MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • Bharat Jodo Yatra: 136 ದಿನ, 3570 ಕಿಲೋಮೀಟರ್‌ ದೇಶದ ಗಮನಸೆಳೆದ ರಾಹುಲ್‌ ಗಾಂಧಿಯ ಚಿತ್ರಗಳು..!

Bharat Jodo Yatra: 136 ದಿನ, 3570 ಕಿಲೋಮೀಟರ್‌ ದೇಶದ ಗಮನಸೆಳೆದ ರಾಹುಲ್‌ ಗಾಂಧಿಯ ಚಿತ್ರಗಳು..!

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಮಹತ್ವಾಕಾಂಕ್ಷೆಯ ಭಾರತ್‌ ಜೋಡೋ ಯಾತ್ರೆಯನ್ನು ಸಮಾಪ್ತಿ ಮಾಡಿದ್ದಾರೆ. 136 ದಿನಗಳ ಕಾಲ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ 3570 ಕಿಲೋಮೀಟರ್‌ ಪ್ರಯಾಣದ ಮುಕ್ತಾಯದಲ್ಲಿ ರಾಹುಲ್‌ ಗಾಂಧಿಯ ವರ್ಣರಂಜಿತ ವ್ಯಕ್ತಿತ್ವ ಬಿತ್ತರವಾದವು. ಅದರ ಚಿತ್ರ ಹೂರಣ ಇಲ್ಲಿದೆ.

3 Min read
Author : Santosh Naik
Published : Jan 30 2023, 08:41 PM IST
Share this Photo Gallery
  • FB
  • TW
  • Linkdin
  • Whatsapp
121

ಸೆಪ್ಟೆಂಬರ್‌ 7 ರಂದು ಕನ್ಯಾಕುಮಾರಿಯಿಂದ ರಾಹುಲ್‌ ಗಾಂಧಿಯವರ ಭಾರತ್‌ ಜೋಡ ಯಾತ್ರೆ ಆರಂಭವಾಗಿತ್ತು. ಶ್ರೀಪರಂಬದೂರಿನಲ್ಲಿ ತಂದೆ ರಾಜೀವ್‌ ಗಾಂಧಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿ ರಾಹುಲ್‌ ಗಾಂಧಿ ಸುದೀರ್ಘ ಪಾದಯಾತ್ರೆ ಆರಂಭ ಮಾಡಿದ್ದರು.

221

ಕನ್ಯಾಕುಮಾರಿಯಿಂದ ಆರಂಭವಾದ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ ಸೋಮವಾರ (ಜನವರಿ 30) ಶ್ರೀನಗರದಲ್ಲಿ ಕೊನೆಗೊಂಡಿತು. ಈ ಪ್ರಯಾಣವು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಹಾದುಹೋಯಿತು. ಈ ವೇಳೆ ರಾಹುಲ್ ಗಾಂಧಿ 3 ಸಾವಿರದ 570 ಕಿಲೋಮೀಟರ್ ಪಾದಯಾತ್ರೆ ಮಾಡಿದ್ದಾರೆ.

321

ಕನ್ಯಾಕುಮಾರಿಯ ಬಳಿಕ ತಿರುವನಂತಪುರಂ (ಕೇರಳ), ಕೊಚ್ಚಿ (ಕೇರಳ), ನಿಲಂಬೂರ್ (ಕೇರಳ), ಮೈಸೂರು (ಕರ್ನಾಟಕ), ಬಳ್ಳಾರಿ (ಕರ್ನಾಟಕ), ರಾಯಚೂರು (ಕರ್ನಾಟಕ), ವಿಕಾರಾಬಾದ್ (ತೆಲಂಗಾಣ), ನಾಂದೇಡ್ (ಮಹಾರಾಷ್ಟ್ರ), ಜಲಗಾಂವ್ ಜಾಮೋದ್ (ಮಹಾರಾಷ್ಟ್ರ). ), ಇಂದೋರ್ (ಮಧ್ಯಪ್ರದೇಶ), ಕೋಟಾ (ರಾಜಸ್ಥಾನ), ದೌಸಾ (ರಾಜಸ್ಥಾನ), ಅಲ್ವಾರ್ (ರಾಜಸ್ಥಾನ), ಬುಲಂದ್‌ಶಹರ್ (ಉತ್ತರ ಪ್ರದೇಶ), ದೆಹಲಿ, ಅಂಬಾಲಾ (ಹರಿಯಾಣ), ಪಠಾಣ್‌ಕೋಟ್ (ಪಂಜಾಬ್), ಜಮ್ಮು (ಜಮ್ಮು-ಕಾಶ್ಮೀರ) ಮತ್ತು ಶ್ರೀನಗರ ( ಜಮ್ಮು-ಕಾಶ್ಮೀರ) ಸ್ಥಳದೊಂದಿಗೆ ಮುಕ್ತಾಯ ಕಂಡಿತು.

421

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು. ಯಾತ್ರೆ ಕರ್ನಾಟಕದ ಮಂಡ್ಯ ತಲುಪಿದಾಗ ಸೋನಿಯಾ ಗಾಂಧಿ ಭಾಗವಹಿಸಿದ್ದರು. ಆ ವೇಳೆ ಸೋನಿಯಾ ಗಾಂಧಿ ಅವರ ಶೂ ಲೇಸ್‌ ಬಿಚ್ಚಿ ಹೋದಾಗ, ರಾಹುಲ್ ಗಾಂಧಿ ಅದನ್ನು ಕಟ್ಟಿದ ಚಿತ್ರ ವೈರಲ್‌ ಆಗಿತ್ತು.

521

ಕರ್ನಾಟಕದಲ್ಲಿ ಭಾರತ್‌ ಜೋಡೋ ಯಾತ್ರೆ ನಡೆಯುವ ವೇಳೆ ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಹೆಜ್ಜೆ ಹಾಕಿದ ಚಿತ್ರಗಳೂ ಗಮನಸೆಳೆದಿದ್ದವು.

621

ಯಾತ್ರೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಲಕ್ಷಗಟ್ಟಲೆ ಜನರನ್ನು ಭೇಟಿ ಮಾಡಿದ್ದೇನೆ, ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದರು. ಈ ಅನುಭವವನ್ನು ನಿಮಗೆ ವಿವರಿಸಲು ನನ್ನ ಬಳಿ ಪದಗಳಿಲ್ಲ ಎಂದಿದ್ದಾರೆ.
 

 

 

721

ಭಾರತ್‌ ಜೋಡೋ ಯಾತ್ರೆಯ ಉದ್ದೇಶ ದೇಶವನ್ನು ಒಗ್ಗೂಡಿಸುವುದು. ಈ ಯಾತ್ರೆಯು ದೇಶದಾದ್ಯಂತ ಹರಡಿರುವ ಹಿಂಸಾಚಾರ ಮತ್ತು ದ್ವೇಷದ ವಿರುದ್ಧವಾಗಿತ್ತು. ಅದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಾವು ಭಾರತದ ಜನರ ತಾಳ್ಮೆಯನ್ನು ಅವರ  ಶಕ್ತಿಯನ್ನು ನೇರವಾಗಿ ನೋಡಿದ್ದೇವೆ ಎಂದು ಹೇಳಿದ್ದಾರೆ.

821

136 ದಿನಗಳ ಈ ಪಯಣದಲ್ಲಿ ರಾಹುಲ್ ಗಾಂಧಿ 12 ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅದೇ ಸಮಯದಲ್ಲಿ, 100 ಕ್ಕೂ ಹೆಚ್ಚು ಕಾರ್ನರ್ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ನಡೆಸಿದರು.

921

ಅದರೊಂದಿಗೆ ರಾಹುಲ್‌ 275ಕ್ಕೂ ಅಧಿಕ ವಾಕಿಂಗ್‌ ಸಂವಾದಗಳು, 100ಕ್ಕೂ ಅಧಿಕ ಬೈಠಕ್‌ಗಳನ್ನು ರಾಹುಲ್‌ ಗಾಂಧಿ ನಡೆಸಿದ್ದಾರೆ. ಬಾಕ್ಸರ್‌ ವಿಜೇಂದರ್‌ ಸಿಂಗ್‌ ಕೂಡ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

1021

ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದ ಇಂದೋರ್ ತಲುಪಿದಾಗ ಕೆಲವರು 'ಮೋದಿ-ಮೋದಿ' ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಇದಕ್ಕೆ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿದ್ದರು. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

1121

ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಲೇಶ್ವರ ದೇವಸ್ಥಾನಕ್ಕೆ ಮಧ್ಯಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತೆರಳಿದ್ದರು. ಈ ವೇಳೆ ಅವರು ದೇವರಿಗೆ ಉದ್ದಂಡ ನಮಸ್ಕಾರ ಮಾಡಿದ ಚಿತ್ರ ಕೂಡ ಗಮನಸೆಳೆದಿತ್ತು.

 

 

 

1221

ಭಾರತ್ ಜೋಡೋ ಯಾತ್ರೆ ರಾಜಸ್ಥಾನದ ದೌಸಾ ತಲುಪಿದಾಗ, ರಾಹುಲ್ ಗಾಂಧಿ ರೈತರ ಮನೆಯಲ್ಲಿ ತಂಗಿದ್ದರು. ಇಲ್ಲಿ ಅವರು ಹುಲ್ಲು ಕತ್ತರಿಸುವ ಯಂತ್ರದ ಅನುಭವ ಪಡೆದುಕೊಂಡಿದ್ದರು.. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಹುಲ್ಲು ಕತ್ತರಿಸಲು ಪ್ರಯತ್ನಿಸಿದರು.

1321

ಮೈಸೂರಿನಲ್ಲಿ ರಾಹುಲ್‌ ಗಾಂದಿ ಭಾರತ್‌ ಜೋಡೋ ಪಾದಯಾತ್ರೆ ಸಾಗುತ್ತಿದ್ದ ವೇಳೆ ರಾಹುಲ್‌ ಗಾಂಧಿ ಭಾರೀ ಮಳೆಯ ನಡುವೆಯೂ ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಇದರ ಚಿತ್ರಗಳು ಕೆಲ ಕಾಲ ಕಾಂಗ್ರೆಸ್‌ ಕಾರ್ಯಕರ್ತರ ಡಿಪಿ ಆಗಿದ್ದದ್ದು ಸುಳ್ಳಲ್ಲ.

1421

ಉತ್ತರ ಭಾರತದ ಪ್ರಯಾಣದ ವೇಳೆ ರಾಹುಲ್ ಗಾಂಧಿ ಬಿಳಿ ಟೀ ಶರ್ಟ್ ಧರಿಸಿದ್ದರು. ಚಳಿಯಲ್ಲೂ ಬರೀ ಟೀ ಶರ್ಟ್ ಹಾಕಿಕೊಂಡು ರಾಹುಲ್‌ ಪಾದಯಾತ್ರೆ ಮಾಡಿದ್ದ ಅಚ್ಚರಿ ನೀಡಿತ್ತು. ರಾಹುಲ್ ಗಾಂಧಿಗೆ ಚಳಿ ಆಗೋದಿಲ್ಲವೇ ಎನ್ನುವ ಪ್ರಶ್ನೆಯೂ ಎದುರಾಗಿತ್ತು ಅದಕ್ಕೆ ಸಭೆಯಲ್ಲಿ ಉತ್ತರಿಸಿದ್ದ ಅವರು, 'ಒಂದು ದಿನ ಬೆಳಿಗ್ಗೆ 6 ಗಂಟೆಗೆ ಯಾತ್ರೆಯ ವೇಳೆ ಮೂವರು ಮಕ್ಕಳು ತಮ್ಮ ಬಳಿಗೆ ಬಂದರು, ಅವರು ಫೋಟೋ ತೆಗೆಯಲು ಬಯಸಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದರು.  ನಾನು ಆ ಮಕ್ಕಳನ್ನು ಹಿಡಿದಾಗ, ಅವರು ಚಳಿಯಿಂದ ನಡುಗುತ್ತಿದ್ದರು' ಎಂದರು

1521

ಅದೇ ದಿನ ಚಳಿ ಅಸಹನೀಯವಾಗುವವರೆಗೆ, ಚಳಿಯಿಂದ ನಡುಗುವವರೆಗೆ ಸ್ವೆಟರ್ ಧರಿಸುವುದಿಲ್ಲ ಎಂದು ನಾನು ನಿರ್ಧರಿಸಿದ್ದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಿಮಗೆ ಚಳಿಯಾಗುತ್ತಿದ್ದರೆ ನನಗೂ ಆ ಅನುಭವವಾಗುತ್ತಿದೆ ಮತ್ತು ನೀವು ಸ್ವೆಟರ್ ಧರಿಸಿದ ದಿನ ರಾಹುಲ್ ಗಾಂಧಿ ಸ್ವೆಟರ್ ಧರಿಸುತ್ತಾರೆ ಎಂಬ ಮಾತನ್ನು ಆ ಮಕ್ಕಳಿಗೆ ಹೇಳಿದ್ದೆ ಎಂದರು.

1621

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಭಾರತ್‌ ಜೋಡೀ ಯಾತ್ರೆ ಸಾಗಿದಾಗ ಪ್ರಿಯಾಂಕಾ ವಾದ್ರಾ ಕೂಡ ಭಾಗಿಯಾಗಿದ್ದರು. ಈ ವೇಳೆ ಪ್ರಿಯಾಂಕ ಅವರನ್ನು ಹಿಡಿದು ರಾಹುಲ್‌ ಮುತ್ತು ನೀಡಿದ್ದರು.

 

 

1721

ಹರಿಯಾಣದ ಕುರುಕ್ಷೇತ್ರಕ್ಕೆ ಯಾತ್ರೆ ಬಂದಾಗ ರಾಹುಲ್‌ ಗಾಂಧಿ ಅಲ್ಲಿನ ಬ್ರಹ್ಮ ಸರೋವರದಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಿದ್ದರು. 

1821

ಪಂಜಾಬ್‌ನ ಫತೇಗರ್‌ ಸಾಹಿಬ್‌ಗೆ ಯಾತ್ರೆ ತೆರಳಿದಾಗ, ಅಲ್ಲಿನ ಫತೇಗರ್‌ ಸಾಹಿಬ್‌ ಗುರುದ್ವಾರಕ್ಕೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದರು. ಸಾಂಪ್ರದಾಯಿಕ ಸಿಖ್‌ ಪೇಟವನ್ನು ಅವರು ಈ ವೇಳೆ ಧರಿಸಿದ್ದರು.

 

 

1921

ಭಾರತ್‌ ಜೋಡೋ ಯಾತ್ರೆಯ ವೇಳೆ ಸಾಕಷ್ಟು ಸೆಲಿಬ್ರಿಟಿಗಳು ಕೂಡ ಭಾಗವಹಿಸಿದ್ದರು. ಬಾಕ್ಸರ್‌ ವಿಜೇಂದರ್‌ ಸಿಂಗ್‌, ಮಾಜಿ ಆರ್‌ಬಿಐ ಗವರ್ನರ್‌ ರಘುರಾಮ್‌ ರಾಜನ್‌, ಚಿತ್ರನಟಿಯರಾದ ರಿಯಾ ಸೆನ್‌, ಸ್ವರ ಭಾಸ್ಕರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

2021

ಶ್ರೀನಗರದಲ್ಲಿ ಸೋಮವಾರ ಭಾರತ್‌ ಜೋಡೋ ಯಾತ್ರೆ ಅಂತ್ಯಗೊಳ್ಳುವ ಮುನ್ನ ಅಕ್ಕ ಪ್ರಿಯಾಂಕಾ ವಾದ್ರಾ ಜೊತೆ ರಾಹುಲ್‌ ಗಾಂಧಿ ಹಿಮದಲ್ಲಿ ಆಟವಾಡಿದರು. ಬಳಿಕ ರಾಷ್ಟ್ರಧ್ವಜ ಹಾರಿಸಿ ಯಾತ್ರೆ ಸಮಾಪ್ತಿ ಮಾಡಲಾಯಿತು.

 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕಾಂಗ್ರೆಸ್
ಜಮ್ಮು ಮತ್ತು ಕಾಶ್ಮೀರ
ರಾಹುಲ್ ಗಾಂಧಿ

Latest Videos
Recommended Stories
Recommended image1
ಹುಡುಗಿ ಪಟೀರ್ ಪಟೀರ್ ನಾಲ್ಕು ತಟ್ಟುತ್ತಿದ್ದರೂ, ತುಟಿಪಿಟಿಕ್ ಎನ್ನದೇ ಸೇಲೆಂಟಾಗಿ ಕುಳಿತಿದ್ದ ಲವರ್ ಬಾಯ್!
Recommended image2
ಪಾಕ್ ಕಣ್ಣೆದುರೇ 105 ಅಡಿ ಎತ್ತರದಲ್ಲಿ ಹಾರಾಡಿದ ಭಾರತದ ತ್ರಿವರ್ಣ ಧ್ವಜ; ಸಲಾಂ ಹೇಳಿದ ಜನ
Recommended image3
ಊಟಕ್ಕೆಂದು ಮನೆಗೆ ಬಂದ ಮಹಿಳಾ ಸಹೋದ್ಯೋಗಿ; ಆಮೇಲೆ ನಡೆದೇ ಹೋಯ್ತು ಕಂಡು ಕೇಳರಿಯದ ಅನಾಹುತ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved