್ಲಿ ಮಾತನಾಡಿದ್ದು, ‘ ಅವಳು ದೆಹಲಿಗೆ ಹೋಗುವುದಾಗಿ ಹೇಳಿ ಹೋಗುತ್ತಿದ್ದಳು. ಅವಳು ನನಗೆ ಏನನ್ನೂ ಹೇಳಿರಲಿಲ್ಲ ಎಂದು ತಿಳಿದು ಬಂದಿದೆ.

Related Articles

Related image1
52ರ ವಯಸ್ಸಲ್ಲಿ 30ರ ಪಾಕಿ ಬಲೆಗೆ: ಭಾರತದ ಮಾಹಿತಿ ಸೋರಿಕೆ ಮಾಡಿ ಸಿಕ್ಕಿಬಿದ್ದ ಐಎಫ್​ಎಸ್​ ಅಧಿಕಾರಿ!
Related image2
Pakistan ISI Funding: ಭಾರತದ ವಿರುದ್ಧ ಗೂಢಚರ್ಯೆಗೆ ಅಬ್ಬಾ ಪಾಕಿಸ್ತಾನ ಇಷ್ಟು ಹಣ ಕೊಡತ್ತಾ?
34

ಕೋವಿಡ್‌ಗೂ ಮುನ್ನ ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದಳು. ಆ ಬಳಿಕ ಅವಳು ಅಲ್ಲಿ ಕೆಲಸ ಬಿಟ್ಟಿದ್ದಳು. ಆಕೆಯ ಯೂಟ್ಯೂಬ್ ಅಥವಾ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ನನಗೆ ತಿಳಿದಿಲ್ಲ, ಅವಳು ಮನೆಯಲ್ಲಿ ವಿಡಿಯೋಗಳನ್ನು ಮಾಡುತ್ತಿದ್ದಳು’ ಎಂದಿದ್ದಾರೆ. ಈ ಮೂಲಕ ದಿಲ್ಲಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಆಕೆ ಪಾಕಿಸ್ತಾನಿಗಳ ಸಂಗ ನಡೆಸುತ್ತಿರುವುದು ಈಗ ಬಯಲಾಗಿದೆ.

44

ಸತತ ವಿಚಾರಣೆ:

ಈ ನಡುವೆ, ಜ್ಯೋತಿ ಮಲ್ಹೋತ್ರಾಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ, ಗುಪ್ತಚರ ಬ್ಯೂರೋ ಮತ್ತು ಮಿಲಿಟರಿ ಗುಪ್ತಚರ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಆಕೆಯ ಹಣಕಾಸು ವಹಿವಾಟುಗಳು ಮತ್ತು ಪ್ರಯಾಣದ ವಿವರಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಪಾಕಿಸ್ತಾನ
ಭಾರತ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved