MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಮುಲ್ಲಪೆರಿಯಾರ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಟ್ಟ ಕೇರಳ

ಮುಲ್ಲಪೆರಿಯಾರ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಟ್ಟ ಕೇರಳ

ತಮಿಳುನಾಡು ಕೃಷಿಗಾಗಿ ಮುಲ್ಲಪೆರಿಯಾರ್ ಅಣೆಕಟ್ಟಿನಿಂದ ನೀರು ಪಡೆಯಲು ಪ್ರಾರಂಭಿಸಿದೆ. 120 ದಿನಗಳವರೆಗೆ ಸೆಕೆಂಡಿಗೆ 300 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ಐದು ಜಿಲ್ಲೆಗಳಿಗೆ ನೀರಾವರಿ ಮತ್ತು ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲಿದೆ.

2 Min read
Author : Gowthami K
Published : Jun 01 2025, 05:34 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : our own

ಇಡುಕ್ಕಿ: ಮುಲ್ಲಪೆರಿಯಾರ್ ಅಣೆಕಟ್ಟಿನಿಂದ ಕೃಷಿಗೆ ತಮಿಳುನಾಡು ನೀರು ತೆಗೆದುಕೊಳ್ಳಲು ಪ್ರಾರಂಭಿಸಿದೆ. ಸೆಕೆಂಡಿಗೆ 300 ಕ್ಯೂಸೆಕ್ ಅಡಿ ನೀರನ್ನು 120 ದಿನಗಳವರೆಗೆ ಬಿಡಲಾಗಿದೆ. 200 ಕ್ಯೂಸೆಕ್ ಅಡಿ ನೀರನ್ನು ಕೃಷಿಗೂ 100 ಕ್ಯೂಸೆಕ್ ಅಡಿ ನೀರನ್ನು ಕುಡಿಯುವ ನೀರಿಗೂ ಬಿಡಲಾಗುತ್ತಿದೆ. ಐದು ಜಿಲ್ಲೆಗಳ ಕೃಷಿ ಅಗತ್ಯಗಳಿಗಾಗಿ ತಮಿಳುನಾಡು ನೀರನ್ನು ಬಳಸುತ್ತದೆ. ತೇಕ್ಕಡಿಯಲ್ಲಿ ನಡೆದ ವಿಶೇಷ ಪೂಜೆಗಳ ನಂತರ ತೇಣಿ ಜಿಲ್ಲಾಧಿಕಾರಿ ರಂಜಿತ್ ಸಿಂಗ್ ಶಟರ್ ತೆರೆದರು. ತೇಣಿ ಜಿಲ್ಲೆಯಲ್ಲಿ 14700 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಆರಂಭಿಸಲು ಪೂರ್ವ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ತೇಣಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ನೀರು ಬಿಡುಗಡೆಯಿಂದ ಥೇಣಿ, ಉತ್ತಮಪಾಳ್ಯಂ ಮತ್ತು ಬೋಡಿ ತಾಲ್ಲೂಕುಗಳಾದ್ಯಂತ 14,707 ಎಕರೆ ಭೂಮಿಗೆ ಪ್ರಯೋಜನವಾಗಲಿದೆ.

26
Image Credit : our own

ತಮಿಳುನಾಡಿನಲ್ಲಿ ನಡೆದಿದ್ದ ಸಭೆ

ಶುಕ್ರವಾರ ಮಧುರೈ ಜಿಲ್ಲಾಧಿಕಾರಿ ಎಂ.ಎಸ್. ಸಂಗೀತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ್ವಿ ಬೆಳೆ ಪ್ರದೇಶದ ಮೊದಲ ಬೆಳೆಗೆ ನೀರುಣಿಸಲು ಮುಲ್ಲಪೆರಿಯಾರ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಬೇಕು ಎಂದು ರೈತರು ಒತ್ತಾಯಿಸಿದರು. ಹೆಚ್ಚಿನ ನೀರನ್ನು ಸಂಗ್ರಹಿಸಲು ಜಲಮೂಲಗಳನ್ನು ಹೂಳು ತೆಗೆದು ಆಳಗೊಳಿಸಬೇಕೆಂದು ರೈತರು ಅಧಿಕಾರಿಗಳನ್ನು ಒತ್ತಾಯಿಸಿದರು. ಜಲಮೂಲಗಳ ಮೇಲಿನ ಅತಿಕ್ರಮಣಗಳ ಬಗ್ಗೆಯೂ ಅವರು ದೂರು ನೀಡಿದರು. ಜಿಲ್ಲೆಯ ಜಲಮೂಲಗಳ ವಿಸ್ತೀರ್ಣ ಎಷ್ಟಿದೆ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು. ರೈತರು ಜಲಮೂಲಗಳಿಂದ ಪ್ರೊಸೊಪಿಸ್ ಜುಲಿಫ್ಲೋರಾ (ಸೀಮೈ ಕರುವೇಲಂ) ಮರಗಳನ್ನು ತೆಗೆದುಹಾಕುವಂತೆಯೂ ಕೋರಿದರು ಸದ್ಯ ನೀರು ಬಿಡುಗಡೆ ಮಾಡಲಾಗಿದೆ.

36
Image Credit : our own

ಕೇರಳದಲ್ಲಿ ನೈಋತ್ಯ ಮಾನ್ಸೂನ್ ಈ ಬಾರಿ ಅವಧಿಗೂ ಮೊದಲೆ ಬಂದಿದ್ದರಿಂದ ತಮಿಳುನಾಡಿನ ದಕ್ಷಿಣ ಭಾಗಗಳ ಪಶ್ಚಿಮ ಘಟ್ಟಗಳಲ್ಲಿ ವ್ಯಾಪಕ ಮಳೆಯಾಯಿತು. ಜೊತೆಗೆ ನೀರು ಅಣೆಕಟ್ಟು ತುಂಬಿ ಅಪಾಯದ ಮಟ್ಟ ಮೀರಿ ಹರಿದಿದೆ. ಅಣೆಕಟ್ಟಿನ ಸುರಕ್ಷತೆ ಬಗ್ಗೆ ಕೇರಳ ಸರ್ಕಾರ ಕಳವಳ ಕೂಡ ವ್ಯಕ್ತಪಡಿಸಿದೆ. ಈ ಅಣೆಕಟ್ಟಿನಲ್ಲಿ ಒಟ್ಟು ಸಂಗ್ರಹಣಾ ಮಟ್ಟ 142 ಅಡಿಗಳು. ತಮಿಳುನಾಡು ಕೇರಳದ ಮುಲ್ಲಪೆರಿಯಾರ್ ಅಣೆಕಟ್ಟಿನಿಂದ ಕೃಷಿಗಾಗಿ, ಮುಖ್ಯವಾಗಿ ನೀರಾವರಿ ಮತ್ತು ಕುಡಿಯುವ ನೀರಿನ ಅಗತ್ಯಗಳಿಗಾಗಿ ನೀರನ್ನು ಪಡೆಯುತ್ತದೆ. ಅಣೆಕಟ್ಟಿನ ನೀರನ್ನು ಸುರಂಗಗಳ ಮೂಲಕ ತಮಿಳುನಾಡಿನ ವೈಗೈ ಜಲಾನಯನ ಪ್ರದೇಶಕ್ಕೆ ಬಿಡಲಾಗುತ್ತದೆ. ಇದು ಥೇಣಿ, ಮಧುರೈ, ದಿಂಡಿಗಲ್, ಶಿವಗಂಗೈ ಮತ್ತು ರಾಮನಾಥಪುರಂನಂತಹ ಜಿಲ್ಲೆಗಳಿಗೆ ನೀರಿನ ಅವಶ್ಯಕತೆಯನ್ನು ಒದಗಿಸಲಾಗುತ್ತದೆ.

46
Image Credit : our own

ಮುಲ್ಲಪೆರಿಯಾರ್ ಅಣೆಕಟ್ಟನ್ನು 19 ನೇ ಶತಮಾನದ ಉತ್ತರಾರ್ಧದಲ್ಲಿ ನಿರ್ಮಾಣ ಮಾಡಲಾಗಿದೆ. ಆಗ ಮದ್ರಾಸ್ ಪ್ರೆಸಿಡೆನ್ಸಿ ಕಾಲದಲ್ಲಿ ತಮಿಳುನಾಡಿನ ಬರ ಪೀಡಿತ ಪ್ರದೇಶಗಳಿಗೆ ನೀರು ಒದಗಿಸಲು ಇದನ್ನು ಮಾಡಲಾಯ್ತು. ತಮಿಳುನಾಡಿನ ಐದು ಜಿಲ್ಲೆಗಳಿಗೆ ಈ ನೀರೇ ಜೀವನದಿಯಾಗಿದೆ. ಮುಖ್ಯವಾಗಿ ಕುಡಿಯಲು ಮತ್ತು ಕೃಷಿಗೆ. ತಮಿಳುನಾಡು ಮತ್ತು ಕೇರಳದ ನಡುವೆ ನೀರು ಹಂಚಿಕೆ ಬಗ್ಗೆ ನಿರಂತರ ವಿವಾದಗಳು ನಡೆಯುತ್ತಿವೆ ಕೇರಳವು ಅಣೆಕಟ್ಟಿನ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಅದನ್ನು ರದ್ದುಗೊಳಿಸಲು ಪ್ರಯತ್ನಿಸುತ್ತಿದೆ. ನಿರಂತರ ವಿವಾದಗಳ ಹೊರತಾಗಿಯೂ, ತಮಿಳುನಾಡು ಮುಲ್ಲಪೆರಿಯಾರ್ ಅಣೆಕಟ್ಟಿನಿಂದ ನೀರನ್ನು ಪಡೆಯುತ್ತಿದೆ.

56
Image Credit : our own

ಮುಲ್ಲಪೆರಿಯಾರ್ ಅಣೆಕಟ್ಟಿನಿಂದ ಕೇರಳ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಹಳ್ಳಿಗಳ ರೈತರಲ್ಲಿ ಕೃಷಿ ಆರಂಭಿಸಲು ಅನುಕೂಲವಾಗಲಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಗಡಿಯಲ್ಲಿರುವ ಮುಳ್ಳಪೆರಿಯಾರ್ ಅಣೆಕಟ್ಟಿನಿಂದ ಮಳೆಗಾಲದಲ್ಲಿ ನೀರು ಬಿಡುಗಡೆಯಾದ ನಂತರ 3,000 ಎಕರೆಗಳಲ್ಲಿ ತಮಿಳುನಾಡಿನ ಥೇಣಿ ಜಿಲ್ಲೆಯ ರೈತರು ಭತ್ತವನ್ನು ಬೆಳೆಯುತ್ತಾರೆ. ಈ ಬಾರಿ ಮುಂಗಾರು ಕೂಡ ಬಹಳ ಬೇಗ ಬಂದಿದ್ದು, ಒಂದು ವಾರದ ನಿರಂತರ ಮಳೆಗೆ ಅಣೆಕಟ್ಟಿನಲ್ಲಿ ನೀರು ತಳಮಟ್ಟಕ್ಕೆ ಇಳಿದಿಲ್ಲ.

66
Image Credit : our own

ತಮಿಳುನಾಡಿನಲ್ಲಿ ಜುಲೈ ಮಧ್ಯದಿಂದ ಆಗಸ್ಟ್ ಮಧ್ಯದವರೆಗೆ ಮಳೆಯಾಶ್ರಿತ ಪ್ರಮುಖ ಬೆಳೆ ಬೆಳೆಯಲಾಗುತ್ತದೆ. ಈ ಋತುವಿನಲ್ಲಿ ಸಾಮಾನ್ಯವಾಗಿ ಬೆಳೆಯುವ ಬೆಳೆಗಳು ಧಾನ್ಯಗಳು, ಎಣ್ಣೆಕಾಳುಗಳು ಮತ್ತು ತರಕಾರಿಗಳು. ನೈಋತ್ಯ ಮಾನ್ಸೂನ್ ಬೆಳೆಗಳ ಕೃಷಿಯನ್ನು ನಿರ್ಧರಿಸುತ್ತದೆ. ಈ ವರ್ಷದ ಮಾನ್ಸೂನ್ ಸಾಮಾನ್ಯಕ್ಕಿಂತ ಹೆಚ್ಚಿದೆ. ಹೀಗಾಗಿ ಬೆಳೆಗಳು ಯಾವ ರೀತಿಯಲ್ಲಿ ಇಳುವರಿ ಕೊಡಲಿದೆ ಎಂಬುದು ನೋಡಬೇಕಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ತಮಿಳುನಾಡು
ಕೇರಳ
ಕೃಷಿ
ಭಾರತ ಸುದ್ದಿ
Latest Videos
Recommended Stories
Recommended image1
18 ವರ್ಷ ತುಂಬದ ಮೊನಾಲಿಸಾಗೆ ಫರ್ಮಾನ್ ಜೊತೆ ಮದ್ವೆ ಮಾಡಿಸಿದ್ರಾ? ವೈರಲ್ ಸುಂದರಿ ವಯಸ್ಸೆಷ್ಟು?
Recommended image2
ದಯವಿಟ್ಟು ನನ್ನ ಬೆಳೆ ಖರೀದಿಸಿ ನಾಳೆ ನನ್ನ ಮಗಳ ಮದುವೆ ಇದೆ : ಮಾರುಕಟ್ಟೆಯಲ್ಲಿ ಕಣ್ಣೀರಿಟ್ಟು ಬೇಡಿಕೊಂಡ ರೈತ
Recommended image3
ಸಂತಾನಹರಣ ಶಸ್ತ್ರಚಿಕಿತ್ಸೆಯ ನಂತರವೂ ಹುಟ್ಟಿದ ಕಂದ: ಇದು ಸರ್ಕಾರದ ಲೋಪ ಮಗು ಸಾಕಲು ಆರ್ಥಿಕ ನೆರವು ಬೇಕು ಎಂದ ದಂಪತಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved